ರಸ್ತೆಗಳ ಅಭಿವೃದ್ಧಿಗೆ ಆದ್ಯತೆ
Team Udayavani, Sep 22, 2019, 8:28 AM IST
ಹುಬ್ಬಳ್ಳಿ: ಮುಂದಿನ 30-40 ವರ್ಷಗಳ ನಗರದ ಬೆಳವಣಿಗೆ ಗಮನದಲ್ಲಿಟ್ಟುಕೊಂಡು ಮೂಲಸೌಲಭ್ಯ ಕಲ್ಪಿಸಿಲು ಯೋಜನೆ ರೂಪಿಸಲಾಗಿದೆ. ನಗರದ ರಸ್ತೆಗಳ ಅಭಿವೃದ್ಧಿಗೆ ಒತ್ತು ನೀಡಲಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಜಗದೀಶ ಶೆಟ್ಟರ ಹೇಳಿದರು.
ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಯಿಂದ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಸಿಆರ್ ಎಫ್ ಯೋಜನೆಯಲ್ಲಿ ಕಾಂಕ್ರೀಟ್ರಸ್ತೆ ನಿರ್ಮಾಣ ಮಾಡಲಾಗುವುದು. ಶೀಘ್ರದಲ್ಲಿ ನಗರದ ಪ್ರಮುಖ ನಾಲ್ಕೈದು ರಸ್ತೆಗಳ ನಿರ್ಮಾಣ ಕಾರ್ಯ ಆರಂಭವಾಗಲಿವೆ ಎಂದು ಹೇಳಿದರು.
ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಸನ್ಮಾನ ಸ್ವೀಕರಿಸಿ ಮಾತನಾಡಿ, ಮಹಾನಗರ ಅಭಿವೃದ್ಧಿ ದೃಷ್ಟಿಯಿಂದ ಒಂದು ಫೋರಂ ಮಾಡಿ ಮೂರ್ನಾಲ್ಕು ತಿಂಗಳಿಗೊಮ್ಮೆ ಸಭೆ ಮಾಡಿ ಅವಶ್ಯ ಯೋಜನೆಗಳ ಕುರಿತು ಚರ್ಚಿಸುವ ಅಗತ್ಯವಿದೆ. ಮೊದಲು ಕೈಗಾರಿಕೆಗಳಿಗೆ ಅಗತ್ಯವಿರುವ ಭೂಮಿ ಗುರುತಿಸುವ ಕೆಲಸ ಆಗಬೇಕು. ನಂತರ ಇಲ್ಲಿನ ಹೂಡಿಕೆದಾರರ ಸಭೆ ಮಾಡಲಾಗುವುದು ಎಂದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಶಶಿಕಲಾ ಜೊಲ್ಲೆ ಮಾತನಾಡಿ, ವಿವಿಧ ಇಲಾಖೆಯಲ್ಲಿ ಮಹಿಳೆಯರಿಗೆ ದೊರೆಯುವ ಯೋಜನೆಗಳ ಮಾಹಿತಿ ಒಂದೇ ಸೂರಿನಡಿ ದೊರೆಯುವ ನಿಟ್ಟಿನಲ್ಲಿ ಚಿಂತನೆ ನಡೆದಿದೆ. ಈ ಕುರಿತು ಇಲಾಖೆಯ
ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಲಾಗಿದೆ. ವಿವಿಧ ಕ್ಷೇತ್ರದಲ್ಲಿ ಮಹಿಳೆಯರ ತೊಡಗುವಿಕೆ ಹೆಚ್ಚಬೇಕಿದೆ. ಅಲ್ಪಾವಧಿಯಲ್ಲಿ ಲಾಭ ಮಾಡುವ ಮನಸ್ಥಿತಿಯಿಂದ ಹೊರಬರಬೇಕಿದೆ ಎಂದು ಹೇಳಿದರು.
ಸಂಸದ ಅಣ್ಣಾಸಾಹೇಬ ಜೊಲ್ಲೆ ಹಾಗೂ ಮುಖ್ಯಮಂತ್ರಿ ಕಾನೂನು ಸಲಹೆಗಾರ ಮೋಹನ ಲಿಂಬಿಕಾಯಿ ಅವರನ್ನು ಸನ್ಮಾನಿಸಲಾಯಿತು. ವಾಣಿಜ್ಯೋದ್ಯಮ ಸಂಘದ ಅಧ್ಯಕ್ಷ ವಿ.ಪಿ. ಲಿಂಗನಗೌಡರ, ವಿನಯ ಜವಳಿ, ರಮೇಶ ಪಾಟೀಲ, ವಸಂತ ಲದ್ವಾ ಇನ್ನಿತರರಿದ್ದರು.
ಸಚಿವರಿಗೆ ಮನವಿ: ಹು-ಧಾ ಮಹಾನಗರ ಉತ್ಪಾದನಾ ವಲಯ, ರಕ್ಷಣಾ ಸಲಕರಣೆಗಳು ಹಾಗೂ ಉತ್ಪನ್ನಗಳಪಾರ್ಕ್, ಇಂಡಸ್ಟ್ರಿಯಲ್ ಪಾರ್ಕ್ ಹಾಗೂ ವಿಶೇಷ ಆರ್ಥಿಕ ವಲಯ, ಮಹಾನಗರದ ಅಭಿವೃದ್ಧಿ, ರಸ್ತೆಗಳ
ಅಗಲೀಕರಣ, ಘನತ್ಯಾಜ್ಯ ನಿರ್ವಹಣೆ, ಟ್ರಕ್ ಟರ್ಮಿನಲ್, ಮಹಾನಗರದ ಕಾನೂನು ಸುವ್ಯವಸ್ಥೆ ಹಾಗೂ ಸುಗಮ ಸಾರಿಗೆ ಸಂಚಾರ ನಿರ್ವಹಣೆ, ಚತುಷ್ಪಥ ರಸ್ತೆ ಸೇರಿದಂತೆ ವಿವಿಧ ಯೋಜನೆಗಳ ಕುರಿತು ವಾಣಿಜ್ಯೋದ್ಯಮ ಸಂಸ್ಥೆಯಿಂದ ಸಚಿವರಿಗೆ ಮನವಿ ಸಲ್ಲಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ
Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ
Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ
MUST WATCH
ಹೊಸ ಸೇರ್ಪಡೆ
Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ
ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ
Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