ಪ್ರವಾಹದಿಂದ ಮನೆ ಹಾನಿ: ಕರಾವಳಿಗೆ 20 ಕೋ.ರೂ. ನೆರವು


Team Udayavani, Sep 24, 2019, 5:53 AM IST

f-43

ಮಂಗಳೂರು: ಪ್ರವಾಹದಿಂದ ಮನೆ ಕಳೆದುಕೊಂಡವರಿಗಾಗಿ ದ.ಕ. ಜಿಲ್ಲೆಗೆ 15 ಕೋ.ರೂ. ಮತ್ತು ಉಡುಪಿ ಜಿಲ್ಲೆಗೆ 5 ಕೋ.ರೂ. ಸೇರಿದಂತೆ ಒಟ್ಟು 20 ಕೋ.ರೂ.ಗಳನ್ನು ರಾಜ್ಯ ಸರಕಾರ ಬಿಡುಗಡೆ ಮಾಡಿದೆ.

ಜಿಲ್ಲಾಡಳಿತದ ಪ್ರಕಾರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 944 ಮನೆಗಳು ಮತ್ತು ಉಡುಪಿಯಲ್ಲಿ 675 ಮನೆಗಳು ಪ್ರವಾಹ ಕಾರಣದಿಂದ ಸಂಪೂರ್ಣ/ಭಾಗಶಃ ಮತ್ತು ಅಲ್ಪಸ್ವಲ್ಪ ಹಾನಿಗೊಳಗಾಗಿವೆ.

ಸಂಪೂರ್ಣ ಮನೆ ಹಾನಿಗೆ (ಶೇ.75 ಕ್ಕಿಂತ ಅಧಿಕ ಪ್ರಮಾಣ) ಒಟ್ಟು 5 ಲಕ್ಷ ರೂ. ನಾಲ್ಕು ಕಂತುಗಳಲ್ಲಿ ದೊರೆಯ ಲಿದೆ. ಆರಂಭಿಕ ಹಂತದಲ್ಲಿ 1 ಲಕ್ಷ ರೂ., ತಳಪಾಯಕ್ಕೆ 1.50 ಲಕ್ಷ ರೂ., ಛಾವಣಿ ಹಂತದಲ್ಲಿ 1.50 ಲಕ್ಷ ರೂ. ಮತ್ತು ಪೂರ್ಣವಾಗುವಾಗ 1 ಲಕ್ಷ ರೂ. ದೊರೆಯಲಿದೆ. ಮನೆ ನಿರ್ಮಾಣವಾಗುವವರೆಗೆ ಮೊದಲ ಕಂತಿನ ಬಾಡಿಗೆಯಾಗಿ 5 ಸಾವಿರ ರೂ.ಗಳನ್ನು 10 ತಿಂಗಳವರೆಗೆ ಅಥವಾ ತಾತ್ಕಾಲಿಕ ಶೆಡ್‌ ನಿರ್ಮಾಣಕ್ಕೆ 50 ಸಾವಿರ ರೂ.ನೀಡಲಾಗುತ್ತದೆ.

ಭಾಗಶಃ ಹಾನಿಗೆ ಆರಂಭಿಕ ಹಂತದಲ್ಲಿ 25 ಸಾವಿರ ಮತ್ತು ಮನೆ ಪೂರ್ಣ ಗೊಳ್ಳುವಾಗ 75 ಸಾವಿರ ಸೇರಿ 2 ಕಂತುಗಳಲ್ಲಿ 1 ಲಕ್ಷ ರೂ. ದೊರೆಯ ಲಿದೆ. ಅಲ್ಪಸ್ವಲ್ಪ ಹಾನಿಗೆ 25 ಸಾವಿರ ರೂ. ನೀಡಲಾಗುತ್ತದೆ ಎಂದು ದ.ಕ. ಜಿ.ಪಂ. ಸಿಇಒ ಆರ್‌. ಸೆಲ್ವಮಣಿ “ಉದಯವಾಣಿ’ಗೆ ತಿಳಿಸಿದ್ದಾರೆ.

ವಸತಿ ನಿಗಮ ಮೂಲಕ ಬಿಡುಗಡೆ
ಜಿಲ್ಲಾಧಿಕಾರಿಗಳು ಬೇಡಿಕೆಗೆ ಅನುಗುಣವಾಗಿ ರಾಜೀವ್‌ ಗಾಂಧಿ ವಸತಿ ನಿಗಮಕ್ಕೆ ಹಣ ಬಿಡುಗಡೆ ಮಾಡಲಿದ್ದಾರೆ. ಹಾನಿಯಾದ ಮನೆಗಳ ಅರ್ಹ ಜಿಪಿಎಸ್‌ ಛಾಯಾ ಚಿತ್ರಗಳ ಆಧಾರದ ಮೇಲೆ ನಿಗಮದಿಂದ ಸಂತ್ರಸ್ತರ ಬ್ಯಾಂಕ್‌ ಖಾತೆಗೆ ನೇರವಾಗಿ ಬಿಡುಗಡೆ ಮಾಡಲಾಗುತ್ತದೆ. ಸಂತ್ರಸ್ತರ ಅರ್ಜಿಗಳನ್ನು ವಸತಿ ನಿಗಮದ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್‌ ಮಾಡಲಾಗಿದೆ. ಇದಕ್ಕೆ ಡಿಸಿ ಅನುಮೋದನೆ ಮತ್ತು ಫಲಾನುಭವಿಗಳ ಜಿಪಿಎಸ್‌ ಫೋಟೋ ತೆಗೆದು ಆಡಿಟ್‌ಗಾಗಿ ತಹಶೀಲ್ದಾರ್‌ಗೆ ಕಳುಹಿಸುವ ಪ್ರಕ್ರಿಯೆ ಕೊನೆಯ ಹಂತದಲ್ಲಿದೆ. ಅಲ್ಲಿ ಒಪ್ಪಿಗೆ ದೊರೆತ ತತ್‌ಕ್ಷಣ ಫಲಾನುಭವಿಗಳಿಗೆ ನಿಗಮದಿಂದ ಆದೇಶ ಪತ್ರ ದೊರೆಯಲಿದೆ. ಕೆಲವರಿಗೆ ಈಗಾಗಲೇ ಸಿಕ್ಕಿದೆ ಎಂದು ಮಂಗಳೂರು ತಹಶೀಲ್ದಾರ್‌ ಗುರುಪ್ರಸಾದ್‌ ತಿಳಿಸಿದ್ದಾರೆ.

