ನುಡಿದಂತೆ ನಡೆದ ಪ್ರಧಾನಿ ನರೇಂದ್ರ ಮೋದಿ


Team Udayavani, Sep 25, 2019, 3:00 AM IST

nudidante

ಚಾಮರಾಜನಗರ: ಭಾರತದ ಏಕತೆ ಮತ್ತು ಸಾರ್ವಭೌಮತೆಗಾಗಿ ಒಂದೇ ಸಂವಿಧಾನ ಎಂಬ ಧ್ಯೇಯ ವಾಕ್ಯದಡಿಯಲ್ಲಿ 370 ಕಲಂ ರದ್ದುಪಡಿಸಿರುವುದು ಉತ್ತಮ ನಡೆಯಾಗಿದ್ದು, ಪ್ರಧಾನಿ ನರೇಂದ್ರ ಮೋದಿ ದೇಶದ ಜನರ ಆಶಯವನ್ನು ಈಡೇರಿಸಿದ್ದಾರೆ ಎಂದು ಸಂಸದ ವಿ.ಶ್ರೀನಿವಾಸಪ್ರಸಾದ್‌ ಹೇಳಿದರು. ನಗರದ ಶಿವಕುಮಾರಸ್ವಾಮಿ ಭವನದಲ್ಲಿ ಜಿಲ್ಲಾ ಬಿಜೆಪಿ ವತಿಯಿಂದ ಏರ್ಪಡಿಸಿದ್ದ ರಾಷ್ಟ್ರೀಯ ಏಕತಾ ಅಭಿಯಾನ, 370ನೇ ವಿಧಿ ರದ್ದತಿ ಬಗ್ಗೆ ನಡೆದ ಜನ ಜಾಗೃತಿ ಸಭೆ ಉದ್ಘಾಟಿಸಿ ಮಾತನಾಡಿದರು.

ಕಳೆದ 70 ವರ್ಷಗಳಿಂದ ಜಾರಿಯಲ್ಲಿದ್ದ ತಾತ್ಕಾಲಿಕ ಕಾಯ್ದೆಯನ್ನು ರದ್ದುಪಡಿಸುವ ಧೈರ್ಯವನ್ನು ಯಾರೂ ಮಾಡಲಿಲ್ಲ. ಆದರೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿರುವಂತೆ ಅಧಿಕಾರಕ್ಕೆ ಬಂದ ಕೇವಲ 70 ದಿನದಲ್ಲೇ 370ನೇ ವಿಧಿ ರದ್ದು ಪಡಿಸಿ, ಜಮ್ಮು ಕಾಶ್ಮೀರ ಭಾರತದ ಅವಿಭಾಜ್ಯ ಅಂಗ ಎಂದು ಸಾರಿತ್ತು. ಈ ಅವಧಿಯಲ್ಲಿ ನಾನು ಸಂಸತ್‌ ಸದಸ್ಯನಾಗಿ ವಿಧಿ ರದ್ದತಿ ಪರವಾಗಿ ಮತ ಚಲಾಯಿಸಲು ಅವಕಾಶ ದೊರೆತಿರುವುದು ನನ್ನ ಪುಣ್ಯ ಎಂದು ಕೊಳ್ಳುತ್ತೇನೆ ಎಂದರು.

