ಹಳೇ ಯೋಚನೆ ಹೊಸ ಯೋಜನೆ ಪೆರಿಫೆರಲ್‌ ರಿಂಗ್‌ ರಸ್ತೆ

ಸುದ್ದಿ ಸುತ್ತಾಟ

Team Udayavani, Sep 23, 2019, 3:10 AM IST

hale

ಚಿತ್ರ: ಫ‌ಕ್ರುದ್ದೀನ್‌ ಎಚ್‌.

ಜನರ ಕಣ್ಣಿಗೆ ಕಾಣುವಂತಹ ಯಾವುದಾದರೊಂದು ಸಾಧನೆ ಮಾಡುವ ಸವಾಲು ಹೊಸ ಸರ್ಕಾರದ ಮುಂದಿದೆ. ಈ ಹಿನ್ನೆಲೆಯಲ್ಲಿ 12 ವರ್ಷಗಳ ಹಿಂದಿನ ಯೋಜನೆ, ಪೆರಿಫೆರಲ್‌ ರಿಂಗ್‌ ರಸ್ತೆ (ಪಿಆರ್‌ಆರ್‌) ನಿರ್ಮಾಣಕ್ಕೆ ಮುಂದಾಗಿದೆ. ರಾಜಕೀಯ ಕಾರಣಗಳು ಏನೇ ಇದ್ದರೂ ಬೆಂಗಳೂರಿನಂತಹ ನಗರಕ್ಕೆ ಪಿಆರ್‌ಆರ್‌ ಬೇಕಿತ್ತು. ತುಮಕೂರು ರಸ್ತೆಯಿಂದ ಹೊಸೂರು ರಸ್ತೆವರೆಗೆ ಪಿಆರ್‌ಆರ್‌ ನಿರ್ಮಿಸುವುದರಿಂದ ನಗರದ ಳರಸ್ತೆಗಳ ಮೇಲಿನ ಸಂಚಾರ ಒತ್ತಡ ತುಸು ಕಡಿಮೆ ಆಗುವುದರ ಜತೆಗೆ ಸರ್ಕಾರ ಮನಸು ಮಾಡಿದರೆ ಭವಿಷ್ಯದಲ್ಲಿ ಇದನ್ನು ವಿಶೇಷ ಆರ್ಥಿಕ ವಲಯವನ್ನಾಗಿಯೂ ಪರಿವರ್ತಿಸಬಹುದಾಗಿದೆ ಎಂಬುದು ತಜ್ಞರ ಪ್ರತಿಪಾದನೆ. ನಗರದ ಉತ್ತರ ಭಾಗವನ್ನು ಆವರಿಸುವ ಈ ಯೋಜನೆ ಸುತ್ತ ಈ ಬಾರಿಯ ಸುದ್ದಿ ಸುತ್ತಾಟ

ರಾಜ್ಯದಲ್ಲಿ ನೂತನ ಬಿಜೆಪಿ ಸರ್ಕಾರ ರಚನೆಯಾಗಿ ಕೇವಲ ಎರಡು ತಿಂಗಳ ಅಂತರದಲ್ಲಿ “ಚುನಾವಣೆ ಗುಂಗು’ ಶುರುವಾಗಿದೆ. ಒಂದೆಡೆ ಅನರ್ಹಗೊಂಡ ಶಾಸಕರ ಕ್ಷೇತ್ರಗಳಿಗೆ ಉಪಚುನಾವಣೆ ಹಾಗೂ ಮತ್ತೂಂದೆಡೆ ರಾಜ್ಯದಲ್ಲಿ ಮರುಚುನಾವಣೆ ಮಾತುಗಳೂ ಕೇಳಿಬರುತ್ತಿವೆ. ಇವೆರಡರಲ್ಲಿ ಯಾವುದನ್ನು ಎದುರಿಸಬೇಕಾದರೂ ಆಡಳಿತ ಪಕ್ಷಕ್ಕೆ ತನ್ನ ಅಲ್ಪಾವಧಿಯಲ್ಲಿ ಎದ್ದು ಕಾಣುವ ಸಾಧನೆಯೊಂದನ್ನು ಜನರ ಮುಂದಿಡುವ ಸವಾಲು ಇದೆ.

