ಚಿನ್ಮಯಾನಂದ ಸ್ವಾಮಿ ವಿರುದ್ಧ ಲೈಂಗಿಕ ಕಿರುಕುಳ ಆರೋಪ, ಕಾನೂನು ವಿದ್ಯಾರ್ಥಿನಿ ಬಂಧನ
Team Udayavani, Sep 25, 2019, 12:17 PM IST
ಶಹಜಹಾನ್ ಪುರ್: ಬಿಜೆಪಿ ಮುಖಂಡ ಸ್ವಾಮಿ ಚಿನ್ಮಯಾನಂದ ವಿರುದ್ಧ ಅತ್ಯಾಚಾರ ಎಸಗಿರುವುದಾಗಿ ಆರೋಪಿಸಿದ್ದ ಕಾನೂನು ವಿದ್ಯಾರ್ಥಿನಿಯನ್ನು ಸುಲಿಗೆ ಆರೋಪದಡಿ ಎಸ್ ಐಟಿ ಬುಧವಾರ ಬಂಧಿಸಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಇಂದು ಬೆಳಗ್ಗೆ 23ವರ್ಷದ ಕಾನೂನು ವಿದ್ಯಾರ್ಥಿನಿಯನ್ನು ಉತ್ತರಪ್ರದೇಶದ ಮನೆಯಲ್ಲಿ ಆಕೆಯನ್ನು ವಿಶೇಷ ತನಿಖಾ ತಂಡ ಬಂಧಿಸಿದ್ದು, ವಿದ್ಯಾರ್ಥಿನಿಯನ್ನು ವೈದ್ಯಕೀಯ ತಪಾಸಣೆಗೆ ಕರೆದೊಯ್ಯಲಾಗಿದೆ ಎಂದು ವರದಿ ವಿವರಿಸಿದೆ.
ಸುಲಿಗೆ ಪ್ರಕರಣದಲ್ಲಿ ಬಂಧಿಸಲ್ಪಿಟ್ಟಿರುವ ಕಾನೂನು ವಿದ್ಯಾರ್ಥಿನಿಯನ್ನು ಪೊಲೀಸರು ಕೋರ್ಟ್ ಗೆ ಹಾಜರುಪಡಿಸಿದ್ದು, ಕೋರ್ಟ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ನೀಡಿದೆ.
ಸ್ವಾಮಿ ಚಿನ್ಮಯಾನಂದ ತನ್ನ ಮೇಲೆ ಅತ್ಯಾಚಾರ ಎಸಗಿರುವುದಾಗಿ ಆರೋಪಿಸಿ ಕಾನೂನು ವಿದ್ಯಾರ್ಥಿನಿ ದೂರು ಆಧರಿಸಿ ಸ್ವಾಮಿ ಅವರನ್ನು ಪೊಲೀಸರು ಬಂಧಿಸಿದ್ದರು. ಬಳಿಕ ನ್ಯಾಯಾಲಯ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತ್ತು. ಇದೀಗ ಕಾನೂನು ವಿದ್ಯಾರ್ಥಿನಿ ತನ್ನ ಬಳಿ 5 ಕೋಟಿ ರೂಪಾಯಿ ಹಣಕ್ಕೆ ಬೇಡಿಕೆ ಇಟ್ಟಿರುವುದಾಗಿ ಚಿನ್ಮಯಾನಂದ ಸ್ವಾಮಿ ಆರೋಪಿಸಿದ್ದರು.
ವಸೂಲಿ ಆರೋಪಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ಕಾನೂನು ವಿದ್ಯಾರ್ಥಿನಿಯ ಮೂವರು ಗೆಳೆಯರನ್ನು ಬಂಧಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