ನಮ್ಮ ತಂಟೆಗೆ ಬರಬೇಡಿ

ಪೈರಸಿ ಹಿನ್ನೆಲೆ, ಚಿತ್ರಮಂದಿರ ಸಮಸ್ಯೆ ಹಿನ್ನೆಲೆ- ಪರಭಾಷಿಗರಿಗೆ ಗಣೇಶ್‌ ಎಚ್ಚರಿಕೆ

Team Udayavani, Sep 25, 2019, 3:05 AM IST

GANESH

“ನನ್ನ ಸಿನಿಮಾ ತಂಟೆಗೆ ಬೇರೆ ಯಾರೂ ಕೈ ಹಾಕಬೇಡಿ. ನಿಮ್ಮ ಪಾಡಿಗೆ ನೀವಿರಿ, ನಮ್ಮ ಪಾಡಿಗೆ ನಾವಿರ್ತೀವಿ. ಹಾಗೇನಾದ್ರೂ ಬಂದರೆ, ಯಾರೇ ಇದ್ದರೂ ಸರಿ ಕಠಿಣ ಕಾನೂನು ಕ್ರಮ ಎದುರಿಸಬೇಕಾಗುತ್ತದೆ…’ ಹೀಗೆ ಖಡಕ್‌ ಆಗಿ ಎಚ್ಚರಿಕೆ ಕೊಟ್ಟಿದ್ದು ನಟ ಗಣೇಶ್‌. ಅವರು ಈ ರೀತಿ ಮಾತನಾಡೋಕೆ ಕಾರಣ ಅವರ ಅಭಿನಯದ “ಗೀತಾ’ ಚಿತ್ರ. ಹೌದು, “ಗೀತಾ’ ಸೆ.27 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಅಂದು ಪರಭಾಷೆಯ ಚಿತ್ರಗಳೂ ಬಿಡುಗಡೆಯಾಗುತ್ತಿವೆ.

ಕರ್ನಾಟಕದಲ್ಲಿರುವ ಚಿತ್ರಮಂದಿರಗಳಲ್ಲಿ ತೆರೆಕಾಣುತ್ತಿರುವ “ಗೀತಾ’ ಚಿತ್ರಕ್ಕೆ ಯಾರೂ ಅಡ್ಡಿಪಡಿಸಬಾರದು. ಹಾಗೇನಾದರೂ ಅಡ್ಡಿಯಾದರೆ, ಮುಂದಿನ ಪರಿಣಾಮ ಎದುರಿಸಬೇಕಾಗುತ್ತೆ ಎಂಬರ್ಥದಲ್ಲಿ ಗಣೇಶ್‌ ಗುಡುಗಿದ್ದಾರೆ. “ಗೀತಾ’ ಅಪ್ಪಟ ಕನ್ನಡ ಸಿನಿಮಾ. ಅದರಲ್ಲೂ ಗೋಕಾಕ್‌ ಚಳವಳಿ ಹಿನ್ನೆಲೆಯಲ್ಲಿ ಮೂಡಿಬಂದಿರುವ ಚಿತ್ರ. ಚಿತ್ರದ ಟ್ರೇಲರ್‌ ನೋಡಿದವರಿಗೆ ಸಿನಿಮಾದೊಳಗಿರುವ ಕನ್ನಡತನದ ಬಗ್ಗೆ ಗೊತ್ತಾಗುತ್ತದೆ.

“ಗೀತಾ’ ಚಿತ್ರ ಬಿಡುಗಡೆಯಾಗಲಿರುವ ಚಿತ್ರಮಂದಿರಗಳಲ್ಲಿ ಪರಭಾಷೆ ಚಿತ್ರಗಳು ಬರಲು ಪ್ರಯತ್ನಿಸಿದರೆ, ಸಮಸ್ಯೆಯಾಗುತ್ತದೆ ಎಂಬುದು ಗಣೇಶ್‌ ಮಾತು. ಅವರೇ ಹೇಳುವಂತೆ, “ನಮ್ಮ ಚಿತ್ರದ ತಂಟೆಗೆ ಬರಬೇಡಿ. “ಗೀತಾ’ ನನ್ನ ಮನಸ್ಸಿನಲ್ಲಿರುವ ಚಿತ್ರ. ಬಹಳ ಇಷ್ಟಪಟ್ಟು ಮಾಡಿರುವ ಚಿತ್ರ. ಹಾಗೊಂದು ವೇಳೆ, ಚಿತ್ರಕ್ಕೆ ತೊಂದರೆ ಮಾಡಿದರೆ, ಅದು ಯಾರೇ ಆಗಿರಲಿ, ಕಾನೂನು ಕ್ರಮ ಎದುರಿಸಬೇಕಾಗುತ್ತದೆ. ಇದು ಎಚ್ಚರಿಕೆಯ ಮಾತು’ ಎಂದಿದ್ದಾರೆ ಗಣೇಶ್‌.