ಈ ಸಂದರ್ಭದಲ್ಲಿ ಸರ್ಕಾರಕ್ಕೆ ಥಟ್ಟನೆ ಕಣ್ಮುಂದೆ ಬಂದಿರುವುದು, ಈ ಹಿಂದೆ ತಾನೇ ವಿರೋಧಿಸಿದ್ದ “ಪೆರಿಫೆರಲ್‌ ರಿಂಗ್‌ ರೋಡ್‌’ ಯೋಜನೆ. ಸುಮಾರು ದಶಕದ ಹಿಂದಿನ ಯೋಜನೆ ಮರುಜೀವ ಪಡೆದುಕೊಳ್ಳಲು, ನಗರದ ಸಂಚಾರದಟ್ಟಣೆಗೆ ಪರಿಹಾರ ಕಂಡುಕೊಳ್ಳುವುದು, ಅದಕ್ಕಿಂತ ಹೆಚ್ಚಾಗಿ ಸರ್ಕಾರದ ಸಾಧನೆಯತ್ತ ಹೆಜ್ಜೆಯಿಡುವ ಸಾಕ್ಷಿಯನ್ನು ಮತದಾರರ ಮುಂದಿಡುವುದು ಇಲ್ಲಿ ಮುಖ್ಯವಾಗಿರಬಹುದು.

ಉಳಿದೆಲ್ಲ ಜಿಲ್ಲೆಗಳಿಗೆ ಹೋಲಿಸಿದರೆ, ಆಡಳಿತ ಪಕ್ಷ ಬಿಜೆಪಿಗೆ ಬೆಂಗಳೂರು ಅತ್ಯಂತ ಪ್ರಮುಖವಾಗಿದೆ. ಏಕೆಂದರೆ, ರಾಜ್ಯದಲ್ಲಿ ಅತಿ ಹೆಚ್ಚು ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ಪ್ರದೇಶ ರಾಜಧಾನಿ. ಅಲ್ಲದೆ, ಮೊದಲಿನಿಂದಲೂ ನಗರಕೇಂದ್ರಿತ ಎಂದು ಗುರುತಿಸಿಕೊಂಡಿರುವ ಬಿಜೆಪಿಗೆ ಇದು ನೆಲೆ ಕೂಡ. ಜತೆಗೆ ಇಲ್ಲಿ ಯಾವುದೇ ಬೆಳವಣಿಗೆ ಅಥವಾ ಯೋಜನೆ ಕೈಗೆತ್ತಿಕೊಂಡರೂ ಜಾಗತಿಕ ಮಟ್ಟದಲ್ಲಿ ಅದು ಚರ್ಚೆಗೆ ಗ್ರಾಸವಾಗುತ್ತದೆ. (18 ಕ್ಷೇತ್ರಗಳನ್ನು ಒಳಗೊಂಡ ಬೆಳಗಾವಿ ಎರಡನೇ ಸ್ಥಾನದಲ್ಲಿದೆ). ಈ ಮಧ್ಯೆ ಬೆಂಗಳೂರು ನಗರಾಭಿವೃದ್ಧಿ ಖಾತೆ ಸ್ವತಃ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಬಳಿಯೇ ಇದೆ.

“ಪೆರಿಫೆರಲ್‌ ರಿಂಗ್‌ ರೋಡ್‌’ ಯೋಜನೆಯೇ ಏಕೆ ಎಂಬ ಪ್ರಶ್ನೆಗೆ ಉತ್ತರ; ಮೆಟ್ರೋ ಹೊರತುಪಡಿಸಿದರೆ ಅತಿ ದೊಡ್ಡ ಮೊತ್ತದ ಯೋಜನೆ ಇದಾಗಿದೆ ಹಾಗೂ ಮನಸ್ಸು ಮಾಡಿದರೆ, ಮೆಟ್ರೋಗಿಂತ ವೇಗವಾಗಿ ಇದನ್ನು ಪೂರ್ಣಗೊಳಿಸಬಹುದು. ಅಷ್ಟೇ ಅಲ್ಲ, ಈ ಮಾರ್ಗವು ನೇರವಾಗಿ ಐಟಿ ಹಬ್‌ನ ಹೆಬ್ಟಾಗಿಲಿಗೆ ಬಂದು ನಿಲ್ಲುತ್ತದೆ. ಅಂದಹಾಗೆ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ಹುಟ್ಟಿದ್ದು 2007ರಲ್ಲಿ. ಅಂದರೆ, ಸ್ವತಃ ಬಿಜೆಪಿ ಅಂದು ಸಮ್ಮಿಶ್ರ ಸರ್ಕಾರದ ಭಾಗವಾಗಿತ್ತು.

