ಕುಂದಾಪುರ: 1,239 ಪ್ರಕರಣ 6.73 ಲಕ್ಷ ರೂ. ದಂಡ

ಹೊಸ ಸಾರಿಗೆ ನಿಯಮ: ಸೆ. 16ರ ಒಂದೇ ದಿನದಲ್ಲಿ 241 ಕೇಸು, 1.51 ಲಕ್ಷ ರೂ. ದಂಡ

Team Udayavani, Sep 22, 2019, 5:06 AM IST

POLICE-A

ಕುಂದಾಪುರ: ಹೊಸ ಮೋಟಾರು ವಾಹನ ಕಾಯ್ದೆ ಜಾರಿಯಾದ ಬಳಿಕ ಅಂದರೆ ಸೆ. 5ರ ಅನಂತರದಿಂದ ಸೆ. 20ರ ವರೆಗೆ ಕುಂದಾಪುರ ಉಪ ವಿಭಾಗ ವ್ಯಾಪ್ತಿಯಲ್ಲಿ ಒಟ್ಟು 1,239 ಪ್ರಕರಣ ದಾಖಲಾಗಿದ್ದು, 6,73,700 ರೂ. ದಂಡ ವಿಧಿಸಲಾಗಿದೆ. ಈ ಪೈಕಿ ಸೆ. 16ರಂದು ಗರಿಷ್ಠ 241 ಕೇಸು ದಾಖಲಾಗಿದ್ದು, 1.51 ಲಕ್ಷ ರೂ. ದಂಡ ಸಂಗ್ರಹಿಸಲಾಗಿದೆ.

ರಾಜ್ಯದಲ್ಲಿ ಹೊಸ ಸಾರಿಗೆ ನಿಯಮ ಜಾರಿಯಾದ ಬಳಿಕ ದಂಡ ಉಲ್ಲಂಘನೆ ಮಾಡುತ್ತಿರುವ ವಾಹನ ಸವಾರರ ಬಗ್ಗೆ ಪೊಲೀಸರಿಂದ ಕಾರ್ಯಾಚರಣೆ ಚುರುಕು ಗೊಂಡಿದೆ. ಪ್ರಕರಣಗಳ ಸಂಖ್ಯೆಯೂ ಹೆಚ್ಚಾಗುತ್ತಿದ್ದು, ದಂಡದ ಪ್ರಮಾಣವೂ ಏರಿಕೆಯಾಗಿದೆ.

ಎಚ್ಚೆತ್ತುಕೊಳ್ಳುತ್ತಿರುವ ಸವಾರರು
ದಂಡದ ಪ್ರಮಾಣ ಹೆಚ್ಚಳವಾಗುತ್ತಿದ್ದಂತೆ ವಾಹನ ಸವಾರರು ಕೂಡ ಈಗೀಗ ಎಚ್ಚೆತ್ತು ಕೊಳ್ಳುತ್ತಿದ್ದಾರೆ. ಹೆಲ್ಮೆಟ್‌ ಧರಿಸದಿದ್ದವರು ಈಗ ಧರಿಸುತ್ತಿದ್ದಾರೆ, ಸೀಟ್‌ ಬೆಲ್ಟ್ ಉಲ್ಲಂಘನೆ, ವಿಮೆ ಪಾವತಿ ಇನ್ನಿತರ ನಿಯಮ ಉಲ್ಲಂಘನೆ ಮಾಡು ತ್ತಿರುವವರ ಸಂಖ್ಯೆ ಇಳಿಮುಖವಾಗುತ್ತಿದೆ. ಚಾಲನಾ ಪರವಾನಿಗೆ ಇಲ್ಲದವರು ಹೊಸದಾಗಿ ಪರವಾನಿಗೆ ಮಾಡಿಸಿಕೊಳ್ಳಲು ಮುಂದಾಗಿದ್ದು, ಹೊಗೆ ತಪಾಸಣೆಗೂ ಮುಗಿಬೀಳುತ್ತಿರುವುದು ಕಂಡುಬರುತ್ತಿದೆ.

ಹೆಲ್ಮೆಟ್‌ ರಹಿತವೇ ಹೆಚ್ಚು
ಕಳೆದ 15 ದಿನಗಳಲ್ಲಿ ವಿಧಿಸಿರುವ ಒಟ್ಟು 1,239 ಪ್ರಕರಣಗಳ ಪೈಕಿ ದ್ವಿಚಕ್ರ ವಾಹನ ಸವಾರರು ಹೆಲ್ಮೆಟ್‌ರಹಿತವಾಗಿ ಚಲಾಯಿಸಿದ ಪ್ರಕರಣವೇ ಹೆಚ್ಚಿದೆ. ಕಳೆದ 4 ದಿನಗಳಲ್ಲಿ ಹೆಲ್ಮೆಟ್‌ರಹಿತ ದ್ವಿಚಕ್ರ ವಾಹನ ಚಲಾಯಿಸಿದ 81 ಪ್ರಕರಣಗಳು ಕುಂದಾಪುರ ಉಪ ವಿಭಾಗ ವ್ಯಾಪ್ತಿಯಲ್ಲಿ ದಾಖಲಾಗಿವೆ.

