ರಾಜೀವ್‌ ಗಾಂಧಿ ವಿ.ವಿ. ಪರೀಕ್ಷಾ ವೇಳಾಪಟ್ಟಿ ಎಡವಟ್ಟು: ಸಂಕಷ್ಟದಲ್ಲಿ ವಿದ್ಯಾರ್ಥಿಗಳು!


Team Udayavani, Sep 22, 2019, 5:00 AM IST

x-36

ಮಂಗಳೂರು: ರಾಜೀವ್‌ ಗಾಂಧಿ ವಿಶ್ವವಿದ್ಯಾನಿಲಯದಿಂದ ನಡೆಸಲ್ಪಡುವ ಪ್ಯಾರಾ ಮೆಡಿಕಲ್‌ ಪ್ರಾಕ್ಟಿಕಲ್‌ ಪರೀಕ್ಷೆಯ ವೇಳಾಪಟ್ಟಿಯನ್ನು ದಿಢೀರ್‌ ನೀಡಿರುವುದರಿಂದ ರಾಜ್ಯದ ಸಾವಿರಾರು ವಿದ್ಯಾರ್ಥಿಗಳು ಗೊಂದಲಕ್ಕೊಳಗಾಗಿದ್ದಾರೆ.

ರಾಜೀವ್‌ ಗಾಂಧಿ ವಿ.ವಿ.ಯ ಮೆಡಿಕಲ್‌ ಕೋರ್ಸ್‌ಗಳಾದ ಬಿಎಸ್ಸಿ ಮೆಡಿಕಲ್‌ ಲ್ಯಾಬೊರೇಟರಿ ಟೆಕ್ನಾಲಜಿ, ಆಪರೇಷನ್‌ ಟೆಕ್ನಿಶಿಯನ್‌, ಡಯಾಲಿಸಿಸ್‌ ಮೊದಲಾದ ವಿಭಾಗಗಳಿಗೆ ಅಂತಿಮ ಥಿಯರಿ ಪರೀಕ್ಷೆಯನ್ನು ಸೆ. 18ರಂದು ನಿಗದಿಪಡಿಸಲಾಗಿತ್ತು. ಆದರೆ ರಾಜ್ಯದಲ್ಲಿ ನೆರೆ ಉಂಟಾದ ಹಿನ್ನೆಲೆಯಲ್ಲಿ ಸೆ. 30ಕ್ಕೆ ಮುಂದೂಡಲಾಗಿತ್ತು. ಅದಕ್ಕಾಗಿ ಬಂದ ಪರೀಕ್ಷಾ ವೇಳಾಪಟ್ಟಿಯಲ್ಲಿ ಥಿಯರಿ ಪರೀಕ್ಷೆಯಾದ ಬಳಿಕ ಪ್ರಾಕ್ಟಿಕಲ್‌ ಪರೀಕ್ಷೆ ಹಾಗೂ ವೈವಾ ಇರಲಿದೆ ಎಂದು ಬರೆಯಲಾಗಿತ್ತು. ಆದರೆ ಇದೀಗ ಥಿಯರಿ ಪರೀಕ್ಷೆಗೂ ಮೊದಲೇ ಪ್ರಾಕ್ಟಿಕಲ್‌ ಪರೀಕ್ಷೆ ಇರಲಿದೆ ಎಂಬುದಾಗಿ ಪರೀಕ್ಷೆ ಆರಂಭಕ್ಕೂ 2 ದಿನ ಮುಂಚಿತವಾಗಿ ವೇಳಾಪಟ್ಟಿ ಕಳುಹಿಸಲಾಗಿದೆ.

ಇದರಿಂದ ವಿದ್ಯಾರ್ಥಿಗಳು ಆತಂಕಕ್ಕೊಳಗಾಗಿದ್ದಾರೆ. ಥಿಯರಿ ಪರೀಕ್ಷೆ ಬಳಿಕ ಪ್ರಾಕ್ಟಿಕಲ್‌ ಉಲ್ಲೇಖ ಸೆಪ್ಟೆಂಬರ್‌ ಮೊದಲ ವಾರದಲ್ಲಿ ಇದ್ದ ಪರೀಕ್ಷೆ ಯನ್ನು ಮುಂದೂಡಲಾಗಿತ್ತು. ಆ ಸಂದರ್ಭದಲ್ಲಿ ಬಂದ ವೇಳಾಪಟ್ಟಿಯಲ್ಲಿ ಥಿಯರಿ ಪರೀಕ್ಷೆಯ ಎರಡು ದಿನಗಳ ಬಳಿಕ ಪ್ರಾಕ್ಟಿಕಲ್‌ ಪರೀಕ್ಷೆಯನ್ನು ಮಾಡಲಾಗುವುದು ಎಂಬುದಾಗಿ ತಿಳಿಸಲಾಗಿತ್ತು.