ಇದೆಲ್ಲ ಕಾರಣಗಳ ಹಿನ್ನೆಲೆಯಲ್ಲಿ ಈ ಯೋಜನೆಯನ್ನು ಆದ್ಯತೆ ಮೇರೆಗೆ ಕೈಗೆತ್ತಿ ಕೊಳ್ಳಲಾಗುತ್ತಿದೆ ಎಂದು ರಾಜಕೀಯ ವಲಯದಲ್ಲಿ ವಿಶ್ಲೇಷಿಸಲಾಗುತ್ತಿದೆ. ಈ ಹಿಂದೆ ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಇದ್ದಾಗಲೂ ಇದೇ ಯೋಜನೆಯನ್ನು ಕೈಗೆತ್ತಿಕೊಳ್ಳಲು ಉದ್ದೇಶಿಸಿತ್ತು. ಆಗ, ಕೇಂದ್ರ ಸರ್ಕಾರವು ರಾಷ್ಟ್ರೀಯ ಹೆದ್ದಾರಿ ಪ್ರಾಧಿ ಕಾರದಡಿ 30 ಸಾವಿರ ಕೋಟಿ ವೆಚ್ಚದಲ್ಲಿ ಪಿಆರ್‌ಆರ್‌ಯೋಜನೆ ಕೈಗೆತ್ತಿಕೊಳ್ಳಲು ಆಸಕ್ತಿ ತೋರಿಸಿತ್ತು. ಆದರೆ, ರಾಜ್ಯ ಸರ್ಕಾರದಿಂದ ಇದಕ್ಕೆ ನಿರೀಕ್ಷಿತ ಮಟ್ಟದಲ್ಲಿ ಸ್ಪಂದನೆ ಸಿಗಲಿಲ್ಲ ಎಂದೂ ಮೂಲಗಳು ತಿಳಿಸುತ್ತವೆ.

ಭೂಮಿಗೆ ಭಾರೀ ಬೇಡಿಕೆ: ಉದ್ದೇಶಿತ ಯೋಜನೆಯಿಂದ ಆ ಭಾಗದ ಭೂಮಿಗೆ ಈಗ ಭಾರೀ ಬೇಡಿಕೆ ಬರಲಿದೆ. ಇದಕ್ಕೆ ಪೂರಕವಾಗಿ ಎರಡು ಎಕರೆಗಿಂತ ಹೆಚ್ಚು ಭೂಮಿ ಕಳೆದುಕೊಳ್ಳಲಿರುವವರಿಗೆ ಶೇ.50ರಷ್ಟು ನಗದು ಮತ್ತು ಉಳಿದ ಶೇ.50ರಷ್ಟು “ಅಭಿವೃದ್ಧಿ ಹಕ್ಕು ವರ್ಗಾವಣೆ’ (ಟಿಡಿಆರ್‌) ನೀಡಲು ಸರ್ಕಾರ ನಿರ್ಧರಿಸಿದೆ. ಪರಿಣಾಮ ಬಹುತೇಕ ಫ‌ಲಾನುಭವಿಗಳು ಸ್ವಾಧೀನದ ನಂತರ ಉಳಿದ ಭೂಮಿಯಲ್ಲಿ ಬಹು ಮಹಡಿ ಕಟ್ಟಡಗಳ ನಿರ್ಮಾಣ ಮಾಡುವತ್ತ ಮುಖ ಮಾಡುವ ಸಾಧ್ಯತೆ ಹೆಚ್ಚಿದೆ.

