ನಿವೃತ್ತ ನೌಕರರಿಗೂ ಸೌಲಭ್ಯ ವಿಸ್ತರಿಸಲು ಸಿಎಂಗೆ ಮನವಿ


Team Udayavani, Sep 23, 2019, 3:00 AM IST

nivrutta

ಚಾಮರಾಜನಗರ: ಹಾಲಿ ನೌಕರರಿಗೆ ನೀಡುತ್ತಿರುವ ಆರೋಗ್ಯ ಭಾಗ್ಯ ಯೋಜನೆ, ಪಿಂಚಣಿ ಸೌಲಭ್ಯ ಹೆಚ್ಚಳ ಸೇರಿದಂತೆ ವಿವಿಧ ಸೌಲಭ್ಯಗಳನ್ನು ನಿವೃತ್ತ ನೌಕರರಿಗೂ ವಿಸ್ತರಿಸಲು ಒತ್ತಾಯಿಸಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಲಾಗಿದೆ ಎಂದು ಬೆಂಗಳೂರು ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘದ ಉಪಾಧ್ಯಕ್ಷ ಜೆ.ಸಿ.ಮಂಜುನಾಥ ಹೇಳಿದರು. ನಗರದ ಜೆ.ಎಚ್‌.ಪಟೇಲ್‌ಸಭಾಂಗಣದಲ್ಲಿ ಭಾನುವಾರ ನಡೆದ ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘದ ಜಿಲ್ಲಾ ಶಾಖೆಯ 12ನೇ ವಾರ್ಷಿಕೋತ್ಸವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.

ಕರ್ನಾಟಕ ರಾಜ್ಯ ನೌಕರರ ನಿವೃತ್ತ ನೌಕರರ ಸಂಘ ಸ್ಥಾಪನೆಯಾಗಿ 50 ವರ್ಷಗಳು ಕಳೆದಿದೆ. ಹಿಂದಿನ ಅಧ್ಯಕ್ಷರು ಸಂಘದ ಧ್ಯೇಯೋದ್ದೇಶಗಳನ್ನು ಈಡೇರಿಸುವಲ್ಲಿ ವಿಫ‌ಲರಾಗಿದ್ದು, ಸಂಘ ಕುಂಠಿತವಾಗಿತ್ತು. ಚುನಾವಣೆ ಪ್ರಕ್ರಿಯ ಮೂಲಕ ಡಾ.ಎಲ್‌.ಭೈರಪ್ಪ ಸಂಘದ ನೂತನ ಅಧ್ಯಕ್ಷರಾದ ಮೇಲೆ ಸಂಘದ ಚುರುಕಿನ ಚಟುವಟಿಕೆ ಆರಂಭಗೊಂಡಿದ್ದು, ನಿವೃತ್ತ ನೌಕರರಿಗೆ ಬೇರೆಬೇರೆಗಳಲ್ಲಿ ಜಾರಿಯಲ್ಲಿರುವ ಆರೋಗ್ಯ ಭಾಗ್ಯ ಯೋಜನೆ, ಪಿಂಚಣೆ ಸೌಲಭ್ಯ ಹೆಚ್ಚಳ ಸೇರಿದಂತೆ ಅನೇಕ ಬೇಡಿಕೆಗಳನ್ನು ಈಡೇರಿಸುವಂತೆ ಮುಖ್ಯಮಂತ್ರಿಗಳು, ಅಧಿಕಾರಿಗಳಲ್ಲಿ ಮನವಿ ಸಲ್ಲಿಸಲಾಗಿದೆ ಎಂದರು.

ನಿವೃತ್ತ ನೌಕರರಿಗೆ ಬಸ್‌ ಪ್ರಯಾಣದರದಲ್ಲಿ ರಿಯಾಯಿತಿ, ನಿವೇಶನ ಖರೀದಿಗೆ ಹಣಕಾಸಿನ ನೆರವು ನೀಡಬೇಕು. ಶವಸಂಸ್ಕಾರ ಧನಸಹಾಯ, ಆಸ್ತಿ ಖರೀದಿಗೆ ಸಾಲಸೌಲಭ್ಯ, ಮಕ್ಕಳ ಶಿಕ್ಷಣ ಶಿಕ್ಷಣ ಬಡ್ಡಿ ರಹಿತ ಸಾಲಸೌಲಭ್ಯ ಹಾಗೂ ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ನಿವೃತ್ತ ನೌಕರಿಗೆ ಪತ್ಯೇಕ ಕೌಂಟರ್‌ ತೆರೆಯುವಂತೆ ಒತ್ತಾಯಿಸಿ ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಲಾಗಿದೆ ಎಂದರು.

