ವಿಶ್ವ ಪಾರಂಪರಿಕ ತಾಣ.. ಸೌಲಭ್ಯ ಗೌಣ!


Team Udayavani, Sep 27, 2019, 11:56 AM IST

bk-tdy-1

ಬಾಗಲಕೋಟೆ: ಒಂದು ಕಾಲದಲ್ಲಿ ಬಾದಾಮಿ ಚಾಲುಕ್ಯರು, ಸಾಮ್ರಾಜ್ಯ ಅರಸರಾಗಿ ಅಧಿಕಾರ ಸ್ವೀಕರಿಸುವ ಕೇಂದ್ರ ಸ್ಥಾನ (ಪಟ್ಟಾಧಿಕಾರ)ವಾಗಿದ್ದ ವಿಶ್ವ ದರ್ಜೆಯ ಪ್ರವಾಸಿ ತಾಣ ಪಟ್ಟದಕಲ್ಲ ಕನಿಷ್ಠ ಮೂಲ ಸೌಲಭ್ಯಗಳಿಲ್ಲದೇ ಸೊರಗಿದೆ. ಒಂದೆಡೆ ಸೌಲಭ್ಯಗಳಿಲ್ಲದೇ ನಲುಗಿದರೆ, ಇನ್ನೊಂದೆಡೆ ಮಲಪ್ರಭಾ ನದಿ ಪ್ರವಾಹ ಬಂದಾಗೊಮ್ಮೆ ಇಲ್ಲಿನ ಸ್ಮಾರಕಗಳು ನೀರಲ್ಲಿ ನಿಂತು ನಲುಗುತ್ತಿವೆ.

ವಿಶ್ವದ ಐತಿಹಾಸಿಕ ಪ್ರವಾಸಿ ತಾಣಗಳಲ್ಲಿ ರಾಜ್ಯದ ಎರಡು ತಾಣಗಳು ಸ್ಥಾನ ಪಡೆದಿವೆ. ಹಂಪಿ ಹೊರತುಪಡಿಸಿದರೆ ಆ ಸ್ಥಾನ ಸಿಕ್ಕಿರುವುದು, ಪಟ್ಟದಕಲ್ಲಗೆ ಮಾತ್ರ. ಬಾದಾಮಿ ಚಾಲುಕ್ಯರ 7 ಮತ್ತು 8ನೇ ಶತಮಾನದಲ್ಲಿ ನಿರ್ಮಿಸಿದ 8 ಅದ್ಭುತ ದೇವಾಲಯಗಳು, ರಾಷ್ಟ್ರಕೂಟರ ಆಡಳಿತದ 9ನೇ ಶತಮಾನದಲ್ಲಿ ನಿರ್ಮಿಸಿದ ಎರಡು ದೇವಾಲಯ ಸೇರಿ ಒಟ್ಟು 11 ವಿಶ್ವ ಪಾರಂಪರಿಕ ಪಟ್ಟಿಗೆ ಸೇರಿದ ದೇವಾಲಯಗಳು ಇಲ್ಲಿವೆ.

ಇಲ್ಲಿನ ದೇವಾಲಯಗಳನ್ನು ಭಾರತೀಯ ಪುರಾತತ್ವ ಇಲಾಖೆ, 1983ರಲ್ಲಿ ವಿಶ್ವ ಪರಂಪರೆ ಪಟ್ಟಿಗೆ ಸೇರಿಸಿದೆ. ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಸೇರಿ 36 ವರ್ಷ ಕಳೆದರೂ, ಪಟ್ಟದಕಲ್ಲ ಚಿತ್ರಣ ಬದಲಾಗಿಲ್ಲ. ಇಲ್ಲಿಗೆ ಬರುವ ಪ್ರವಾಸಿಗರಿಗೆ ಕನಿಷ್ಠ ಸೌಲಭ್ಯ ಕಲ್ಪಿಸಲು ಈವರೆಗಿನ ಸರ್ಕಾರಗಳು ವಿಫಲವಾಗಿವೆ ಎಂದರೆ ನಂಬಲೇಬೇಕು.