ಟಿಡಿಆರ್‌ ನಿರಾಕರಿಸುವವರಿಗೆ ಪೂರ್ಣ ಪ್ರಮಾಣದ ಪರಿಹಾರ ದೊರೆಯಲಿದೆ. 2013ರ ಭೂಸ್ವಾಧೀನ ಕಾಯ್ದೆ ಅಡಿ ಈ ಯೋಜನೆಯಲ್ಲಿ ಪರಿಹಾರ ನೀಡಲಾಗುತ್ತಿದೆ. ಹಾಗಾಗಿ, ಮಾರುಕಟ್ಟೆ ಮೌಲ್ಯ ಮತ್ತು ಮಾರ್ಗಸೂಚಿ ದರ ಎರಡೂ ಹೆಚ್ಚಳ ಆಗಲಿದ್ದು, ಭೂಮಿ ನೀಡಿದವರಿಗೆ ಅನುಕೂಲ ಆಗಲಿದೆ. ಭೂ ಸ್ವಾಧೀನ ಪ್ರಕ್ರಿಯೆ ಒಂದು ವರ್ಷದಲ್ಲಿ ಪೂರ್ಣಗೊಳ್ಳಲಿದ್ದು, ಶೇ.80ರಷ್ಟು ಸ್ವಾಧೀನ ಪೂರ್ಣಗೊಳ್ಳುತ್ತಿದ್ದಂತೆ ಟೆಂಡರ್‌ ಪ್ರಕ್ರಿಯೆ ಕೈಗೆತ್ತಿಕೊಳ್ಳಲು ಉದ್ದೇಶಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸುತ್ತಾರೆ.

10 ಹೆದ್ದಾರಿಗಳಿಗೆ ಸಂಪರ್ಕ: ಉದ್ದೇಶಿತ ಪೆರಿಫೆರಲ್‌ ರಿಂಗ್‌ ರಸ್ತೆಯು ಹೆಸರಘಟ್ಟ ರಸ್ತೆ, ದೊಡ್ಡಬಳ್ಳಾಪುರ ರಸ್ತೆ, ಬಳ್ಳಾರಿ ರಸ್ತೆ, ಹೆಣ್ಣೂರು-ಬಾಗಲೂರು ರಸ್ತೆ, ಹೊಸಕೋಟೆ-ಆನೇಕಲ್‌ ರಸ್ತೆ, ಸರ್ಜಾಪುರ ರಸ್ತೆ ಸೇರಿದಂತೆ ಒಟ್ಟು 10 ಪ್ರಮುಖ ಹೆದ್ದಾರಿಗಳನ್ನು ಸಂಪರ್ಕಿಸಲಿದೆ. 4 ವರ್ಷದಲ್ಲಿ ಪೂರ್ಣಗೊಳಿಸುವ ಗುರಿ ಹೊಂದಲಾಗಿದ್ದು, ಕನಕಪುರ ರಸ್ತೆ, ಮೈಸೂರು ರಸ್ತೆ, ತುಮಕೂರು ರಸ್ತೆ ಸೇರಿ 3 ಪ್ರಮುಖ ಮಾರ್ಗಗಳನ್ನು ಇದು ಸಂಪರ್ಕಿಸಲಿದೆ.

ನೈಸ್‌ ರಸ್ತೆಗೆ ಕೌಂಟರ್‌!: ನಗರದ ಒಂದು ಭಾಗ ಅಂದರೆ ದಕ್ಷಿಣದಲ್ಲಿ ಈಗಾಗಲೇ ನೈಸ್‌ ರಸ್ತೆ ನಿರ್ಮಿಸಲಾಗಿದೆ. ಇದಕ್ಕೆ ತದ್ವಿರುದ್ಧವಾಗಿ ಉತ್ತರ ಭಾಗವನ್ನು ಪೆರಿಫೆರಲ್‌ ರಿಂಗ್‌ ರೋಡ್‌ ಆವರಿಸಲಿದೆ. ರಾಜಕೀಯ ಲೆಕ್ಕಾಚಾರ ಏನೇ ಇರಲಿ, ಸರ್ಕಾರದ ಕಲ್ಪನೆಯಂತೆ ಇದು ವ್ಯವಸ್ಥಿತವಾಗಿ ತಲೆಯೆತ್ತಿದರೆ, ಈ ಭಾಗ ಭವಿಷ್ಯದಲ್ಲಿ ವಿಶೇಷ ಆರ್ಥಿಕ ವಲಯವಾಗಿ ಹೊರಹೊಮ್ಮಲಿದೆ ಎಂದು ತಜ್ಞರು ವಿಶ್ಲೇಷಿಸುತ್ತಾರೆ.

