ಮಹಿಳೆಯರನ್ನು ಅವಮಾನಿಸುವ ಕೆಟಗರಿಯವನು ನಾನಲ್ಲ …

ಜೋರಾದ "ಬಳೆ' ಸದ್ದು- ಸುದೀಪ್‌ ಸ್ಪಷ್ಟನೆ

Team Udayavani, Sep 24, 2019, 3:05 AM IST

Sudeep

ಕೆಲ ದಿನಗಳ ಹಿಂದಷ್ಟೇ ನಟ ಸುದೀಪ್‌ ಸುದೀರ್ಘ‌ ಪತ್ರವೊಂದನ್ನು ಬರೆದು, ಇಡೀ ಜಗತ್ತನ್ನು ಗೆದ್ದ ಅಲೆಕ್ಸಾಂಡರ್‌ ಕೂಡಾ ಹೋಗುವಾಗ ಬರೀ ಕೈಯಲ್ಲಿ ಹೋದ. ನಾವು ಒಳ್ಳೆಯ ನೆನಪುಗಳನ್ನು ಬಿಟ್ಟು ಹೋಗೋಣ ಎಂದು ತುಂಬಾ ಕೂಲ್‌ ಆಗಿ ಹೇಳಿದ್ದರು. ಅದರ ಬೆನ್ನಿಗೆ ಗರಂ ಆಗಿ, ನಾವು ಕೈಗೆ ಹಾಕಿರುವುದು ಕಡಗ, ಬಳೆಯಲ್ಲ ಎಂದು ತಮ್ಮ ವಿರೋಧಿಗಳಿಗೆ ಖಡಕ್‌ ವಾರ್ನಿಂಗ್‌ ನೀಡಿದ್ದರು. ಸುದೀಪ್‌ ನೀಡಿದ ವಾರ್ನಿಂಗ್‌ ಯಾರಿಗೆ ತಲುಪಬೇಕಿತ್ತು, ಅವರಿಗೆ ತಲುಪಿತೋ ಗೊತ್ತಿಲ್ಲ.

ಆದರೆ, ಅವರು ಟ್ವೀಟ್‌ನಲ್ಲಿ ಬಳಸಿರುವ “ಬಳೆ’ ಪದ ಮಾತ್ರ ಮಹಿಳೆಯರಿಗೆ ಕೋಪವನ್ನು ತರಿಸಿದ್ದು ಸುಳ್ಳಲ್ಲ. ಒಬ್ಬ ಸ್ಟಾರ್‌ ನಟನಾಗಿ, ಫ್ಯಾಮಿಲಿ ಮಂದಿ ಇಷ್ಟಪಡುವ ನಟನಾಗಿ ಸುದೀಪ್‌ ಈ ರೀತಿ ಟ್ವೀಟ್‌ ಮಾಡಿದ್ದು ಸರಿಯಲ್ಲ, ಹೆಣ್ಣು ಮಕ್ಕಳನ್ನು ಅವಮಾನಿಸಿದ್ದಾರೆ ಎಂದು ಅನೇಕರು ಬೇಸರ ವ್ಯಕ್ತಪಡಿಸಿ ಟ್ವೀಟ್‌ ಮಾಡಿದ್ದರು. “ಬಳೆ’ ಪದ ವಿವಾದಕ್ಕೆ ತಿರುಗುತ್ತಿದ್ದಂತೆ ಸುದೀಪ್‌ ಇದಕ್ಕೆ ಸ್ಪಷ್ಟನೆ ನೀಡಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿ, ತಾವು ಮಾಧ್ಯಮವೊಂದರಲ್ಲಿ ಮಾತನಾಡಿದ ವಿಡಿಯೋ ಶೇರ್‌ ಮಾಡುವ ಮೂಲಕ “ಬಳೆ’ ಎಫೆಕ್ಟ್ ತಣ್ಣಗಾಗಿಸುವ ಪ್ರಯತ್ನ ಮಾಡಿದ್ದಾರೆ. “ನನ್ನ ಹೇಳಿಕೆಯಿಂದ ಬೇಸರಗೊಂಡಿರುವ ಮಹಿಳೆಯರೇ ಈ ಹೇಳಿಕೆ ಕೊಟ್ಟಿದ್ದು ನನ್ನ ಹಾಗೂ ನನ್ನ ಸ್ನೇಹಿತರನ್ನು ನಿಂದಿಸಿ ಕಾಮೆಂಟ್‌ ಮಾಡುವವರಿಗೆ. ನಾನು ಹೆಣ್ಣುಮಕ್ಕಳನ್ನು ಕೀಳಾಗಿ ನೋಡುವ ಕೆಟಗರಿಗೆ ಸೇರಿದವನಲ್ಲ’ ಎಂದು ಟ್ವೀಟ್‌ ಮಾಡಿದ್ದಾರೆ.

