ಗ್ರಾಮೀಣ ಗ್ರಂಥಾಲಯ ಪಂಚಾಯ್ತಿಗೆ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ ವ್ಯಾಪ್ತಿಗೆ

Team Udayavani, Sep 23, 2019, 1:32 PM IST

Udayavani Kannada Newspaper

ಶಿರಸಿ: ಗ್ರಾಮೀಣ ಜನರಲ್ಲಿ ಓದುವ ಹವ್ಯಾಸ ಬೆಳೆಸಬೇಕು, ವರ್ತಮಾನದ ತಿಳಿವಳಿಕೆ ವೃದ್ಧಿಸಬೇಕು ಎಂದು ಗ್ರಾಪಂ ಮಟ್ಟದಲ್ಲಿ ತೆರೆಯಲಾಗಿದ್ದ ಗ್ರಾಪಂ ವಾಚನಾಲಯಗಳು ಇನ್ನು ಗ್ರಂಥಾಲಯ ಇಲಾಖೆ ನಿರ್ವಹಣೆ ಮಾಡುವುದಿಲ್ಲ. ಬದಲಿಗೆ ಇದರ ಸಂಪೂರ್ಣ ಉಸ್ತುವಾರಿ ಆಯಾ ಪಂಚಾಯಿತಿಗಳೇ ವಹಿಸಿಕೊಳ್ಳಲಿವೆ.

ಗ್ರಾಮೀಣ ಭಾಗದಲ್ಲಿ ಪುಸ್ತಕಗಳ ಓದು, ಜ್ಞಾನಾರ್ಜನೆ ಅನುಕೂಲತೆಗೆ ಸ್ಥಾಪನೆಯಾಗಿದ್ದ ಗ್ರಾಪಂ ಗ್ರಂಥಾಲಯಗಳ ಸಮರ್ಪಕ ನಿರ್ವಹಣೆ ದೃಷ್ಟಿಯಿಂದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ ವ್ಯಾಪ್ತಿಗೆ ವರ್ಗಾಯಿಸಲಾಗುತ್ತಿದೆ. ಇದರಿಂದ ಸ್ಥಳೀಯವಾಗಿ ಜ್ಞಾನ ದೇಗುಲವನ್ನು ಗ್ರಾಪಂಗಳು ನಿರ್ವಹಿಸುವ ಜವಾಬ್ದಾರಿ ನೊಗ ಹೊರಬೇಕಿದೆ.

ಈ ಬಗ್ಗೆ ಸರಕಾರಿ ಆದೇಶವಾಗಿದ್ದು, ಗ್ರಂಥಾಲಯಗಳನ್ನು ಹಸ್ತಾಂತರ ಮಾಡಿಕೊಳ್ಳುವಂತೆ ಗ್ರಾಪಂಗಳಿಗೆ ಗ್ರಂಥಾಲಯ ಇಲಾಖೆಯಿಂದ ಕಳೆದ ಕೆಲ ದಿನಗಳ ಹಿಂದೆ ಪತ್ರ ಕಳುಹಿಸಲಾಗಿದೆ. ಇದೀಗ ಹಸ್ತಾಂತರದ ಆರಂಭಿಕ ಪ್ರಕ್ರಿಯೆ ಕೆಲ ಗ್ರಾಪಂಗಳಲ್ಲಿ ಆರಂಭವಾಗಿದೆ. ಗ್ರಾಪಂ ಗ್ರಂಥಾಲಯಗಳ ಮೇಲ್ವಿಚಾರಕರಿಗೆ ಈಗಾಗಲೇ ಅರ್ಜಿ ಮಾದರಿ ಕಳುಹಿಸಲಾಗಿದ್ದು, ಅದರಲ್ಲಿ ಗ್ರಂಥಾಲಯದಲ್ಲಿರುವ ಪುಸ್ತಕಗಳು, ಸಾಮಗ್ರಿಗಳು ಸೇರಿದಂತೆ ವಿವರಣೆ ತುಂಬಿ ಗ್ರಾಪಂಗೆ ನೀಡಬೇಕಾಗಿದೆ ಎಂದು ಇಲಾಖೆ ಮೂಲಗಳು ತಿಳಿಸಿವೆ.

ಗ್ರಾಪಂಗೆ ಗ್ರಂಥಾಲಯಗಳು ವರ್ಗಾಯಿಸುವುದರಿಂದ ಕೆಲ ತಾಂತ್ರಿಕ ತೊಂದರೆಗಳು ಎದುರಾಗಬಹುದು ಎಂಬ ಅಭಿಪ್ರಾಯಗಳು ವ್ಯಕ್ತವಾಗಿವೆ. ಗ್ರಂಥಾಲಯಗಳ ಮೇಲ್ವಿಚಾರಕರು ಈವರೆಗೆ ಗ್ರಂಥಾಲಯ ಇಲಾಖೆಯಿಂದ ಆನ್‌ಲೈನ್‌ ಮೂಲಕ ವೇತನ ಪಾವತಿಸಲಾಗುತ್ತಿತ್ತು. ಆದರೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಇಲಾಖೆಯಲ್ಲಿ ಆನ್‌ಲೈನ್‌ನಲ್ಲಿ ವೇತನ ಪಾವತಿ ಇಲ್ಲದಿದ್ದರಿಂದ ಮೇಲ್ವಿಚಾರಕರು ವೇತನ ಗ್ರಾಪಂಗಳಲ್ಲೇ ಪಡೆಯುವ ಸಂದರ್ಭ ಎದುರಾಗುವ ಸಾಧ್ಯತೆಯಿದೆ.

