ಇಂದು ಬಂಟ್ವಾಳ ಅರಣ್ಯಾಧಿಕಾರಿ ಕಚೇರಿ ಉದ್ಘಾಟನೆ


Team Udayavani, Sep 24, 2019, 5:19 AM IST

udgatane

ಬಂಟ್ವಾಳ: ಬಿ.ಸಿ.ರೋಡು ಸಮೀಪದ ಗಾಣದಪಡು³ನಲ್ಲಿರುವ ಅರಣ್ಯ ಇಲಾಖೆಯ ನಿವೇಶನದಲ್ಲಿ ಸುಮಾರು 25 ಲಕ್ಷ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಾಣಗೊಂಡ ಬಂಟ್ವಾಳ ವಲಯ ಅರಣ್ಯಾಧಿಕಾರಿ ಕಚೇರಿ ಕಟ್ಟಡವು ಸೆ. 24ರಂದು ಉದ್ಘಾಟನೆಗೊಳ್ಳಲಿದ್ದು, ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಸರಳ ಸಮಾರಂಭದಲ್ಲಿ ನೂತನ ಕಟ್ಟಡವನ್ನು ಲೋಕಾರ್ಪಣೆಗೊಳಿಸಲಿದ್ದಾರೆ.

ವಲಯ ಅರಣ್ಯಾಧಿಕಾರಿ ಹಳೆ ಕಚೇರಿಯು ಗಾಣದಪಡು³ವಿನಲ್ಲಿ ಹಾಲಿ ನೂತನವಾಗಿ ನಿರ್ಮಾಣಗೊಂಡಿರುವ ಕಟ್ಟಡದ ಸ್ಥಳದಲ್ಲೇ ನಿರ್ಮಾಣಗೊಂಡಿದ್ದು, ಹಳೆ ಕಟ್ಟಡವನ್ನು ಕೆಡವಿ ಅರಣ್ಯ ಇಲಾಖೆ ಯಿಂದ ಮಂಜೂರಾದ 25 ಲಕ್ಷ ರೂ.ಗಳಲ್ಲಿ ನಿರ್ಮಾಣಗೊಂಡಿತ್ತು. ಹಳೆ ಕಟ್ಟಡವನ್ನು ಕೆಡವಿದ ಹಿನ್ನೆಲೆಯಲ್ಲಿ ಹಾಲಿ ವಲಯ ಅರಣ್ಯಾಧಿಕಾರಿ ಕಚೇರಿಯು ಹಾಲಿ ಬಿ.ಸಿ.ರೋಡು ಸಮೀಪದ ತಲಪಾಡಿ ಯಲ್ಲಿರುವ ಅರಣ್ಯ ಇಲಾಖಾ ಸಿಬಂದಿಯ ವಸತಿ ಗೃಹದಲ್ಲಿ ಕಾರ್ಯಾಚರಿಸುತ್ತಿತ್ತು.

ಹೆದ್ದಾರಿಗಾಗಿ ಕಟ್ಟಡ ಏರಿಕೆ
ಗಾಣದಪಡು³ನಲ್ಲಿ ಬಿ.ಸಿ.ರೋಡು- ಧರ್ಮಸ್ಥಳ ಹೆದ್ದಾರಿಯ ಅಂಚಿನಲ್ಲಿರುವ ಅರಣ್ಯ ಇಲಾಖೆಯ 12 ಸೆಂಟ್ಸ್‌ ನಿವೇಶನದಲ್ಲಿ ನೂತನ ಕಟ್ಟಡ ನಿರ್ಮಾಣ ವಾಗುತ್ತಿದ್ದು, ಈ ಭಾಗದಲ್ಲಿ ಹೆದ್ದಾರಿಯು ಚತುಷ್ಪಥಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ನೂತನ ವಲಯ ಅರಣ್ಯಾಧಿಕಾರಿ ಕಚೇರಿ ಕಟ್ಟಡವನ್ನು ಹೆದ್ದಾರಿಯಿಂದ ಏರಿಕೆ ಮಾಡಿ ನಿರ್ಮಿಸಲಾಗಿದೆ. ಅಂದರೆ ಚತುಷ್ಪಥದ ಸಂದರ್ಭ ಹೆದ್ದಾರಿಯನ್ನು ಏರಿಸಿದರೂ ಕಟ್ಟಡಕ್ಕೆ ಯಾವುದೇ ತೊಂದರೆ ಯಾಗಬಾರದು ಎಂಬ ದೂರದೃಷ್ಟಿಯಿಂದ ಈ ರೀತಿ ನಿರ್ಮಿಸಲಾಗಿದೆ.