ಅಂಬೇಡ್ಕರ್‌ ಆಶಯವು ಸಹ ಈಡೇರಿದೆ: ಬಾಬಾ ಸಾಹೇಬ್‌ ಅಂಬೇಡ್ಕರ್‌ ಸಹ 370ನೇ ವಿಧಿಯ ವಿಶೇಷ ಸ್ಥಾನಮಾನ ನೀಡುವ ಕಾಯ್ದೆ ಜಾರಿಗೆ ವಿರೋಧ ವ್ಯಕ್ತಪಡಿಸಿದ್ದರು. ಅವರು ಕಾನೂನು ಮಂತ್ರಿಯಾಗಿ ಇದನ್ನು ವಿರೋಧಿಸುವ ಜೊತೆಗೆ ಪ್ರಜಾಪ್ರಭುತ್ವ ಹಾಗೂ ಸಂವಿಧಾನದ ಆಶಯಕ್ಕೆ ವಿರುದ್ಧವಾಗಿದೆ. ಎರಡು ಸಂವಿಧಾನ, ಎರಡು ಧ್ವಜ ಬೇಡ ಎಂದು ವಾದಿಸಿದ್ದರು. ಪ್ರಧಾನಿಯಾಗಿದ್ದ ನೆಹರು ಅವರು ಅಂದಿನ ಸನ್ನಿವೇಶವನ್ನು ಎದುರಿಸುವ ಸಲುವಾಗಿ ತಾತ್ಕಾಲಿಕವಾಗಿ ಈ ಕಾಯ್ದೆಯನ್ನು ಅನುಷ್ಠಾನ ಮಾಡಿದ್ದರು. ಒಲ್ಲದ ಮನಸ್ಸಿನಿಂದ ತಾತ್ಕಾಲಿಕ ಕಾಯ್ದೆ ಎಂದು ಅಂಬೇಡ್ಕರ್‌ ಅನುಮೋದನೆ ಮಾಡಿದ್ದರು. ಹೀಗಾಗಿ ಇಂದು ಈ ಕಾಯ್ದೆಯನ್ನು ಸಂಸತ್‌ನಲ್ಲಿಟ್ಟು ಸಲೀಸಾಗಿ ರದ್ದುಪಡಿಸಲು ಸಾಧ್ಯವಾಯಿತು. ಹೀಗಾಗಿ ಅಂಬೇಡ್ಕರ್‌ ಅವರ ಆಶಯವು ಸಹ ಈಡೇರಿದಂತಾಗಿದೆ ಎಂದರು.

ಜಮ್ಮು ಕಾಶ್ಮೀರದ ಅಭಿವೃದ್ಧಿಗೆ ವಿಶೇಷ ಒತ್ತು: ಆ. 5 ರಂದು ಕಾಯ್ದೆಯನ್ನು ರದ್ದುಪಡಿದ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರು ಸ್ವಾತಂತ್ರೋತ್ಸವದ ಭಾಷಣದಲ್ಲಿ ಜಮ್ಮು ಕಾಶ್ಮೀರದ ಅಭಿವೃದ್ಧಿಗೆ ವಿಶೇಷ ಒತ್ತು ನೀಡಿದ್ದಾರೆ. ಸಾವಿರಾರು ಕೋಟಿ ರೂ.ಗಳ ಯೋಜನೆಗಳನ್ನು ಪ್ರಕಟಿಸುವ ಮೂಲಕ ಬದ್ಧತೆಯನ್ನು ಪ್ರದರ್ಶನ ಮಾಡಿದ್ದಾರೆ. ಜಮ್ಮು ಮತ್ತು ಕಾಶ್ಮೀರ, ಲಡಾಖ್‌ ಪ್ರದೇಶಗಳ ಜನರ ಆರ್ಥಿಕ ಮಟ್ಟ ಸುಧಾರಣೆ ಮತ್ತು ಪ್ರವಾಸೋದ್ಯಮ ಬೆಳವಣಿಗೆ ಹೆಚ್ಚಿನ ಒತ್ತು ನೀಡಿರುವುದು ಹೆಮ್ಮೆ ತಂದಿದೆ. ಇನ್ನು ಐದು ವರ್ಷಗಳು ದೇಶ ಸಮಗ್ರ ಅಭಿವೃದ್ಧಿಯಾಗಲಿದೆ. ಅಮೆರಿಕಾ ದೇಶವೇ ನಮ್ಮ ದೇಶದ ಪ್ರಧಾನಿ ಮೋದಿ ಅವರನ್ನು ಅಪ್ಪಿ ಬರ ಕೊಂಡಿದ್ದಾರೆ ಎಂದು ತಿಳಿಸಿದರು.

