ಅನರ್ಹ ಶಾಸಕರಿಗೆ,ಬಿಜೆಪಿಗೆ ಸಂತ್ರಸ್ತರ ಶಾಪ ತಟ್ಟಲಿದೆ : ಎಂ.ಬಿ.ಪಾಟೀಲ
Team Udayavani, Sep 23, 2019, 6:33 PM IST
ವಿಜಯಪುರ : ಅನರ್ಹ ಶಾಸಕರು ಹಾಗೂ ಬಿಜೆಪಿ ಪಕ್ಷಕ್ಕೆ ರಾಜ್ಯದ ನೆರ ಸಂಸತ್ರಸ್ತರ ಶಾಪ ತಟ್ಟಲಿದೆ ಎಂದು ಮಾಜಿ ಸಚಿವ ಎಂ.ಬಿ.ಪಾಟೀಲ ಟೀಕಿಸಿದರು.
ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿ ಅವರು ಅನರ್ಹ ಶಾಸಕರು ರಾಜ್ಯದ ಜನತೆಗೆ ಹಾಗೂ ಕ್ಷೇತ್ರದ ಮತದಾರರಿಗೆ, ಸಂಕಷ್ಟದಲ್ಲಿರುವ ಸಂಸತ್ರಸ್ತರಿಗೆ ಮೋಸ ಮಾಡಿದ್ದಾರೆ.
ತಮ್ಮ ಕ್ಷೇತ್ರದ ಜನರು ನೆರೆಯ ಬಾಧೆಯಿಂದ ಕಣ್ಣೀರಲ್ಲಿ ಮುಳುಗಿದ್ದರೂ ಕಾಗವಾಡ, ಅಥಣಿ, ಗೋಕಾಕ ಅನರ್ಹ ಶಾಸಕರಿಗೆ ಸಂತ್ರಸ್ತ ಸಮಸ್ಯೆ ಆಲಿಸಲು ಮುಂದಾಗಿಲ್ಲ. ಹೀಗಾಗಿ ಅನರ್ಹ ಶಾಸಕರಿ ಸಂತ್ರಸ್ತರ ಶಾಪ ತಟ್ಟೊದು ಗ್ಯಾರಂಟಿ ಎಂದು ಹರಿಹಾಯ್ದರು.
ಅನರ್ಹ ಶಾಸಕರ ವಿಷಯದಲ್ಲಿ ಸುಪ್ರೀಂ ಕೋರ್ಟ್ ತೀರ್ಪು ಏನೇ ಬರಲಿ, ಕಾನೂನು ಗೌರವಿಸಬೇಕು.
15 ಮತಕ್ಷೇತ್ರದಲ್ಲಿ ಒಂದು ಪೆನಲ್ ಮಾಡಿದ್ದೇವಿ. ಹೀಗಾಗಿ ಉಪ ಚುನಾವಣೆಯಲ್ಲಿ ಬಹುತೇಕ ಕ್ಷೇತ್ರಗಳ ಖಂಡಿತ ಕಾಂಗ್ರೆಸ್ ಗೆಲ್ಲಲಿದೆ ಎಂದರು.
ವಿರೋಧ ಪಕ್ಷದ ನಾಯಕರ ನೇಮಕ ಶೀಘ್ರದಲ್ಲೇ ಆಗಲಿದೆ. ಹೈಕಮಾಂಡ ಈ ಕುರಿತು ಸೂಕ್ತ ನಿರ್ಧಾರ ಕೈಗೊಳ್ಳಲಿದೆ ಎಂದರು.
ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ತಮ್ಮ ನೇತೃತ್ವದ ಕಾಂಗ್ರೆಸ್ ಬೆಂಬಲಿತ ಸಮ್ಮಿಶ್ರ ಸರ್ಕಾರ ಅತಿ ಕೆಟ್ಟ ಸರಕಾರವಾಗಿತ್ತು ಎಂದು ಹೇಳಿಕೊಂಡಿರುವ ಹಿಂದಿನ ಅರ್ಥ, ತಾತ್ಪರ್ಯ ಬೇರೆಯೇ ಇದೆ. ಬಿಜೆಪಿ ಸರ್ಕಾರದಲ್ಲಿ ಜನರ ಕೆಲಸಗಳ ಆಗ್ತಿಲ್ಲ. ಇದನ್ನ ವಿಶ್ಲೇಷಣೆ ಮಾಡುವಾಗ ಆ ರೀತಿ ಹೇಳಿಕೆ ನೀಡಿದ್ದಾರೆ ಎಂದರು.
ಉಪ ಚುನಾವಣೆಯಲ್ಲಿ ಜೆಡಿಎಸ್ ಜೊತೆಗೆ ಕಾಂಗ್ರೆಸ್ ಹೊಂದಾಣಿಕೆ ಕುರಿತು ಪಕ್ಷದ ಹೈಕಮಾಂಡ್ ನಿರ್ಧರಿಸಲಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
MUST WATCH
ಹೊಸ ಸೇರ್ಪಡೆ
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