ತಹಶೀಲ್ದಾರ್ ಕಚೇರಿಯಲ್ಲೇ ಆಧಾರ್ ತಿದ್ದುಪಡಿ
Team Udayavani, Sep 24, 2019, 12:54 PM IST
ಹೊನ್ನಾವರ: ತಾಲೂಕಿನ ಆಧಾರ ಸಮಸ್ಯೆಯಿಂದ ರಸ್ತೆ ಪಕ್ಕದಲ್ಲಿ ನಿಂತು ಸಮಸ್ಯೆ ಉದ್ಭವಿಸಿತ್ತು. ಇದನ್ನು ಗಂಭೀರವಾಗಿ ಪರಿಗಣಿಸಿದ ಶಾಸಕ ದಿನಕರ ಶೆಟ್ಟಿ ಸ್ಥಳಕ್ಕೆ ಘಟನೆಯ ದಿನವೇ ಭೇಟಿ ನೀಡಿ ಪರಿಶೀಲನೆ ಮಾಡುವ ಮೂಲಕ ಸಮಸ್ಯೆ ಶೀಘ್ರ ಬಗೆಹರಿಸುವ ಭರವಸೆ ನೀಡಿದ್ದರು.
ಮಾರನೇ ದಿನವೇ ತಹಶೀಲ್ದಾರ್ ಕಚೇರಿಗೆ ಭೇಟಿ ನೀಡಿ ಸಮಸ್ಯೆ ಕುರಿತು ಅಧ್ಯಯನ ನಡೆಸಿ ಜಿಲ್ಲಾಡಳಿತಕ್ಕೆ ಖಡಕ್ ಆದೇಶ ನೀಡಿ ಸಮಯವಕಾಶ ನೀಡಿದ್ದರು. ಮೂರು ತಿಂಗಳಿನಿಂದ ಸಮಸ್ಯೆ ಬಗ್ಗೆ ತಲೆ ಕೆಡಿಸಿಕೊಳ್ಳದ ಜಿಲ್ಲಾಡಳಿತ ಕೂಡಲೇ ಸಮಸ್ಯೆ ಬಗೆಹರಿಸುವ ಪ್ರಯತ್ನ ನಡೆಸಿ ಸೂಕ್ತ ವ್ಯವಸ್ಥೆ ಕಲ್ಪಿಸುವ ಭರವಸೆ ನೀಡಿತ್ತು.
ಮತ್ತೆ ಸೋಮವಾರ ಭೇಟಿ ನೀಡಿ ಪರಿಶೀಲನೆ ನಡೆಸಿದ ಶಾಸಕರು ಒಂದು ಘಟಕ ವ್ಯವಹರಿಸುವ ವಿಧಾನ ಪರಿಶೀಲನೆ ನಡೆಸಿದರು. ಅಲ್ಲದೇ ಇನ್ನೊಂದು ಘಟಕದ ಅಗತ್ಯತೆ ಜೊತೆ ತೆರೆಯಲು ಮೀನಾಮೇಷ ವ್ಯಕ್ತಪಡಿಸುವ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡು 2 ದಿನ ಕಾಲವಕಾಶ ನೀಡಿದರು.
ಈ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ ಹೊನ್ನಾವರದ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ ಇನ್ನೊಮ್ಮೆ ಉದ್ಭವಿಸದಂತೆ ವ್ಯವಸ್ಥೆ ಕಲ್ಪಿಸುತ್ತಿದ್ದೇನೆ. ಈಗಾಗಲೇ ತಹಶೀಲ್ದಾರ ಕಚೇರಿಯಲ್ಲಿ ಒಂದು ಘಟಕ ತೆರೆದಿದ್ದು ಇನ್ನೆರಡು ದಿನದಲ್ಲಿ ಮತ್ತೂಂದು ಘಟಕ ಆರಂಭವಾಗಲಿದೆ ಎಂದರು.
ಹೊನ್ನಾವರದ ಸಮಸ್ಯೆ ಕೂಡಲೇ ಬಗೆಹರಿಸುವುದಕ್ಕೆ ಸಾರ್ವಜನಿಕರು ಹರ್ಷ ವ್ಯಕ್ತಪಡಿಸಿದ್ದು ಮುಂದಿನ ದಿನದಲ್ಲಿ ಆಧಾರ್ ಸಮಸ್ಯೆ ಉದ್ಭವಿಸದಂತೆ ತಿಳಿಸಿದರು. ಪಪಂ ಸದಸ್ಯರಾದ ಶಿವರಾಜ ಮೇಸ್ತ, ವಿ.ಜು. ಕಾಮತ್, ಮೇದಾ ನಾಯ್ಕ, ನಿಶಾ ಶೇಟ್, ಮಹೇಶ ಮೆಸ್ತ, ಗ್ರಾಪಂ ಅಧ್ಯಕ್ಷ ಟಿ.ಎಸ್. ಹೆಗಡೆ, ಸುರೇಶ ಶೆಟ್ಟಿ, ಮುಖಂಡರಾದ ರಾಜುಭಂಡಾರಿ, ಎಂ.ಎಸ್. ಹೆಗಡೆ ಮತ್ತಿತರರುಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
MUST WATCH
ಹೊಸ ಸೇರ್ಪಡೆ
Tragedy: ತನ್ನ ಅಪಾರ್ಟ್ಮೆಂಟ್ನಲ್ಲೇ ನೇಣಿಗೆ ಶರಣಾದ ಭೋಜ್ಪುರಿ ನಟಿ… ಕಾರಣ ನಿಗೂಢ
B.Y. Raghavendra: ಕಾಂಗ್ರೆಸ್ನವರ ಬಳಿ ಗ್ಯಾರಂಟಿ ಅಡ್ವಾನ್ಸ್ ಹಣ ಕೇಳಿ: ಬಿವೈಆರ್
Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ
Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ
Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