ದೇಶಕ್ಕೆ ಒಳ್ಳೆಯದಾಗಿದೆ: ರಾಜ್ಯ ಬಿಜೆಪಿ ವಕ್ತಾರೆ ತೇಜಸ್ವಿನಿಗೌಡ ಮಾತನಾಡಿ, ಕಳೆದ 70 ವರ್ಷಗಳಿಂದ ಕಾಂಗ್ರೆಸ್‌ ಮಾಡಿಕೊಂಡು ಬಂದಿದ್ದ ತಪ್ಪು ನಿರ್ಧಾರವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಕೇವಲ 7 ನಿಮಿಷದಲ್ಲಿ ತೆಗೆದು ಹಾಕಿದ್ದಾರೆ. ಇಂಥ ಕಠಿಣ ನಿರ್ಧಾರವನ್ನು ಅವರು ತೆಗೆದುಕೊಳ್ಳಲು ನೀವು ನೀಡಿದ ಒಂದು ಮತ ಕಾರಣ. ಯಾರು ಏನೇ ಹೇಳಲಿ ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನ ಕಾಯಿದೆಯನ್ನು ರದ್ದು ಮಾಡುವ ಮೂಲಕ ದೇಶಕ್ಕೆ ಒಳ್ಳೆಯದಾಗಿದೆ ಎಂಬುದನ್ನು ಎಲ್ಲರು ಅರ್ಥ ಮಾಡಿಕೊಳ್ಳೋಣ ಎಂದರು.

ಮೋದಿ ನಿರ್ಧಾರ ಸ್ವಾಗತಿಸಿದ ನಾಗರಿಕರು: ಅಂದಿನ ಪ್ರಧಾನಿ ನೆಹರು ಅವರು ಆಡಳಿತದಲ್ಲಿ ಮೃದು ಧೋರಣೆಯಿಂದಾಗಿ ಇಂದು ದೇಶ ಈ ಪರಿಸ್ಥಿತಿಯನ್ನು ಎದುರಿಸಬೇಕಾಗಿದೆ. ಗಡಿಯಲ್ಲಿ ಭಯೋತ್ಪಾದನೆ ಚಟುವಟಿಕೆಗಳು ಹೆಚ್ಚಾಗಿದ್ದವು. ಸೈನಿಕರು, ನಾಗರಿಕರ ಪ್ರಾಣ ಹಾನಿಯಾದವು. ಆರ್ಥಿಕತೆಯ ಮೇಲೆ ಕೆಟ್ಟ ಪರಿಣಾಮ ಬೀರಿತ್ತು. ಶತ್ರು ರಾಷ್ಟ್ರಗಳು ಇನ್ನೂ ಹೆಚ್ಚಿನ ಪ್ರಬಲವಾಗಲು ದೇಶವನ್ನು ಹೆಚ್ಚು ವರ್ಷಗಳ ಕಾಲ ಆಳಿದ ಕಾಂಗ್ರೆಸ್‌ ಪಕ್ಷ ಕಾರಣವಾಗಿದೆ. ಪ್ರತಿಯೊಬ್ಬ ನಾಗರಿಕನು ಸಹ ಪ್ರಧಾನಿ ನರೇಂದ್ರ ಮೋದಿ ಅವರ ನಿರ್ಧಾರವನ್ನು ಸ್ವಾಗತಿಸಿದ್ದಾನೆ. ಕಣಿವೆಯಲ್ಲಿ ಕಾಂಗ್ರೆಸ್‌ ಹಾಗೂ ಇತರೇ ಪಕ್ಷಗಳು ಹೇಳಿದಂತೆ ಯಾವುದೇ ರೀತಿಯ ರಕ್ತಪಾತವಾಗಲಿಲ್ಲ ಎಂದು ಹೇಳಿದರು.

