“ಕೆಜಿಎಫ್’ ತಂಡ ಸೇರಿದ ಸಂಜಯ್‌ದತ್‌

ಹೈದರಾಬಾದ್‌ನಲ್ಲಿ ಯಶ್‌ ಜೊತೆಗೆ ಫೈಟ್‌ ಚಿತ್ರೀಕರಣದಲ್ಲಿ ಮುನ್ನಾಭಾಯ್‌ ಭಾಗಿ

Team Udayavani, Sep 26, 2019, 3:04 AM IST

KGF

ಕನ್ನಡದ “ಕೆಜಿಎಫ್-2′ ಚಿತ್ರದಲ್ಲಿ ಬಾಲಿವುಡ್‌ ನಟ ಸಂಜಯ್‌ದತ್‌ ನಟಿಸಲಿದ್ದಾರೆ ಎಂಬ ಸುದ್ದಿ ಎಲ್ಲರಿಗೂ ಗೊತ್ತು. ಆದರೆ, ಅವರು ಯಾವಾಗ “ಕೆಜಿಎಫ್’ ಚಿತ್ರ ತಂಡವನ್ನು ಸೇರಿಕೊಳ್ಳುತ್ತಾರೆ, ಅವರ ಭಾಗದ ಚಿತ್ರೀಕರಣ ಯಾವಾಗ ಅನ್ನೋದು ಕುತೂಹಲದ ಪ್ರಶ್ನೆಯಾಗಿತ್ತು. ಈಗ ಸಂಜಯ್‌ದತ್‌ ಅಧಿಕೃತವಾಗಿ “ಕೆಜಿಎಫ್-2′ ಚಿತ್ರೀಕರಣದ ಸೆಟ್‌ಗೆ ಎಂಟ್ರಿಯಾಗಿದ್ದಾರೆ. ಹೌದು, ಈಗಾಗಲೇ “ಕೆಜಿಎಫ್ -2′ ಚಿತ್ರದ ಚಿತ್ರೀಕರಣ ಜೋರಾಗಿಯೇ ನಡೆಯುತ್ತಿದೆ.

ಯಶ್‌ ಅದಾಗಲೇ ಚಿತ್ರೀಕರಣದಲ್ಲಿ ಬಿಝಿಯಾಗಿದ್ದಾರೆ. ಈಗ ಸಂಜಯ್‌ದತ್‌ ಕೂಡ ಅವರೊಂದಿಗೆ ಸೇರಿಕೊಂಡಿದ್ದಾರೆ. ಅಂದಹಾಗೆ, ಸೆ.22 ರಿಂದಲೇ ಕಡಪ ಸಮೀಪ “ಕೆಜಿಎಫ್ -2′ ಚಿತ್ರೀಕರಣ ನಡೆಯಬೇಕಿತ್ತು. ಆದರೆ, ಮಳೆ ಸುರಿದ ಕಾರಣ, ಅಲ್ಲಿಂದ ಚಿತ್ರತಂಡ ಹೈದರಾಬಾದ್‌ನ ರಾಮೋಜಿಫಿಲ್ಮ್ ಸಿಟಿಗೆ ಶಿಫ್ಟ್ ಆಗಿದೆ. ಬುಧವಾರದಿಂದ ಸಂಜಯ್‌ದತ್‌ ಅವರ ಭಾಗದ ಚಿತ್ರೀಕರಣ ಶುರುವಾಗಿದೆ.

ಹೈದರಾಬಾದ್‌ನ ರಾಮೋಜಿ ಫಿಲ್ಮ್ ಸಿಟಿಯಲ್ಲಿ “ಕೆಜಿಎಫ್ -2′ ಚಿತ್ರಕ್ಕೆ ದೊಡ್ಡ ಸೆಟ್‌ ಹಾಕಲಾಗಿದಲ್ಲದೆ, ಇದು ದೊಡ್ಡ ಶೆಡ್ನೂಲ್‌ ಆಗಿದೆ. ಚಿತ್ರದ ಪ್ರಮುಖ ಚಿತ್ರೀಕರಣದ ಭಾಗ ಇದೇ ಆಗಿರುವುದರಿಂದ ಸುಮಾರು 22 ದಿನಗಳ ಕಾಲ “ಕೆಜಿಎಫ್-2′ ಚಿತ್ರದ ಚಿತ್ರೀಕರಣದಲ್ಲಿ ಸಂಜಯ್‌ದತ್‌ ಹಾಗು ಯಶ್‌ ಭಾಗವಹಿಸುತ್ತಿದ್ದಾರೆ ಎನ್ನಲಾಗಿದೆ. ಯಶ್‌ ಹಾಗು ಸಂಜಯ್‌ದತ್‌ ನಡುವಿನ ಫೈಟ್ಸ್‌ ಕೂಡ ಇದೇ ಶೆಡ್ನೂಲ್‌ನಲ್ಲಿ ಚಿತ್ರೀಕರಣಗೊಳ್ಳಲಿದೆ.

