ಅಂಗಡಿಗಳ ಮೇಲೆ ನಿಗಾ; ದೂರು ಬಂದರೆ ತತ್‌ಕ್ಷಣ ಕಾರ್ಯಾಚರಣೆ

ಕಾನೂನು ಸುವ್ಯವಸ್ಥೆ; ಇ-ಸಿಗರೇಟ್‌ ಮಾರಾಟ-ಸೇವನೆ ನಿಷೇಧ

Team Udayavani, Sep 22, 2019, 5:00 AM IST

x-29

ಮಹಾನಗರ: ಕೇಂದ್ರ ಸರಕಾರವು ದೇಶದೆಲ್ಲೆಡೆ ಇ-ಸಿಗರೇಟ್‌ ನಿಷೇಧಗೊಳಿಸಿದ ಬೆನ್ನಲ್ಲೇ ಇದೀಗ ಮಂಗಳೂರು ನಗರದಲ್ಲಿಯೂ ಪೊಲೀಸ್‌ ಮತ್ತು ಆರೋಗ್ಯ ಇಲಾಖೆಯು ಇ-ಸಿಗರೇಟ್‌ ಮಾರಾಟ-ಬಳಕೆಯ ಮೇಲೆ ಕಟ್ಟುನಿಟ್ಟಿನ ನಿಗಾ ಇರಿಸಿದೆ.

ಆ ಮೂಲಕ ಇ-ಸಿಗರೇಟ್‌ ಮಾರಾಟ ಮಾಡದಂತೆ ತಡೆಯುವ ನಿಟ್ಟಿನಲ್ಲಿ ಪೊಲೀಸ್‌ ಇಲಾಖೆ ಸಹಕಾರದೊಂದಿಗೆ ತತ್‌ಕ್ಷಣದ ಕಾರ್ಯಾಚರಣೆಗಳನ್ನು ನಡೆಸುವ ಮೂಲಕ ಇದಕ್ಕೆ ಕಡಿವಾಣ ಹಾಕಲು ಜಿಲ್ಲಾ ತಂಬಾಕು ನಿಯಂತ್ರಣ ಕೋಶವು ನಿರ್ಧರಿಸಿದೆ.

ಇ-ಸಿಗರೇಟ್‌ ವ್ಯಸನಕಾರಿಯಾಗಿದ್ದು, ಆರೋಗ್ಯಕ್ಕೆ ಹಾನಿಕಾರಕವಾಗಿ ಪರಿಣಮಿ ಸುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ ಕಾರವು ಕೆಲವು ದಿನಗಳ ಹಿಂದಷ್ಟೇ ಇ- ಸಿಗರೇಟ್‌ ಮಾರಾಟಕ್ಕೆ ನಿಷೇಧ ಹೇರಿ ಆದೇಶಿಸಿತ್ತು. ಪಾಶ್ಚಾತ್ಯ ದೇಶಗಳಿಗೆ ಹೋಲಿಸಿದರೆ ಭಾರತದಲ್ಲಿ ಇ-ಸಿಗರೇಟ್‌ ಮಾರಾಟ ಕಡಿಮೆ ಇದೆ. ಆದಾಗ್ಯೂ ಕೆಲವೊಂದು ಶಿಕ್ಷಣ ಸಂಸ್ಥೆಗಳು ಹೆಚ್ಚಿರುವ ಕಡೆಗಳಲ್ಲಿ ವಿದ್ಯಾರ್ಥಿಗಳಿಗೆ ಸುಲಭವಾಗಿ ಇ-ಸಿಗರೇಟ್‌ ಸಿಗುತ್ತಿದೆ.