ಬಿಜೆಪಿ ಜಿಲ್ಲಾಧ್ಯಕ್ಷ ಪೊ›. ಕೆ.ಆರ್‌. ಮಲ್ಲಿಕಾರ್ಜುನಪ್ಪ, ಶಾಸಕ ಸಿ.ಎಸ್‌. ನಿರಂಜನ್‌ಕುಮಾರ್‌, ಅಭಿಯಾನದ ಸಂಚಾಲಕ ವೆಂಕಟರಮಣಸ್ವಾಮಿ, ಸಹ ಸಂಚಾಲಕ ಮಾಂಬಳ್ಳಿ ನಂಜುಂಡಸ್ವಾಮಿ, ಮಾಜಿ ಶಾಸಕರಾದ ಸಿ. ಗುರುಸ್ವಾಮಿ, ಜಿ.ಎನ್‌. ನಂಜುಂಡಸ್ವಾಮಿ, ಪರಿಮಳಾನಾಗಪ್ಪ, ಮುಖಂಡರಾದ ನಿಜಗುಣರಾಜು, ಡಾ.ಎ.ಆರ್‌.ಬಾಬು, ಕೂಡೂರು ಹನುಮಂತಶೆಟ್ಟಿ, ನಾರಾಯಣಪ್ರಸಾದ್‌ ಇತರರು ಇದ್ದರು.

ಟಾಪ್ ನ್ಯೂಸ್

Randeep Surjewala ಚಿತ್ರಕಥೆ, ಡಿಕೆಶಿ ನಿರ್ಮಾಪಕ: ಅಶೋಕ್‌

Randeep Surjewala ಚಿತ್ರಕಥೆ, ಡಿಕೆಶಿ ನಿರ್ಮಾಪಕ: ಆರ್‌. ಅಶೋಕ್‌

Prajwal ಪತ್ತೆಗೆ ಎಸ್‌ಐಟಿ ತಂಡ ವಿದೇಶಕ್ಕೆ ಯಾನ?8 ಅಧಿಕಾರಿಗಳ ತಂಡ ಪ್ರಯಾಣ ಸಾಧ್ಯತೆ

Prajwal ಪತ್ತೆಗೆ ಎಸ್‌ಐಟಿ ತಂಡ ವಿದೇಶಕ್ಕೆ ಯಾನ?8 ಅಧಿಕಾರಿಗಳ ತಂಡ ಪ್ರಯಾಣ ಸಾಧ್ಯತೆ

HD ರೇವಣ್ಣಗೆ ಹೊಟ್ಟೆನೋವು, ಎದೆಯುರಿ: ಆಸ್ಪತ್ರೆಗೆ ದಾಖಲು

HD ರೇವಣ್ಣಗೆ ಹೊಟ್ಟೆನೋವು, ಎದೆಯುರಿ: ಆಸ್ಪತ್ರೆಯಲ್ಲಿ ಚಿಕಿತ್ಸೆ

Loksabha; 3ನೇ ಹಂತದಲ್ಲಿ ಶೇ.61.66ರಷ್ಟು ಮತದಾನ; ಶಾ ಕ್ಷೇತ್ರದಲ್ಲಿ ಮೋದಿ ವೋಟಿಂಗ್‌

Loksabha; 3ನೇ ಹಂತದಲ್ಲಿ ಶೇ.61.66ರಷ್ಟು ಮತದಾನ; ಶಾ ಕ್ಷೇತ್ರದಲ್ಲಿ ಮೋದಿ ವೋಟಿಂಗ್‌

Puttur ಜಾನಪದ ವಿದ್ವಾಂಸ ಡಾ| ಪಾಲ್ತಾಡಿ ಇನ್ನಿಲ್ಲ

Puttur ಜಾನಪದ ವಿದ್ವಾಂಸ ಡಾ| ಪಾಲ್ತಾಡಿ ಇನ್ನಿಲ್ಲ

ಆಯೋಗದ ಮತದಾನ ಮಾಹಿತಿಯಲ್ಲಿ ಲೋಪವಿದೆ, ಧ್ವನಿಯೆತ್ತಿ: ಖರ್ಗೆ ಪತ್ರ

Loksabha election; ಆಯೋಗದ ಮತದಾನ ಮಾಹಿತಿಯಲ್ಲಿ ಲೋಪವಿದೆ, ಧ್ವನಿಯೆತ್ತಿ: ಖರ್ಗೆ ಪತ್ರ

ಮುಷ್ಕರ ಕೈಬಿಟ್ಟ 108 ಆ್ಯಂಬುಲೆನ್ಸ್‌ ಸಿಬಂದಿ

Karnataka ಮುಷ್ಕರ ಕೈಬಿಟ್ಟ 108 ಆ್ಯಂಬುಲೆನ್ಸ್‌ ಸಿಬಂದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap ಗುಂಡ್ಲುಪೇಟೆ: ಅಪರಿಚಿತ ವಾಹನ ಡಿಕ್ಕಿ; ಬೈಕ್ ಸವಾರ ಸಾವು

