ರಿಯಾಜ್‌ ಭಟ್ಕಳ್‌ ಸಹಚರ ಉಗ್ರನ ತೀವ್ರ ವಿಚಾರಣೆ!


Team Udayavani, Sep 26, 2019, 11:00 PM IST

riyaz

ಬೆಂಗಳೂರು: ಅಮೆರಿಕಾದ ಮಾಜಿ ಅಧ್ಯಕ್ಷ ಬರಾಕ್‌ ಓಬಾಮಾ 2015ರ ಗಣರಾಜ್ಯೋತ್ಸವಕ್ಕೆ ಭಾರತಕ್ಕೆ ಆಗಮಿಸಿದ್ದ ವೇಳೆ ದೇಶದ ಹಲವೆಡೆ ಬಾಂಬ್‌ಸ್ಫೋಟ ನಡೆಸಲು ರೂಪಿಸಿದ್ದ ಸಂಚಿನ ಮಾಸ್ಟರ್‌ವೆುçಂಡ್‌, ಇಂಡಿಯನ್‌ ಮುಜಾಹಿದ್ದೀನ್‌ (ಐಎಂ) ಉಗ್ರ ಭಟ್ಕಳ ಮೂಲದ ಜೈನುಲ್ಲಾಬ್ಬೀನ್‌ ಎಂಬ ಮಾಹಿತಿ ಹೊರಬಿದ್ದಿದೆ.

ಈ ಸಂಚು ರೂಪಿಸಿದ ಆರೋಪ ಸಂಬಂಧ ಸದ್ಯ ನ್ಯಾಯಾಂಗ ಬಂಧನದಲ್ಲಿರುವ ನಾಲ್ವರು ಶಂಕಿತ ಉಗ್ರರು ವಿಚಾರಣೆ ವೇಳೆ ನೀಡಿದ್ದ ಮಾಹಿತಿ ಆಧರಿಸಿ ಮುಂಬೈನ ಆರ್ಥರ್‌ ಜೈಲಿನಲ್ಲಿದ್ದ ಉಗ್ರ ಜೈನುಲ್ಲಾಬ್ಬೀನ್‌ ಎಂಬಾತನನ್ನು ವಶಕ್ಕೆ ಪಡೆದು ಕೇಂದ್ರ ಅಪರಾಧ ವಿಭಾಗ (ಸಿಸಿಬಿ) ಪೊಲೀಸರು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.

ಆತನ ವಿಚಾರಣೆಯಿಂದ ದೇಶದಲ್ಲಿ ಅಲ್ಲಲ್ಲಿ ನಡೆದಿದ್ದ ಐಎಂ ಸಂಘಟನೆ ನಡೆಸಿದ ಸ್ಫೋಟಕ ಕೃತ್ಯಗಳಲ್ಲಿ ಜೈನಾಲ್ಲಾದ್ದೀನ್‌ ಮಾಸ್ಟರ್‌ ಮೈಂಡ್‌ ಎಂದು ಮೂಲಗಳು ತಿಳಿಸಿವೆ. ಆತನ ವಿಚಾರಣೆಯಿಂದ ದಕ್ಷಿಣ ಭಾರತದಲ್ಲಿ, ಪ್ರಮುಖವಾಗಿ ಕರ್ನಾಟಕದಲ್ಲಿ ನಡೆಸಿರುವ ಸ್ಫೋಟಕ ಕೃತ್ಯಗಳ ಮಾಹಿತಿ ದೊರೆಯಬಹುದು ಎಂದು ಹೇಳಲಾಗಿದೆ.

2015ರ ಜನವರಿಯಲ್ಲಿ ಕಾರ್ಯಚರಣೆ ನಡೆಸಿದ್ದ ಸಿಸಿಬಿ ಪೊಲೀಸರು ದೇಶದ ವಿವಿಧ ಭಾಗಗಳಲ್ಲಿ ನಡೆದಿದ್ದ ಬಾಂಬ್‌ ಸ್ಫೋಟ ಕೃತ್ಯಗಳಿಗೆ ಸ್ಫೋಟಕ ಸರಬರಾಜು ಮಾಡಿದ, ಸ್ಫೋಟಕ ಸಂಗ್ರಹಿಸಿದ್ದ ಭಟ್ಕಳ ಮೂಲದ ಸೈಯದ್‌ ಇಸ್ಮಾಯಿಲ್‌ ಅಫಾಕ್‌, ಅಬ್ದುಲ್‌ ಸಬೂರ್‌, ಸದ್ದಾಂ ಹುಸೇನ್‌, ರಿಯಾಜ್‌ ಅಹಮದ್‌ ಸೈಯದಿ ಎಂಬುವವರನ್ನು ಬಂಧಿಸಿದ್ದರು. ಅಷ್ಟೇ ಅಲ್ಲದೆ ಫ್ರೆಜರ್‌ಟೌನ್‌ನ ಮನೆಯೊಂದರಲ್ಲಿ ಸಂಗ್ರಹಿಸಿದ್ದ ಅಪಾರ ಪ್ರಮಾಣದ ಸ್ಫೋಟಕ ಜಪ್ತಿ ಮಾಡಿಕೊಂಡಿದ್ದರು.