ಸಂಘ ಸಂಘಟನೆ ಬಹಳ ಮುಖ್ಯ. ಆದ್ದರಿಂದ ಕೇಂದ್ರ ಸಂಘವನ್ನು ಬಲ ಪಡಿಸುವ ನಿಟ್ಟಿನಲ್ಲಿ ತಾಲೂಕು ಮತ್ತು ಜಿಲ್ಲಾ ಸಂಘ ಬೆನ್ನೆಲುಬಾಗಿ ನಿಲ್ಲಬೇಕು. ಸಂಘದ ನಾನಾ ಬೇಡಿಕೆಗಳನ್ನು ಈಡೇರಿಸುವಂತೆ ಹೋರಾಟ ಮಾಡಲಾಗುತ್ತಿದೆ ಎಂದು ತಿಳಿಸಿದರು. ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಚಂದ್ರಶೇಖರ್‌ ಮಾತನಾಡಿ, ನಿವೃತ್ತ ನೌಕರರ ಗುರುತಿಸಿ ಸನ್ಮಾನ ಮಾಡುತ್ತಿರುವುದು ಒಂದು ಒಳ್ಳೆಯ ಕೆಲಸವಾಗಿದೆ. ಏಕೆಂದರೆ ಅನೇಕ ಇಲಾಖೆಗಳಲ್ಲಿ ಸೇವೆಯಿಂದ ನಿವೃತ್ತಿ ಹೊಂದಿದ್ದ ನಿವೃತ್ತ ನೌಕರಿಗೆ ಸನ್ಮಾನ ಮಾಡುವುದಿಲ್ಲ. ನಮ್ಮ ಸಂಘದ ರಾಜ್ಯಾಧ್ಯಕ್ಷರ ಗಮನಕ್ಕೆ ತಂದು ನಿವೃತ್ತ ನೌಕರಿಗೆ ಆರೋಗ್ಯ ಯೋಜನೆ, ನಿವೃತ್ತ ನೌಕರರ ಭವನ ನಿರ್ಮಾಣಕ್ಕೆ ನಿವೇಶನ ಕೊಡಿಸುವ ಪ್ರಯತ್ನ ಮಾಡಲಾಗುವುದು ಎಂದರು.

ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘದ ಜಿಲ್ಲಾಧ್ಯಕ್ಷ ಎನ್‌.ನಾಗೇಶ್‌ ಮಾತನಾಡಿ, ನಿವೃತ್ತ ನೌಕರರ ಕಷ್ಠ. ಸುಖ ಭಾಗಿಯಾಗುವುದು, ನಿವೃತ್ತ ನೌಕರರ ಸಮಸ್ಯೆ ಪರಿಹರಿಸಿಕೊಡುವುದು ಸಂಘದ ಸದಸ್ಯರ ಸದಾ ಸೇವೆ ಮಾಡುವುದು ಸಂಘದ ಉದ್ದೇಶವಾಗಿದೆ ಎಂದು ಹೇಳಿದರು. ಸಂಘ ಒಂದು ಶಕ್ತಿ ಅದರ ಮೂಲಕ ಸಂವಿಧಾನ ಬದ್ಧ ನಿವೃತ್ತ ನೌಕರರ ಸೌಲಭ್ಯಗಳನ್ನು ಹೋರಾಟ ಮಾಡುವುದರ ಮೂಲಕ ಪಡೆದುಕೊಳ್ಳಲಾಗವುದು. ಆರೋಗ್ಯ ಭಾಗ್ಯ ಯೋಜನೆ ಜಾರಿ ಮಾಡಬೇಕು. ಕುಟುಂಬದ ಪಿಂಚಣಿ ಶೇ. 50 ರಷ್ಟು ಹೆಚ್ಚು ಮಾಡಿಸಬೇಕು ಎಂದು ಸಂಘಕ್ಕೆ ಮನವಿ ಮಾಡಿದರು. ನಿವೃತ್ತ ನೌಕಕರು ಸಂಘ ಸದಸ್ಯತ್ವ ಪಡೆದುಕೊಂಡು ಸಂಘ ಅಭಿವೃದ್ದಿಗೆ ಸಹಕರಿಸುವಂತೆ ಮನವಿ ಮಾಡಿದರು.

