ವೀರಶೈವ ಸಮಾಜ ಹೊಡೆಯಲು ಬಂದವರು ಕೈ ಸುಟ್ಟುಕೊಂಡಿದ್ದಾರೆ
Team Udayavani, Sep 24, 2019, 2:17 PM IST
ಚಿತ್ರದುರ್ಗ: ವೀರಶೈವ ಸಮಾಜ ಹೊಡೆಯುವ ಕೆಲಸಕ್ಕೆ ಕೈ ಹಾಕಿದವರು ಕೈ ಸುಟ್ಟುಕೊಂಡಿದ್ದಾರೆ ಎಂದು ಮಾಜಿ ಸಚಿವ ಹಾಗೂ ವೀರಶೈವ ಮಹಾಸಭಾ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಹೇಳಿದರು.
ಸಿರಿಗೆರೆ ತರಳಬಾಳು ಮಠದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ನಾನು ವೀರಶೈವ ಮಹಾಸಭಾ ಅಧ್ಯಕ್ಷನಾಗಬೇಕು ಎಂಬ ಪ್ರಸ್ತಾಪ ಬಂದಾಗ ನಿರಾಕರಿಸಿದ್ದೆ. ಈ ಬಗ್ಗೆ ಸಿರಿಗೆರೆ ಗುರುಗಳ ಬಳಿ ಹೇಳಿದಾಗ ಜವಾಬ್ದಾರಿ ತೆಗೆದುಕೊಳ್ಳಲು ಸೂಚಿಸಿದರು.
ಮಹಾಸಭಾ ಅಧ್ಯಕ್ಷನಾದ ನಂತರ ಜಗಳ ಪ್ರಾರಂಭ ಆಯ್ತು. ವೀರಶೈವ ಸಮಾಜ ಹೊಡೆಯುವ ಕೆಲಸ ಮಾಡಿದರು. ಈ ಕೆಲಸ ಮಾಡಿ ಯಾರು ಕೈ ಸುಟ್ಟುಕೊಂಡಿದ್ದಾರೆ ಎನ್ನುವುದು ನಿಮಗೆ ಗೊತ್ತಿದೆ ಎಂದು ಸಭಿಕರಿಗೆ ಹೇಳಿದರು.
ವೀರಶೈವರು ಒಳಪಂಗಡಗಳನ್ನು ಮರೆತು ಎಲ್ಲರೂ ಒಂದೇ ಎಂಬ ಭಾವನೆ ಹೊಂದಬೇಕು ಎಂದರು.
ಈ ಹಿಂದೆ ನಡೆದ ಜನಗಣತಿಯಂತೆ ರಾಜ್ಯದಲ್ಲಿ 2 ಕೋಟಿ ವೀರಶೈವರಿದ್ದೆವು. ಆದರೆ, ಇತ್ತೀಚೆಗೆ ಎಲ್ಲ ಒಳಪಂಗಡಗಳ ಹೆಸರು ಬರೆಸಿ 80 ಲಕ್ಷಕ್ಕೆ ಬಂದಿದ್ದೇವೆ. ಮುಂದಿನ ದಿನಗಳಲ್ಲಿ ವೀರಶೈವ ಎಂದು ಬರೆಯಿಸಿ ಒಗ್ಗಟ್ಟು ಪ್ರದರ್ಶಿಸಬೇಕು ಎಂದು ಮನವಿ ಮಾಡಿದರು.
ಸಿರಿಗೆರೆ ತರಳಬಾಳು ಡಾ.ಶ್ರೀ. ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಕೆರೆಗಳಿಗೆ ನೀರು ತುಂಬಿಸಿದಂತೆ, ವೀರಶೈವ ಒಳಪಂಗಡಗಳನ್ನು ಒಂದುಗೂಡಿಸುವ ಕೆಲಸ ಮಾಡಿದರೆ ನಮಗೆ ಹೆಮ್ಮೆ ಎಂದು ಶಾಮನೂರು ಅಭಿಪ್ರಾಯಪಟ್ಟರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
MUST WATCH
ಹೊಸ ಸೇರ್ಪಡೆ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