ಬೆಂಗಳೂರು-ಮೈಸೂರು ಇನ್‌ಫ್ರಾಸ್ಟ್ರಕ್ಚರ್‌ ಕಾರಿಡಾರ್‌ (ಬಿಎಂಐಸಿ) ಅನ್ನು ಖಾಸಗಿ ಕಂಪನಿ ನಿರ್ಮಿಸಿದೆ. ಹಾಗಾಗಿ, ಅಲ್ಲಿನ ಮಾರ್ಗದುದ್ದಕ್ಕೂ ಅಭಿವೃದ್ಧಿಗೆ ಹಲವಾರು ತೊಡಕುಗಳು ಬಂದವು. ಆದರೆ, ಉದ್ದೇಶಿತ ಪೆರಿಫೆರಲ್‌ ರಿಂಗ್‌ ರಸ್ತೆಯನ್ನು ಸ್ವತಃ ಸರ್ಕಾರ ಕೈಗೆತ್ತಿಕೊಳ್ಳುತ್ತಿರುವುದರಿಂದ ಈ ಸಮಸ್ಯೆ ಆಗದು. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಇದನ್ನು ನಿರ್ಮಿಸಲಿದ್ದು, ಜೈಕಾ ದೀರ್ಘಾವಧಿ ಸಾಲ ನೀಡಲಿದೆ.

ಮೂಲತಃ 100 ಮೀ. ಅಗಲ ಇತ್ತು: “ನಾನು ಬಿಡಿಎ ಆಯುಕ್ತನಾಗಿದ್ದಾಗಲೇ ಈ ಯೋಜನೆಗೆ ಅನುಮೋದನೆ ದೊರಕಿತ್ತು. ಆಗ ರಸ್ತೆಯ ವಿಸ್ತೀರ್ಣ 100 ಮೀ. ಇತ್ತು. ನಂತರದ ದಿನಗಳಲ್ಲಿ ಅದನ್ನು ಕಡಿಮೆ ಮಾಡುವ ಪ್ರಸ್ತಾವನೆ ಬಂದಿತು. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವೂ ಈ ರಸ್ತೆ ನಿರ್ಮಾಣಕ್ಕೆ ಆಸಕ್ತಿ ತೋರಿಸಿತ್ತು. ಈಗ ಮತ್ತೆ 100 ಮೀ. ವಿಸ್ತೀರ್ಣದಲ್ಲಿ ನಿರ್ಮಿಸಲು ಮುಂದಾಗಿರುವುದು ಒಳ್ಳೆಯ ನಿರ್ಧಾರ’ ಎಂದು ಎಂ.ಕೆ.ಶಂಕರಲಿಂಗೇ ಗೌಡ ಹೇಳಿದರು.

“ರಸ್ತೆ ನಿರ್ಮಾಣದ ಜತೆಗೆ ಆ ಮಾರ್ಗದುದ್ದಕ್ಕೂ ಬರುವ ಪ್ರದೇಶವನ್ನು ವ್ಯವಸ್ಥಿತವಾಗಿ ಅಭಿವೃದ್ಧಿಪಡಿಸಬೇಕು. ಇದಕ್ಕಾಗಿ ದೇಶೀ ಹಾಗೂ ವಿದೇಶಿ ವಿನ್ಯಾಸ ತಜ್ಞರನ್ನು ಬಳಸಿಕೊಳ್ಳಬೇಕು. ಕೆರೆಗಳು, ಉತ್ತಮ ಲ್ಯಾಂಡ್‌ಸ್ಕೇಪ್‌, ಉದ್ಯಾನ ನಿರ್ಮಿಸಬೇಕು. ಎಂಟು ಪಥದ ರಸ್ತೆ ಇದಾಗುವುದರಿಂದ ಮಧ್ಯದಲ್ಲಿ ಮುಂದಿನ ದಿನಗಳಲ್ಲಿ ಎತ್ತರಿಸಿದ ಮಾರ್ಗವನ್ನೂ ನಿರ್ಮಿಸಲು ಇಲ್ಲಿ ಅವಕಾಶ ಇದೆ’ ಎಂದು ಬಿಡಿಎ ಆಯುಕ್ತರಾಗಿದ್ದ ಮತ್ತೂಬ್ಬ ಐಎಎಸ್‌ ಅಧಿಕಾರಿ ಎಚ್‌.ಸಿದ್ದಯ್ಯ ತಿಳಿಸುತ್ತಾರೆ.

