ಕಾಲಮಿತಿಯಲ್ಲಿ ಟಿಡಿಆರ್‌ ಹಗರಣ ತನಿಖೆಗೆ ಆದೇಶ


Team Udayavani, Sep 25, 2019, 3:05 AM IST

highcourt4

ಬೆಂಗಳೂರು: ನಗರದ ವ್ಯಾಪ್ತಿಯಲ್ಲಿ 2007ರಿಂದ ಬಿಬಿಎಂಪಿ ಹಾಗೂ ಬಿಡಿಎ ವಿತರಣೆ ಮಾಡಿರುವ ಅಭಿವೃದ್ಧಿ ಹಕ್ಕು ವರ್ಗಾವಣೆ (ಟಿಡಿಆರ್‌) ಹಾಗೂ 2018ರಿಂದ ವಿತರಿಸಿದ ಸ್ವಾಧೀನಾನುಭವ ಪತ್ರ (ಒಸಿ) ಕುರಿತು ತನಿಖೆಗಾಗಿ ಎಸ್‌ಐಟಿ ರಚಿಸಲು ಹೈಕೋರ್ಟ್‌ ಏಕ ಸದಸ್ಯ ನ್ಯಾಯಪೀಠ ಹೊರಡಿಸಿದ್ದ ಆದೇಶವನ್ನು ವಿಭಾಗೀಯ ಪೀಠ ಮಂಗಳವಾರ ರದ್ದುಪಡಿಸಿದೆ.

ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ಪೊಲೀಸ್‌ ಅಧೀಕ್ಷಕ ಅಬ್ದುಲ್‌ ಅಹದ್‌ ನೇತೃತ್ವದಲ್ಲಿ ಎಸ್‌ಐಟಿ ರಚಿಸಲು ಹೊರಡಿಸಿದ್ದ ಏಕಸದಸ್ಯ ನ್ಯಾಯಪೀಠ ಹೊರಡಿಸಿದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯು ಮುಖ್ಯನ್ಯಾ. ಎ.ಎಸ್‌.ಓಕಾ ಹಾಗೂ ನ್ಯಾ. ಎ.ಎಸ್‌. ಕೃಷ್ಣಕುಮಾರ್‌ ಅವರಿದ್ದ ವಿಭಾಗೀಯ ನ್ಯಾಯಪೀಠದ ಮುಂದೆ ವಿಚಾರಣೆಗೆ ಬಂದಿತ್ತು.

ವಾದ-ಪ್ರತಿವಾದ ಆಲಿಸಿದ ಬಳಿಕ ರಾಜ್ಯ ಸರ್ಕಾರದ ಮೇಲ್ಮನವಿಯನ್ನು ಭಾಗಶಃ ಪುರಸ್ಕರಿಸಿದ ನ್ಯಾಯಪೀಠ, ಎಸ್‌ಐಟಿ ರಚನೆಗೆ ಏಕ ಸದಸ್ಯ ನ್ಯಾಯಪೀಠ ಜು. 26ರಂದು ಹೊರಡಿಸಿದ್ದ ಆದೇಶ ರದ್ದುಪಡಿಸಿತು. ಅಲ್ಲದೆ, ಟಿಡಿಆರ್‌ ಹಾಗೂ ಸ್ವಾಧೀನಾನುಭ ಪತ್ರ ವಿತರಣೆಯ ಹಗರಣದ ತನಿಖೆಯನ್ನು ಭ್ರಷ್ಟಾಚಾರ ನಿಗ್ರಹ ಎಸಿಬಿ ಮುಂದುವರಿಸಬೇಕು. ಆದರೆ, ತನಿಖಾಧಿಕಾರಿ ಯಾರಾಗಬೇಕೆಂಬುದನ್ನು ಎಸಿಬಿಯ ಐಜಿಪಿ ನಿರ್ಧಾರ ಮಾಡಲಿ.

ಇದು ಗಂಭೀರ ಪ್ರಕರಣವಾಗಿದ್ದು ಎಸಿಬಿ ತನಿಖೆಯನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸಬೇಕು ಎಂದು ವಿಭಾಗೀಯ ನ್ಯಾಯಪೀಠ ನಿರ್ದೇಶನ ನೀಡಿದೆ. “ಇಂತಹ ಪ್ರಕರಣಕ್ಕೆ ಇಂತಹವರೇ ತನಿಖಾಧಿಕಾರಿ ಆಗಬೇಕು, ಆ ತನಿಖಾಧಿಕಾರಿ ತನ್ನ ಮೇಲಧಿಕಾರಿಗಳಿಗೆ ತನಿಖಾ ಪ್ರಗತಿ ವರದಿ ಸಲ್ಲಿಸುವಂತಿಲ್ಲ, ಉತ್ತರಿಸುವಂತಿಲ್ಲ. ಅಲ್ಲದೇ ಮೇಲಧಿಕಾರಿಗಳು ಆ ತನಿಖಾಧಿಕಾರಿಯ ಕೆಲಸದಲ್ಲಿ ಹಸ್ತಕ್ಷೇಪ ಮಾಡುವಂತಿಲ್ಲ ಮತ್ತು

