ಸಿಗ್ನಲ್‌ ಸಮಸ್ಯೆಯಿಂದ ಮೆಟ್ರೋ ಸೇವೆಯಲ್ಲಿ ವ್ಯತ್ಯಯ


Team Udayavani, Sep 23, 2019, 3:05 AM IST

signal

ಬೆಂಗಳೂರು: ಸಿಗ್ನಲ್‌ನಲ್ಲಿ ಕಂಡುಬಂದ ಸಮಸ್ಯೆಯಿಂದಾಗಿ “ನಮ್ಮ ಮೆಟ್ರೋ’ ಸೇವೆಯಲ್ಲಿ ಭಾನುವಾರ ಸುಮಾರು ಎರಡು ತಾಸು ವ್ಯತ್ಯಯ ಉಂಟಾಗಿ ಪ್ರಯಾಣಿಕರು ಪರದಾಡಿದರು. ಯಲಚೇನಹಳ್ಳಿ-ನಾಗಸಂದ್ರ ಮಾರ್ಗದಲ್ಲಿ ತಾಂತ್ರಿಕ ದೋಷ ಕಂಡುಬಂದ ಪರಿಣಾಮ ಮಧ್ಯಾಹ್ನ 12.06ರಿಂದ 1.52ರವರೆಗೆ ಯಲಚೇನಹಳ್ಳಿ-ಆರ್‌.ವಿ.ರಸ್ತೆ ನಡುವೆ ಸೇವೆ ಸ್ಥಗಿತಗೊಂಡು ನೂರಾರು ಪ್ರಯಾಣಿಕರಿಗೆ ಅದರ ಬಿಸಿ ತಟ್ಟಿತು.

ಏಕಾಏಕಿ ಕಾಣಿಸಿಕೊಂಡ ಸಮಸ್ಯೆಯಿಂದ ಜನ ಮೆಟ್ರೋ ನಿಲ್ದಾಣಗಳಿಗೆ ಬಂದು ಬೇಸರದಿಂದ ಹಿಂತಿರುಗುತ್ತಿರುವುದು ಕಂಡುಬಂತು. ಈ ವೇಳೆ ಆರ್‌.ವಿ.ರಸ್ತೆ, ಬನಶಂಕರಿ, ಜೆ.ಪಿ. ನಗರ ಮತ್ತು ಯಲಚೇನಹಳ್ಳಿ ನಿಲ್ದಾಣಗಳಲ್ಲಿ ಮೆಟ್ರೋ ಸೇವೆ ವ್ಯತ್ಯಯ ಉಂಟಾಗಿ, ಆರ್‌.ವಿ. ರಸ್ತೆಯಿಂದ ನಾಗಸಂದ್ರವರೆಗೆ ಮಾತ್ರ ಮೆಟ್ರೋ ಸೇವೆ ಲಭ್ಯವಿತ್ತು.

“ಸಿಗ್ನಲ್‌ ವ್ಯವಸ್ಥೆಯಲ್ಲಿ ತಾಂತ್ರಿಕ ದೋಷ ಕಂಡುಬಂದಿದ್ದರಿಂದ ಮೆಟ್ರೋ ಸೇವೆಯಲ್ಲಿ ವ್ಯತ್ಯಯ ಆಯಿತು. ದೋಷ ಪರಿಹರಿಸಿದ್ದು, ಮಧ್ಯಾಹ್ನ 1.52ರ ಸುಮಾರಿಗೆ ಸೇವೆ ಯಥಾಸ್ಥಿತಿಗೆ ಮರಳಿದೆ’ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿಎಲ್‌) ಪ್ರಕಟಣೆಯಲ್ಲಿ ಸ್ಪಷ್ಟಪಡಿಸಿದೆ.

ಏನಿದು ಸಿಗ್ನಲಿಂಗ್‌ ಸಮಸ್ಯೆ?: ಒಂದೇ ಹಳಿಯಲ್ಲಿ ಯಾವ ರೈಲು ಎಲ್ಲಿದೆ ಎಂಬುದನ್ನು ಸಿಗ್ನಲಿಂಗ್‌ ವ್ಯವಸ್ಥೆ ತಿಳಿಸುತ್ತದೆ. ಇಂತಹ ಸಂವಹನ ಸಮರ್ಪಕವಾಗಿ ನಡೆಯದಿದ್ದರೆ, ಇದನ್ನು ತುರ್ತು ಪರಿಸ್ಥಿತಿ ಎಂದು ಪರಿಗಣಿಸಿ ಆ ಹಳಿಯಲ್ಲಿನ ಉಳಿದ ರೈಲುಗಳ ಸಂಚಾರವನ್ನು ಸ್ಥಗಿತಗೊಳಿಸಲಾಗುತ್ತದೆ.

ಸಾಮಾನ್ಯವಾಗಿ ಒಂದೇ ಹಳಿಯಲ್ಲಿ ಎರಡು ರೈಲುಗಳು ಸಂಚರಿಸುವ ವೇಳೆ ನಡುವೆ ಒಂದು ನಿಲ್ದಾಣದ ಅಂತರವಿರುತ್ತದೆ. ದಟ್ಟಣೆಯ ಅವಧಿಯಲ್ಲಿ ಪ್ರತಿ ರೈಲಿನ ಸಂಚಾರದ ನಡುವೆ 3ರಿಂದ 5 ನಿಮಿಷದ ಅಂತರವಿರುತ್ತದೆ. ಸಿಗ್ನಲಿಂಗ್‌ ಸಮರ್ಪಕವಾಗಿ ಕಾರ್ಯನಿರ್ವಹಿಸದಿದ್ದರೆ ಎರಡರ ನಡುವೆ ಸಂವಹನ ಸ್ಥಗಿತಗೊಳ್ಳುತ್ತದೆ. ಭಾನುವಾರ ಕಂಡುಬಂದಿದ್ದೂ ಇದೇ ಸಮಸ್ಯೆ ಎಂದು ನಿಗಮದ ಅಧಿಕಾರಿಯೊಬ್ಬರು ಸ್ಪಷ್ಟಪಡಿಸಿದರು.