ತೆರಿಗೆ ವಿನಾಯ್ತಿ ನೀಡಲಿ ಸರ್ಕಾರ: ಕೂಡ ಹಲವು ಪೂರಕ ಕ್ರಮಗಳನ್ನು ಕೈಗೊಳ್ಳಬೇ ಕಾಗುತ್ತದೆ. ಈ ಮಾರ್ಗದಲ್ಲಿ ಹೂಡಿಕೆಗೆ ತೆರಿಗೆ ವಿನಾಯ್ತಿ, ವಿಶೇಷ ಸವಲತ್ತು ಸೇರಿದಂತೆ ಹಲವು ಕೊಡುಗೆಗಳನ್ನು ನೀಡಬೇಕು. ವಸತಿ ಮತ್ತು ವಾಣಿಜ್ಯ ಸಂಕೀರ್ಣಗಳಿಗೆ ಪ್ರೋತ್ಸಾಹ ನೀಡಬೇಕು. ಆಗ, ಹೂಡಿಕೆ ಜತೆಗೆ ನಿರ್ಮಾಣ ಮತ್ತಿತರ ವಲಯಗಳ ಅಭಿವೃದ್ಧಿಯೂ ಸಾಧ್ಯವಾಗುತ್ತದೆ ಎಂದು ಕೆಪಿಸಿಸಿ ಮಾಜಿ ಕಾರ್ಯದರ್ಶಿ ಎಸ್‌.ಮೋಹನ್‌ದಾಸ ಹೆಗ್ಗಡೆ ತಿಳಿಸುತ್ತಾರೆ.

“ಪೆರಿಫೆರಲ್‌ ರಿಂಗ್‌ ರೋಡ್‌ ಯೋಜನೆ ಈಗಾಗಲೇ ಇರುವ ನೈಸ್‌ ರಸ್ತೆಗೆ ಕೌಂಟರ್‌ ಆಗಿದೆ. ಇದು ಪೂರ್ಣಗೊಂಡರೆ, ಬೆಂಗಳೂರು ಸಂಪೂರ್ಣ ಪೆರಿಫ‌ರಲ್‌ ವರ್ತುಲ ರಸ್ತೆಯಿಂದ ಆವೃತವಾಗುತ್ತದೆ. ಆಗ, ಎಲ್ಲ ಭಾರೀ ವಾಹನಗಳು ಹೊರಗಡೆಯಿಂದಲೇ ನಿರ್ಗಮಿಸುತ್ತವೆ. ನಗರದ ಹೃದಯಭಾಗಕ್ಕೆ ವಾಹನದಟ್ಟಣೆ ಹೊರೆ ಬಹುತೇಕ ಕಡಿಮೆ ಆಗಲಿದೆ. ಆ ಮೂಲಕ ವಾಯು ಮಾಲಿನ್ಯದ ಪ್ರಮಾಣ ಕೂಡ ತಗ್ಗಲಿದೆ’ ಎಂದು ಬಿಡಿಎ ಆಯುಕ್ತರಾಗಿದ್ದ ನಿವೃತ್ತ ಐಎಎಸ್‌ ಅಧಿಕಾರಿ ಎಂ.ಕೆ.ಶಂಕರಲಿಂಗೇ ಗೌಡ ತಿಳಿಸುತ್ತಾರೆ.

