ಶ್ರೀ ಕೃಷ್ಣ ಮಠದಲ್ಲಿ ವೈಭವದ ಕೋಟಿ ತುಳಸಿ ಅರ್ಚನೆ ಸಂಪನ್ನ


Team Udayavani, Sep 23, 2019, 5:10 AM IST

SGR_1670

ಉಡುಪಿ: ಶ್ರೀಕೃಷ್ಣ ಮಠದಲ್ಲಿ ರವಿವಾರ ಪರ್ಯಾಯ ಶ್ರೀಪಲಿಮಾರು ಮಠದ ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರ ನೇತೃತ್ವದಲ್ಲಿ ಲೋಕಕಲ್ಯಾಣಾರ್ಥ ಕೋಟಿ ತುಳಸಿ ಅರ್ಚನೆ ಸಂಪನ್ನ ಗೊಂಡಿತು.

ಜಿಲ್ಲೆಯ 28 ವಲಯಗಳ ಬ್ರಾಹ್ಮಣ ಸಂಘಗಳ ಸುಮಾರು 2,800 ಸದಸ್ಯರು ಪಾಲ್ಗೊಂಡು ವಿಷ್ಣು ಸಹಸ್ರನಾಮ ಪಾರಾಯಣವನ್ನು ತಲಾ ನಾಲ್ಕು ಬಾರಿ ನಡೆಸಿಕೊಟ್ಟರು. ಹಾಸನ,ಬೆಂಗಳೂರು,ಪಂಢರಪುರ,ಹೊಳೆ ನರಸೀಪುರ, ಮೈಸೂರು ಮೊದಲಾದೆಡೆಗಳಿಂದ ತುಳಸಿ ದಳಗಳನ್ನು ಭಕ್ತರು ನೀಡಿದ್ದರು.

ಶ್ರೀ ಪಲಿಮಾರು ಮಠಾಧೀಶ ರಲ್ಲದೆ ಶ್ರೀ ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಶ್ರೀಪಾದರು, ಶ್ರೀ ವಿಶ್ವ ಪ್ರಸನ್ನತೀರ್ಥ ಶ್ರೀಪಾದರು, ಶ್ರೀ ಕೃಷ್ಣಾಪುರ ಮಠದ ಶ್ರೀ ವಿದ್ಯಾಸಾಗರ ತೀರ್ಥ ಶ್ರೀಪಾದರು, ಶ್ರೀ ಸೋದೆ ಮಠದ ಶ್ರೀ ವಿಶ್ವವಲ್ಲಭ ತೀರ್ಥ ಶ್ರೀಪಾದರು, ಶ್ರೀ ಪಲಿಮಾರು ಕಿರಿಯ ಶ್ರೀ ವಿದ್ಯಾರಾಜೇಶ್ವರತೀರ್ಥ ಶ್ರೀಪಾದರು ಅರ್ಚನೆಗಳನ್ನು ನಡೆಸಿಕೊಟ್ಟರು.

ಗರ್ಭಗುಡಿಯಲ್ಲಿರುವ ವಿಗ್ರಹಕ್ಕೆ ಅರ್ಚನೆ ನಡೆದಂತೆ ರಾಜಾಂಗಣ ದಲ್ಲಿಯೂ ಶ್ರೀಕೃಷ್ಣನ ಪ್ರತಿಮೆಗೆ ಅರ್ಚನೆಗಳನ್ನು ಸ್ವಾಮೀಜಿಯವರು ನಡೆಸಿಕೊಟ್ಟರು.