“ನಮ್ಮೊಂದಿಗೆ ಕನ್ನಡ ಚಿತ್ರಗಳು ಬರಲಿ. ತೊಂದರೆ ಇಲ್ಲ. ಆದರೆ, ದಯವಿಟ್ಟು, ಕನ್ನಡ ಸಿನಿಮಾಗಳಿಗೆ ಕೈ ಹಾಕಬೇಡಿ. ನಾವು ಮೊದಲಿನಿಂದಲೂ ಪರಭಾಷೆಯ ಚಿತ್ರಗಳ ಜೊತೆಯಲ್ಲಿ ಸ್ಪರ್ಧೆ ಮಾಡಿಕೊಂಡು ಬಂದಿದ್ದೇವೆ. ನಿಮ್ಮ ಪಾಡಿಗೆ ನೀವು ಬನ್ನಿ, ನಮ್ಮ ಪಾಡಿಗೆ ನಾವು ಇರುತ್ತೇವೆ. ಆದರೆ, ನಮ್ಮ ಸಿನಿಮಾ ತಂಟೆಗೆ ಬರಬೇಡಿ’ ಎಂದರು ಗಣೇಶ್‌. ಇನ್ನು, “ಗೀತಾ’ ಚಿತ್ರ ಸದ್ಯಕ್ಕೆ ರಾಜ್ಯದ 160 ಚಿತ್ರಮಂದಿರಗಳು, 60 ಕ್ಕೂ ಹೆಚ್ಚು ಮಲ್ಟಿಪ್ಲೆಕ್ಸ್‌ಗಳಲ್ಲಿ ಬಿಡುಗಡೆಯಾಗುತ್ತಿದೆ.

ವಿದೇಶದಲ್ಲೂ ಚಿತ್ರ ತೆರೆ ಕಾಣುತ್ತದೆ. ಆದರೆ, ಈಗಲೇ ಬಿಡುಗಡೆ ಮಾಡುವುದಿಲ್ಲ. ಮೂರು ವಾರಗಳ ಬಳಿಕ ಅಲ್ಲಿ ರಿಲೀಸ್‌ ಮಾಡುತ್ತೇವೆ ಎನ್ನುತ್ತಾರೆ ಗಣೇಶ್‌. “ಶೇ.15, 20 ರಷ್ಟು ಮಾತ್ರ ಆಲ್ಲಿ ವರ್ಕೌಟ್‌ ಆಗುತ್ತಿದೆ. ಅಲ್ಲಿ ಹಂಗೆ, ಹಿಂಗೆ ಅಂತ ಹೇಳಿಕೊಳ್ಳುವುದು ಸರಿ ಇರೋದಿಲ್ಲ. ಹಾಗಾಗಿ, ಇಲ್ಲಿ ಬಿಡುಗಡೆ ನಂತರ ಅಲ್ಲಿ ನೋಡಿಕೊಂಡು ಪ್ಲಾನ್‌ ಮಾಡ್ತೀವಿ. ದಯವಿಟ್ಟು, ಯಾರೂ ನಮ್ಮ ಚಿತ್ರಮಂದಿರಗಳಿಗೆ ಕೈ ಹಾಕಬೇಡಿ.

ಹಾಗೊಂದು ವೇಳೆ ಬಂದರೆ, ಚಿತ್ರಮಂದಿರ ಮುಂದೆ ಪ್ರತಿಭಟನೆ ನಡೆಯುತ್ತೆ’ ಎಂಬ ಎಚ್ಚರಿಕೆ ಕೊಟ್ಟ ಗಣೇಶ್‌, ಸದ್ಯಕ್ಕೆ ಪೈರಸಿ ಬಗ್ಗೆಯೂ ಗಮನಹರಿಸಿದ್ದೇವೆ. ಆ ಕುರಿತು, ಏನೆಲ್ಲಾ ಮಾಡಬೇಕೋ, ಯಾರಿಗೆಲ್ಲಾ ಮುಂಚಿತವಾಗಿಯೇ ಕ್ರಮ ಕೈಗೊಳ್ಳಬೇಕು ಎಂಬ ಕುರಿತು ಮನವಿ ಮಾಡಲಾಗಿದೆ ಎನ್ನುತ್ತಾರೆ ಗಣೇಶ್‌.