10 ತಿಂಗಳೊಳಗೆ ಮನೆ ಪೂರ್ಣ; ಸೂಚನೆ
ಫಲಾನುಭವಿಯು ಸ್ವತಃ ಮನೆ ಪುನರ್‌ ನಿರ್ಮಾಣ/ದುರಸ್ತಿ ಮಾಡಬೇಕು. ಕನಿಷ್ಠ 350 ಚದರ ಅಡಿಗೆ ಕಡಿಮೆ ಇಲ್ಲದಂತೆ, ತಿಂಗಳೊಳಗೆ ತಳಪಾಯ ಆರಂಭಿಸಿ ಗರಿಷ್ಠ 10 ತಿಂಗಳೊಳಗೆ ಪೂರ್ಣಗೊಳಿಸಬೇಕು. ಭಾಗಶಃ/ಅಲ್ಪಸ್ವಲ್ಪ ಹಾನಿಯಾದ ಮನೆಯ ದುರಸ್ತಿಯನ್ನು ತಿಂಗಳೊಳಗೆ ಪೂರ್ಣಗೊಳಿಸಬೇಕು. ನಿಗದಿತ ಸಮಯದಲ್ಲಿ ಇದು ಸಾಧ್ಯವಾಗದಿದ್ದರೆ ಅನುದಾನ ವಾಪಸಾಗುತ್ತದೆ. ಡಿಆರ್‌ಐ ಬಡ್ಡಿ ದರದಲ್ಲಿ ಸ್ಥಳೀಯ ಬ್ಯಾಂಕ್‌ಗಳಿಂದ ಸಾಲ ಪಡೆಯಲು ಅವಕಾಶವಿದ್ದು, ಗ್ರಾ.ಪಂ/ಸ್ಥಳೀಯ ಸಂಸ್ಥೆಯನ್ನು ಸಂಪರ್ಕಿಸಬಹುದು ಎಂದು ನಿಗಮ ತಿಳಿಸಿದೆ.

13 ಜಿಲ್ಲೆಗಳಿಗೆ 1 ಸಾವಿರ ಕೋ.ರೂ. ಬಿಡುಗಡೆ
ನೆರೆಯಿಂದ ತೀವ್ರ ಹಾನಿಯಾದ ಮನೆಗಳ ನಿರ್ಮಾಣಕ್ಕಾಗಿ ರಾಜ್ಯದ 13 ಜಿಲ್ಲೆಗಳ ಜಿಲ್ಲಾಧಿಕಾರಿಗಳ ಖಾತೆಗೆ 1 ಸಾವಿರ ಕೋ.ರೂ.ಗಳನ್ನು ಸರಕಾರ ಬಿಡುಗಡೆ ಮಾಡಿದೆ. ಬೆಳಗಾವಿ ಜಿಲ್ಲೆಗೆ ಅತೀ ಹೆಚ್ಚು, 500 ಕೋ.ರೂ., ಚಿಕ್ಕಮಗಳೂರಿಗೆ 25 ಕೋ.ರೂ., ಕೊಡಗಿಗೆ 25 ಕೋ.ರೂ., ಉತ್ತರ ಕನ್ನಡಕ್ಕೆ 30 ಕೋ.ರೂ. ಬಿಡುಗಡೆ ಆಗಿದೆ.

ದ.ಕ: 15 ಕೋ.ರೂ. ಬಿಡುಗಡೆ
ನೆರೆ ಹಾನಿ ಮನೆಗಳ ಪುನರ್‌ ನಿರ್ಮಾಣಕ್ಕಾಗಿ ದ.ಕ. ಜಿಲ್ಲೆಗೆ ಸರಕಾರ 15 ಕೋ.ರೂ. ಬಿಡುಗಡೆ ಮಾಡಿದೆ. ಹಾನಿಯಾದ ಮನೆಗಳ ಅರ್ಹ ಜಿಪಿಎಸ್‌ ಛಾಯಾಚಿತ್ರಗಳ ಆಧಾರದ ಮೇಲೆ ಅನುದಾನವನ್ನು ಸಂತ್ರಸ್ತರಿಗೆ ರಾಜೀವ್‌ ಗಾಂಧಿ ವಸತಿ ನಿಗಮದ ಮೂಲಕ ನೀಡಲಾಗುವುದು. – ಸಿಂದೂ ಬಿ. ರೂಪೇಶ್‌, ದ.ಕ. ಜಿಲ್ಲಾಧಿಕಾರಿ

-ದಿನೇಶ್‌ ಇರಾ

ಟಾಪ್ ನ್ಯೂಸ್

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.