ಪೀಠೊಪಕರಣ ಖರೀದಿ ಅವ್ಯವಹಾರ ತನಿಖೆ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಕರ್ಮಕಾಂಡ ಬಯಲಿಗೆಳೆಯಲು ಜನಪ್ರತಿನಿಧಿ-ಅಧಿಕಾರಿಗಳ ತಂಡ ರಚನೆಗೆ ನಿರ್ಧಾರ

Team Udayavani, Sep 22, 2019, 12:52 PM IST

22-Sepectember-10

ಚಿಕ್ಕಮಗಳೂರು: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅರಿವು ಕಾರ್ಯಕ್ರಮ ಮತ್ತು ಪೀಠೊಪಕರಣ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ತನಿಖೆಗೆ ಜನಪ್ರತಿನಿಧಿ ಮತ್ತು ಅಧಿಕಾರಿಗಳನ್ನೊಳಗೊಂಡ ತಂಡವನ್ನು ರಚಿಸಲು ಜಿಪಂ ಸಾಮಾನ್ಯ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಯಿತು.

ಜಿಪಂ ಕಚೇರಿಯ ನಜೀರ್‌ ಸಾಬ್‌ ಸಭಾಂಗಣದಲ್ಲಿ ಜಿಪಂ ಅಧ್ಯಕ್ಷೆ ಸುಜಾತಾ ಕೃಷ್ಣಪ್ಪ ಅಧ್ಯಕ್ಷತೆಯಲ್ಲಿ ಶನಿವಾರ ನಡೆದ ಸರ್ವಸದಸ್ಯರ ಸಭೆಯಲ್ಲಿ ವಿಷಯ ಪ್ರಸ್ತಾಪಿಸಿದ ಸದಸ್ಯ ಬಿ.ಜಿ. ಸೋಮಶೇಖರ್‌, ಅಲ್ಪಸಂಖ್ಯಾತರ ಇಲಾಖೆಯ ಅಧೀನದಲ್ಲಿ ಪ್ರತಿ ತಾಲೂಕಿನಲ್ಲಿ ಮಾಹಿತಿ ಕೇಂದ್ರ ಕಾರ್ಯನಿರ್ವಹಿಸುತ್ತಿದೆ. ಈ ಕೇಂದ್ರ ಇಲಾಖೆಯಿಂದ ದೊರೆಯುವ ಸವಲತ್ತುಗಳ ಕುರಿತು ಅಲ್ಪಸಂಖ್ಯಾತರಿಗೆ ತಿಳಿಸಲು 4,800 ರೂ. ಪ್ರತಿ ಕಾರ್ಯಕ್ರಮಕ್ಕೆ ಖರ್ಚು ಮಾಡಬೇಕಾಗಿದೆ ಎಂದು ತಿಳಿಸಿದರು.

ಕಾರ್ಯಕ್ರಮಕ್ಕೆ ಶಾಮಿಯಾನ ಮತ್ತು ಕುರ್ಚಿ ಹಾಕಿರುವ ಬಗ್ಗೆ ಬಿಲ್‌ ನೀಡಬೇಕು. ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಹೊರಗುತ್ತಿಗೆಯಲ್ಲಿ ಕೆಲಸ ಮಾಡುತ್ತಿರುವ ವ್ಯಕ್ತಿಗೆ, ಅರಸೀಕೆರೆಯ ಸರ್ಕಾರೇತರ ಸಂಸ್ಥೆಯ ವ್ಯಕ್ತಿಯೊಬ್ಬರಿಗೆ ಉಪ್ಪಳ್ಳಿಯಲ್ಲಿರುವ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ವಸತಿ ನಿಲಯದ ನೌಕರರೊಬ್ಬರು ಚೆಕ್‌ ನೀಡಿ ಹಣ ಪಡೆದುಕೊಂಡಿದ್ದಾರೆ ಎಂದು ಆರೋಪಿಸಿದರು.