ಟಾಪ್ ನ್ಯೂಸ್

Salaar: ಜಪಾನ್‌ನಲ್ಲಿ ಈ ತಿಂಗಳು ತೆರೆಕಾಣಲಿದೆ ಪ್ರಭಾಸ್‌ – ಪ್ರಶಾಂತ್‌ ನೀಲ್‌  ʼಸಲಾರ್‌ʼ

Salaar: ಜಪಾನ್‌ನಲ್ಲಿ ಈ ತಿಂಗಳು ತೆರೆಕಾಣಲಿದೆ ಪ್ರಭಾಸ್‌ – ಪ್ರಶಾಂತ್‌ ನೀಲ್‌ ʼಸಲಾರ್‌ʼ

12-uv-fusion

Spray fans: ಬಿಸಿ ಗಾಳಿಯೂ ತಂಪಾಯ್ತು

ಕಳ್ಳರು & ದರೋಡೆಕೋರರ ಗ್ಯಾಂಗ್‌ ಚುಚ್ಚಿದ್ದ ವಿಷಕ್ಕೆ ಪೊಲೀಸ್‌ ಕಾನ್ಸ್‌ ಟೇಬಲ್‌ ಮೃತ್ಯು

ಕಳ್ಳರು & ದರೋಡೆಕೋರರ ಗ್ಯಾಂಗ್‌ ಚುಚ್ಚಿದ್ದ ವಿಷಕ್ಕೆ ಪೊಲೀಸ್‌ ಕಾನ್ಸ್‌ ಟೇಬಲ್‌ ಮೃತ್ಯು

ಗುಜರಾತ್ ನಿಂದ ಓಡಿ ಹೋದ 12 ಉದ್ಯಮಿಗಳ ಬಗ್ಗೆ ಮಾತನಾಡಿ: ಮೋದಿಗೆ ಲಾಡ್ ಸವಾಲು

Dharwad; ಗುಜರಾತ್ ನಿಂದ ಓಡಿ ಹೋದ 12 ಉದ್ಯಮಿಗಳ ಬಗ್ಗೆ ಮಾತನಾಡಿ: ಮೋದಿಗೆ ಲಾಡ್ ಸವಾಲು

Kidnapped: ಹಾಡ ಹಗಲೇ ಮಹಿಳೆಯಿಂದ ಹೋಟೆಲ್ ಮಾಲೀಕನ ಮಗನ ಅಪಹರಣ: CCTVಯಲ್ಲಿ ದೃಶ್ಯ ಸೆರೆ

Kidnapped: ಹಾಡ ಹಗಲೇ ಮಹಿಳೆಯಿಂದ ಹೋಟೆಲ್ ಮಾಲೀಕನ ಮಗನ ಅಪಹರಣ: CCTVಯಲ್ಲಿ ದೃಶ್ಯ ಸೆರೆ

11-plastic

Eco-friendly Bio Plastic: ಪರಿಸರ ಸ್ನೇಹಿ ಮೆಕ್ಕೆಜೋಳದ ಬಯೋ ಪ್ಲಾಸ್ಟಿಕ್‌

16-uv-fusion

Aranthodu: ವಾಹನಗಳ ಮಧ್ಯೆ ಸರಣಿ ಅಪಘಾತ; ಬೈಕ್ ಸವಾರ ಗಂಭೀರ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

jasti preethi kannada movie

Jasti Preethi; ಫೇಸ್ ಬುಕ್ ಪೋಸ್ಟ್ ಸಿನಿಮಾವಾಯಿತು..

Sandalwood: ಪ್ರೇಕ್ಷಕಳಾಗಿ ಕಾಂಗರೂ ನನಗೆ ಇಷ್ಟವಾಯಿತು..

Sandalwood: ಪ್ರೇಕ್ಷಕಳಾಗಿ ಕಾಂಗರೂ ನನಗೆ ಇಷ್ಟವಾಯಿತು..

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Raichur Lok Sabha Constituency: ಬಿಸಿಲೂರಿನಲ್ಲಿ ಕಾವೇರಿದ “ನಾಯಕ’ತ್ವದ ಹೋರಾಟ

Raichur Lok Sabha Constituency: ಬಿಸಿಲೂರಿನಲ್ಲಿ ಕಾವೇರಿದ “ನಾಯಕ’ತ್ವದ ಹೋರಾಟ

13-uv-fusion

UV Fusion: ನಾವು ನಮಗಾಗಿ ಬದುಕುತ್ತಿರುವುದು ಎಷ್ಟು ಹೊತ್ತು?

Salaar: ಜಪಾನ್‌ನಲ್ಲಿ ಈ ತಿಂಗಳು ತೆರೆಕಾಣಲಿದೆ ಪ್ರಭಾಸ್‌ – ಪ್ರಶಾಂತ್‌ ನೀಲ್‌  ʼಸಲಾರ್‌ʼ

Salaar: ಜಪಾನ್‌ನಲ್ಲಿ ಈ ತಿಂಗಳು ತೆರೆಕಾಣಲಿದೆ ಪ್ರಭಾಸ್‌ – ಪ್ರಶಾಂತ್‌ ನೀಲ್‌ ʼಸಲಾರ್‌ʼ

12-uv-fusion

Spray fans: ಬಿಸಿ ಗಾಳಿಯೂ ತಂಪಾಯ್ತು

ಕಳ್ಳರು & ದರೋಡೆಕೋರರ ಗ್ಯಾಂಗ್‌ ಚುಚ್ಚಿದ್ದ ವಿಷಕ್ಕೆ ಪೊಲೀಸ್‌ ಕಾನ್ಸ್‌ ಟೇಬಲ್‌ ಮೃತ್ಯು

ಕಳ್ಳರು & ದರೋಡೆಕೋರರ ಗ್ಯಾಂಗ್‌ ಚುಚ್ಚಿದ್ದ ವಿಷಕ್ಕೆ ಪೊಲೀಸ್‌ ಕಾನ್ಸ್‌ ಟೇಬಲ್‌ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.