ಈಗಾಗಲೇ ಸಂಜಯ್‌ದತ್‌ ಜೊತೆಗೆ ಹಿಂದೆ ಮುಂದೆ ನಿಲ್ಲಿಸಲು ಸುಮಾರು ಆರು ಅಡಿ ಎತ್ತರದ ಒಂದಷ್ಟು ಕಲಾವಿದರನ್ನು ಆಯ್ಕೆ ಮಾಡಲಾಗಿದೆ ಎನ್ನಲಾಗಿದೆ. ಬುಧವಾರ ಸೆಟ್‌ಗೆ ಹೋಗಿರು ಸಂಜಯ್‌ದತ್‌ ಜೊತೆಗೆ ನಿರ್ದೇಶಕ ಪ್ರಶಾಂತ್‌ ನೀಲ್‌ ಮತ್ತು ಚಿತ್ರದ ಕಾರ್ಯಕಾರಿ ನಿರ್ಮಾಪಕ ಕಾರ್ತಿಕ್‌ ಗೌಡ ಫೋಟೋವೊಣದನ್ನು ತೆಗೆಸಿಕೊಂಡಿರುವ ಫೋಟೋ ಸದ್ಯ ಸಾಮಾಜಿಕ ತಾಣದಲ್ಲಿ ಜೋರು ಸುದ್ದಿ ಮಾಡುತ್ತಿದೆ. ಬಾಲಿವುಡ್‌ನ‌ ಮುನ್ನಾಭಾಯ್‌ ಸಂಜಯ್‌ದತ್‌ ಅವರು ಈ ಚಿತ್ರದಲ್ಲಿ ಅಧೀರನ ಪಾತ್ರ ಮಾಡುತ್ತಿದ್ದಾರೆ.

ಅದೊಂದು ಮೇಜರ್‌ ಪಾತ್ರವಾಗಿದ್ದು, ಸಾಕಷ್ಟು ಭಯಾನಕವಾಗಿರಲಿದೆ ಎಂದು ಈ ಹಿಂದೆಯೇ ಸಂಜಯ್‌ದತ್‌ ಹೇಳಿದ್ದರು. ಈಗ ಎಲ್ಲರಿಗೂ ಆ ಅಧೀರನ ಪಾತ್ರ ಹೇಗಿದೆ ಎಂಬ ಕುತೂಹಲವಂತೂ ಇದೆ. ಅದಕ್ಕಾಗಿ ಸಿನಿಮಾ ಬರುವವರೆಗೂ ಕಾಯಲೇಬೇಕು. ಅಂದಹಾಗೆ, ಇದೇ ಮೊದಲ ಸಲ ಸಂಜಯ್‌ದತ್‌ ಅವರು ಕನ್ನಡಕ್ಕೆ ಎಂಟ್ರಿಕೊಟ್ಟಿದ್ದಾರೆ ಎಂಬುದು ಇನ್ನೊಂದು ವಿಶೇಷ. ಹಾಗಾಗಿ, ಸಹಜವಾಗಿಯೇ ಚಿತ್ರದ ಮೇಲೆ ಭಾರೀ ನಿರೀಕ್ಷೆ ಇದೆ.

ಟಾಪ್ ನ್ಯೂಸ್

ಅಸ್ಸಾಂನಲ್ಲಿ ಅಭಿವೃದ್ಧಿ ಒಂದನ್ನು ಬಿಟ್ಟು ಬೇರೆಲ್ಲಾ ಮಾಫಿಯಾಗಳು ನಡೆಯುತ್ತಿವೆ: ಪ್ರಿಯಾಂಕಾ

ಅಸ್ಸಾಂನಲ್ಲಿ ಅಭಿವೃದ್ಧಿ ಒಂದನ್ನು ಬಿಟ್ಟು ಬೇರೆಲ್ಲಾ ಮಾಫಿಯಾಗಳು ನಡೆಯುತ್ತಿವೆ: ಪ್ರಿಯಾಂಕಾ

Ayodhya: ಅಯೋಧ್ಯೆ ಬಾಲ ರಾಮನಿಗೆ ವಿಶೇಷ ಆರತಿ ಬೆಳಗಿದ ರಾಷ್ಟ್ರಪತಿ ಮುರ್ಮು

Ayodhya: ಅಯೋಧ್ಯೆ ಬಾಲ ರಾಮನಿಗೆ ವಿಶೇಷ ಆರತಿ ಬೆಳಗಿದ ರಾಷ್ಟ್ರಪತಿ ಮುರ್ಮು

Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ

Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ

Water Reserves: ಚಂದ್ರನ ಕುಳಿಯಲ್ಲಿ ಭಾರೀ ಪ್ರಮಾಣದ ಜಲ ರಾಶಿ!

