ಸಂಘದ ಅಭಿವೃದ್ಧಿಗೆ ಸದಸ್ಯರು ಸಹಕರಿಸಿ


Team Udayavani, Sep 24, 2019, 3:00 AM IST

sangada

ಕೊಳ್ಳೇಗಾಲ: ಪಟ್ಟಣದ ತಾಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘ ನಿಯಮಿತದ ಸಂಸ್ಥೆಗೆ ಸಾಕಷ್ಟು ಬದಲಾವಣೆ ತಂದು ಅಭಿವೃದ್ಧಿ ಪಡಿಸಲು ಸಂಸ್ಥೆಯ ಎಲ್ಲಾ ಸದಸ್ಯರು ಸಹಕರಿಸಬೇಕು ಎಂದು ಸಂಸ್ಥೆಯ ಅದ್ಯಕ್ಷ ಮೆಹಬೂಬ್‌ ಷರೀಫ್ ಹೇಳಿದರು.

ಪಟ್ಟಣದ ಗುರುಭವನದಲ್ಲಿ ತಾಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘ ನಿಯಮಿತ 2018-19ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಮಹಾಸಭೆ ಉದ್ಘಾಟಿಸಿ ಮಾತನಾಡಿ, ಈ ಹಿಂದೆ ಸಂಸ್ಥೆಯಲ್ಲಿ ಉತ್ತಮವಾಗಿ ನಡೆಯುತ್ತಿತ್ತು. ಗೋಡೋನ್‌ನಲ್ಲಿ ಅವ್ಯವಹಾರದಿಂದಾಗಿ ಗೋಡೋನ್‌ ಮುಚ್ಚಿದ ಪರಿಣಾಮ ನ್ಯಾಯಬೆಲೆ ಅಂಗಡಿಗಳಿಗೆ ಆಹಾರ ಎತ್ತುವಳಿಗೆ ಕಡಿವಾಣ ಬಿದ್ದ ಪರಿಣಾಮ ಸುಮಾರು 4 ಲಕ್ಷ ನಷ್ಟ ರೂ. ಉಂಟಾಗಿದೆ ಎಂದರು.

ಸದಸ್ಯತ್ವ ರದ್ದು ಮಾಡಿ: ಸಂಸ್ಥೆಯ ಸದಸ್ಯ ಸೋಮಶೇಖರ್‌ ಟಿಎಪಿಸಿಎಂಎಸ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಕಾರ್ಯದರ್ಶಿ ಮತ್ತು ಸಿಬ್ಬಂದಿಯನ್ನು ಸಂಪೂರ್ಣ ಬದಲಾಯಿಸಬೇಕು ಮತ್ತು ಹನೂರು ಶಾಸಕ ಆರ್‌.ನರೇಂದ್ರ ಸಂಸ್ಥೆಯ ನಿರ್ದೇಶಕರಾಗಿದ್ದು, ಕಳೆದ 5 ವರ್ಷಗಳಿಂದ ಸಭೆಗೆ ಗೈರು ಹಾಜರಾಗಿರುತ್ತಾರೆ. ಅವರ ಸದಸ್ಯತ್ವವನ್ನು ರದ್ದುಪಡಿಸಬೇಕು ಎಂದು ದೂರಿದರು.

ಏನು ಕ್ರಮ ಕೈಗೊಂಡಿದ್ದೀರಿ?: ಸದಸ್ಯ ಸತ್ತೇಗಾಲ ಗ್ರಾಮದ ರಾಜಶೇಖರ್‌ ಗೋಡೋನಿನಲ್ಲಿ ಆಗಿರುವ ಅವ್ಯವಹಾರದ ತನಿಖೆ ನಡೆದು, ಗೋಡಾನಿನ ಅಧಿಕಾರಿ ಅಮಾನತುಗೊಂಡು ಪ್ರಕರಣವು ನ್ಯಾಯಾಲಯದಲ್ಲಿ ಇದೆ. ನ್ಯಾಯಾಲಯದಲ್ಲಿ ಪ್ರಕರಣ ಏನಾಯಿತು ಮತ್ತು ಪ್ರಕರಣಕ್ಕೆ ಈಗಾಗಲೇ ಕಾರಣರಾಗಿರುವ ಕಾರ್ಯದರ್ಶಿಗಳ ಮೇಲೆ ಯಾವ ರೀತಿ ಕ್ರಮ ಜರುಗಿಸಲಾಗಿದೆ ಎಂದು ಪ್ರಶ್ನಿಸಿದ್ದಾರೆ.

