ಹಿಂಸಾಚಾರ ಭುಗಿಲೇಳಬಹುದು; ಇ.ಡಿ ಕಚೇರಿಗೆ ಭೇಟಿ ಕೊಡಲ್ಲ ಎಂದ ಶರದ್ ಪವಾರ್
Team Udayavani, Sep 27, 2019, 3:23 PM IST
ನವದೆಹಲಿ:ಹಿರಿಯ ರಾಜಕಾರಣಿ, ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ಶರದ್ ಪವಾರ್ ಶುಕ್ರವಾರ ಮಧ್ಯಾಹ್ನ ವಿಚಾರಣೆಗೆ ಹಾಜರಾಗುವುದು ಬೇಡ ಎಂದು ಜಾರಿ ನಿರ್ದೇಶನಾಲಯ ಇ-ಮೇಲ್ ಮೂಲಕ ಸೂಚನೆ ನೀಡಿದೆ. ಯಾವಾಗ ವಿಚಾರಣೆಗೆ ಹಾಜರಾಗಬೇಕೋ ಆ ಸಂದರ್ಭದಲ್ಲಿ ಮಾಹಿತಿ ನೀಡಲಾಗುವುದು ಎಂದು ಇ.ಡಿ ತಿಳಿಸಿದೆ.
ಮಹಾರಾಷ್ಟ್ರ ಸ್ಟೇಟ್ ಕೋ ಆಪರೇಟಿವ್ ಬ್ಯಾಂಕ್(ಎಂಎಸ್ ಸಿಬಿ)ನ 25 ಸಾವಿರ ಕೋಟಿ ರೂಪಾಯಿ ಹಗಣರದ ಆರೋಪಕ್ಕೆ ಸಂಬಂಧಿಸಿದಂತೆ ದಾಖಲಾಗಿರುವ ಪ್ರಕರಣದ ಬಗ್ಗೆ ಸಿಬಿಐ ತನಿಖೆ ನಡೆಸುತ್ತಿದೆ. ಈ ಹಿನ್ನೆಲೆಯಲ್ಲಿ ಶರದ್ ಪವಾರ್ ಇಂದು ಮುಂಬೈನಲ್ಲಿರುವ ಇ.ಡಿ ಕಚೇರಿಗೆ ಹಾಜರಾಗುವುದಾಗಿ ತಿಳಿಸಿದ್ದರು.
ಏತನ್ಮಧ್ಯೆ ಶರದ್ ಪವಾರ್ ಜಾರಿ ನಿರ್ದೇಶನಾಲಯ ಕಚೇರಿಗೆ ಭೇಟಿ ನೀಡುವುದನ್ನು ಕೈಬಿಡಿ ಎಂದು ಮುಂಬೈ ಹಿರಿಯ ಪೊಲೀಸ್ ಅಧಿಕಾರಿಗಳು ಮನವಿ ಮಾಡಿಕೊಂಡಿದ್ದಾರೆ. ಭೇಟಿ ನೀಡಿದ್ದಲ್ಲಿ ಗಲಾಟೆ, ಹಿಂಸಾಚಾರ ನಡೆದರೆ ಕಾನೂನು ಸುವ್ಯವಸ್ಥೆಗೆ ಭಂಗ ಬರಬಹುದು ಎಂದು ಅಧಿಕಾರಿಗಳು ಎಚ್ಚರಿಸಿದ್ದರು ಎಂದು ವರದಿ ತಿಳಿಸಿದೆ. ಇ.ಡಿ ಕಚೇರಿಗೆ ಭೇಟಿ ನೀಡುವುದಾಗಿ ಪವಾರ್ ಹೇಳಿಕೆ ಕೊಟ್ಟಿದ್ದರಿಂದ ಪೊಲೀಸರು ಜಾರಿ ನಿರ್ದೇಶನಾಲಯದ ಸುತ್ತಮುತ್ತ ನಿಷೇಧಾಜ್ಞೆ ಜಾರಿಗೊಳಿಸಿದ್ದರು.
ಮುಂಬೈ ಪೊಲೀಸ್ ಅಧಿಕಾರಿಗಳ ಮನವಿ ಹಿನ್ನೆಲೆಯಲ್ಲಿ ತಾನು ಶುಕ್ರವಾರ ಇ.ಡಿ ಕಚೇರಿಗೆ ಭೇಟಿ ನೀಡುತ್ತಿಲ್ಲ ಎಂದು ಶರದ್ ಪವಾರ್ ಸುದ್ದಿಗಾರರ ಜತೆ ಮಾತನಾಡುತ್ತ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ
MUST WATCH
ಹೊಸ ಸೇರ್ಪಡೆ
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