ವಡಾಲ ರಾಮ ಮಂದಿರ: ಸಂತ ವಿರಾಸತ್ ಸಂಗೀತ ನಾಟಕ ಸಮಾವೇಶ
Team Udayavani, Sep 27, 2019, 6:39 PM IST
ಮುಂಬಯಿ, ಸೆ. 26: ಜಿಎಸ್ಬಿ ಸಾರ್ವಜನಿಕ ಗಣೇಶೋತ್ಸವ ಸಮಿತಿ ವಡಾಲ ಪ್ರಾಯೋಜಕತ್ವದಲ್ಲಿ ಸಂತ ವಿರಾಸತ್ ಮಹಾರಾಷ್ಟ್ರ ಶ್ರೇಷ್ಠ ಸಂತರ ಕುರಿತು ಕೀರ್ತನ ಅಭಂಗ, ಭಜನೆ ಹಾಗೂ ಅಭಿನಯಗಳಿಂದ ಕೂಡಿದ ಕೊಂಕಣಿ ಸಂಗೀತ ನಾಟಕವು ಸೆ. 22ರಂದು ಅಪರಾಹ್ನ3.30ರಿಂದ ವಡಾಲದ ದ್ವಾರಕಾನಾಥ ಭವನದಲ್ಲಿ ನಡೆಯಿತು.
ಜಿಎಸ್ಬಿ ಸಭಾ ಮಹಿಳಾ ಶಾಖೆ ಮುಂಬಯಿ ಇವರ ನಿರ್ಮಾಪಕತ್ವದಲ್ಲಿ ಹಾಗೂ ಬೀನಾ ಶೆಣೈ ಅವರ ದಿಗದರ್ಶನದಲ್ಲಿ ಈ ಕಾರ್ಯಕ್ರಮವನ್ನು ಪ್ರಸ್ತುತಪಡಿಸಲಾಯಿತು. ಮಾಯಾ ನಾಯಕ್ ಮತ್ತು ತಂಡದವರು ಸಂಗೀತದಲ್ಲಿ ಸಹಕರಿಸಿದರು. ಗೋಕರ್ಣ ಪರ್ತಗಾಳಿ ಜೀವೋ ತ್ತಮ ಮಠಾಧೀಶರಾದ ಶ್ರೀಮದ್ ವಿದ್ಯಾಧಿರಾಜ ತೀರ್ಥ ಶ್ರೀಪಾದ ವಡೇರ್ ಸ್ವಾಮೀಜಿ ಮತ್ತು ಪಟ್ಟಶಿಷ್ಯ ಶ್ರೀಮದ್ ವಿದ್ಯಾಧೀಶ ತೀರ್ಥ ಸ್ವಾಮೀಜಿಯವರ ಉಪಸ್ಥಿತಿಯಲ್ಲಿ ಈ ಕಾರ್ಯಕ್ರಮವು ಜರಗಿತು.
ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠದ ಗೌರವಾಧ್ಯಕ್ಷ ಲಕ್ಷ್ಮೀಕಾಂತ್ ಪ್ರಭು, ಜಿಎಸ್ಬಿ ಸಭಾ ಮುಂಬಯಿ ಗೌರವ ಕೋಶಾಧಿಕಾರಿ ಉದಯ ಮಲ್ಯ, ಸಂಸ್ಥೆಯ ಇತರ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯರು, ಕಲಾಭಿಮಾನಿಗಳು, ಸಮಾಜ ಬಾಂಧವರು, ಶ್ರೀಗಳ
ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು. ಕಾರ್ಯಕ್ರಮದಲ್ಲಿ ಪಾಲ್ಗೊಂಡ ಎಲ್ಲ ಕಲಾವಿದರನ್ನು ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠಾಧೀಶರಾದ ಶ್ರೀಮದ್ ವಿದ್ಯಾಧಿರಾಜ ತೀರ್ಥ ಶ್ರೀಪಾದ ವಡೇರ್ ಸ್ವಾಮೀಜಿ ಮತ್ತು ಪಟ್ಟಶಿಷ್ಯ ಶ್ರೀಮದ್ ವಿದ್ಯಾಧೀಶ ತೀರ್ಥ ಸ್ವಾಮೀಜಿಯವರು ಫಲಪುಷ್ಪ, ಪ್ರಸಾದವನ್ನಿತ್ತು ಅನುಗ್ರಹಿಸಿದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