ಸಂಸ್ಥೆ ಹಣ ದುರ್ಬಳಕೆ: ಅದೇ ರೀತಿ ಪಾಳ್ಯ ಗ್ರಾಮ ರಂಗಸ್ವಾಮಿ ಮಾತನಾಡಿ, ಸಂಸ್ಥೆಯಲ್ಲಿ ಹಣ ದುಬಳìಕೆಯಾಗಿದ್ದು, ಸಂಸ್ಥೆಯಲ್ಲಿ ಕೆಲಸ ನಿರ್ವಹಿಸುತ್ತಿರುವ ಕೆಲವರಿಗೆ ಮಾತ್ರ ಬೋನಸ್‌ ನೀಡಲಾಗಿದೆ. ಉಳಿದವರಿಗೆ ಯಾಕೆ ನೀಡಿಲ್ಲ. ಇದೆಲ್ಲವನ್ನು ತನಿಖೆ ನಡೆಸುವಂತೆ ಸಿಒಡಿಗೆ ದೂರು ನೀಡುವ ಬೆದರಿಕೆ ಒಡ್ಡಿದ್ದಾರೆ.

ದೂರುಗಳ ಸುರಿಮಳೆ: ಮತ್ತೂರ್ವ ಸದಸ್ಯ ಶಿವಮೂರ್ತಿ ಸಂಸ್ಥೆ ನಡೆಸುತ್ತಿರುವ ಪೆಟ್ರೋಲ್‌ ಬಂಕ್‌ನಲ್ಲಿ ಹಣ ದುಬಳಕೆಯಾಗಿದೆ. ಸೊಸೈಟಿಯ ಹಣವನ್ನು ಸಹ ದುಬಳಕೆಯಾಗಿದ್ದು, ಕೂಡಲೇ ತನಿಖೆಯಾಗಬೇಕು. ತನಿಖೆ ಮುಗಿಯುವವರೆಗೆ ಸಂಸ್ಥೆಯ ಕಾರ್ಯದರ್ಶಿ ಲೂಸಿ ಪ್ಲಾರಿನ್‌ ಅವರನ್ನು ಅಮಾನತಿನಲ್ಲಿಟ್ಟು ಆಡಳಿತಾಧಿಕಾರಿಯನ್ನು ನೇಮಕ ಮಾಡಬೇಕು ಎಂದು ದೂರಿನ ಸುರಿಮಳೆಯನ್ನು ಸದಸ್ಯರು ಮಾಡಿದ್ದಾರೆ.

ಸಭೆಯಲ್ಲಿ ಪ್ರತಿಭಟನೆ: ಪಾಳ್ಯ ಗ್ರಾಮದ ಸದಸ್ಯ ಪರಶಿವ ಟಿಎಪಿಸಿಎಂಎಸ್‌ನಲ್ಲಿ ಸಾಕಷ್ಟು ಹಣ ದುರ್ಬಳಕೆಯಾಗಿದೆ ಹೊರತು ಸದಸ್ಯರಿಗೆ ಯಾವುದೇ ತರಹದ ಅನುಕೂಲ ಆಗಿಲ್ಲ. ಸಂಸ್ಥೆಯ ಪದಾಧಿಕಾರಿಗಳು ಹಣವನ್ನು ನುಂಗಿ ಸಂಸ್ಥೆಯ ಕಾರ್ಯದರ್ಶಿ ಕೆಲಸ ಕಳೆದುಕೊಳ್ಳುವಂತೆ ಆಗಿದ್ದು, ಈ ಎಲ್ಲಾ ಅವ್ಯವಹಾರಕ್ಕೆ ಅಧ್ಯಕ್ಷರು ಸೂಕ್ತ ಉತ್ತರ ನೀಡಬೇಕೆಂದು ಸಭೆಯ ಮುಂಭಾಗ ಪ್ರತಿಭ ಟಿಸಿ ಧರಣಿ ಕುಳಿತರು.