ಆಶೀರ್ವಚನ ನೀಡಿದ ಶ್ರೀ ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಶ್ರೀಪಾದರು, ಶಾಸ್ತ್ರದ ಸಾರ ಮಹಾಭಾರತ. ಅದರಲ್ಲಿಯೂ ಗೀತೆ ಮತ್ತು ವಿಷ್ಣು ಸಹಸ್ರನಾಮ ಮಹಾಭಾರತದ ಸಾರ ವಾಗಿದೆ. ಗೀತೆ ಕೃಷ್ಣಗೀತೆಯಾದರೆ, ವಿಷ್ಣುಸಹಸ್ರನಾಮ ಭಕ್ತ ಭೀಷ್ಮರು ದೇವರ ಅನೇಕ ನಾಮಗಳನ್ನು ಕೊಂಡಾಡಿದ ಭಕ್ತಗೀತೆ. ಇದರ ಒಂದೊಂದು ನಾಮವೂ ನೂರು ನಾಮಗಳನ್ನು ಕೊಡುತ್ತಿದೆ. ನಮಗೆ ನಾಲಗೆ ಮತ್ತು ದೇವರ ನಾಮಗಳೆರಡೂ ಇರುವಾಗ ನಾವು ಅವುಗಳನ್ನು ಉಪಯೋಗಿಸುತ್ತಿಲ್ಲ. ಇಂತಹ ಅಮೂಲ್ಯ ವಿಷ್ಣುಸಹಸ್ರನಾಮದ ಪಾರಾಯಣದಿಂದ ಜಗತ್ತಿಗೆ, ದೇಶಕ್ಕೆ ಕಲ್ಯಾಣವಾಗಲಿ ಎಂದು ಹಾರೈಸಿದರು.

ಶ್ರೀಕೃಷ್ಣ ದೇವಕಿಗೆ ಮಾತ್ರ ಆನಂದ ಕೊಟ್ಟದ್ದಲ್ಲ. ಭಕ್ತರಿಗೂ ಆನಂದ ಕೊಡುತ್ತಾನೆ. ತುಳಸಿಗೆ ಸಮನಾದ ಇನ್ನೊಂದು ವಸ್ತುವಿಲ್ಲ. ಹೀಗಾಗಿಯೇ ಏನನ್ನು ಕೊಡುವಾಗಲೂ ತುಳಸಿ ಸಹಿತ ಕೊಡುತ್ತೇವೆ. ಇದರರ್ಥ ತುಳಸಿ ಸಮೇತ ಕೊಟ್ಟಾಗ ಅದು ಭಗವಂತನಿಗೆ ತಲುಪುತ್ತದೆ. ನಾವು ಮಾಡಿದ ನಿತ್ಯದ ಲಕ್ಷ ತುಳಸಿ ಅರ್ಚನೆಯೂ ಒಂದರ್ಥದಲ್ಲಿ ಫ‌ಲ ನೀಡಿದೆ. ನಮ್ಮ ದೇಶದ ಮುಕುಟಪ್ರಾಯವಾದ ಕಾಶ್ಮೀರ ಈಗ ಮುಕ್ತಗೊಂಡರೆ, ಮುಂದೆ ಪಾಕ್‌ ಆಕ್ರಮಿತ ಕಾಶ್ಮೀರವೂ ಭಾರತದ ತೆಕ್ಕೆಗೆ ಬರುವಂತಾಗಲಿ ಎಂದು ಶ್ರೀ ಪಲಿಮಾರು ಶ್ರೀಗಳು ಹಾರೈಸಿದರು.

ವಿಷ್ಣು ಸಹಸ್ರನಾಮವನ್ನು ಆರಂಭಿಸು ವಾಗ “ಓಂ ನಮೋ ಭಗವತೇ ವಾಸುದೇವಾಯ’ ಎಂದು ಹೇಳುವ ಕ್ರಮವಿದೆ. ಇದರರ್ಥ ನಮ್ಮ ನೋವನ್ನು ವಾಸಿ ಮಾಡು ಎಂಬ ಭೀಷ್ಮರ ಪ್ರಾರ್ಥನೆ. ಈ ಪ್ರಾರ್ಥನೆಯಿಂದ ನಮ್ಮ ದೇಶದ ಅನಿಷ್ಠಗಳು ನಿವಾರಣೆಯಾಗಲಿ ಎಂದು ಶ್ರೀ ಅದಮಾರು ಮಠದ ಶ್ರೀ ವಿಶ್ವಪ್ರಿಯ ತೀರ್ಥ ಶ್ರೀಪಾದರು ಆಶಿಸಿದರು. ಜಿಲ್ಲಾ ಬ್ರಾಹ್ಮಣ ಮಹಾಸಭಾ ಅಧ್ಯಕ್ಷ ಮಂಜುನಾಥ ಉಪಾಧ್ಯ ಅವರು ಕಾರ್ಯಕ್ರಮ ನಿರ್ವಹಿಸಿದರು.

ಟಾಪ್ ನ್ಯೂಸ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.