“ಸಮತೂಕದ ಆಹಾರದಿಂದ ಉತ್ತಮ ದೇಹಾರೋಗ್ಯ’
Team Udayavani, Sep 22, 2019, 12:01 AM IST
ಪಡುಬಿದ್ರಿ: ವಿದ್ಯಾರ್ಥಿಗಳು ಸಮತೂಕದ ಆಹಾರವನ್ನು ಸೇವಿಸಬೇಕು. ಆಗ ಕ್ರೀಡೆಗಳಿಗಾಗಿ ಉತ್ತಮ ದೇಹಾರೋಗ್ಯವಿರುತ್ತದೆ. ಪಾಠ – ಆಟ ಸಮಾನವಾಗಿ ಪರಿಗಣಿಸಲ್ಪಡಬೇಕು. ಕ್ರೀಡೆಯಿಂದ ದೈಹಿಕ ಹಾಗೂ ಮಾನಸಿಕ ಅರೋಗ್ಯ ಉತ್ತಮವಾಗುತ್ತದೆ ಎಂದು ಉಡುಪಿ ಶ್ರೀ ಅದಮಾರು ಮಠದ ಶ್ರೀ ವಿಶ್ವಪ್ರಿಯ ಸ್ವಾಮೀಜಿ ಹೇಳಿದರು.
ಪ. ಪೂರ್ವ ಶಿಕ್ಷಣ ಇಲಾಖೆ ಹಾಗೂ ಅದಮಾರು ಪ. ಪೂರ್ವ ಕಾಲೇಜು ಸಂಯುಕ್ತವಾಗಿ ಅದಮಾರು ಶಿಕ್ಷಣ ಸಂಸ್ಥೆ ಕ್ರೀಡಾಂಗಣದಲ್ಲಿ ಶನಿವಾರ ಆಯೋಜಿಸಿದ್ದ ಪದವಿ ಪೂರ್ವ ಕಾಲೇಜು ಬಾಲಕ-ಬಾಲಕಿಯರ ಜಿಲ್ಲಾ ಮಟ್ಟದ ತ್ರೋಬಾಲ್ ಪಂದ್ಯಾಟ ಹಾಗೂ ಶಿಕ್ಷಕ-ರಕ್ಷಕ ಸಂಘದ ಸಭೆ ಉದ್ಘಾಟಿಸಿ ಅವರು ಮಾತನಾಡಿದರು.
ಅದಮಾರು ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ನ್ಯಾಯವಾದಿ ಪ್ರದೀಪ್ ಕುಮಾರ್ ಮಾತನಾಡಿದರು. ಪೂರ್ಣಪ್ರಜ್ಞ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಸದಸ್ಯ ಡಾ | ಎಂ.ಆರ್. ಹೆಗ್ಡೆ, ರಾಷ್ಟ್ರೀಯ ವಾಲಿಬಾಲ್ ಆಟಗಾರ ಅಕ್ಷತ್ ಶೆಟ್ಟಿ, ಸ್ವಯಂ ನಿವೃತ್ತಿ ಹೊಂದಿದ ಕಾಲೇಜಿನ ಶಿಕ್ಷಕೇತರ ಸಿಬಂದಿ ನಾರಾಯಣ ಬೆಲ್ಚಡ ಅವರನ್ನು ಸ್ವಾಮೀಜಿ ಸಮ್ಮಾನಿಸಿದರು.
ಜಿ. ಪಂ. ಸದಸ್ಯ ಶಶಿಕಾಂತ ಪಡುಬಿದ್ರಿ, ಅದಮಾರು ಅದರ್ಶ ಯುವಕ ಮಂಡಲ ಅಧ್ಯಕ್ಷ ಸಂತೋಷ್ ಜೆ. ಶೆಟ್ಟಿ ಬರ್ಪಾಣಿ, ಉಪ ಪ್ರಾಂಶುಪಾಲೆ ಡಾ | ಒಲಿವಿಟಾ ಡಿ’ಸೋಜಾ ಉಪಸ್ಥಿತರಿದ್ದರು. ಕಾಲೇಜಿನ ಪ್ರಾಂಶುಪಾಲ ರಾಮಕೃಷ್ಣ ಪೈ ಸ್ವಾಗತಿಸಿದರು. ಉಪನ್ಯಾಸಕ ಡಾ | ಜಯಶಂಕರ ಕಂಗಣ್ಣಾರು ಕಾರ್ಯಕ್ರಮ ನಿರ್ವಹಿಸಿದರು. ದೈಹಿಕ ಶಿಕ್ಷಣ ನಿರ್ದೇಶಕ ಚಂದ್ರಶೇಖರ ಶೆಟ್ಟಿ ವಂದಿಸಿದರು.
