ಉಡುಪಿ ನಗರ ನಿಷೇಧಿತ ಪ್ಲಾಸ್ಟಿಕ್ ಮಾರಾಟ ವಿರುದ್ಧ ಕಾರ್ಯಾಚರಣೆ
Team Udayavani, Sep 26, 2019, 5:51 AM IST
ಉಡುಪಿ: ನಿಷೇಧಿತ ಪ್ಲಾಸ್ಟಿಕ್ ಪರಿಕರಗಳ ಮಾರಾಟ ವಿರುದ್ಧ ಉಡುಪಿ ನಗರಸಭೆಯ ಆಯುಕ್ತರ ಆನಂದ ಸಿ. ಕಲ್ಲೋಳಿಕರ್ ಅವರ ನೇತೃತ್ವದಲ್ಲಿ ಅಧಿಕಾರಿಗಳು ಬುಧವಾರ ಕಾರ್ಯಾಚರಣೆ ಆರಂಭಿಸಿದ್ದಾರೆ.
ಆದಿಉಡುಪಿ ಸಂತೆ ಮಾರ್ಕೆಟ್, ಉಡುಪಿ ಕೆಎಸ್ಆರ್ಟಿಸಿ ಬಸ್ನಿಲ್ದಾಣ ಸಮೀಪದ ರಖಂ ಮಾರಾಟ ಅಂಗಡಿ, ಹೂವಿನ ಅಂಗಡಿ ಸೇರಿದಂತೆ ಹಲವೆಡೆ ದಾಳಿ ನಡೆಸಿದ ಅಧಿಕಾರಿಗಳ ತಂಡ ಸುಮಾರು 190 ಕೆಜಿ ನಿಷೇಧಿತ
ಪ್ಲಾಸ್ಟಿಕ್ನ್ನು ವಶಪಡಿಸಿಕೊಂಡಿದೆ. ಇದರಲ್ಲಿ ಕ್ಯಾರಿಬ್ಯಾಗ್, ಸ್ಟ್ರಾ, ಪ್ಲಾಸ್ಟಿಕ್ ಚಮಚ ಮೊದಲಾದವು ಸೇರಿವೆ.
ಅ.2ರಿಂದ ದಂಡ
“ಸದ್ಯ ನಿಷೇಧಿತ ಪ್ಲಾಸ್ಟಿಕ್ಗಳನ್ನು ವಶಪಡಿಸಿಕೊಂಡು ಎಚ್ಚರಿಕೆ, ತಿಳಿವಳಿಕೆ ನೀಡುತ್ತಿದ್ದೇವೆ. ಅ.2ರ ಅನಂತರ ದಂಡ ವಸೂಲಿ ಆರಂಭಿಸಲಾಗುವುದು’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಾರ್ಯಾಚರಣೆಯಲ್ಲಿ ಆರೋಗ್ಯ ಅಧಿಕಾರಿ ಕರುಣಾಕರ್, ಆರೋಗ್ಯ ನಿರೀಕ್ಷಕ ಪಾಂಡುರಂಗ, ಕಂದಾಯ ನಿರೀಕ್ಷಕ ಧನಂಜಯ್, ಅಧಿಕಾರಿಗಳಾದ ಆನಂದ್, ಪ್ರಸನ್ನ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್
Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