ಸಭೆ-ಸಮಾರಂಭಕ್ಕೆ ಅನುಮತಿ ಕಡ್ಡಾಯ


Team Udayavani, Sep 23, 2019, 11:36 AM IST

bg-tdy-1

ಬೆಳಗಾವಿ: ಜಿಲ್ಲೆಯ ಮೂರು ಮತಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆಯಾಗಿದ್ದು, ಸೋಮವಾರದಿಂದ ನಾಮಪತ್ರ ಸ್ವೀಕಾರ ಆರಂಭವಾಗಲಿದೆ. ಮಾದರಿ ನೀತಿ ಸಂಹಿತೆ ಜಿಲ್ಲಾ ವ್ಯಾಪ್ತಿಯಲ್ಲಿ ಜಾರಿಯಲ್ಲಿ ಇರುವುದರಿಂದ ಯಾವುದೇ ಸಭೆ, ಸಮಾರಂಭ ಅಥವಾ ಮೆರವಣಿಗೆಗೆ ಸಂಬಂಧಿಸಿದ ಅಧಿಕಾರಿಗಳಿಂದ ಅನುಮತಿ ಕಡ್ಡಾಯವಾಗಿ ಪಡೆಯಬೇಕು ಎಂದು ಜಿಲ್ಲಾಧಿಕಾರಿ ಡಾ| ಎಸ್‌.ಬಿ. ಬೊಮ್ಮನಹಳ್ಳಿ ಸೂಚನೆ ನೀಡಿದರು.

ಉಪಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ರವಿವಾರ ನಡೆದ ನೋಂದಾಯಿತ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಭೆಯಲ್ಲಿ ಅವರು ಮಾತನಾಡಿ, ಯಾವುದೇ ಸಾರ್ವಜನಿಕ ಸ್ಥಳಗಳಲ್ಲಿ ಚುನಾವಣಾ ಪ್ರಚಾರ ಸಾಮಗ್ರಿಗಳನ್ನುಅಳವಡಿಸುವಂತಿಲ್ಲ. ಖಾಸಗಿ ಜಾಗದಲ್ಲಿ ಪ್ರಚಾರ ಸಾಮಗ್ರಿ ಅಳವಡಿಸಲು ಮಾಲೀಕರು ಹಾಗೂ ಸ್ಥಳೀಯ ಸಂಸ್ಥೆಯ ಅನುಮತಿ ಪಡೆದಿರಬೇಕು ಎಂದು ಹೇಳಿದರು.

ಚುನಾವಣಾ ಪ್ರಚಾರ ನಡೆಸಬೇಕಾದರೆ ನಿಯಮಾವಳಿ ಪ್ರಕಾರ ಪೂರ್ವಾನುಮತಿ ಪಡೆದುಕೊಳ್ಳಬೇಕು. ಪಕ್ಷದ ಪದಾಧಿಕಾರಿಗಳಿಗೆ ವಾಹನ ಬಳಕೆ, ಧ್ವನಿ ವರ್ಧಕಗಳ ಬಳಕೆಗೆ ಅನುಮತಿ ಪಡೆಯಬೇಕು. ಅದೇ ರೀತಿ ಖಾಸಗಿ ಸ್ಥಳದ ಬಳಕೆಗೆ ಅವುಗಳ ಮಾಲೀಕರಮತ್ತು ಸಂಬಂಧಪಟ್ಟ ಸ್ಥಳೀಯ ಸಂಸ್ಥೆಗಳ ಅನುಮತಿ ಅಗತ್ಯ ಎಂದರು.

ಚುನಾವಣಾ ವೆಚ್ಚ ವೀಕ್ಷಕರು: ಜಿಲ್ಲೆಯಲ್ಲಿ ನಡೆಯಲಿರುವ ಮೂರು ಮತಕ್ಷೇತ್ರಗಳ ಉಪಚುನಾವಣೆಯ ಖರ್ಚು-ವೆಚ್ಚದ ಮೇಲೆ ನಿಗಾ ವಹಿಸಲು ಚುನಾವಣಾ ವೀಕ್ಷಕರು ಶೀಘ್ರ