ಇನ್ನು, ಈ ಬಗ್ಗೆ ಸ್ಪಷ್ಟನೆ ನೀಡಿರುವ ಸುದೀಪ್‌, “ಸೆಪ್ಟೆಂಬರ್‌ನಲ್ಲಿ ಏನೇನೋ ಹೆಸರುಗಳನ್ನಿಟ್ಟುಕೊಂಡಿರುವ ತುಂಬಾ ಟ್ವೀಟರ್‌ ಅಕೌಂಟ್‌ಗಳು ಓಪನ್‌ ಆಗಿವೆ. ನಾನು ಏನೇ ಟ್ವೀಟ್‌ ಮಾಡಿದರೂ ಅದಕ್ಕೆ ಕೆಟ್ಟ ಕಾಮೆಂಟ್‌ ಹಾಕೋದು, ಟ್ರೋಲ್‌ ಮಾಡೋದು ಮಾಡುತ್ತಿದ್ದಾರೆ. ಅವರೆಲ್ಲರ ಮೇಲೂ ದೂರು ಕೊಡುತ್ತೇನೆ. ಯಾರು ಮಾಡುತ್ತಿದ್ದಾರೆಂದು ಗೊತ್ತಾಗಬೇಕು. ಈಗ ಬಳೆ ವಿಚಾರವನ್ನು ಎತ್ತಿಕೊಂಡು ವಿಷಯಾಂತರ ಮಾಡುತ್ತಿದ್ದಾರೆ. ನನ್ನ ಅಮ್ಮ, ಹೆಂಡ್ತಿ, ಅಕ್ಕಂದಿರೂ ಹಾಕೋದು ಬಳೆನೇ. ನಾನು ಯಾರನ್ನೂ ಅವಮಾನಿಸಿಲ್ಲ’ ಎಂದು ಸ್ಪಷ್ಟನೆ ನೀಡಿದ್ದಾರೆ.

ಟಾಪ್ ನ್ಯೂಸ್

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

Hassan ವೀಡಿಯೋ ಪ್ರಕರಣ ಎಸ್‌ಐಟಿ ತನಿಖೆಗೆ

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

Hockey

Kodava ಕುಂಡ್ಯೋಳಂಡ ಹಾಕಿ ಟೂರ್ನಿಇಂದು ಫೈನಲ್‌ : ಗಿನ್ನೆಸ್‌ ಅಧಿಕಾರಿಗಳ ಭೇಟಿ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Ra

Congress; ಅಮೇಠಿಗೆ ರಾಹುಲ್‌: ಅಂತಿಮ ನಿರ್ಧಾರ ಖರ್ಗೆ ಹೆಗಲಿಗೆ

1-weqqeqw

Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

Hassan ವೀಡಿಯೋ ಪ್ರಕರಣ ಎಸ್‌ಐಟಿ ತನಿಖೆಗೆ

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

Hockey

Kodava ಕುಂಡ್ಯೋಳಂಡ ಹಾಕಿ ಟೂರ್ನಿಇಂದು ಫೈನಲ್‌ : ಗಿನ್ನೆಸ್‌ ಅಧಿಕಾರಿಗಳ ಭೇಟಿ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.