ಆರೋಪಿಗಳಿಗೂ ಹಾಗೂ ಜೈನುಲ್ಲಾಬ್ಬೀನ್‌ಗೆ ಸಂಪರ್ಕವಿದ್ದ ಬಗ್ಗೆ ಸಂಪರ್ಕ ಇರುವುದು ತನಿಖೆಯಲ್ಲಿ ಗೊತ್ತಾಗಿತ್ತು. ಅಲ್ಲದೆ, ಜೈನುಲ್ಲಾಬ್ಬೀನ್‌ ಸೂಚನೆ ಮೇರೆಗೆ ಕೃತ್ಯಗಳಲ್ಲಿ ಭಾಗಿಯಾಗಿದ್ದ ಸಂಗತಿಯೂ ಗೊತ್ತಾಗಿತ್ತು. ಆದರೆ, ಆತ ಎಲ್ಲಿದ್ದಾನೆ ಎಂಬುದುರ ಬಗ್ಗೆ ಸುಳಿವು ನೀಡಿರಲಿಲ್ಲ. ಆತನ ಪತ್ತೆಗೆ ಶೋಧ ಮುಂದುವರಿದಿತ್ತು.

ಈ ಬೆನ್ನಲ್ಲೇ ಜೈನುಲ್ಲಾಬ್ಬೀನ್‌ ಮುಂಬೈನಲ್ಲಿ 2011ರಲ್ಲಿ ಜವೇರಿಬಜಾರ್‌, ಖಬೂತರ್‌ ಖಾನಾ ಸೇರಿ ಮೂರು ಕಡೆ ನಡೆದಿದ್ದ ಸರಣಿ ಬಾಂಬ್‌ ಸ್ಫೋಟ ಪ್ರಕರಣದಲ್ಲಿ ಅರ್ಥರ್‌ ರಸ್ತೆ ಜೈಲಿನಲ್ಲಿರುವ ಬಗ್ಗೆ ಮಾಹಿತಿ ಖಚಿತವಾಗಿತ್ತು. ಈ ಮಾಹಿತಿ ಆಧರಿಸಿ ನ್ಯಾಯಾಲಯಕ್ಕೆ ಬಾಡಿವಾರೆಂಟ್‌ ಸಲ್ಲಿಸಿ ಆತನನ್ನು ವಶಕ್ಕೆ ಪಡೆದು ಕರೆತರಲಾಗಿದೆ ಎಂದು ಸಿಸಿಬಿ ಅಧಿಕಾರಿಗಳು ತಿಳಿಸಿದ್ದಾರೆ.

ಐಎಂ ಸಂಘಟನೆಯ ಸ್ಥಾಪಕ ರಿಯಾಜ್‌ ಭಟ್‌Rಳನ ಆಪ್ತನಾಗಿರುವ ಜೈನುಲ್ಲಾಬ್ಬೀನ್‌ ಆತನ ಸೂಚನೆ ಮೇರೆಗೆ ಕರ್ನಾಟಕ ಸೇರಿದಂತೆ ದೇಶದ ಹಲವೆಡೆ ಐಎಂ ಸಂಘಟನೆ ಬಲಗೊಳಿಸುತ್ತಿದ್ದ. 2011ರಿಂದ 2014ರವರೆಗೆ ದೇಶದಲ್ಲಿ ನಡೆದ ಬಾಂಬ್‌ ಸ್ಫೋಟ ಕೃತ್ಯಗಳಿಗೆ ಸಹಚರರ ಮೂಲಕ ಸ್ಫೋಟಕ ರವಾನಿಸಿದ್ದಾನೆ. ಅಷ್ಟೇ ಅಲ್ಲದೆ, ಫ್ರೆಜರ್‌ಟೌನ್‌ನಲ್ಲಿ ಬಂಧಿತರಾದ ಆರೋಪಿಗಳ ಜತೆ ನೇರ ಸಂಪರ್ಕ ಹೊಂದಿರುವುದು ತನಿಖೆಯಲ್ಲಿ ಗೊತ್ತಾಗಿದೆ ಎಂದು ಸಿಸಿಬಿ ಮೂಲಗಳು ತಿಳಿಸಿವೆ.

“”ಮಹಾರಾಷ್ಟ್ರ ಜೈಲಿನಲ್ಲಿದ್ದ ಐಎಂ ಸಂಘಟನೆಯ ಸದಸ್ಯ ಜೈನುಲ್ಲಾಬ್ಬೀನ್‌ನನ್ನು ಹೆಚ್ಚಿನ ವಿಚಾರಣೆ ಸಲುವಾಗಿ 10 ದಿನಗಳ ಕಾಲ ವಶಕ್ಕೆ ಪಡೆಯಲಾಗಿದ್ದು ವಿಚಾರಣೆ ನಡೆಸಲಾಗುತ್ತಿದೆ”
– ಕುಲದೀಪ್‌ ಕುಮಾರ್‌ ಜೈನ್‌,ಡಿಸಿಪಿ, ಸಿಸಿಬಿ

ಟಾಪ್ ನ್ಯೂಸ್

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.