ಜಿಲ್ಲೆಗೆ ಆಗಮಿಸಲಿದ್ದಾರೆ ಎಂದು ಬೊಮ್ಮನಹಳ್ಳಿ ತಿಳಿಸಿದರು. ಚುನಾವಣಾ ಸಂದರ್ಭಗಳಲ್ಲಿ

ದುರ್ಬಳಕೆ ತಡೆಗೆ ನಿಯಮಾನುಸಾರ ನಿಗಮ-ಮಂಡಳಿಗಳ ವಾಹನಗಳನ್ನು ಹಿಂದಕ್ಕೆ ಪಡೆಯಲಾಗುವುದು. ಮತದಾರರ ಪಟ್ಟಿ ಈಗಾಗಲೇ ಸಿದ್ಧಪಡಿಸಲಾಗಿರುತ್ತದೆ. ಹೊಸದಾಗಿ ಅರ್ಜಿ ಪರಿಶೀಲಿಸಿ ಪಟ್ಟಿ ಪರಿಷ್ಕರಣೆ ಮಾಡಲಾಗುತ್ತಿದ್ದು, ಹೆಸರು ಸೇರ್ಪಡೆಗೆ ಸೆ.30ರ ವರೆಗೆ ಅವಕಾಶವಿದೆ. ತಿದ್ದುಪಡಿ ಅಥವಾ ಹೆಸರು ತೆಗೆದು ಹಾಕಲು ಅವಕಾಶವಿರುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಪಟ್ಟಿಯಲ್ಲಿ ಸಂಶಯಾಸ್ಪದ ಹೆಸರುಗಳು ಕಂಡುಬಂದರೆ ಪಕ್ಷಗಳು ಅಥವಾ ಯಾರಾದರೂ ತಮ್ಮ ಗಮನಕ್ಕೆ ತಂದರೆ ಅಂತಹ ವ್ಯಕ್ತಿಗಳು ಮತದಾನಕ್ಕೆ ಬಂದಾಗ ಎಲ್ಲ ದಾಖಲೆಗಳನ್ನು ಕೂಲಂಕಷವಾಗಿ ಪರಿಶೀಲಿಸಲಾಗುವುದು. ಇವಿಎಂ/ವಿವಿ ಪ್ಯಾಟ್‌ಗಳಲ್ಲಿ ಹೊಸದಾಗಿ ಎಂ3 ಇವಿಎಂ ಗಳನ್ನು ಈ ಬಾರಿ ಬಳಕೆ ಮಾಡಲಾಗುತ್ತದೆ. ಮತಯಂತ್ರಗಳ ಬಳಕೆಗೆ ಸಂಬಂಧಿಸಿದಂತೆ ಪ್ರಾತ್ಯಕ್ಷಿಕೆ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಗುವುದು.

ಪರ್ಯಾಯ ಮತಗಟ್ಟೆ ಸ್ಥಾಪನೆಪರಿಶೀಲನೆ: ಕಳೆದ ಚುನಾವಣೆಯಲ್ಲಿದ್ದ ಬಹುತೇಕ ಮತಕೇಂದ್ರಗಳು ಈ ಬಾರಿಯೂ ಇರಲಿವೆ. ಆದರೆ ಪ್ರವಾಹದಿಂದ ಕೆಲವು ಶಾಲಾ ಕಟ್ಟಡಗಳು ಕುಸಿದಿದ್ದರೆ ಅಥವಾ ಶಿಥಿಲಗೊಂಡಿದ್ದರೆ ಸೂಕ್ತ ಪರಿಶೀಲನೆ ಬಳಿಕ ಪರ್ಯಾಯ ಮತದಾನ ಕೇಂದ್ರಗಳನ್ನು ಸ್ಥಾಪಿಸಲಾಗುವುದು ಎಂದು ತಿಳಿಸಿದರು.

ಮತದಾನ ಸಂದರ್ಭದಲ್ಲಿ ಆಧಾರ, ವಾಹನ ಚಾಲನಾಪತ್ರ ಸೇರಿದಂತೆ 22 ದಾಖಲೆಗಳ ಪೈಕಿ ಯಾವುದಾದರೂ ಒಂದು ದಾಖಲೆ ಪ್ರದರ್ಶಿಸಿ ಮತದಾನ ಮಾಡಬಹುದು. ಒಂದು ವೇಳೆ ದಾಖಲೆಗಳನ್ನು ಕಳೆದುಕೊಂಡಿದ್ದರೆ ಸಾಕಷ್ಟು ಸಮಯಾವಕಾಶ ಇರುವುದರಿಂದ

ನಕಲು ಪ್ರತಿಯನ್ನು ಪಡೆದುಕೊಳ್ಳಬೇಕು. ಜಿಲ್ಲೆಯಲ್ಲಿ ಶಾಂತಿಯುತ ಹಾಗೂ ನಿಷ್ಪಕ್ಷಪಾತ ಚುನಾವಣೆ ನಡೆಸಲು ಎಲ್ಲ ರಾಜಕೀಯ ಪಕ್ಷಗಳು ಹಾಗೂ ಸಾರ್ವಜನಿಕರು ಸಹಕರಿಸಬೇಕು ಎಂದು ಮನವಿ ಮಾಡಿಕೊಂಡರು.

ರಾಜೇಂದ್ರ ಹರಕುಣಿ, ಬಹುಜನ ಸಮಾಜ ಪಾರ್ಟಿಯ ರಮೇಶ್‌ ಕಡ್ಲಾಸ್ಕರ, ಕೆ.ಜಿ. ಪಾಟೀಲ, ಅಪರ ಜಿಲ್ಲಾ ಧಿಕಾರಿ ಅಶೋಕ ದುಡಗುಂಟಿ, ಮಹಾನಗರ ಪಾಲಿಕೆ ಆಯುಕ್ತ ಜಗದೀಶ ಕೆ.ಎಚ್‌. ಇತರರು ಇದ್ದರು.

ಟಾಪ್ ನ್ಯೂಸ್

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-belagavi

Belagavi: ಗಡಿ ಹೋರಾಟದಲ್ಲಿ‌ ಯಶಸ್ವಿಯಾಗಲು ಒಂದಾಗಿ: ಮನೋಜ್‌ ಜರಾಂಗೆ ಪಾಟೀಲ

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ

Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.