ಉತ್ತೀರ್ಣ ಅನುತ್ತೀರ್ಣತೆ ಕಡ್ಡಾಯ
1ರಿಂದ 9 ನೇ ತರಗತಿವರೆಗೆ ನಿರಂತರವಾಗಿ ಉತ್ತೀರ್ಣತೆ ಮಾಡುವ ಪದ್ಧತಿ ಕೈ ಬಿಟ್ಟು, ಉತ್ತೀರ್ಣ-ಅನುತ್ತೀರ್ಣತೆಯನ್ನು ಪ್ರತಿ ತರಗತಿಯಲ್ಲಿಯೂ ಕಡ್ಡಾಯ ಗೊಳಿಸಬೇಕು. ಮಗುವಿಗೆ ಶಿಕ್ಷಣದ ಮೂಲಕ ಸುಂದರ ರೂಪ ಕೊಡಲು ಅಧ್ಯಾಪಕರು ಕೈಗೊಳ್ಳುವ ಕಠಿನ ನಿರ್ಧಾರಗಳಿಗೆ ಪಾಲಕರು ಕೈಜೋಡಿಸಬೇಕು ಎಂದು ಶ್ರೀ ವಿಶ್ವಪ್ರಿಯ ತೀರ್ಥ ಶ್ರೀಪಾದರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap ಮಣಿಪಾಲ: ಕಾರು ಢಿಕ್ಕಿಯಾಗಿ ಪಾದಚಾರಿ ಸಾವು
Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು
Theme Park Karkala ಅವಶೇಷ ತೆರವಿಗೆ ಕೋರ್ಟ್ ಆದೇಶ; ಜಿಲ್ಲಾಧಿಕಾರಿ ತಡೆ!
Parashurama Theme Park; ಕೊನೆಯ ಸಾಕ್ಷ್ಯವೂ ನಾಶಕ್ಕೆ ಯತ್ನ: ಉದಯ ಕುಮಾರ್ ಶೆಟ್ಟಿ ಆರೋಪ
ಪದವೀಧರರ, ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ಅವಕಾಶ: ಜಿಲ್ಲಾಧಿಕಾರಿ
MUST WATCH
ಹೊಸ ಸೇರ್ಪಡೆ
Supreme Court ಸಲಹೆ; ಹೊಂದಾಣಿಕೆಯು ಸುಖ ದಾಂಪತ್ಯದ ಅಡಿಪಾಯ
Parashurama Park 2 ವಾರದಲ್ಲಿ ಕ್ರಮ ಕೈಗೊಳ್ಳಲು ನಿರ್ಮಿತಿ ಕೇಂದ್ರಕ್ಕೆ ಹೈಕೋರ್ಟ್ ಸೂಚನೆ
Kinnigoli: ಕಾಂತಬಾರೆ-ಬೂದಬಾರೆಯರ ತೊಟ್ಟಿಲು ಕಟ್ಟಿದ್ದ ಮರ ಇನ್ನಿಲ್ಲ!
IPL;ಇಂದು ಆರ್ಸಿಬಿ ಎದುರಾಳಿ ಗುಜರಾತ್ ಟೈಟಾನ್ಸ್:ಪ್ಲೇಆಫ್ ಸಾಧ್ಯತೆಗೆ ಗೆಲುವು ಅನಿವಾರ್ಯ
England; 20 ವರ್ಷದ ಕ್ರಿಕೆಟಿಗ ನಿಗೂಢ ಸಾವು!