ಪ್ರವಾಹಕ್ಕೂ ನಲುಗುತ್ತಿದೆ ತಾಣ: ಕನಿಷ್ಠ ಮೂಲಸೌಲಭ್ಯಗಳಿಲ್ಲದೇ ಪ್ರವಾಸಿ ತಾಣ ನಲುಗಿದರೆ, ಇನ್ನೊಂದೆಡೆ ಮಲಪ್ರಭಾ ನದಿ ತುಂಬಿ ಹರಿದಾಗ, ಇಲ್ಲಿನ ಪಾರಂಪರಿಕ ತಾಣಗಳಿಗೂ ನೀರು ನುಗ್ಗುತ್ತಿದೆ. 2007, 2009 ಹಾಗೂ ಕಳೆದ ಆಗಸ್ಟ್‌ನಲ್ಲಿ ಬಂದ ಪ್ರವಾಹ ವೇಳೆ ತಾಣಗಳು, ಇಲ್ಲಿನ ಗ್ರಾಮಸ್ಥರು ಪ್ರವಾಹಕ್ಕೆ ನಲುಗಿದ್ದಾರೆ. ಪ್ರವಾಹದಿಂದ ಬಾಧಿತಗೊಂಡ ಜಿಲ್ಲೆಯ ಇಡೀ 195 ಗ್ರಾಮಗಳ ಪೈಕಿ, ಅತ್ಯಂತ ಹೆಚ್ಚು ಜನ ಹಾಗೂ ಅಪಾಯದಲ್ಲಿ 275 ಜನ ಸಿಲುಕಿದ್ದು ಇದೇ ಗ್ರಾಮದಲ್ಲಿ. 2007 ಮತ್ತು 2009ರಲ್ಲಿ ಬಂದ ಪ್ರವಾಹದಿಂದ ಭಾಗಶಃ ಗ್ರಾಮ ಮುಳುಗಡೆಯಾಗಿತ್ತು. ಆಗ ನೀರು ಬಂದಿದ್ದ ಮನೆಗಳನ್ನು ಸ್ಥಳಾಂತರಿಸಲು ಜಿಲ್ಲಾಡಳಿತ ನಿರ್ಧರಿಸಿತ್ತು.

ಆದರೆ, ಇಡೀ ಗ್ರಾಮ ಸ್ಥಳಾಂತರಿಸುವಂತೆ ಗ್ರಾಮಸ್ಥರು ಪಟ್ಟು ಹಿಡಿದ ಪರಿಣಾಮ, ಆಸರೆಯಡಿ ಭಾಗಶ ಗ್ರಾಮ ಸ್ಥಳಾಂತರ ಪ್ರಕ್ರಿಯೆ ಸ್ಥಗಿತಗೊಂಡಿತ್ತು. ಇದೀಗ ಇಡೀ ಗ್ರಾಮಕ್ಕೆ ನೀರು ನುಗ್ಗಿ ದೊಡ್ಡಮಟ್ಟದ ಸಂಕಷ್ಟ ಎದುರಾಗಿದ್ದು, ಈಗಲಾದರೂ ಗ್ರಾಮ ಸ್ಥಳಾಂತರಗೊಳ್ಳಲಿ. ಇದರಿಂದ ಪಾರಂಪರಿಕ ತಾಣಗಳ ಸುತ್ತ ವಾಸಿಸುವ ಮನೆಗಳ ಮಾಲೀಕರು ಎದುರಿಸುವ ಸಮಸ್ಯೆ (ಮನೆ ದುರಸ್ತಿ, ಶೌಚಾಲಯ ನಿರ್ಮಾಣಕ್ಕೆ ಅನುಮತಿ ಇಲ್ಲ) ದೂರಾಗಲಿದೆ ಎಂಬುದು ಗ್ರಾಮಸ್ಥರ ಒತ್ತಾಯ.

ಬರಲಿಲ್ಲ ಪ್ಲಾಜಾ: ವಿಶ್ವ ದರ್ಜೆಯ ಪ್ರವಾಸಿ ತಾಣವಾದ ಪಟ್ಟದಕಲ್ಲಗೆ ವಾರ್ಷಿಕ ಸುಮಾರು 6 ಲಕ್ಷ ಪ್ರವಾಸಿಗರು ಭೇಟಿ ನೀಡುತ್ತಿದ್ದು, ಅವರಿಗೆ ಕನಿಷ್ಠ ಸೌಲಭ್ಯಗಳನ್ನು ಕಲ್ಪಿಸಲಾಗಿಲ್ಲ. ಹೀಗಾಗಿ 2015ರ ರಾಜ್ಯ ಸರ್ಕಾರದ ಬಜೆಟ್‌ನಲ್ಲಿ ಪಟ್ಟದಕಲ್ಲಗೆ ಪ್ರವಾಸಿ ಪ್ಲಾಜಾ ನಿರ್ಮಾಣದ ಘೋಷಣೆಯಾಗಿತ್ತು. ಅದು ಈವರೆಗೂ ಘೋಷಣೆಯಾಗದೇ ಉಳಿದಿದೆ. ಉತ್ತಮ ಹೊಟೇಲ್‌ ಕೂಡ ಇಲ್ಲದ ಪಟ್ಟದಕಲ್ಲಗೆ ಬರುವ ಪ್ರವಾಸಿಗರು, ಬೇಗ ಇಲ್ಲಿಂದ ತೆರಳುವ ಅನಿವಾರ್ಯತೆ ಪ್ರವಾಸಿಗರಿಗಿದೆ.

