ಸರಕಾರಿ ಶಾಲಾ ಮಕ್ಕಳಿಗೆ ಎರಡನೇ ಜತೆ ಸಮವಸ್ತ್ರ ಇಲ್ಲ


Team Udayavani, Sep 27, 2019, 5:04 AM IST

suresh-kumar

ಬೆಂಗಳೂರು: ಪ್ರಸಕ್ತ ಸಾಲಿ ನಲ್ಲಿ ಸರಕಾರಿ ಶಾಲೆ ಮಕ್ಕಳಿಗೆ ಎರಡನೇ ಜತೆ ಸಮವಸ್ತ್ರ ನೀಡುವುದಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್‌.ಸುರೇಶ್‌ ಕುಮಾರ್‌ ತಿಳಿಸಿದ್ದಾರೆ.

ಗುರುವಾರ ಖಾಸಗಿ ಶಾಲಾ ಒಕ್ಕೂಟದ ಜತೆ ಸಾರ್ವಜನಿಕ ಶಿಕ್ಷಣ ಇಲಾಖೆ ನಡೆಸಿದ ಸಭೆಯಲ್ಲಿ ಮಾತನಾಡಿದ ಸಚಿವ ಸುರೇಶ್‌ ಕುಮಾರ್‌, ಪ್ರಸಕ್ತ ಸಾಲಿನಲ್ಲಿ ಸರಕಾರಿ ಶಾಲೆ ಮಕ್ಕಳಿಗೆ ಎರಡನೇ ಜತೆ ಸಮವಸ್ತ್ರ ನೀಡುವುದಿಲ್ಲ. ಈ ವರ್ಷದ ಸಮವಸ್ತ್ರ ಟೆಂಡರ್‌ ಮತ್ತು ತೀರ್ಮಾನಗಳು ತಾವು ಸಚಿವರಾಗಿದ್ದಾಗ ತೆಗೆದುಕೊಂಡಿರುವ ನಿರ್ಧಾರಗಳಲ್ಲ. ಮುಂದಿನ ವರ್ಷ ಎರಡನೇ ಜತೆ ಸಮವಸ್ತ್ರ ನೀಡುವುದರ ಬಗ್ಗೆ ಮುಂದಿನ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗುವುದು ಎಂದರು.

ನೋ ಡಿಟೆನ್ಶನ್‌ ರದ್ದು?
1ರಿಂದ 8ನೇ ತರಗತಿ ತನಕ ಯಾವ ವಿದ್ಯಾರ್ಥಿಯನ್ನು ಫೇಲ್‌ ಮಾಡುವಂತಿಲ್ಲ ಎಂಬ ಕಾನೂನಿನಿಂದ ಶಿಕ್ಷಣದ ಗುಣಮಟ್ಟ ಕುಸಿದಿದೆ. ಈ ಹಿಂದಿನಂತೆ 6- 8ನೇ ತರಗತಿ ನಡುವೆ ಒಂದು ಪಬ್ಲಿಕ್‌ ಎಕ್ಸಾಂ ನಡೆಸುವುದರಿಂದ ಶಿಕ್ಷಣದ ಗುಣಮಟ್ಟ ಸುಧಾರಣೆಗೊಳ್ಳಲಿದೆ. ಹಾಗಾಗಿ ಕೇಂದ್ರ ಸರಕಾರದ “ನೋ ಡಿಟೆನ್ಶನ್‌’ ನಿಯಮವನ್ನು ರದ್ದುಗೊಳಿಸಲು ಸರಕಾರ ಚಿಂತನೆ ನಡೆಸುತ್ತಿದೆ ಎಂದು ಸುರೇಶ್‌ ಕುಮಾರ್‌ ಹೇಳಿದರು.

ವಿಧಾನ ಪರಿಷತ್‌ ಸದಸ್ಯ ಪುಟ್ಟಣ್ಣ ಮಾತನಾಡಿ ಪ್ರತಿ ವರ್ಷ ಖಾಸಗಿ ಶಾಲೆಗಳ ಅನುಮತಿ ನವೀಕರಣ ಮಾಡುವ ಅವೈಜ್ಞಾನಿಕ ಪದ್ಧತಿಯನ್ನು ರದ್ದುಗೊಳಿಸಿ ಸಿಬಿಎಸ್‌ಇ ಮತ್ತು ಐಸಿಎಸ್‌ಇ ಮಾದರಿಯಲ್ಲಿ ರಾಜ್ಯ ಸರಕಾರದ ಅನುದಾನ ರಹಿತ ಶಾಲೆಗಳ ಹಿತ ಕಾಯಬೇಕು. ಪ್ರತಿ ವರ್ಷದ ಜನವರಿ ತಿಂಗಳೊಳಗೆ ಶಿಕ್ಷಕರ ತರಬೇತಿ, ಸರಕಾರಿ ಸಭೆಗಳಂಥ ಕೆಲಸಗಳನ್ನು ಮುಗಿಸಬೇಕು, ಅನಂತರ ಶಿಕ್ಷಕರು ವಿದ್ಯಾರ್ಥಿಗಳ ವ್ಯಾಸಂಗದ ಕಡೆ ಗಮನಹರಿಸುವ ಕೆಲಸ ಮಾಡಬಹುದು ಎಂದು ಸಚಿವರಿಗೆ ಮನವಿ ಮಾಡಿದರು.

ಕ್ಯಾಮ್ಸ್‌ ಖಾಸಗಿ ಶಾಲೆಗಳ ಸಂಘ ಟನೆ ಕಾರ್ಯದರ್ಶಿ ಶಶಿಕುಮಾರ್‌ ಮಾತನಾಡಿ, ಶಿಕ್ಷಣ ಇಲಾಖೆ ಶಾಲೆಗಳಿಗೆ ಬಾಕಿ ಉಳಿಸಿಕೊಂಡಿರುವ ಆರ್‌ಟಿಇ ಹಣವನ್ನು ಆದಷ್ಟು ಬೇಗ ಬಿಡುಗಡೆ ಮಾಡುವಂತೆ ಆಗ್ರಹಿಸಿದರು.

ಮಕ್ಕಳಿಗೆ ಹೆಚ್ಚಿನ ಹೋಂ ವರ್ಕ್‌ ನೀಡುವುದು ಸರಿಯಲ್ಲ. ಇದರಿಂದಾಗಿ ರಜೆ ದಿನಗಳಲ್ಲೂ ಮಕ್ಕಳು ಹೆಚ್ಚಿನ ಕಾಲ ಪುಸ್ತಕಗಳ ಮುಂದೆ ಕೂರುವಂತಾಗಿದೆ. ಹೋಂ ವರ್ಕ್‌ ಎಂಬುದು ಮಕ್ಕಳಿಗೆ ಶಿಕ್ಷೆಯಂತಾಗಿ ಪರಿಣಮಿಸಿದೆ. ಹಾಗಾಗಿ ಇದನ್ನು ಕಡಿಮೆಗೊಳಿಸಬೇಕು ಅಥವಾ ನಿಷೇಧಿಸಬೇಕು ಎಂದು ಎಂದು ಸಚಿವ ಸುರೇಶ್‌ ಕುಮಾರ್‌ ಅಭಿಪ್ರಾಯಪಟ್ಟರು.

ಟಾಪ್ ನ್ಯೂಸ್

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.