ಮಂಗಳೂರಿನಲ್ಲಿಯೂ ಇ-ಸಿಗರೇಟ್‌ ಮಾರಾಟ ಶೇ.90ರಷ್ಟು ಇಲ್ಲವಾದರೂ ವಿದ್ಯಾರ್ಥಿಗಳಿಗೆ ಕೆಲವೊಂದು ಕಡೆಗಳಲ್ಲಿ ಸುಲಭವಾಗಿ ಕೈಗೆಟಕುತ್ತಿರುವ ಬಗ್ಗೆ ಆರೋಗ್ಯ ಇಲಾಖೆ ಅನುಮಾನ ವ್ಯಕ್ತಪಡಿಸಿವೆ. ಏಕೆಂದರೆ ನಗರದಲ್ಲಿ ಗಾಂಜಾ ಸಹಿತ ಮಾದಕ ವಸ್ತುಗಳ ಜಾಲ ವ್ಯಾಪಕವಾಗಿರುವ ಕಾರಣ ಇ-ಸಿಗರೇಟ್‌ ಕೂಡ ಮಾರಾಟ ಹೆಚ್ಚಾಗಿ ಇರುವ ಸಾಧ್ಯತೆಯನ್ನೂ ಅಲ್ಲಗಳೆಯುವಂತಿಲ್ಲ. ಆರು ತಿಂಗಳ ಹಿಂದೆ ಲಾಲ್‌ಬಾಗ್‌ನಲ್ಲಿ ವಿದ್ಯಾರ್ಥಿಯೋರ್ವ ಇ-ಸಿಗರೇಟ್‌ ಸೇದು ತ್ತಿ ರುವುದು ಕಂಡು ಬಂದಿದ್ದು, ಅದನ್ನು ವಶಪಡಿಸಿಕೊಳ್ಳಲಾಗಿತ್ತು. ದೇರಳಕಟ್ಟೆಯಲ್ಲಿ ಒಂದೆರಡು ಅಂಗಡಿಗಳಲ್ಲಿ ಇ-ಸಿಗರೇಟ್‌ ಮಾರುತ್ತಿದ್ದವರು ಈಗ ಅದನ್ನು ನಿಲ್ಲಿಸಿದ್ದಾರೆ.

ಬೆರಳೆಣಿಕೆಯ ಅಂಗಡಿಗಳಲ್ಲಿ ಇದನ್ನು ಮಾರಾಟ ಮಾಡಲಾಗುತ್ತಿರುವ ಬಗ್ಗೆ ಅನುಮಾನವಿದ್ದು, ಈ ಹಿನ್ನೆಲೆಯಲ್ಲಿ ಕಾರ್ಯಾಚರಣೆ ಕೈಗೆತ್ತಿಕೊಳ್ಳಲಾಗಿದೆ ಎಂದು ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಡಾ| ಪ್ರೀತಾ ತಿಳಿಸಿದ್ದಾರೆ.

ಎಫ್‌ಐಆರ್‌ ದಾಖಲು
ಇನ್ನು ಮುಂದೆ ದಾಳಿ ವೇಳೆ ಇ-ಸಿಗರೇಟ್‌ ಮಾರಾಟ ಕಂಡು ಬಂದರೆ, ಅಂತಹ ಅಂಗಡಿ ಮಾಲಕರ ವಿರುದ್ಧ ಎಫ್‌ಐಆರ್‌ ದಾಖಲು ಮಾಡಿ, ಅದನ್ನು ಮುಟ್ಟುಗೋಲು ಹಾಕಲಾಗುವುದು. ಉಳಿದಂತೆ ಶಿಕ್ಷೆಯ ಪ್ರಮಾಣವನ್ನು ಸರಕಾರದ ನಿರ್ದೇಶದ ಪ್ರಕಾರ ವಿಧಿಸಲಾಗುವುದು ಎಂದು ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಅಧಿಕಾರಿಗಳು ತಿಳಿಸಿದ್ದಾರೆ. ಮೊದಲ ಬಾರಿ ನಿಯಮ ಉಲ್ಲಂಘನೆ ಮಾಡಿದವರಿಗೆ 1 ಲಕ್ಷ ರೂ. ಗಳವರೆಗೆ ದಂಡ ಅಥವಾ 1 ವರ್ಷ ಜೈಲು, ಎರಡನೇ ಬಾರಿ ಉಲ್ಲಂಘನೆ ಮಾಡಿದವರಿಗೆ 3 ವರ್ಷ ಜೈಲು ಶಿಕ್ಷೆ ಮತ್ತು 5 ಲಕ್ಷ ರೂ.ವರೆಗೆ ದಂಡ ವಿಧಿಸಲಾಗುವುದು.