ಈ ಇಲಾಖೆ ವ್ಯಾಪ್ತಿಯ ತಾಲೂಕು ವಿಸ್ತರಣಾ ಕಚೇರಿಗೆ ಪೀಠೊಪಕರಣ ಸೇರಿದಂತೆ ಇತರೆ ಸಾಮಗ್ರಿಗಳನ್ನು ಹಾಸನ, ಅರಸೀಕೆರೆಯಲ್ಲಿ ಖರೀದಿ ಮಾಡಲಾಗಿದೆ ಎಂದು ತೋರಿಸಲಾಗಿದೆ. ಇಲಾಖೆ ಅಧಿಕಾರಿಗಳಲ್ಲಿ ಮಾಹಿತಿ ಕೇಳಿದ್ದರಿಂದ ನಗರದ ಎಐಟಿ ವೃತ್ತದಲ್ಲಿರುವ ಲಕ್ಷ್ಮೀ  ರಂಗನಾಥ ಸ್ಟೋರ್‌ನಿಂದ ವಸ್ತುಗಳನ್ನು ಖರಿದಿಸಲಾಗಿದೆ ಎಂದು ಮಾಹಿತಿ ನೀಡಿದ್ದು, ಆ ವೃತ್ತದಲ್ಲಿ ಈ ಹೆಸರಿನ ಅಂಗಡಿಯೇ ಇಲ್ಲವೆಂದು ಹೇಳಿದರು.

ಕಾರ್ಯಕ್ರಮ ನಡೆಸಿರುವ ಮತ್ತು ಕುರ್ಚಿ ಸೇರಿದಂತೆ ಇತರೆ ವಸ್ತುಗಳನ್ನು ಖರೀದಿಸುವ ಬಗ್ಗೆ ಹಣ ದುರುಪಯೋಗವಾಗಿದ್ದು, ಸಮಗ್ರ ತನಿಖೆ ನಡೆಸುವಂತೆ ಸೋಮಶೇಖರ್‌ ಒತ್ತಾಯಿಸಿದರು. ಸದಸ್ಯರು ಮತ್ತು ಅಧಿಕಾರಿಗಳನ್ನು ಒಳಗೊಂಡ ಸಮಿತಿ ರಚಿಸುವುದಾಗಿ ಜಿಪಂ ಅಧ್ಯಕ್ಷರು ಹೇಳಿದರು. ಸಮಿತಿಗೆ ಯಾರನ್ನು ಆಯ್ಕೆ ಮಾಡಿಕೊಳ್ಳಬೇಕೆಂಬ ಅಧಿಕಾರವನ್ನು ಜಿಪಂ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ವಿವೇಚನೆಗೆ ಬಿಡಲಾಯಿತು.

ಕೃಷಿ ಮತ್ತು ತೋಟಗಾರಿಕೆ ಬೆಳೆಗಳಾದ ಕಾಫಿ, ಅಡಕೆ, ಕಾಳು ಮೆಣಸು ಶೇ.90 ರಷ್ಟು ಉದುರಿಹೋಗಿದೆ. ಸಮಗ್ರ ಮಾಹಿತಿ ಸಂಗ್ರಹಣೆಗೆ ಸಂಬಂಧಿಸಿದ ಇಲಾಖೆಯಲ್ಲಿ ಸಿಬ್ಬಂದಿ ಕೊರತೆ ಉಂಟಾಗಿದೆ ಎಂದು ರಾಮಸ್ವಾಮಿ ತಿಳಿಸಿದರೆ, ಚಿಕ್ಕಮಗಳೂರು ತಾಲೂಕನ್ನು ಅತಿವೃಷ್ಟಿ ವ್ಯಾಪ್ತಿಗೆ ಸೇರಿಸುವಂತೆ ಸೋಮಶೇಖರ್‌ ಆಗ್ರಹಿಸಿದರು. ಕಾಫಿ ಮಂಡಳಿಯವರು ಕಾಫಿ ಬೆಳೆ ನಷ್ಟವನ್ನು ಅಂದಾಜಿಸಲು ಸರ್ವೆ ಕಾರ್ಯ ನಡೆಸಿಲ್ಲವೆಂದು ಸದಸ್ಯೆ ಕವಿತಾ ರಂಗರಾಜು ಹೇಳಿದರು.

ಅತಿವೃಷ್ಟಿಯಲ್ಲಿ ಜಿಲ್ಲಾಡಳಿತ ಉತ್ತಮವಾಗಿ ಸ್ಪಂದಿಸಿದ್ದರಿಂದ ಅಧಿಕ ಸಾವು-ನೋವುಗಳನ್ನು ತಡೆಯಲಾಗಿದೆ. ಕೆಲವು ಇಲಾಖೆಯವರು ಜವಾಬ್ದಾರಿಯಿಂದ ಕೆಲಸ ನಿರ್ವಹಿಸಿಲ್ಲವೆಂದು ಆರೋಪಿಸಿದ ಮೂಡಿಗೆರೆ ತಾಪಂ ಅಧ್ಯಕ್ಷ ರತನ್‌, ಬೆಳೆ ನಷ್ಟಕ್ಕೆ ಕಡಿಮೆ ಪರಿಹಾರ ದೊರೆಯುತ್ತದೆ.