ಸ್ಥಳಾಂತರಕ್ಕೆ ತಯಾರಿ: 2009ರಿಂದ ಕೇಳಿ ಬರುತ್ತಿರುವ ಪಟ್ಟದಕಲ್ಲ ಸ್ಥಳಾಂತರ ಬೇಡಿಕೆಗೆ ಈಗ ಒಂದಷ್ಟು ವೇಗ ಸಿಕ್ಕಿದೆ. ಕಳೆದ ತಿಂಗಳು ಬಂದ ಭೀಕರ ಪ್ರವಾಹ ಈ ವೇಗಕ್ಕೆ ಕಾರಣವೂ ಆಗಿದೆ. ಜಿಲ್ಲಾಡಳಿತ, ಬಾದಾಮಿ ತಾಲೂಕು ಬಾಚನಗುಡ್ಡ ಬಳಿ ಇರುವ 21 ಎಕರೆ ಸರ್ಕಾರಿ ಭೂಮಿ ಹಾಗೂ ಇತರೆ 60 ಎಕರೆ ಭೂಮಿಯನ್ನು ಪಟ್ಟದಕಲ್ಲ ಗ್ರಾಮ ಸ್ಥಳಾಂತರಿಸಲು ಗುರುತಿಸಿದೆ. ಆದರೆ, ಭೂಸ್ವಾಧೀನ, ಪಟ್ಟದಕಲ್ಲನಲ್ಲಿ ಸದ್ಯ ಇರುವ ಮನೆಗಳಿಗೆ ಪರಿಹಾರ, ಪುನರ್ವಸತಿ ಹೀಗೆ ಹಲವು ಕಾರ್ಯ ಕೈಗೊಳ್ಳಲು ಸಮಗ್ರ ಯೋಜನಾ ವರದಿ ಸಿದ್ಧಗೊಳ್ಳಬೇಕಿದೆ. ಇದೆಲ್ಲ ಪೂರ್ಣಗೊಳ್ಳಲು ಇನ್ನೆಷ್ಟು ವರ್ಷ ಬೇಕಾಗಬಹುದೆಂದು ಗ್ರಾಮಸ್ಥರ ಅಸಹಾಯಕತೆ ವ್ಯಕ್ತಪಡಿಸುತ್ತಿದ್ದಾರೆ.

ಜಿಲ್ಲೆಯ ಪ್ರವಾಸಿ ತಾಣಗಳ ಸಮಗ್ರ ಅಭಿವೃದ್ಧಿಗೆ ಸರ್ಕಾರ ಮುಂದಾಗಬೇಕಿದೆ. ಸ್ಥಳೀಯ ಮಟ್ಟದಲ್ಲಿ ಮೂಲ ಸೌಲಭ್ಯ ಕಲ್ಪಿಸಿದರೆ, ಪ್ರವಾಸಿ ತಾಣಗಳಿಗೆ ಬರುವ ಪ್ರವಾಸಿಗರು ಖುಷಿಯಿಂದ ಮರಳಬಹುದು. ಇಲ್ಲವಾದರೆ ಇಲ್ಲಿನ ಸೌಲಭ್ಯಗಳ ದುಸ್ಥಿತಿಗೆ ಮರಗುತ್ತಲೇ ಹೋಗಬೇಕಾಗುತ್ತದೆ.

 

-ಶ್ರೀಶೈಲ ಕೆ. ಬಿರಾದಾರ

ಟಾಪ್ ನ್ಯೂಸ್

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

6-uv-fusion

UV Fusion: ಮಿತಿಯೊಳಗಿನ ಬದುಕು ನೆನಪಾದಾಗ

5-vitla

Vitla Palace: ಶತಮಾನಗಳ ಇತಿಹಾಸದ ವಿಟ್ಲ ಅರಮನೆ

4

ವಿಚ್ಛೇದನ ನೀಡದಿದ್ದರೆ ತಲೆಯನ್ನು ಕಡಿದು ಕುಕ್ಕರ್‌ನಲ್ಲಿ ಬೇಯಿಸುವೆ ಎಂದ ಪತಿ ವಿರುದ್ಧ FIR

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.