ಏನಿದು ಇ-ಸಿಗರೇಟ್‌?
ಸಾಮಾನ್ಯ ಸಿಗರೇಟ್‌ಗಿಂತ ದುಬಾರಿಯಾದ ಇ-ಸಿಗರೇಟ್‌ ಸಾಮಾನ್ಯವಾಗಿ ಪೆನ್‌ ಮಾದರಿಯಲ್ಲಿರುತ್ತದೆ. ರೀಚಾರ್ಜ್‌ ವ್ಯವಸ್ಥೆ ಇರುವುದರಿಂದ ಒಂದು ಸಿಗರೇಟ್‌ ಹಲವಾರು ಮಂದಿ ಬಳಕೆ ಮಾಡುತ್ತಾರೆ. ನಿಕೋಟಿನ್‌ ಅಂಶ ಇದರಲ್ಲಿದ್ದು, ಹೊಗೆ ಕೂಡ ಉತ್ಪತ್ತಿಯಾಗುತ್ತದೆ. ಮೋಜು ಮಸ್ತಿಗಾಗಿ ಇ-ಸಿಗರೇಟ್‌ನ್ನು ವಿದ್ಯಾರ್ಥಿಗಳು ಸಹಿತ ಯುವ ಸಮುದಾಯ ಹೆಚ್ಚಾಗಿ ಬಳಕೆ ಮಾಡುತ್ತಿದೆ.

ಹಾನಿಕಾರಕ ಇ-ಸಿಗರೇಟ್‌
ಭಾರತೀಯ ವೈದ್ಯಕೀಯ ಸಂಶೋಧನ ಮಂಡಳಿ ಬಿಡುಗಡೆ ಮಾಡಿದ ವರದಿಯಲ್ಲಿ ಇ- ಸಿಗರೇಟ್‌ನ ದುಷ್ಪರಿಣಾಮಗಳ ಬಗ್ಗೆ ಉಲ್ಲೇಖೀಸಲಾಗಿದೆ. ಡಿಎನ್‌ಎಗೆ ಹಾನಿ, ರೋಗ ನಿರೋಧಕ ಶಕ್ತಿ ಕುಂಠಿತವಾಗುವುದು, ಉಸಿರಾಟ, ಹೃದಯ ಸಂಬಂಧಿ ಸಮಸ್ಯೆಗಳು, ನರ ಸಂಬಂಧಿ ಕಾಯಿಲೆಗಳು ಉಂಟಾಗುವ ಸಾಧ್ಯತೆಗಳಿವೆ ಎಂದು ವರದಿಯಲ್ಲಿದೆ.

ಮಾಹಿತಿಯನ್ನಾಧರಿಸಿ ದಾಳಿ
ಮಂಗಳೂರಿನಲ್ಲಿ ಇ-ಸಿಗರೇಟು ಮಾರಾಟ ಇಲ್ಲ. ಒಂದು ವೇಳೆ ಅಲ್ಲೊಂದು ಇಲ್ಲೊಂದು ಮಾರಾಟ ಪ್ರಕರಣ ಕಂಡು ಬಂದರೆ ತತ್‌ಕ್ಷಣವೇ ಕ್ರಮ ಕೈಗೊಳ್ಳಲಾಗುವುದು. ಈ ಸಂಬಂಧ ಸಾರ್ವಜನಿಕರು ಮಾಹಿತಿ ನೀಡಿದ್ದಲ್ಲಿ ಆ ಮಾಹಿತಿಯನ್ನಾಧರಿಸಿ ದಾಳಿ ನಡೆಸಿ ಮಾರಾಟ ಮಾಡುತ್ತಿರುವುದು ನಿಜವಾದಲ್ಲಿ ಸೂಕ್ತ ಕಾನೂನು ಕ್ರಮ ಜರಗಿಸಲಾಗುವುದು.
 - ಲಕ್ಷ್ಮೀಗಣೇಶ್‌, ಡಿಸಿಪಿ, ಅಪರಾಧ ವಿಭಾಗ

ಟಾಪ್ ನ್ಯೂಸ್

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

ಮಹಾತ್ಮರ ಸಮಾಜಮುಖಿ ಸಂದೇಶ ಸಾರ್ವಕಾಲಿಕ: ಗುರುಮೂರ್ತಿ ಶ್ರೀ

ಮಹಾತ್ಮರ ಸಮಾಜಮುಖಿ ಸಂದೇಶ ಸಾರ್ವಕಾಲಿಕ: ಗುರುಮೂರ್ತಿ ಶ್ರೀ

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.