ಗುಡ್ಡ ಕುಸಿದು ಕೃಷಿ ಜಮೀನು ನಾಶವಾಗಿದ್ದರೆ ಹೆಚ್ಚು ಪರಿಹಾರ ದೊರೆಯುತ್ತಿದೆ. ಕೃಷಿ ಅಧಿಕಾರಿಗಳು ರೈತರ ಮನೆಗೆ ತೆರಳಿ ಮಾಹಿತಿ ಸಂಗ್ರಹಿಸುತ್ತಿಲ್ಲವೆಂದು ತಿಳಿಸಿದರು. ಮಲೆನಾಡಿನಲ್ಲಿ ಸಂಭವಿಸಿರುವ ನೆರೆ ಸಂತ್ರಸ್ತರ ನೋವಿಗೆ ಬಯಲು ಭಾಗದ ಜನರು ಸ್ಪಂದಿಸಿದ್ದಾರೆ. ವಾಟ್ಸ್‌ಆ್ಯಪ್‌ ಗ್ರೂಪ್‌ ಮಾಡಿಕೊಂಡು ಸಂತ್ರಸ್ತರ ನೆರವಿಗೆ ಸ್ಪಂದಿಸಿರುವ ಅವರನ್ನು ಜಿಪಂ ವತಿಯಿಂದ ಸನ್ಮಾನಿಸಬೇಕೆಂದು ಸದಸ್ಯ ಶರತ್‌ ಕೃಷ್ಣಮೂರ್ತಿ ಸಲಹೆ ನೀಡಿದರು.

ಸ್ಥಳೀಯ ಸಂಸ್ಥೆಗಳಿಂದ ಹಿಡಿದು ಜಿಪಂ ವರೆಗೆ ಅಧಿಕಾರ ಹಿಡಿದಿರುವ ಬಿಜೆಪಿ ಜಿಲ್ಲೆಯಲ್ಲಿ ಹೆಚ್ಚು ಶಾಸಕರು ಆಯ್ಕೆಯಾಗಿದ್ದು, ಸಂಸದರನ್ನು ಹೊಂದಿದೆ. ಇವರೆಲ್ಲರೂ ತಮಗೆ ದೊರೆತ ಸುವರ್ಣ ಅವಕಾಶವೆಂದು ತಿಳಿದು ಉತ್ತಮ ಕೆಲಸ ನಿರ್ವಹಿಸಿ, ಜಿಲ್ಲೆಗೆ ವಿಶೇಷ ಪ್ಯಾಕೇಜ್‌ ತರಬೇಕೆಂದು ಒತ್ತಾಯಿಸಿದರು.

ತಕ್ಷಣ ಮಧ್ಯ ಪ್ರವೇಶಿಸಿದ ಮೂಡಿಗೆರೆ ತಾಪಂ ಅಧ್ಯಕ್ಷ ರತನ್‌, ಅತಿವೃಷ್ಟಿಯಲ್ಲಿ ರಾಜಕಾರಣ ಬೇಡ. ಪಕ್ಷ ಹೊರಗಿಟ್ಟು ನೆರೆ ಸಂತ್ರಸ್ತರ ಪರವಾಗಿ ಎಲ್ಲ ಜನಪ್ರತಿನಿಧಿಗಳು ಕಾರ್ಯನಿರ್ವಹಿಸೋಣ ಎಂದು ಹೇಳಿದರು.

