ದಸರಾ ನೋಡಬರುವ ಪ್ರವಾಸಿಗರಿಗೆ ಹಳ್ಳಿತಿಂಡಿ ರುಚಿ


Team Udayavani, Sep 24, 2019, 3:07 AM IST

CT-Ravi

ಬೆಂಗಳೂರು: ವಿವಿಧ ಭಾಗಗಳಿಂದ ಮೈಸೂರು ದಸರಾ ವೀಕ್ಷಣೆಗೆ ಬರುವ ಪ್ರವಾಸಿಗರಿಗೆ ಹಳ್ಳಿ ತಿಂಡಿ ರುಚಿ ತೋರಿಸಲು ಹಾಗೂ ಗ್ರಾಮೀಣ ಸಂಸ್ಕೃತಿ ಪರಿಚಯಿಸಲು ರಾಮನಗರ ಹಾಗೂ ಮಂಡ್ಯ ಜಿಲ್ಲೆಯಲ್ಲಿ ವಿಶೇಷ ಕಾರ್ಯಕ್ರಮ ರೂಪಿಸಲಾಗಿದೆ ಎಂದು ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದಸರಾ ವೇಳೆ ರಾಮನಗರದಲ್ಲಿ ಹೆದ್ದಾರಿಯ ಎರಡೂ ಕಡೆ ಹಳ್ಳಿ ತಿಂಡಿ ಸವಿಯುವ ವ್ಯವಸ್ಥೆ ಇರಲಿದೆ. ತಟ್ಟೆ ಇಡ್ಲಿ ಸಹಿತ ಬಹು ಬಗೆಯ ತಿನಿಸುಗಳು ಮಳಿಗೆಗಳಲ್ಲಿ ಸಿಗಲಿವೆ. ಮಾಂಸಾಹಾರ ತಿಂಡಿಗಳೂ ಇರುತ್ತವೆ ಎಂದು ಹೇಳಿದರು.

ಮಂಡ್ಯದ ಗ್ರಾಮವೊಂದನ್ನು ಆಯ್ಕೆ ಮಾಡಿ ಅಲ್ಲಿ ಪ್ರವಾಸಿಗರು ಗ್ರಾಮೀಣ ಸಂಸ್ಕೃತಿಯ ಅನುಭವ ಪಡೆದುಕೊಳ್ಳಬಹುದು. ಎತ್ತಿನ ಗಾಡಿಯಲ್ಲಿ ಸವಾರಿ, ಕಬ್ಬು ತಿನ್ನುವುದು, ಕೆಸರು ಗದ್ದೆಯಲ್ಲಿ ನಡೆಯುವ ಹಗ್ಗ ಜಗ್ಗಾಟ ಸ್ಪರ್ಧೆಯಲ್ಲಿ ಭಾಗಿಯಾಗಬಹುದು, ನೇಗಿಲು ಹಿಡಿದು ಬೇಸಾಯವನ್ನೂ ಮಾಡಬಹುದು ಎಂದು ತಿಳಿಸಿದರು.

ಈ ಉದ್ದೇಶಕ್ಕೆ ಸ್ಥಳೀಯರ ನೆರವು ಪಡೆಯಲಾಗುವುದು. ಎರಡೂ ಜಿಲ್ಲೆಗಳಿಗೆ ಇದಕ್ಕಾಗಿಯೇ ತಲಾ 15 ಲಕ್ಷ ರೂ. ಬಿಡುಗಡೆ ಮಾಡಲಾಗಿದೆ. ಮೈಸೂರು ದಸರಾ ಪ್ರಯುಕ್ತ ನಮ್ಮ ಇಲಾಖೆಯಿಂದ 5.90 ಕೋಟಿ ರೂ. ಬಿಡುಗಡೆ ಮಾಡಲಾಗಿದ್ದು ಕ್ವಿಜ್‌, ಗಾಳಿಪಟ ಉತ್ಸವ, ಪಾರಂಪರಿಕ ಕ್ರೀಡೆ, ಮತ್ಸ್ಯ ಮೇಳ ಸೇರಿದಂತೆ ಹಲವು ಕಾರ್ಯಕ್ರಮ ನಡೆಯಲಿದೆ ಎಂದು ಹೇಳಿದರು.