ವಿ.ವಿ. ವೆಬ್‌ಸೈಟ್‌ಗಳಲ್ಲೂ ಮುಂಚಿತವಾಗಿ ಮಾಹಿತಿ ನೀಡದ ಕಾರಣ ವಿದ್ಯಾರ್ಥಿಗಳು ಥಿಯರಿ ಪರೀಕ್ಷೆಗೆ ಮಾತ್ರ ಒತ್ತು ನೀಡಿದ್ದರು. ಈಗ ಪ್ರಾಕ್ಟಿಕಲ್‌ ಪರೀಕ್ಷೆ ಮುಂಚಿತವಾಗಿ ಬಂದಿರುವುದರಿಂದ ಗೊಂದಲಕ್ಕೊಳಗಾಗಿದ್ದಾರೆ.ಈ ಹಿಂದೆ ಕೆಲವು ಬಾರಿ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಮುಂದೂಡಿದಷ್ಟು ಫಲಿತಾಂಶ ತಡವಾಗುತ್ತದೆ.

ಇದರಿಂದ ವಿದ್ಯಾರ್ಥಿಗಳಿಗೆ ಇಂಟರ್ನ್
ಶಿಪ್‌ ಹಾಗೂ ಉದ್ಯೋಗವಕಾಶದಲ್ಲಿ ಸಮಸ್ಯೆ ಎದುರಾಗುತ್ತದೆ. ಅದಕ್ಕಾಗಿ ಪ್ರಾಕ್ಟಿಕಲ್‌ ಪರೀಕ್ಷೆಯನ್ನು ಮುಂಚೆ ಮಾಡಲಾಯಿತು. ಈ ಹಿಂದೆ ಪರೀಕ್ಷಾ ತಯಾರಿಗಾಗಿ ರಜೆಗಳನ್ನು ನೀಡಲಾಗಿತ್ತು ಹಾಗಾಗಿ ವಿದ್ಯಾರ್ಥಿಗಳಿಗೆ ಅಷ್ಟು ಒತ್ತಡ ಬೀಳುವ ಸಾಧ್ಯತೆ ಕಡಿಮೆ. ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಈ ನಿರ್ಧಾರ ಸರಿಯಾಗಿದೆ.
 - ಖಾಸಗಿ ಮೆಡಿಕಲ್‌ ಕಾಲೇಜಿನ ಪ್ರಾಂಶುಪಾಲೆ

ಟಾಪ್ ನ್ಯೂಸ್

Kantara-Chapter 1: 600 ಮಂದಿ ಬಡಗಿಗಳು, ಕಳರಿಪಯಟ್ಟು ಕಲಾವಿದರು; ಬೃಹತ್ ಸೆಟ್ ನಿರ್ಮಾಣ

Kantara-Chapter 1: 600 ಮಂದಿ ಬಡಗಿಗಳು, ಕಳರಿಪಯಟ್ಟು ಕಲಾವಿದರು; ಬೃಹತ್ ಸೆಟ್ ನಿರ್ಮಾಣ

7-bng-crime

Bengaluru: ವಿವಾಹಕ್ಕೆ ಒಪ್ಪದ ಮಹಿಳೆ ಮನೆಗೆ ಬೆಂಕಿ ಹಚ್ಚಿದ

Helicopter Crash: ಹೆಲಿಕಾಪ್ಟರ್ ಪತನ… ಕೂದಲೆಳೆಯ ಅಂತರದಲ್ಲಿ ಪಾರಾದ ಶಿವಸೇನಾ ಉಪನಾಯಕಿ

Helicopter Crash: ಹೆಲಿಕಾಪ್ಟರ್ ಪತನ… ಕೂದಲೆಳೆಯ ಅಂತರದಲ್ಲಿ ಪಾರಾದ ಶಿವಸೇನಾ ಉಪನಾಯಕಿ

6-

Bengaluru: ವಿಮಾನ ಹಾರಾಟದ ವೇಳೆ ತುರ್ತು ಬಾಗಿಲು ತೆರೆಯಲು ಯತ್ನಿಸಿದ ಯುವಕ ಸೆರೆ

ಯುವತಿಯ ಅಪಹರಣ; ಯುವಕನ ತಾಯಿಯನ್ನು ಕಂಬಕ್ಕೆ ಕಟ್ಟಿ ಥಳಿತ

Haveri; ಯುವತಿಯ ಅಪಹರಣ ಆರೋಪ; ಯುವಕನ ತಾಯಿಯನ್ನು ಕಂಬಕ್ಕೆ ಕಟ್ಟಿ ಥಳಿತ

5-fir

Bengaluru: ಠಾಣೆಯಲ್ಲೇ ಮಹಿಳಾ ಪಿಎಸ್‌ಐಗೆ ಕಪಾಳಮೋಕ್ಷ, ಪೊಲೀಸರ ಮೇಲೆ ಹಲ್ಲೆ

Tragedy: ಮೊಬೈಲ್ ಬೆಳಕಿನಲ್ಲಿ ಸಿಸೇರಿಯನ್ ಹೆರಿಗೆಗೆ ಮುಂದಾದ ವೈದ್ಯರು.. ತಾಯಿ, ಮಗು ಮೃತ್ಯು

Tragedy: ಮೊಬೈಲ್ ಬೆಳಕಿನಲ್ಲಿ ಸಿಸೇರಿಯನ್ ಹೆರಿಗೆಗೆ ಮುಂದಾದ ವೈದ್ಯರು.. ತಾಯಿ, ಮಗು ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