Water Reserves: ಚಂದ್ರನ ಕುಳಿಯಲ್ಲಿ ಭಾರೀ ಪ್ರಮಾಣದ ಜಲ ರಾಶಿ!

Amith Shah: ಮೀಸಲು ಬಗ್ಗೆ ಸುಳ್ಳು ಹೇಳಬೇಡಿ: ಖರ್ಗೆಗೆ ಅಮಿತ್‌ ಶಾ ಮನವಿ

Amith Shah: ಮೀಸಲು ಬಗ್ಗೆ ಸುಳ್ಳು ಹೇಳಬೇಡಿ: ಖರ್ಗೆಗೆ ಅಮಿತ್‌ ಶಾ ಮನವಿ

ವೇಷ ಕಳಚುವ ವೇಳೆ ಹೃದಯಾಘಾತ… ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಇನ್ನಿಲ್ಲ

ವೇಷದ ಬಣ್ಣ ಕಳಚುವ ವೇಳೆ ಹೃದಯಾಘಾತ… ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಇನ್ನಿಲ್ಲ

Written Statement: ಧರ್ಮಾಧಾರಿತ ಮೀಸಲು ಜಾರಿ ಮಾಡದ ಬಗ್ಗೆ ಲಿಖೀತ ಹೇಳಿಕೆ ಕೊಡಿ: ಮೋದಿ

Written Statement: ಧರ್ಮಾಧಾರಿತ ಮೀಸಲು ಜಾರಿ ಮಾಡದ ಬಗ್ಗೆ ಲಿಖೀತ ಹೇಳಿಕೆ ಕೊಡಿ: ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಪ್ರೇಕ್ಷಕಳಾಗಿ ಕಾಂಗರೂ ನನಗೆ ಇಷ್ಟವಾಯಿತು..

Sandalwood: ಪ್ರೇಕ್ಷಕಳಾಗಿ ಕಾಂಗರೂ ನನಗೆ ಇಷ್ಟವಾಯಿತು..

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಅಸ್ಸಾಂನಲ್ಲಿ ಅಭಿವೃದ್ಧಿ ಒಂದನ್ನು ಬಿಟ್ಟು ಬೇರೆಲ್ಲಾ ಮಾಫಿಯಾಗಳು ನಡೆಯುತ್ತಿವೆ: ಪ್ರಿಯಾಂಕಾ

ಅಸ್ಸಾಂನಲ್ಲಿ ಅಭಿವೃದ್ಧಿ ಒಂದನ್ನು ಬಿಟ್ಟು ಬೇರೆಲ್ಲಾ ಮಾಫಿಯಾಗಳು ನಡೆಯುತ್ತಿವೆ: ಪ್ರಿಯಾಂಕಾ

Ayodhya: ಅಯೋಧ್ಯೆ ಬಾಲ ರಾಮನಿಗೆ ವಿಶೇಷ ಆರತಿ ಬೆಳಗಿದ ರಾಷ್ಟ್ರಪತಿ ಮುರ್ಮು

Ayodhya: ಅಯೋಧ್ಯೆ ಬಾಲ ರಾಮನಿಗೆ ವಿಶೇಷ ಆರತಿ ಬೆಳಗಿದ ರಾಷ್ಟ್ರಪತಿ ಮುರ್ಮು

Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ

Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ

Water Reserves: ಚಂದ್ರನ ಕುಳಿಯಲ್ಲಿ ಭಾರೀ ಪ್ರಮಾಣದ ಜಲ ರಾಶಿ!

Water Reserves: ಚಂದ್ರನ ಕುಳಿಯಲ್ಲಿ ಭಾರೀ ಪ್ರಮಾಣದ ಜಲ ರಾಶಿ!

Amith Shah: ಮೀಸಲು ಬಗ್ಗೆ ಸುಳ್ಳು ಹೇಳಬೇಡಿ: ಖರ್ಗೆಗೆ ಅಮಿತ್‌ ಶಾ ಮನವಿ

Amith Shah: ಮೀಸಲು ಬಗ್ಗೆ ಸುಳ್ಳು ಹೇಳಬೇಡಿ: ಖರ್ಗೆಗೆ ಅಮಿತ್‌ ಶಾ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.