ದಲಿತ ಕುಟುಂಬಗಳ ವಿರುದ್ಧ ಕೇಸ್ : ಮರು ತನಿಖೆಗೆ ಒತ್ತಾಯ
Team Udayavani, Sep 22, 2019, 11:34 AM IST
ಕನಕಗಿರಿ: ಸಮೀಪದ ತಿಪ್ಪನಾಳ ಕೆರೆಯಲ್ಲಿ 60 ವರ್ಷಗಳಿಂದ 26 ದಲಿತ ಕುಟುಂಬಗಳು ಸಾಗುವಳಿ ಮಾಡುತ್ತಿದ್ದವು. ಆದರೆ ನಕಲಿ ದಾಖಲೆ ಸೃಷ್ಟಿಸಿ 26 ದಲಿತ ಕುಟುಂಬಗಳ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಲಾಗಿದೆ. ಕೂಡಲೇ ಆ ಪ್ರಕರಣವನ್ನು ಮರು ತನಿಖೆ ಮಾಡಬೇಕೆಂದು ಒತ್ತಾಯಿಸಿ ಅಖೀಲ ಭಾರತ ಕೃಷಿ ಗ್ರಾಮೀಣ ಕಾರ್ಮಿಕ ಸಂಘದ ಪದಾಧಿಕಾರಿಗಳು ತಹಶೀಲ್ದಾರ್ಗೆ ಮನವಿ ಸಲ್ಲಿಸಿದರು.
ನಂತರ ಪ್ರಗತಿಪರ ಹೋರಾಟಗಾರ ಜೆ. ಭಾರಧ್ವಾಜ್ ಮಾತನಾಡಿ, ಸಮೀಪದ ತಿಪ್ಪನಾಳ ಕೆರೆಯಲ್ಲಿರುವ ಚಿರಸ್ಥಾಯಿ ಸೂರ್ಯ ಕಂಪನಿಯು ಡಿ.ಕೆ. ಶಿವಕುಮಾರ ಹಾಗೂ ಲಕ್ಷೀ¾ ಹೆಬ್ಟಾಳ್ಕರ್ ಪಾಲುದಾರಿಕೆಯಲ್ಲಿದೆ. ಆದರೆ 60 ವರ್ಷಗಳಿಂದ ಆ ಭೂಮಿಯಲ್ಲಿ 26 ದಲಿತ ಕುಟುಂಬಗಳು ಸಾಗುವಳಿ ಮಾಡುತ್ತಿವೆ. ಚಿರಸ್ಥಾಯಿ ಸೂರ್ಯಲಿ. ಕಂಪನಿಗೆ ಭೂಮಿ ನೀಡಿ ದಲಿತ ಕುಟುಂಬಗಳ ಮೇಲೆ ಪ್ರಕರಣ ದಾಖಲಿಸಿದ್ದಾರೆ.
ಕೂಡಲೇ ರಾಜ್ಯ ಸರ್ಕಾರ ಈ ಭೂ ವಿವಾದ ಪ್ರಕರಣವನ್ನು ಮರು ತನಿಖೆಯನ್ನು ಮಾಡಿ ದಲಿತ ಕುಟುಂಬಗಳಿಗೆ ನ್ಯಾಯ ಒದಗಿಸಿಕೊಡಬೇಕು ಎಂದರು. ಬಳಿಕ ಅಖೀಲ ಭಾರತ ಕೃಷಿ ಗ್ರಾಮೀಣ ಕಾರ್ಮಿಕ ಸಂಘದ ಜಿಲ್ಲಾಧ್ಯಕ್ಷ ಕೆಂಚಪ್ಪ ಮಾತನಾಡಿ, ಕೊಪ್ಪಳ ಜಿಲ್ಲೆಯಲ್ಲಿ ಡಿ.ಕೆ. ಶಿವಕುಮಾರ ಪಾಲುದಾರಿಕೆಯ ಅನೇಕ ಕಂಪನಿಗಳಿದ್ದು, ಅವುಗಳಲ್ಲಿ ತಿಪ್ಪನಾಳ ಕೆರೆಯ ಭೂಮಿಯನ್ನು ಅಕ್ರಮ ದಾಖಲೆಗಳಿಂದ ಕಬಳಿಸಿ ಸೋಲಾರ್ ಪ್ಲಾಂಟ್ಗಳನ್ನು ಅಳವಡಿಸಿದ್ದಾರೆ. ಆ ಭೂಮಿಯನ್ನು ನಂಬಿದ 26 ದಲಿತ ಕುಟುಂಬಗಳ ಮೇಲೆ ಕ್ರಿಮಿನಲ್ ಪ್ರಕರಣ ದಾಖಲಿಸಿ, ಬೀದಿಪಾಲು ಮಾಡಿದ್ದಾರೆ. ಕೂಡಲೇ ಆ ಪ್ರಕರಣವನ್ನು ಮರು ತನಿಖೆ ಮಾಡಬೇಕೆಂದರು.
ಪಾಮಣ್ಣ ಅರಳಿಗನೂರು, ಸಣ್ಣ ಹನುಮಂತಪ್ಪ, ನೀಲಕಂಠ ಬಡಿಗೇರ, ಪಂಪಾಪತಿ ಜಾಲಿಹಾಳ, ಚಂದ್ರಶೇಖರ ಸೋಡಿ ಸೇರಿದಂತೆ ಇತರರು ಇದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ
MUST WATCH
ಹೊಸ ಸೇರ್ಪಡೆ
Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ
Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್