70 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ ; ನಿರ್ವಹಣೆಯಿಲ್ಲದೆ ಸೊರಗಿದ ಮಲ್ಲಿಕಟ್ಟೆ ಪಾರ್ಕ್‌

70 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ ; ನಿರ್ವಹಣೆಯಿಲ್ಲದೆ ಸೊರಗಿದ ಮಲ್ಲಿಕಟ್ಟೆ ಪಾರ್ಕ್‌

ರಂಗ ಸಂಗಾತಿ 16ನೇ ವಾರ್ಷಿಕೋತ್ಸವ; ರಂಗಭಾಸ್ಕರ ಪ್ರಶಸ್ತಿಗೆ ನಟ ನವೀನ್‌ ಪಡೀಲ್‌ ಆಯ್ಕೆ

ರಂಗ ಸಂಗಾತಿ 16ನೇ ವಾರ್ಷಿಕೋತ್ಸವ; ರಂಗಭಾಸ್ಕರ ಪ್ರಶಸ್ತಿಗೆ ನಟ ನವೀನ್‌ ಪಡೀಲ್‌ ಆಯ್ಕೆ

ಆಪತ್ಕಾಲಕ್ಕೆ ಆತಂಕ; “ರಕ್ತ’ ಅಭಾವ- ಬೇಡಿಕೆ ವಿಪರೀತ ಏರಿಕೆ!

ಆಪತ್ಕಾಲಕ್ಕೆ ಆತಂಕ; “ರಕ್ತ’ ಅಭಾವ- ಬೇಡಿಕೆ ವಿಪರೀತ ಏರಿಕೆ!

Dakshina Kannada: ದ.ಕ. ಜಿಲ್ಲೆಗೆ ಮೂರೇ ತಿಂಗಳಲ್ಲಿ 1.23 ಕೋಟಿ ಪ್ರವಾಸಿಗರು !

Dakshina Kannada: ದ.ಕ. ಜಿಲ್ಲೆಗೆ ಮೂರೇ ತಿಂಗಳಲ್ಲಿ 1.23 ಕೋಟಿ ಪ್ರವಾಸಿಗರು !

Mangaluru University; ಲೋಕ ಸಮರದ ನೆಪ; ಘಟಿಕೋತ್ಸವ ಆಗದೆ ವಿ.ವಿ. ವಿದ್ಯಾರ್ಥಿಗಳು ಕಂಗಾಲು!

Mangaluru University; ಲೋಕ ಸಮರದ ನೆಪ; ಘಟಿಕೋತ್ಸವ ಆಗದೆ ವಿ.ವಿ. ವಿದ್ಯಾರ್ಥಿಗಳು ಕಂಗಾಲು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kantara-Chapter 1: 600 ಮಂದಿ ಬಡಗಿಗಳು, ಕಳರಿಪಯಟ್ಟು ಕಲಾವಿದರು; ಬೃಹತ್ ಸೆಟ್ ನಿರ್ಮಾಣ

Kantara-Chapter 1: 600 ಮಂದಿ ಬಡಗಿಗಳು, ಕಳರಿಪಯಟ್ಟು ಕಲಾವಿದರು; ಬೃಹತ್ ಸೆಟ್ ನಿರ್ಮಾಣ

7-bng-crime

Bengaluru: ವಿವಾಹಕ್ಕೆ ಒಪ್ಪದ ಮಹಿಳೆ ಮನೆಗೆ ಬೆಂಕಿ ಹಚ್ಚಿದ

Lok Sabha Polls: ಕಾಗೆ ಮಾತು ಕಾಂಗ್ರೆಸ್‌ನ ಮನಸ್ಥಿತಿ: ಬಿ.ವೈ.ರಾಘವೇಂದ್ರ

Lok Sabha Polls: ಕಾಗೆ ಮಾತು ಕಾಂಗ್ರೆಸ್‌ನ ಮನಸ್ಥಿತಿ: ಬಿ.ವೈ.ರಾಘವೇಂದ್ರ

Helicopter Crash: ಹೆಲಿಕಾಪ್ಟರ್ ಪತನ… ಕೂದಲೆಳೆಯ ಅಂತರದಲ್ಲಿ ಪಾರಾದ ಶಿವಸೇನಾ ಉಪನಾಯಕಿ

Helicopter Crash: ಹೆಲಿಕಾಪ್ಟರ್ ಪತನ… ಕೂದಲೆಳೆಯ ಅಂತರದಲ್ಲಿ ಪಾರಾದ ಶಿವಸೇನಾ ಉಪನಾಯಕಿ

Aditya’s kangaroo movie released

Kangaroo; ಥ್ರಿಲ್ಲರ್‌ ಹಾದಿಯಲ್ಲಿ ಆದಿತ್ಯ ಹೆಜ್ಜೆ ಗುರುತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.