ಬಸಿರಾ ಎದುರು ಮಂಡಿಯೂರಿದ ಮಮತಾ

ದಸರಾ ವಿಭಾಗ ಮಟ್ಟದ ಕುಸ್ತಿಯಲ್ಲಿ ಅಂತಾರಾಷ್ಟ್ರೀಯ ಪಟುವಿಗೆ ಭಾರೀ ಮುಖಭಂಗ

Team Udayavani, Sep 23, 2019, 12:13 PM IST

gadaga-tdy-1

ಗದಗ: ನಗರದ ಜಿಲ್ಲಾ ಕ್ರೀಡಾಂಗಣದಲ್ಲಿರುವ ಒಳಾಂಗಣ ಕ್ರೀಡಾಂಗಣದಲ್ಲಿ ರವಿವಾರ ನಡೆದ ದಸರಾ ಬೆಳಗಾವಿ ವಿಭಾಗ ಮಟ್ಟದ ಕುಸ್ತಿ ಪಂದ್ಯಾವಳಿ ರೋಚಕ ಕ್ಷಣಗಳಿಗೆ ಸಾಕ್ಷಿಯಾಯಿತು.

ಅಂತಾರಾಷ್ಟ್ರೀಯ ಕುಸ್ತಿಪಟು ಮಮತಾ ಕೇಲೋಜಿ ಅವರನ್ನು ತಿಂಗಳಲ್ಲಿ ಸತತ ಎರಡನೇ ಬಾರಿಗೆ ಮಣಿಸುವ ಮೂಲಕ ಆತಿಥೇಯ ಕುಸ್ತಿಪಟು ಬಸಿರಾ ವಕಾರದ ಗಮನ ಸೆಳೆದರು. 57 ಕೆಜಿ ಪುರುಷ ಹಾಗೂ 50 ಕೆಜಿ ಮಹಿಳಾ ವಿಭಾಗದ ಅಂತಿಮ ಪಂದ್ಯಗಳು   ರಣರೋಚಕವಾಗಿದ್ದವು. ಮಹಿಳಾ ವಿಭಾಗದ ಅಂತಿಮ ಪಂದ್ಯದಲ್ಲಿ ಕಾರವಾರದ ಅಂತಾರಾಷ್ಟ್ರೀಯ ಕುಸ್ತಿಪಟು ಮಮತಾ ಕೇಲೋಜಿ ಅವರನ್ನು ಗದುಗಿನ ಬಸಿರಾ ವಕಾರದ 8-2 ಅಂಕಗಳೊಂದಿಗೆ ಮಣಿಸಿದರು. 6 ನಿಮಿಷಗಳ ಕಾದಾಟ ಹೆಜ್ಜೆ ಹೆಜ್ಜೆಗೂ ರೋಮಾಂಚನಕಾರಿಯಾಗಿತ್ತು.

ಕಟ್ಟುಮಸ್ತಾದ ದೇಹ ಬೆಳೆಸಿಕೊಂಡಿದ್ದ ಜಟ್ಟಿಗಳು ಪರಸ್ಪರ ಚಿತ್ತು ಮಾಡಲು ಹರಸಾಹಸ ನಡೆಸಿದರು. ಬಸಿರಾ ವಕಾರದ ಅವರು ಲೆಗ್‌ ಅಟ್ಯಾಕ್‌ ಮಾಡಿ ಎರಡು ಅಂಕ ಬಾಚಿಕೊಂಡು ಗೆಲುವಿನ ಹಾದಿ ಹಿಡಿದರು. ಇದಕ್ಕೆ ತಡೆಯೊಡ್ಡಲು ಯತ್ನಿಸಿದ ಮಮತಾ, ಬಸಿರಾ ಅವರನ್ನು ಕಾಲರ್‌ ಸ್ವಿಂಗ್‌ ಮಾಡಿ ಎರಡು ಅಂಕಗಳನ್ನು ಪಡೆಯುವಲ್ಲಿ ಮಾತ್ರ ಸಫಲರಾದರು. ನಿಗದಿತ ಅವಧಿಯುದ್ದಕ್ಕೂ ನಡೆದ ಕಾಳಗದಿಂದಾಗಿ ಹೈವೋಲ್ಟೆಜ್‌ ಪಂದ್ಯವಾಗಿ ಮಾರ್ಪಟ್ಟಿತು. ಅಂತಿಮವಾಗಿ ಬಸಿರಾ ವಕಾರದ ಗೆಲುವಿನ ಕೇಕೆ ಹಾಕಿದರು.