ತನಿಖಾಧಿಕಾರಿಯು ವರದಿಯನ್ನು ನ್ಯಾಯಾಲಯಕ್ಕೆ ಮಾತ್ರ ಸಲ್ಲಿಸಬೇಕು ಎಂದು ಏಕಸದಸ್ಯ ನ್ಯಾಯಪೀಠ ತನ್ನ ತೀರ್ಪಿನಲ್ಲಿ ಹೇಳಿದ್ದ ಅಂಶಗಳನ್ನು ಒಪ್ಪದ ವಿಭಾಗೀಯ ನ್ಯಾಯಪೀಠ, ಈ ರೀತಿಯ ನಿರ್ದೇಶನಗಳನ್ನು ನೀಡುವುದು ರಿಟ್‌ ನ್ಯಾಯಾಲಯದ ವ್ಯಾಪ್ತಿಗೆ ಬರುವುದಿಲ್ಲ’. ಹಾಗಾಗಿ ಏಕಸದಸ್ಯ ನ್ಯಾಯಪೀಠ 2019ರ ಜು. 26ರಂದು ಹೊರಡಿಸಿದ್ದ ಆದೇಶವನ್ನು ರದ್ದುಪಡಿಸಲಾಗಿತ್ತಿದೆ ಎಂದು ವಿಭಾಗೀಯ ನ್ಯಾಯಪೀಠ ತನ್ನ ಆದೇಶದಲ್ಲಿ ಹೇಳಿದೆ.

ಪ್ರಕರಣದಲ್ಲಿ ಕೆಲವೊಂದು ತಾಂತ್ರಿಕ ಹಾಗೂ ಕಾನೂನು ಅಂಶಗಳ ಆಧಾರದಲ್ಲಿ ಆದೇಶ ರದ್ದುಗೊಳಿಸಲಾಗುತ್ತಿದೆ. ಹಗರಣದ ಗಂಭೀರತೆಯ ಬಗ್ಗೆ ಏಕಸದಸ್ಯ ಪೀಠ ವ್ಯಕ್ತಪಡಿಸಿರುವ ಅಭಿಪ್ರಾಯಗಳನ್ನು ಸರ್ಕಾರ ಅಷ್ಟೇ ಗಂಭೀರವಾಗಿ ಪರಿಗಣಿಸಬೇಕೆಂದು ಉಲ್ಲೇಖೀಸಿದೆ.

ಪ್ರಕರಣವೇನು?: ನಗರದ ವ್ಯಾಪ್ತಿಯಲ್ಲಿ 2007ರಿಂದ 2015ರವರೆಗೆ ಬಿಬಿಎಂಪಿ ಮತ್ತು 2015ರ ನಂತರ ಬಿಡಿಎಯು ನಗರ ವ್ಯಾಪ್ತಿಯಲ್ಲಿ ನಿರ್ಮಾಣಗೊಂಡ ಬಹುಮಹಡಿ ಹಾಗೂ ಸಣ್ಣ ಕಟ್ಟಡಗಳಿಗೆ ವಿತರಣೆ ಮಾಡಿರುವ ಟಿಡಿಆರ್‌ ಹಾಗೂ 2018ರ ಜ.1ರಿಂದ ವಿತರಣೆ ಮಾಡಿರುವ ಒಸಿ ಕುರಿತು ತನಿಖೆಯನ್ನು ಪೊಲೀಸ್‌ ಅಧೀಕ್ಷಕ ಅಬ್ದುಲ್‌ ಅಹದ್‌ ಅವರ ನೇತೃತ್ವದಲ್ಲಿ ಎಸ್‌ಐಟಿ ತನಿಖೆ ಮಾಡಬೇಕು.ಆರು ತಿಂಗಳಲ್ಲಿ ತನಿಖೆ ಪೂರ್ಣಗೊಳಿಸಿ, ಕೋರ್ಟ್‌ಗೆ ವರದಿ ಸಲ್ಲಿಸಬೇಕು ಎಂದು ಏಕ ಸದಸ್ಯ ನ್ಯಾಯಪೀಠ ಜು. 26ರಂದು ಸರ್ಕಾರಕ್ಕೆ ಆದೇಶಿಸಿತ್ತು.

ಇದರ ಆಧಾರದಲ್ಲಿ ಎಸ್‌ಐಟಿ ರಚಿಸಿ ಆ.31ರಂದು ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿತ್ತು. ಆ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಹೈಕೋರ್ಟ್‌ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿತು. ಪ್ರಕರಣದ ತನಿಖೆಯನ್ನು ಎಸಿಬಿ ನಡೆಸುತ್ತಿದೆ. ತನಿಖಾ ವರದಿಯನ್ನು ಎಸಿಬಿಯ ಐಜಿಪಿಯನ್ನು ಮೀರಿ ಏಕಸದಸ್ಯ ಪೀಠಕ್ಕೆ ನೇರವಾಗಿ ಸಲ್ಲಿಸಲು ಆಗುವುದಿಲ್ಲ. ಹೀಗಾಗಿ, ಏಕಸದಸ್ಯ ನ್ಯಾಯಪೀಠದ ಆದೇಶ ರದ್ದುಪಡಿಸಬೇಕೆಂದು ಸರ್ಕಾರ ವಿಭಾಗೀಯ ಪೀಠಕ್ಕೆ ಮನವಿ ಮಾಡಿತ್ತು. ಈ ವಾದವನ್ನು ವಿಭಾಗೀಯ ಪೀಠ ಪುರಸ್ಕರಿಸಿದೆ.

ಟಾಪ್ ನ್ಯೂಸ್

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.