ನೆರೆಗೆ ಸಂಬಂಧಿಸಿದಂತೆ ಸರ್ಕಾರ ನೊಂದವರ ನೆರವಿಗೆ ನಿಂತಿದೆ. ಜಿಲ್ಲಾಡಳಿತ ಮನೆ ನಿರ್ಮಾಣಕ್ಕೆ ಜಾಗ ಗುರುತು ಮಾಡಿದೆ. ನೊಂದವರ ಪರವಾಗಿ ನಾವೆಲ್ಲ ಆಶಾಕಿರಣ ಮೂಡಿಸೋಣ ಎಂದು ಶಾಸಕ ಬೆಳ್ಳಿ ಪ್ರಕಾಶ್‌ ಹೇಳಿದರೆ, ನೆರೆ ಪ್ರದೇಶಕ್ಕೆ ಮುಖ್ಯಮಂತ್ರಿ, ಕಂದಾಯ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರು ಭೇಟಿ ನೀಡಿ ಸಂತ್ರಸ್ತರಿಗೆ ಧೈರ್ಯ ತುಂಬಿದ್ದಾರೆ. ಕೇಂದ್ರ ಸರ್ಕಾರದಿಂದಲೂ ಶೀಘ್ರದಲ್ಲಿಯೇ ಅನುದಾನ ಬಿಡುಗಡೆಯಾಗಲಿದೆ ಎಂದು ವಿಧಾನಪರಿಷತ್‌ ಸದಸ್ಯ ಎಂ.ಕೆ.ಪ್ರಾಣೇಶ್‌ ತಿಳಿಸಿದರು.

ಪ್ರತಿ ಮಳೆಗಾಲದಲ್ಲಿ ಸಂಕಷ್ಟಕ್ಕೆ ಒಳಗಾಗುತ್ತಿರುವ ಬಂಡಿಮಠ ಮತ್ತು ಹೊಳೆಬಾಗಿಲು ಗ್ರಾಮಗಳನ್ನು ಸ್ಥಳಾಂತರಿ ಸಬೇಕು ಎಂದು ಸದಸ್ಯೆ ಚಂದ್ರಮ್ಮ ಒತ್ತಾಯಿಸಿದರೆ, ಕಳಸಾಕ್ಕೆ ಎಂಬಿಬಿಎಸ್‌ ವೈದ್ಯರನ್ನು ನೇಮಿಸುವಂತೆ ಪ್ರಭಾಕರ್‌ ಒತ್ತಾಯಿಸಿದರು.

ನೆರೆಪೀಡಿತ ಪ್ರದೇಶಕ್ಕೆ ಹೆಚ್ಚಿನ ಒತ್ತು ನೀಡಿದಂತೆ ಬರಪೀಡಿತ ಪ್ರದೇಶಗಳಿಗೂ ವಿಶೇಷ ಅನುದಾನ ಬಿಡುಗಡೆ ಮಾಡುವಂತೆ ಬೆಳವಾಡಿ ರವೀಂದ್ರ ಮನವಿ ಮಾಡಿದರು.

ಬಹುಗ್ರಾಮ ಯೋಜನೆಗೆ ಸಮಗ್ರ ಯೋಜನಾ ವರದಿ ತಯಾರಾಗಿದೆ ಎಂದು ಜಿಪಂ ಅಧ್ಯಕ್ಷರು ಹೇಳಿದರು. ಮಳೆಗಾಲದಲ್ಲಿ ಭದ್ರಾ ನದಿಯ ಹೆಚ್ಚುವರಿ ನೀರನ್ನು ಏತ ನೀರಾವರಿ ಮೂಲಕ ಬಯಲು ಪ್ರದೇಶಕ್ಕೆ ತಿರುಗಿಸುವುದು ಸೂಕ್ತವೆಂದು ರಾಮಸ್ವಾಮಿ ಸಲಹೆ ನೀಡಿದರು.

ಪಂಚಾಯತ್‌ ರಾಜ್‌ ಇಂಜಿನಿಯರಿಂಗ್‌ ಇಲಾಖೆಯಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಕೆಲಸ ನಿರ್ವಹಿಸುತ್ತಿರುವ ನೌಕರರಿಗೆ ಒಂದೂವರೆ ವರ್ಷದಿಂದ ಸಂಬಳವಾಗಿಲ್ಲ ಎಂದು ತಿಳಿಸಿದ ಅಮಿತಾ ಮುತ್ತಪ್ಪ, ಇಲಾಖೆಯಲ್ಲಿರುವ ದುಡ್ಡು ಮೊಟ್ಟೆ ಹಾಕುತ್ತಾ ಎಂದು ಪ್ರಶ್ನಿಸಿ ಬೇರೆಯವರ ಜೀವನದ ಜೊತೆ ಚೆಲ್ಲಾಟ ಬೇಡವೆಂದರು. ಸಭೆಯಲ್ಲಿ ಉಪಾಧ್ಯಕ್ಷ ವಿಜಯಕುಮಾರ್‌, ಜಿಪಂ ಸಿಇಒ ಎಸ್‌.ಅಶ್ವತಿ ಇತರರಿದ್ದರು.

ಟಾಪ್ ನ್ಯೂಸ್

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.