2017-18ನೇ ಸಾಲಿನಲ್ಲಿ ರೆಸ್ಲಿಂಗ್‌ ಫೆಡರೇಷನ್‌ ಆಫ್‌ ಇಂಡಿಯಾ ನಡೆಸಿದ್ದ ರಾಷ್ಟ್ರ ಮಟ್ಟದ ಪಂದ್ಯದಲ್ಲಿ ಗೆಲುವು ದಾಖಲಿಸಿದ್ದ ಕಾರವಾರದ ಮಮತಾ ಕೇಲೋಜಿ, ಅಂತಾರಾಷ್ಟ್ರೀಯ ಪಟು ಎಂಬ ಖ್ಯಾತಿಯನ್ನು ಮುಡಿಗೇರಿಸಿಕೊಂಡಿದ್ದರು. ಆದರೆ, ಕಳೆದ ಆಗಸ್ಟ್‌ ತಿಂಗಳಲ್ಲಿ ರಾಜ್ಯ ರೆಸ್ಲಿಂಗ್‌ ಅಸೋಸಿಯೇಷನ್‌ ಆಯೋಜಿಸಿದ್ದ ರಾಜ್ಯಮಟ್ಟದ ರೆಸ್ಲಿಂಗ್‌ ಪಂದ್ಯದಲ್ಲೂ ಮಮತಾ ಅವರನ್ನು ಮಣಿಸಿರುವ ಬಸಿರಾ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಇದೀಗ ದಸರಾ ಕ್ರೀಡಾಕೂಟದ ಬೆಳಗಾವಿ ವಿಭಾಗ ಮಟ್ಟದ ಪಂದ್ಯಾವಳಿಯಲ್ಲೂ ಬಸಿರಾ ಎದುರು ಮಮತಾ ಮಂಡಿಯೂರಿದ್ದಾರೆ. ಬಸಿರಾ ಕುಸ್ತಿ ವಲಯದಲ್ಲಿ ಭಾರೀ ನಿರೀಕ್ಷೆ ಹುಟ್ಟು ಹಾಕಿದ್ದಾರೆ ಎನ್ನುತ್ತಾರೆ ಜಿಲ್ಲಾ ಯುವಜನ ಸೇವೆ ಮತ್ತು ಕ್ರೀಡಾ ಧಿಕಾರಿ ಬಿ.ಬಿ. ವಿಶ್ವನಾಥ. ಪ್ರವೀಣ ವಿಜಯದುಂದುಭಿ: ಪುರುಷರ ವಿಭಾಗದ 57 ಕೆಜಿ ವಿಭಾಗದ ಅಂತಿಮ ಪಂದ್ಯದಲ್ಲಿ ಧಾರವಾಡದ ಪ್ರವೀಣ ಎಸ್‌.ಕೆ. ಹಾಗೂ ಕಾರವಾರದ ನಾರಾಯಣ ಎ. ನಡುವೆ ಕಾದಾಟ ರೋಚಕವಾಗಿತ್ತು.

6 ನಿಮಿಷಗಳ ಕಾಲ ನಡೆದ ಬಲ ಪ್ರದರ್ಶನದಲ್ಲಿ ಅಂತಿಮವಾಗಿ ಪ್ರವೀಣ ಎಸ್‌.ಕೆ. ಜಯಶಾಲಿಯಾದರು. ಮಹಿಳೆಯರ 53 ಕೆಜಿ ವಿಭಾಗದಲ್ಲಿ ರಾಷ್ಟ್ರೀಯ ಕುಸ್ತಿಪಟು ಎನಿಸಿರುವ ಗದುಗಿನ ಪ್ರೇಮಾ ಹುಚ್ಚಣ್ಣವರ ಹಾಗೂ ಬೆಳಗಾವಿ ಐಶ್ವರ್ಯ ಕರಿಗಾರ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿತ್ತಾದರೂ, ಕೊನೆಗೆ ಪ್ರೇಮಾ ಹುಚ್ಚಣ್ಣವರ ಗೆಲುವಿನ ನಗೆ ಬೀರಿದರು. ಇನ್ನುಳಿದಂತೆ ಬಹುತೇಕ ಪಂದ್ಯಗಳು 2-3 ನಿಮಿಷಗಳ ಕಾಲ ನಡೆದರೆ, ಕೆಲವರು ಆರಂಭಿಕ ಹಂತದಲ್ಲೇ ಮುಗ್ಗರಿಸಿದರು. ಇನ್ನೂ ಕೆಲವರು ಕೆಲವೇ ಕ್ಷಣಗಳಲ್ಲಿ ಸೋಲೊಪ್ಪಿಕೊಂಡು ಅಖಾಡದಿಂದ ಹೊರನಡೆದರು.

 

-ವೀರೇಂದ್ರ ನಾಗಲದಿನ್ನಿ

ಟಾಪ್ ನ್ಯೂಸ್

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.