ಕಳೆದ ನಾಲ್ಕು ವರ್ಷಗಳಿಂದ ಹಳ್ಳಿಗಳ ಗ್ರಂಥಾಲಯಗಳನ್ನು ಇಡೀ ದಿನದಲ್ಲಿ ನಾಲ್ಕು ತಾಸು ಮಾತ್ರ ತೆರೆದಿಡಲಾಗುತ್ತಿತ್ತು. ಆ ಸಮಯ ಇಲ್ಲಿಯೂ ಮುಂದುವರೆಯುತ್ತದೋ ಎಂಬ ಸ್ಪಷ್ಟತೆ ಇನ್ನೂ ಬಂದಿಲ್ಲ. ಇನ್ನು ಮೇಲ್ವಿಚಾರಕರಾಗಿ ದಶಕ್ಕೂ ಹೆಚ್ಚು ಕಾಲ ಕಾರ್ಯನಿರ್ವಹಿಸುರುವವರು ಹಲವರಿದ್ದು, ಅವರಿಗೆಲ್ಲ ಬೇರೆ ಇಲಾಖೆಗೆ ಗ್ರಂಥಾಲಯ ಹಸ್ತಾಂತರವಾದ ನಂತರ ತಮ್ಮ ಮೊದಲ ಸರ್ವಿಸ್‌ ಪರಿಗಣನೆಯಾಗುತ್ತದೋ ಇಲ್ಲವೋ? ಮುಂದೆ ಕನಿಷ್ಠ ವೇತನ, ಕಾಯಂಮಾತಿಗೆಲ್ಲ ಹೊಡೆತ ಬೀಳುತ್ತದೋ ಎಂಬ ಆತಂಕವುಂಟಾಗಿದೆ. ಗ್ರಂಥಾಲಯ ಇಲಾಖೆ ಜಿಲ್ಲಾ ಹಂತದ ಅಧಿ ಕಾರಿಗಳು ಜಿಲ್ಲೆಯ ಎಲ್ಲ ಗ್ರಂಥಾಲಯಗಳ ಜವಾಬ್ದಾರಿ ನಿರ್ವಹಿಸಬೇಕಿತ್ತು. ಪ್ರತಿ ಸಂದರ್ಭದ ಆಗುಹೋಗುಗಳಿಗೆ ಸ್ಪಂದಿಸುವುದು ಕಷ್ಟವಿತ್ತು. ಈಗ ಕೊಂಚ ಹೊರೆ ಇಳಿದಂತಾಗಿದೆ. ಈಗ ಗ್ರಾಪಂಗಳ ಸುಪರ್ದಿಗೆ ಬರುವುದರಿಂದ ಸಹಜವಾಗಿ ಸ್ಥಳೀಯ ಆಡಳಿತ ಕಾಳಜಿ ತೋರಲು ಅವಕಾಶವಿದೆ. ಇನ್ನು ಗ್ರಾಪಂಗಳಲ್ಲಿ ವಸೂಲಿ ಮಾಡುತ್ತಿದ್ದ ಗ್ರಂಥಾಲಯ ಕರವನ್ನು ಈವರೆಗೆ ಗ್ರಂಥಾಲಯ ಇಲಾಖೆ ನೀಡಲಾಗುತ್ತಿತ್ತು.  ಅದೀಗ ಗ್ರಾಪಂ ಬಳಕೆಗೆ ಉಳಿಯುವ ಸಾಧ್ಯತೆಗಳಿದೆ. ಇದರಿಂದ ಗ್ರಂಥಾಲಯಗಳಿಗೆ ಪತ್ರಿಕೆ ಮುಂತಾದವುಗಳನ್ನು ಒದಗಿಸಲು ಅನುಕೂಲ ಆಗಬಹುದು.

218 ಗ್ರಾಪಂ ಗ್ರಂಥಾಲಯ:  ಜಿಲ್ಲೆಯಲ್ಲಿ ಒಟ್ಟು 218 ಗ್ರಾಪಂ ಗ್ರಂಥಾಲಯಗಳಿವೆ. 210ಕ್ಕೂ ಹೆಚ್ಚು ಮೇಲ್ವಿಚಾರಕರು ಕಾರ್ಯ ಮಾಡುತ್ತಿದ್ದಾರೆ. ಬಹುತೇಕ ಗ್ರಂಥಾಲಯಗಳು ಗ್ರಾಪಂ ಕಟ್ಟಡಗಳಲ್ಲೇ ಕಾರ್ಯನಿರ್ವಹಿಸುತ್ತಿವೆ. ಶಿರಸಿ ತಾಲೂಕಿನ ಉಂಚಳ್ಳಿ ಹಾಗೂ ಸಿದ್ದಾಪುರ ತಾಲೂಕಿನ ಹೆರೂರು ಗ್ರಾಪಂ ಗ್ರಂಥಾಲಯ ಮಾತ್ರ ಗ್ರಂಥಾಲಯ ಇಲಾಖೆ ಸ್ವಂತ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿವೆ.

 

  • ರಾಘವೇಂದ್ರ ಬೆಟ್ಟಕೊಪ್ಪ

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.