ಸದಸ್ಯರ ದೂರಿನಂತೆ ಸಂಬಂಧಿಸಿದ ಅಧಿಕಾರಿಗಳ ಗಮನಕ್ಕೆ ತಂದು ಸೂಕ್ತ ಕ್ರಮ ಕೈಗೊಂಡು ಸಂಸ್ಥೆಯ ಅಭಿವೃದ್ಧಿಗೆ ಶ್ರಮಿಸುವುದಾಗಿ ಭರವಸೆ ನೀಡಿದ ಅಧ್ಯಕ್ಷರು, ಸಂಸ್ಥೆ ವತಿಯಿಂದ ನೂತನವಾಗಿ ನಿರ್ಮಿಸಿರುವ ಮಳಿಗೆಯಲ್ಲಿ ಸಣ್ಣಪುಟ್ಟ ಕೆಲಸ ಪೂರ್ಣಗೊಳ್ಳುತ್ತಿದ್ದಂತೆ ಸಾರ್ವಜನಿಕರ ಉಪಯೋಗಕ್ಕೆ ಉದ್ಘಾಟಿಸಲಾಗುವುದು ಎಂದರು.

ನೂತನ ಕಲ್ಯಾಣ ಮಂಟಪ: ಸರ್ವಸದಸ್ಯರು ಟಿಎಪಿಸಿಎಂಎಸ್‌ ವತಿಯಿಂದ ನೂತನ ಕಲ್ಯಾಣ ಮಂಟಪವೊಂದನ್ನು ನಿರ್ಮಿಸುವಂತೆ ಸಲಹೆ ನೀಡಿದ್ದು, ಕೂಡಲೇ ಕಲ್ಯಾಣ ಮಂಟಪವೊಂದನ್ನು ನಿರ್ಮಾಣ ಮಾಡಿ ಸದಸ್ಯರಿಗೆ ಮತ್ತು ಸಾರ್ವಜನಿಕರಿಗೆ ಅನುಕೂಲ ಕೊಡಲಾಗುವುದು ಎಂದು ತಿಳಿಸಿದರು.

ಸಂಸ್ಥೆಯನ್ನು ಮಾಜಿ ಜಿಲ್ಲಾ ಉಸ್ತುವಾರಿ ಸಚಿವ ದಿವಂಗತ ಜಿ.ರಾಜೂಗೌಡರು ಮತ್ತು ಮಾಜಿ ಸಚಿವ ಎಚ್‌.ನಾಗಪ್ಪ ಅವರು ಸ್ಥಾಪಿಸಿದ ಈ ಸಂಸ್ಥೆಗೆ ಯಾವುದೇ ತರಹದ ಕಪ್ಪುಚುಕ್ಕೆ ಬರದ ರೀತಿಯಲ್ಲಿ ಮುಂದಿನ ದಿನಗಳಲ್ಲಿ ಸರಿಪಡಿಸಲಾಗುವುದು ಎಂದು ಸದಸ್ಯರ ಸದ್ದುಗದ್ದಲದೊಂದಿಗೆ ಸಭೆ ಮುಕ್ತಾಯಗೊಳಿಸಿದರು. ಉಪಾಧ್ಯಕ್ಷೆ ಉತ್ತಮ್ಮ, ನಿರ್ದೇಶಕರಾದ ಮಹದೇವಸ್ವಾಮಿ, ಲಿಂಗರಾಜು, ಮಹದೇವಸ್ವಾಮಿ, ಮಾದೇಶ, ಗೋಪಾಲನಾಯ್ಡು, ಮಂಜುನಾಥ, ಇತರರು ಇದ್ದರು.

ಟಾಪ್ ನ್ಯೂಸ್

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.