ಸ್ವಹಿತಾಸಕ್ತಿ ಸಂಘರ್ಷ: ಇಂದು ದ್ರಾವಿಡ್ ವಿಚಾರಣೆ
Team Udayavani, Sep 6, 2019, 5:42 AM IST
ಮುಂಬಯಿ: ಬೆಂಗಳೂರಿನಲ್ಲಿರುವ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯ (ಎನ್ಸಿಎ) ನಿರ್ದೇಶಕರಾಗಿರುವ ರಾಹುಲ್ ದ್ರಾವಿಡ್, ಸ್ವಹಿತಾಸಕ್ತಿ ಸಂಘರ್ಷ ಪ್ರಕರಣದಲ್ಲಿ ಗುರುವಾರ ಬಿಸಿಸಿಐ ವಿಶೇಷ ವಿಚಾರಣಾಧಿಕಾರಿ ಎದುರು ಹಾಜರಾಗಲಿದ್ದಾರೆ.
ಬಿಸಿಸಿಐನ ಯಾವುದೇ ಹುದ್ದೆ ಯಲ್ಲಿರುವ ವ್ಯಕ್ತಿ, ಈ ಹುದ್ದೆಯ ಮೇಲೆ ಪ್ರಭಾವ ಬೀರುವಂತಹ ಇನ್ನೊಂದು ಹುದ್ದೆಯಲ್ಲಿರಬಾರದು. ಇದ್ದರೆ ಅದನ್ನು ಸ್ವಹಿತಾಸಕ್ತಿ ಎಂದು ಪರಿಗಣಿ ಸಲಾಗುತ್ತದೆ. ಸದ್ಯ ದ್ರಾವಿಡ್ ಎನ್ಸಿಎ ಮುಖ್ಯಸ್ಥರಾಗಿರುವುದರ ಜತೆಗೆ, ಚೆನ್ನೈ ಸೂಪರ್ ಕಿಂಗ್ಸ್ ಐಪಿಎಲ್ ತಂಡದ ಮಾಲಕ ಸಂಸ್ಥೆಯಾಗಿರುವ “ಇಂಡಿಯಾ ಸಿಮೆಂಟ್ಸ್ ಕಂಪೆನಿ’ಯ ಉಪಾ ಧ್ಯಕ್ಷರೂ ಆಗಿದ್ದಾರೆ. ಇದು ಸ್ವಹಿತಾಸಕ್ತಿ ಎಂಬ ಆರೋಪ ಕೇಳಿಬಂದಿ ರುವುದರಿಂದ ದ್ರಾವಿಡ್ ಈ ಬಗ್ಗೆ ತಮ್ಮ ನಿಲುವನ್ನು ವಿವರಿಸಲಿದ್ದಾರೆ.
ದ್ರಾವಿಡ್ ಎನ್ಸಿಎ ಹುದ್ದೆಗೆ ಏರುವ ಮುನ್ನವೇ ಇಂಡಿಯಾ ಸಿಮೆಂಟ್ಸ್ ಉಪಾಧ್ಯಕ್ಷರಾಗಿರುವುದು ಬಿಸಿಸಿಐ ಆಡಳಿತಾಧಿಕಾರಿಗಳಿಗೆ ಗೊತ್ತಿತ್ತು. ಆದರೆ ಇದನ್ನು ಸ್ವಹಿತಾಸಕ್ತಿ ಸಂಘರ್ಷವೆಂದು ಅವರು ಪರಿಗಣಿಸಿಲ್ಲ.
ಸಂಬಳ ರಹಿತ ರಜೆ
ಸದ್ಯ ದ್ರಾವಿಡ್ ಹುದ್ದೆಯಲ್ಲಿ ನೇರವಾಗಿ ಭಾಗಿಯಾಗಿಲ್ಲ. ಬದಲಿಗೆ ಸಂಬಳರಹಿತ ರಜೆ ಮೇಲಿದ್ದಾರೆ. ಆದ್ದರಿಂದ ಸ್ವಹಿತಾಸಕ್ತಿ ಸಮಸ್ಯೆ ಬಾಧಿಸು ವುದಿಲ್ಲ ಎನ್ನುವುದು ದ್ರಾವಿಡ್ ಮತ್ತು ಆಡಳಿತಾಧಿಕಾರಿಗಳ ವಾದ. ಇದನ್ನು ವಿರೋಧಿಸಿರುವ ಮಧ್ಯಪ್ರದೇಶ ಕ್ರಿಕೆಟ್ ಸಂಸ್ಥೆಯ ಆಜೀವ ಸದಸ್ಯ ಸಂಜೀವ್ ಗುಪ್ತಾ, ಬಿಸಿಸಿಐ ವಿಚಾರಣಾಧಿಕಾರಿ ಡಿ.ಕೆ. ಜೈನ್ಗೆ ದೂರು ಸಲ್ಲಿಸಿದ್ದರು. ಆದ್ದರಿಂದ ದ್ರಾವಿಡ್ ವಿಚಾರಣೆಗೆ ಹಾಜರಾಗಬೇಕಾದ ಅನಿವಾರ್ಯತೆ ಎದುರಾಗಿದೆ.
ದ್ರಾವಿಡ್ ಮೇಲೆ ದಾಖಲಾಗಿರುವ ಈ ಪ್ರಕರಣದ ವಿರುದ್ಧ ಹಿರಿಯ ಕ್ರಿಕೆಟಿಗರಾದ ಸೌರವ್ ಗಂಗೂಲಿ, ಹರ್ಭಜನ್ ಸಿಂಗ್ ಧ್ವನಿ ಎತ್ತಿರುವುದನ್ನು ಇಲ್ಲಿ ನೆನಪಿಸಿಕೊಳ್ಳಬಹುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್
PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್
IPL: ಆಟ ಮೆರೆದಾಟ; ಬ್ಯಾಟಿಂಗ್ ಅಷ್ಟೇ ಕ್ರಿಕೆಟ್ಟಾ?
T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ
MUST WATCH
ಹೊಸ ಸೇರ್ಪಡೆ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