Road Mishap ಗುಂಡ್ಲುಪೇಟೆ: ಅಪರಿಚಿತ ವಾಹನ ಡಿಕ್ಕಿ; ಬೈಕ್ ಸವಾರ ಸಾವು

ಮತಗಟ್ಟೆ ಧ್ವಂಸ: ಕಾಡಲ್ಲಿ ಅವಿತಿದ್ದವರಿಗೆ ಧೈರ್ಯ ತುಂಬಿ ಗ್ರಾಮಕ್ಕೆ ಕರೆತಂದ ಅಧಿಕಾರಿಗಳು

ಮತಗಟ್ಟೆ ಧ್ವಂಸ: ಕಾಡಲ್ಲಿ ಅವಿತಿದ್ದವರಿಗೆ ಧೈರ್ಯ ತುಂಬಿ ಗ್ರಾಮಕ್ಕೆ ಕರೆತಂದ ಅಧಿಕಾರಿಗಳು

ಮಕ್ಕಳಿಗೆ ಲಸಿಕೆ: ಚಿಕ್ಕಬಳ್ಳಾಪುರ ಪ್ರಥಮ, ಚಾಮರಾಜನಗರ ದ್ವಿತೀಯ

ಮಕ್ಕಳಿಗೆ ಲಸಿಕೆ: ಚಿಕ್ಕಬಳ್ಳಾಪುರ ಪ್ರಥಮ, ಚಾಮರಾಜನಗರ ದ್ವಿತೀಯ

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Randeep Surjewala ಚಿತ್ರಕಥೆ, ಡಿಕೆಶಿ ನಿರ್ಮಾಪಕ: ಅಶೋಕ್‌

Randeep Surjewala ಚಿತ್ರಕಥೆ, ಡಿಕೆಶಿ ನಿರ್ಮಾಪಕ: ಆರ್‌. ಅಶೋಕ್‌

Prajwal ಪತ್ತೆಗೆ ಎಸ್‌ಐಟಿ ತಂಡ ವಿದೇಶಕ್ಕೆ ಯಾನ?8 ಅಧಿಕಾರಿಗಳ ತಂಡ ಪ್ರಯಾಣ ಸಾಧ್ಯತೆ

Prajwal ಪತ್ತೆಗೆ ಎಸ್‌ಐಟಿ ತಂಡ ವಿದೇಶಕ್ಕೆ ಯಾನ?8 ಅಧಿಕಾರಿಗಳ ತಂಡ ಪ್ರಯಾಣ ಸಾಧ್ಯತೆ

HD ರೇವಣ್ಣಗೆ ಹೊಟ್ಟೆನೋವು, ಎದೆಯುರಿ: ಆಸ್ಪತ್ರೆಗೆ ದಾಖಲು

HD ರೇವಣ್ಣಗೆ ಹೊಟ್ಟೆನೋವು, ಎದೆಯುರಿ: ಆಸ್ಪತ್ರೆಯಲ್ಲಿ ಚಿಕಿತ್ಸೆ

Jharkhand 32 crore discovery case: Two arrested

Jharkhand 32 ಕೋಟಿ ಪತ್ತೆ ಪ್ರಕರಣ: ಇಬ್ಬರ ಸೆರೆ

Loksabha; 3ನೇ ಹಂತದಲ್ಲಿ ಶೇ.61.66ರಷ್ಟು ಮತದಾನ; ಶಾ ಕ್ಷೇತ್ರದಲ್ಲಿ ಮೋದಿ ವೋಟಿಂಗ್‌

Loksabha; 3ನೇ ಹಂತದಲ್ಲಿ ಶೇ.61.66ರಷ್ಟು ಮತದಾನ; ಶಾ ಕ್ಷೇತ್ರದಲ್ಲಿ ಮೋದಿ ವೋಟಿಂಗ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.