ಸನ್ಮಾನ, ಶ್ರದ್ಧಾಂಜಲಿ: ಸಂಘದ ಹಿರಿಯ ಸದಸ್ಯರನ್ನು ಸನ್ಮಾನಿಸಲಾಯಿತು ಹಾಗೂ ಕಳೆದ ಸಾಲಿನಲ್ಲಿ ಅಗಲಿದ ಸಂಘದ ಸದಸ್ಯರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಸಂಘದ ವರದಿಯನ್ನು ಕಾರ್ಯದರ್ಶಿ ರಾಜು ಮಂಡಿಸಿದರು. ಸಂಘದ ಲೆಕ್ಕ ಪರಿಶೋಧನೆ ವರದಿಯನ್ನು ಖಜಾಂಚಿ ಎಂ.ಶಿವಣ್ಣ ಮಂಡಿಸಿದರು. ರಾಜ್ಯ ಸಂಘಟನಾ ಕಾರ್ಯದರ್ಶಿ ಶಿವಣ್ಣ, ಸಾಂಸ್ಕೃತಿಕ ಕಾರ್ಯದರ್ಶಿ ಮುನಿದೇವರಾಜ್‌, ಯಳಂದೂರು ತಾಲೂಕು ಅಧ್ಯಕ್ಷ ವೈ.ಎನ್‌.ನಾಗರಾಜಪ್ಪ, ಸಂಘದ ಉಪಾಧ್ಯಕ್ಷಗಳಾದ ಹೊನ್ನೂರಯ್ಯ, ಎಲ್‌.ದೇವಣ್ಣ, ಲೆಕ್ಕ ಪರಿಶೋಧಕ ಬಿ.ರಾಮು, ಸಂಘಟನಾ ಕಾರ್ಯದರ್ಶಿ ಎ.ಸಿದ್ದಯ್ಯ, ನಿರ್ದೇಶಕರಾದ ಕೆ.ಸೋಮಣ್ಣ, ಎಚ್‌.ಬಿ.ಕೃಷ್ಣಸ್ವಾಮಿನಾಯಕ, ಎಂ.ಎ.ಶ್ರೀಕಂಠಯ್ಯ, ಕೆ.ಸಿ.ಮರಿಸ್ವಾಮಿ, ಎನ್‌.ಸುಬ್ರಹ್ಮಣ್ಯ, ಎ.ಪಿ.ಚಂದ್ರಶೇಖರ್‌, ರಾಜ್‌ಗೊàಪಾಲ್‌, ಎ.ಸುಂದರ್‌, ಸಿ.ಎಸ್‌.ಜಗದೀಶ್‌ ಇತರರು ಇದ್ದರು.

ಟಾಪ್ ನ್ಯೂಸ್

Mangaluru ಫ್ಯಾಕ್ಟರಿಯ ಎಳನೀರಿನಲ್ಲಿ ಅಪಾಯಕಾರಿ ಅಂಶವಿಲ್ಲ!

Dharmasthala ಸಂಸ್ಕಾರವಂತ ಬದುಕು ನಮ್ಮದಾಗಲಿ: ಚಿತ್ರ ನಟ ದೊಡ್ಡಣ್ಣ ಕಳಕಳಿ

Dharmasthala ಸಂಸ್ಕಾರವಂತ ಬದುಕು ನಮ್ಮದಾಗಲಿ: ಚಿತ್ರ ನಟ ದೊಡ್ಡಣ್ಣ ಕಳಕಳಿ

Kasaragod ಚಿಗುರುಪಾದೆಯಲ್ಲಿ ಬಿದ್ದ ವಿಮಾನ ಮಾದರಿ ಡ್ರೋನ್‌!

Kasaragod ಚಿಗುರುಪಾದೆಯಲ್ಲಿ ಬಿದ್ದ ವಿಮಾನ ಮಾದರಿ ಡ್ರೋನ್‌!

Speed ​​Boat ಹೊರಟದ್ದು ಅಳಸಮುದ್ರಕ್ಕೆ; ತಲುಪಿದ್ದು ತೀರಕ್ಕೆ!

Speed ​​Boat ಹೊರಟದ್ದು ಅಳಸಮುದ್ರಕ್ಕೆ; ತಲುಪಿದ್ದು ತೀರಕ್ಕೆ!

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

Temperature Increase: ಮೊಟ್ಟೆ ದರ ಇಳಿಕೆ

Retail Market; ತಾಪಮಾನ ಏರಿಕೆ: ಮೊಟ್ಟೆ ದರ ಇಳಿಕೆ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mangaluru ಫ್ಯಾಕ್ಟರಿಯ ಎಳನೀರಿನಲ್ಲಿ ಅಪಾಯಕಾರಿ ಅಂಶವಿಲ್ಲ!

Dharmasthala ಸಂಸ್ಕಾರವಂತ ಬದುಕು ನಮ್ಮದಾಗಲಿ: ಚಿತ್ರ ನಟ ದೊಡ್ಡಣ್ಣ ಕಳಕಳಿ

Dharmasthala ಸಂಸ್ಕಾರವಂತ ಬದುಕು ನಮ್ಮದಾಗಲಿ: ಚಿತ್ರ ನಟ ದೊಡ್ಡಣ್ಣ ಕಳಕಳಿ

Kasaragod ಚಿಗುರುಪಾದೆಯಲ್ಲಿ ಬಿದ್ದ ವಿಮಾನ ಮಾದರಿ ಡ್ರೋನ್‌!

Kasaragod ಚಿಗುರುಪಾದೆಯಲ್ಲಿ ಬಿದ್ದ ವಿಮಾನ ಮಾದರಿ ಡ್ರೋನ್‌!

Speed ​​Boat ಹೊರಟದ್ದು ಅಳಸಮುದ್ರಕ್ಕೆ; ತಲುಪಿದ್ದು ತೀರಕ್ಕೆ!

Speed ​​Boat ಹೊರಟದ್ದು ಅಳಸಮುದ್ರಕ್ಕೆ; ತಲುಪಿದ್ದು ತೀರಕ್ಕೆ!

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.