ವಿದ್ಯಾರ್ಥಿಗಳಿಗೆ ಬಸ್ ನಿಲ್ಲಿಸದ ಚಾಲಕ ಅಮಾನತು
Team Udayavani, Sep 25, 2019, 1:05 PM IST
ಬೆಳಗಾವಿ: ಖಾನಾಪುರ ತಾಲೂಕಿನ ಬೇಕವಾಡ ಗ್ರಾಮದ ವಿದ್ಯಾರ್ಥಿಗಳು ಬಸ್ ನಿಲ್ಲಿಸಲು ಯತ್ನಿಸಿದಾಗ ಅವರ ಜೀವ ಲೆಕ್ಕಿಸದೆ ಬಸ್ ಮುನ್ನುಗ್ಗಿಸಿದ ಆರೋಪದ ಮೇಲೆ ಬಸ್ ಚಾಲಕನನ್ನು ಸೇವೆಯಿಂದ ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.
ದಾಂಡೇಲಿ -ಹಳಿಯಾಳ -ಬೆಳಗಾವಿ ಮಾರ್ಗದ (ವಾಹನ ಸಂಖ್ಯೆ ಕೆಎ 42 ಎಫ್ 1096) ಚಾಲಕ ಎಸ್ ಎಫ್ ಶೇಖ್ ಅವರನ್ನು ಅಮಾನತು ಮಾಡಿ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಧಾರವಾಡ ಗ್ರಾಮಾಂತರ ವಿಭಾಗ ಆದೇಶ ಹೊರಡಿಸಿದೆ.
ಮಂಗಳವಾರ ಮಧ್ಯಾಹ್ನದ ಅವಧಿಯಲ್ಲಿ ಬೇಕವಾಡ ಕ್ರಾಸ್ ಹತ್ತಿರ ವಿದ್ಯಾರ್ಥಿಗಳು ಬಸ್ಸಿಗಾಗಿ ಕಾಯುತ್ತಾ ನಿಂತಿದ್ದರು. ವಿದ್ಯಾರ್ಥಿಗಳು ಬಸ್ಸನ್ನು ನಿಲ್ಲಿಸುವಂತೆ ಸೂಚಿಸಿದ್ದರು ಅವರನ್ನು ಲೆಕ್ಕಿಸದೆ ನಿರ್ಲಕ್ಷ್ಯತನ ಹಾಗೂ ಬೇಜವಾಬ್ದಾರಿಯಿಂದ ಬಸ್ ಓಡಿಸಿಕೊಂಡು ಹೋಗಿದ್ದರು. ಆಗ ಓರ್ವ ವಿದ್ಯಾರ್ಥಿ ಅಪಾಯದಿಂದ ಪಾರಾಗಿದ್ದನು.
ಚಾಲಕನ ವರ್ತನೆಯನ್ನು ಖಂಡಿಸಿ ತೀವ್ರ ಪ್ರತಿಭಟನೆ ಹಾಗೂ ಆಕ್ರೋಶ ವ್ಯಕ್ಯವಾಗಿತ್ತು. ಈ ಹಿನ್ನಲೆಯಲ್ಲಿ ನಿಯಮಾವಳಿ 1972ರ ಪ್ರಕಾರ ಚಾಲಕನ ನಡತೆ ಅಶಿಸ್ತು ಮತ್ತು ದಂಡನಾರ್ಹವಾಗಿತ್ತು ಎಂದು ಪರಿಗಣಿಸಿ ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
MUST WATCH
ಹೊಸ ಸೇರ್ಪಡೆ
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್