ಹಿಗ್ಗುತ್ತಾ-ಕುಗ್ಗುತ್ತಾ: ಪೆರಿಫೆರಲ್‌ ರಿಂಗ್‌ ರಸ್ತೆ ಆರಂಭದಿಂದಲೂ ಆಗಾಗ್ಗೆ ಹಿಗ್ಗುವುದು ಮತ್ತು ಕುಗ್ಗುವುದು ಆಗುತ್ತಲೇ ಇದೆ. ಮೊದಲು ಈ ಯೋಜನೆಯಡಿ ರಸ್ತೆಯ ಅಗಲ 100 ಮೀ. ಇತ್ತು. ನಂತರ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು 60 ಮೀ. ಪಿಆರ್‌ಆರ್‌ ನಿರ್ಮಿಸುವುದಾಗಿ ಹೇಳಿತು. ಬಳಿಕ ಬಂದ ಸರ್ಕಾರ 75 ಮೀ. ಅಗಲದ ರಸ್ತೆ ನಿರ್ಮಿಸಲು ನಿರ್ಧರಿಸಿತು. ಈಗ ಪುನಃ ರಸ್ತೆ ಅಗಲ 100 ಮೀ.ಗೆ ಬಂದು ನಿಂತಿದೆ. ಸೈಕಲ್‌ ಪಥ, ಸರ್ವಿಸ್‌ ರಸ್ತೆ ಸೇರಿದಂತೆ ಎಂಟು ಪಥದ ರಸ್ತೆ ಇದರಲ್ಲಿ ಬರಲಿದೆ.

66.2 ಕಿ.ಮೀ.: ಪೆರಿಫೆರಲ್‌ ರಿಂಗ್‌ ರಸ್ತೆ ಉದ್ದ (ತುಮಕೂರು ರಸ್ತೆಯಿಂದ ಹೊಸೂರು ರಸ್ತೆ)

48 ಕಿ.ಮೀ.: ಈಗಿರುವ ನೈಸ್‌ ರಸ್ತೆ ಉದ್ದ

1,810 ಎಕರೆ: ಯೋಜನೆ ನಿರ್ಮಾಣಕ್ಕಾಗಿ ಆಗಲಿರುವ ಭೂಸ್ವಾಧೀನ

8,100 ಕೋಟಿ ರೂ.: ಸ್ವಾಧೀನಕ್ಕಾಗಿ ಮೀಸಲಿಟ್ಟ ಪರಿಹಾರ ಮೊತ್ತ

4,000 ಕೋಟಿ ರೂ.: ನಿರ್ಮಾಣಕ್ಕಾಗಿ ಮೀಸಲಿಟ್ಟ ಅಂದಾಜು ವೆಚ್ಚ

11,950 ಕೋಟಿ ರೂ.: ಯೋಜನಾ ವೆಚ್ಚ

ಪೆರಿಫೆರಲ್‌ ಪಯಣ…
-2007ರಲ್ಲಿ ಯೋಜನೆ ಪ್ರಸ್ತಾಪ.
-2010ರಲ್ಲಿ ಕೈಬಿಡಲಾಯಿತು.
-2016ರಲ್ಲಿ ಮತ್ತೆ ಅನುಮೋದನೆ.
-2017ರಲ್ಲಿ ಬೆಂಗಳೂರು ಪಿಆರ್‌ಆರ್‌ ಡೆವಲಪ್‌ಮೆಂಟ್‌ -ಕಾರ್ಪೊರೇಷನ್‌ ಅಸ್ತಿತ್ವಕ್ಕೆ ಕ್ರಮ.
-2019ರಲ್ಲಿ ಸಚಿವ ಸಂಪುಟ ಅನುಮೋದನೆ.
-ಈ ಮಧ್ಯೆ ಕೇಂದ್ರ ಸರ್ಕಾರ ಯೋಜನೆಯನ್ನು ತಾನು ಕೈಗೆತ್ತಿಕೊಳ್ಳಲು ಮುಂದೆಬಂದಿತ್ತು. ಜಪಾನ್‌ ಇಂಟರ್‌ನ್ಯಾಷನಲ್‌ ಕೋ-ಆಪರೇಷನ್‌ ಏಜೆನ್ಸಿ (ಜೈಕಾ) ಕೂಡ ಆಸಕ್ತಿ ತೋರಿಸಿತ್ತು.

* ವಿಜಯಕುಮಾರ್‌ ಚಂದರಗಿ

ಟಾಪ್ ನ್ಯೂಸ್

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.