ಯಾವ್ಯಾವ ದಿನ ಎಷ್ಟೆಷ್ಟು?
ಉಡುಪಿ ಜಿಲ್ಲೆಯಲ್ಲಿ ಸೆ. 5ರಿಂದ ಈ ನಿಯಮ ಜಾರಿಗೆ ಬಂದಿದೆ. ಸೆ. 5ರಂದು 71 ಪ್ರಕರಣ, 15,200 ರೂ. ದಂಡ; ಸೆ. 6ರಂದು 46 ಪ್ರಕರಣ, 24,500 ರೂ. ದಂಡ; ಸೆ. 7ರಂದು 92 ಪ್ರಕರಣ, 52,800 ರೂ.; ಸೆ. 8ರಂದು 27 ಪ್ರಕರಣ, 14,100 ರೂ.; ಸೆ. 9ರಂದು 90 ಪ್ರಕರಣ, 54,100 ರೂ. ದಂಡ; ಸೆ. 11ರಂದು 85 ಪ್ರಕರಣ, 49,200 ರೂ. ದಂಡ; ಸೆ.12ರಂದು 53 ಪ್ರಕರಣ, 32, 500 ರೂ. ದಂಡ; ಸೆ. 13ರಂದು 69 ಪ್ರಕರಣ, 37,400 ರೂ. ದಂಡ; ಸೆ. 14ರಂದು 39,000 ರೂ. ದಂಡ ವಿಧಿಸಲಾಗಿದೆ.

ಕುಂದಾಪುರ ಉಪ ವಿಭಾಗ ವ್ಯಾಪ್ತಿಯ ವಿವಿಧ ಠಾಣೆಗಳಲ್ಲಿ ಸೆ.16ರ ಒಂದೇ ದಿನದಲ್ಲಿ ಗರಿಷ್ಠ 241 ಪ್ರಕರಣಗಳು ದಾಖಲಾಗಿವೆ. ಆ ದಿನ ವಿಧಿಸಿದ ದಂಡದ ಮೊತ್ತ ಬರೋಬ್ಬರಿ 1.51 ಲಕ್ಷ ರೂ. ಅದರಲ್ಲೂ ಬೈಂದೂರು ಠಾಣೆಯ ವ್ಯಾಪ್ತಿಯೊಂದರಲ್ಲಿಯೇ ಆ ದಿನ ಗರಿಷ್ಠ 57 ಪ್ರಕರಣ ದಾಖಲಾಗಿದ್ದು, 54,700 ರೂ. ದಂಡ ಸಂಗ್ರಹಿಸಿದ್ದಾರೆ.

ಜನರಲ್ಲಿ ಜಾಗೃತಿ
ಜನರ ಹಿತದೃಷ್ಟಿಯಿಂದ ನಾವು ಈ ಹೊಸ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡುತ್ತಿದ್ದೇವೆ. ಈಗೀಗ ವಾಹನ ಸವಾರರಿಗೂ ಜಾಗೃತಿ ಮೂಡುತ್ತಿದ್ದು, ಇದರಿಂದ ದಿನೇ ದಿನೇ ಪ್ರಕರಣಗಳ ಸಂಖ್ಯೆ ಇಳಿಮುಖವಾಗುತ್ತಿದೆ. ಇದು ಒಳ್ಳೆಯ ಬೆಳವಣಿಗೆ. ಮೊದಲಿಗೆ ದ್ವಿಚಕ್ರ ವಾಹನ, ನಾಲ್ಕು ಚಕ್ರ ವಾಹನಗಳು, ಅನಂತರ ಘನ ವಾಹನಗಳು ಹೀಗೆ ಹಂತ – ಹಂತವಾಗಿ ತಪಾಸಣಾ ಕಾರ್ಯಾಚರಣೆ ನಡೆಸಲಾಗುತ್ತಿದೆ.
-ಹರಿರಾಂ ಶಂಕರ್‌, ಎಎಸ್ಪಿ ಕುಂದಾಪುರ

-ಪ್ರಶಾಂತ್‌ ಪಾದೆ

ಟಾಪ್ ನ್ಯೂಸ್

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.