ನೂತನ ಕಟ್ಟಡವು ಮಹಡಿಯಿಲ್ಲದೆ ನೆಲ ಅಂತಸ್ತಿನಲ್ಲೇ ನಿರ್ಮಾಣವಾಗ ಬೇಕಿದ್ದರೂ, ಹೆದ್ದಾರಿಯ ಕಾರಣಕ್ಕೆ 30×40 ಅಂದರೆ 1,200 ಚದರ ಅಡಿ ವಿಸ್ತೀರ್ಣದ 2 ಫ್ಲೋರ್‌ಗಳು ನಿರ್ಮಾಣ ವಾಗಿವೆ. ಅಂದರೆ ತಳ ಭಾಗದಲ್ಲಿ ಪಾರ್ಕಿಂಗ್‌ ವ್ಯವಸ್ಥೆ ಮಾಡಲಾಗಿದ್ದು, ಮೇಲ್ಭಾಗದಲ್ಲಿ ಕಚೇರಿ ಇರುತ್ತದೆ.
ಈ ರೀತಿಯ ಬದಲಾವಣೆಯ ಹಾಗೂ ಆವರಣ ಗೋಡೆ, ಇಂಟರ್‌ಲಾಕ್‌ ವ್ಯವಸ್ಥೆ ಹೀಗೆ ಹೆಚ್ಚುವರಿ ಖರ್ಚಿನ ಹಿನ್ನೆಲೆಯಲ್ಲಿ ಪ್ರಾರಂಭದ 25 ಲಕ್ಷ ರೂ.ಗಳು ಕಡಿಮೆಯಾಗುತ್ತಿರುವ ಕಾರಣದಿಂದ 5 ಲಕ್ಷ ರೂ.ಗಳ ಹೆಚ್ಚುವರಿ ಅನುದಾನಕ್ಕಾಗಿ ವಲಯ ಕಚೇರಿಯು ಅರಣ್ಯ ಇಲಾಖೆಗೆ ಮನವಿ ಮಾಡಿದೆ. ಪ್ರಾರಂಭದ 25 ಲಕ್ಷ ರೂ.ಗಳಲ್ಲಿ 20 ಲಕ್ಷ ರೂ.ಗಳು ಗುತ್ತಿಗೆದಾರರ ಕೈ ಸೇರಿದೆ ಎಂದು ಮೂಲಗಳು ತಿಳಿಸಿವೆ.

ದಸರಾ ಬಳಿಕ ಶಿಫ್ಟ್‌
ಬಂಟ್ವಾಳ ವಲಯ ಅರಣ್ಯಾಧಿಕಾರಿ ಯವರ ನೂತನ ಕಚೇರಿ ಕಟ್ಟಡ ಪ್ರಸ್ತುತ ಉದ್ಘಾಟನೆಗೊಂಡರೂ, ಕಚೇರಿಯು ದಸರಾ ಹಬ್ಬ ಮುಗಿದ ಬಳಿಕವೇ ತಾತ್ಕಾಲಿಕ ವ್ಯವಸ್ಥೆಯಿಂದ ಹೊಸ ಕಟ್ಟಡಕ್ಕೆ ಸ್ಥಳಾಂತರಗೊಳ್ಳಲಿದೆ. ಹೊಸ ಕಚೇರಿಯ ಸಣ್ಣಪುಟ್ಟ ಕೆಲಸ ಕಾರ್ಯಗಳು ಮುಗಿದ ಬಳಿಕ ಧಾರ್ಮಿಕ ವಿಧಿ ವಿಧಾನಗಳ ಮೂಲಕ ಕಚೇರಿಯ ಅಧಿಕೃತ ಪ್ರವೇಶ ನಡೆಯಲಿದೆ ಎಂದು ಕಚೇರಿ ಮೂಲಗಳು ತಿಳಿಸಿವೆ.

 ಹೆಚ್ಚುವರಿ ಅನುದಾನಕ್ಕೆ ಪ್ರಸ್ತಾವನೆ
ಬಂಟ್ವಾಳ ವಲಯ ಅರಣ್ಯ ಕಚೇರಿಯ ಹಳೆ ಕಟ್ಟಡವನ್ನು ಕೆಡವಿ ಹೊಸ ಕಟ್ಟಡ ನಿರ್ಮಾಣಗೊಂಡು ಸರಳ ರೀತಿಯಲ್ಲಿ ಉದ್ಘಾಟನೆಗೊಳ್ಳುತ್ತದೆ. ಹೊಸ ಕಟ್ಟಡಕ್ಕೆ ಪ್ರಾರಂಭದಲ್ಲಿ 25 ಲಕ್ಷ ರೂ.ಗಳು ಮಂಜೂರಾಗಿದ್ದು, ಆದರೆ ಕೆಲವೊಂದು ಹೆಚ್ಚುವರಿ ನಿರ್ಮಾಣಗಳಿಂದ ಹಿಂದಿನ ಅನುದಾನ ಕೊರತೆಯಾಗಿದ್ದು, 5 ಲಕ್ಷ ರೂ. ಹೆಚ್ಚುವರಿ ಅನುದಾನಕ್ಕೆ ಪ್ರಸ್ತಾವನೆ ಸಲ್ಲಿಸಿದ್ದೇವೆ. ವಲಯ ಕಚೇರಿಯು ದಸರಾ ಹಬ್ಬದ ಬಳಿಕ ತಾತ್ಕಾಲಿಕ ವ್ಯವಸ್ಥೆಯಿಂದ ಹೊಸ ಕಟ್ಟಡಕ್ಕೆ ಸ್ಥಳಾಂತರಗೊಳ್ಳಲಿದೆ.
– ಬಿ. ಸುರೇಶ್‌, ವಲಯ ಅರಣ್ಯಾಧಿಕಾರಿ, ಬಂಟ್ವಾಳ

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Uppinangady ಬೆಂಕಿ ಅವಘಡ: ಭಾರೀ ನಷ್ಟ

Uppinangady ಮನೆಗೆ ಆಕಸ್ಮಿಕ ಬೆಂಕಿ: ಭಾರೀ ನಷ್ಟ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.