ಟಾಪ್ ನ್ಯೂಸ್

Revanna 2

H.D. Revanna ಬಂಧನ; ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ

1-rwrrer

BJP; ತೇಜಸ್ವಿ ಸೂರ್ಯ ನವರಾತ್ರಿಯ ಮುನ್ನಾದಿನ ಮೀನು ತಿನ್ನುತ್ತಾರೆ!: ಕಂಗನಾ ಭಾಷಣ ವೈರಲ್

1-weqwqewq

Mumbai; ಚಿನ್ನ ಕಳ್ಳಸಾಗಣೆಯಲ್ಲಿ ಸಿಕ್ಕಿಬಿದ್ದ ಆಫ್ಘಾನ್ ಕಾನ್ಸುಲ್ ಜನರಲ್ ರಾಜೀನಾಮೆ

Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು

Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು

Vitla: ಬಿಸಿಲಿನ ಎಫೆಕ್ಟ್: ಚಲಿಸುತ್ತಿದ್ದ ಬಸ್ಸಿನ ಗಾಜು ಒಡೆದು ಮೂವರಿಗೆ ಗಾಯ

Vitla: ಬಿಸಿಲಿನ ಎಫೆಕ್ಟ್: ಚಲಿಸುತ್ತಿದ್ದ ಬಸ್ಸಿನ ಗಾಜು ಒಡೆದು ಮೂವರಿಗೆ ಗಾಯ

1-qweqwqew

Congress ಪಕ್ಷವನ್ನು ಎರಡನೇ ಬಾರಿ ತೊರೆದ ಲವ್ಲಿ; ಮತ್ತೆ ಬಿಜೆಪಿ ಸೇರ್ಪಡೆ

Why Modi doesn’t talk about ladies now: Priyanka Gandhi

Davanagere; ಮೋದಿ ಯಾಕೆ ಬಲಾತ್ಕಾರಕ್ಕೊಳಗಾದ ಮಹಿಳೆಯರ ಬಗ್ಗೆ ಮಾತನಾಡಲ್ಲ: ಪ್ರಿಯಾಂಕಾ ಗಾಂಧಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಚಿನ್ನದ ನಾಡಿನ ಕಲಾವಿದೆ ವಿದ್ಯಾಶ್ರೀ ಪ್ರತಿಭೆ ಅನಾವರಣ-ನೃತ್ಯಗಂಗಾ ಪ್ರದರ್ಶನ

ಚಿನ್ನದ ನಾಡಿನ ಕಲಾವಿದೆ ವಿದ್ಯಾಶ್ರೀ ಪ್ರತಿಭೆ ಅನಾವರಣ-ನೃತ್ಯಗಂಗಾ ಪ್ರದರ್ಶನ

Theft Case: ನಕಲಿ ಕೀ ಬಳಸಿ ಬ್ಯೂಟಿಷಿಯನ್‌ ಮನೆಗೆ ಕನ್ನ

Theft Case: ನಕಲಿ ಕೀ ಬಳಸಿ ಬ್ಯೂಟಿಷಿಯನ್‌ ಮನೆಗೆ ಕನ್ನ

Arrested: ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ 9 ವರ್ಷ ಬಳಿಕ ಬಂಧನ

Arrested: ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ 9 ವರ್ಷ ಬಳಿಕ ಬಂಧನ

Crime: ರೌಡಿಶೀಟರ್‌ನಿಂದ ಆಟೋ ಚಾಲಕನ ಹತ್ಯೆ

Crime: ರೌಡಿಶೀಟರ್‌ನಿಂದ ಆಟೋ ಚಾಲಕನ ಹತ್ಯೆ

Theft Case: ಕೆಲಸಕ್ಕಿದ್ದ ಮನೆಯಲ್ಲೇ 34 ಲಕ್ಷ ಒಡವೆ ಕದ್ದ ಕಳ್ಳಿ

Theft Case: ಕೆಲಸಕ್ಕಿದ್ದ ಮನೆಯಲ್ಲೇ 34 ಲಕ್ಷ ಒಡವೆ ಕದ್ದ ಕಳ್ಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Revanna 2

H.D. Revanna ಬಂಧನ; ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ

1-rwrrer

BJP; ತೇಜಸ್ವಿ ಸೂರ್ಯ ನವರಾತ್ರಿಯ ಮುನ್ನಾದಿನ ಮೀನು ತಿನ್ನುತ್ತಾರೆ!: ಕಂಗನಾ ಭಾಷಣ ವೈರಲ್

1-weqwqewq

Mumbai; ಚಿನ್ನ ಕಳ್ಳಸಾಗಣೆಯಲ್ಲಿ ಸಿಕ್ಕಿಬಿದ್ದ ಆಫ್ಘಾನ್ ಕಾನ್ಸುಲ್ ಜನರಲ್ ರಾಜೀನಾಮೆ

gold 2

Mumbai Airport ; 12.74 ಕೆಜಿ ಚಿನ್ನಾಭರಣ ಜಪ್ತಿ, ಐವರು ಪ್ರಯಾಣಿಕರ ಬಂಧನ

Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು

Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.