ಕುಂಭ ಮೇಳದ ಮಾದರಿಯಲ್ಲಿ ನನ್ನ ನಗರ-ನನ್ನ ಕಲ್ಪನೆ ಎಂಬ ಚಿತ್ರಕಲೆ ಬಿಡಿಸುವ ಸ್ಪರ್ಧೆಯೂ ಆಯೋಜಿಸಲಾಗುವುದು. ರಾಜ್ಯದ ಪ್ರವಾಸೋದ್ಯಮದ ಜತೆಗೆ ಭಾರತೀಯ ಪ್ರವಾಸೋದ್ಯಮಕ್ಕೂ ಉತ್ತೇಜನ ಕೊಡಲಾಗುವುದು ಎಂದು ಮಾಹಿತಿ ನೀಡಿದರು. ಹಾಲಿ ಪ್ರವಾಸೋದ್ಯಮ ನೀತಿ 2020ಕ್ಕೆ ಅಂತ್ಯಗೊಳ್ಳಲಿದ್ದು ನಂತರ ಹೊಸ ನೀತಿ ಬರಲಿದ್ದು ಈಗಾಗಲೇ ಇನ್ಫೋಸಿಸ್‌ನ ಸುಧಾಮೂರ್ತಿ ನೇತೃತ್ವದ ಕಾರ್ಯಪಡೆ ಹಲವು ಸಲಹೆ ಸೂಚನೆ ನೀಡಿದೆ ಎಂದು ಹೇಳಿದರು.

ಕಾಶ್ಮೀರದಲ್ಲಿ ಸಾಂಸ್ಕೃತಿಕ ಕೇಂದ್ರ: ಜಮ್ಮು-ಕಾಶ್ಮೀರದಲ್ಲಿ ಕರ್ನಾಟಕದ ಸಾಂಸ್ಕೃತಿಕ ಕೇಂದ್ರ ಸ್ಥಾಪಿಸಲು ನಿರ್ಧರಿಸಲಾಗಿದ್ದು, ಅಲ್ಲಿ ಕೆಎಸ್‌ಟಿಡಿಸಿ ಹೋಟೆಲ್‌ ಪ್ರಾರಂಭಿಸುವ ಉದ್ದೇಶವೂ ಇದೆ. ಈ ಸಂಬಂಧ ಅಲ್ಲಿನ ರಾಜ್ಯಪಾಲರಿಗೆ ಪತ್ರ ಬರೆಯಲಾಗಿದೆ. ಅವರ ಉತ್ತರ ಬಂದ ಬಳಿಕ ಮುಂದಿನ ಪ್ರಕ್ರಿಯೆ ಆರಂಭಿಸಲಾಗುವುದು ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಸಚಿವ ಸಿ.ಟಿ.ರವಿ ಅವರನ್ನು ಭೇಟಿಯಾದ ಒಡಿಶಾ ಪ್ರವಾಸೋದ್ಯಮ ಸಚಿವ ಜ್ಯೋತಿಪ್ರಕಾಶ್‌ ಪಾಣಿಗ್ರಾಹಿ, ಕೋನಾರ್ಕ್‌ ಉತ್ಸವಕ್ಕೆ ಆಹ್ವಾನಿಸಿದರು. ಒಡಿಶಾ ಪ್ರವಾಸೋದ್ಯಮ ಸಂಬಂಧ ಆಯೋಜಿಸಿದ್ದ ರೋಡ್‌ ಶೋದಲ್ಲಿ ಭಾಗಿಯಾಗಲು ಬೆಂಗಳೂರಿಗೆ ಬಂದಿದ್ದ ಅವರು, ಸಚಿವ ರವಿ ಅವರೊಂದಿಗೆ ಕೆಲ ಕಾಲ ಸಮಾಲೋಚನೆ ನಡೆಸಿದರು.

ಪ್ರವಾಸೋದ್ಯಮ ವಿಚಾರದಲ್ಲಿ ಪರಸ್ಪರ ಸಹಕಾರಕ್ಕೆ ಮಾತುಕತೆ ನಡೆಸಲಾಯಿತು. ಮೈಸೂರು ದಸರಾಕ್ಕೆ ಆಗಮಿಸುವಂತೆ ಒಡಿಶಾ ಸಚಿವರಿಗೂ ಸಿ.ಟಿ.ರವಿ ಅವರು ಆಹ್ವಾನ ನೀಡಿದರು. ಮೂಲತಃ ಐಟಿ ಎಂಜಿನಿಯರ್‌ ಆಗಿರುವ ಜ್ಯೋತಿಪ್ರಕಾಶ್‌ ಪಾಣಿಗ್ರಾಹಿ, ಬೆಂಗಳೂರಿನಲ್ಲಿ ತಾವು ಈ ಹಿಂದೆ ನೌಕರಿ ಮಾಡಿದ್ದನ್ನು ನೆನಪಿಸಿಕೊಂಡರು.

ಟಾಪ್ ನ್ಯೂಸ್

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.