ನಾಳೆಯಿಂದ ಇಬ್ಬರು ಗಣ್ಯರ ಜನ್ಮಶತಮಾನೋತ್ಸವ
Team Udayavani, Sep 27, 2019, 6:55 PM IST
ಕಲಬುರಗಿ: ಹಿರಿಯ ಸಾಹಿತಿ ಡಾ| ಸಿದ್ದಯ್ಯ ಪುರಾಣಿಕ ಹಾಗೂ ಪ್ರಸಿದ್ಧ ಹಿಂದೂಸ್ತಾನಿ ಗಾಯಕರಾಗಿದ್ದ ಪಂ. ಸಿದ್ದರಾಮ ಜಂಬಲದಿನ್ನಿ ಅವರ ಜನ್ಮಶತಮಾನೋತ್ಸವವನ್ನು ಸೆ.28 ಮತ್ತು 29ರಂದು ನಗರದ ಇನ್ಸ್ಟಿಟ್ಯೂಟ್ ಆಫ್ ಎಂಜಿನಿಯರ್ಸ್ ಸಭಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ವಿಕಾಸ ಅಕಾಡೆಮಿ ಅಧ್ಯಕ್ಷ, ಮಾಜಿ ಸಂಸದ ಬಸವರಾಜ ಪಾಟೀಲ ಸೇಡಂ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಲ್ಯಾಣ ಕರ್ನಾಟಕ ಭಾಗದಲ್ಲಿ ಜನಿಸಿದ ಇಬ್ಬರೂ ಮಹನೀಯರು ತಮ್ಮ ಲೇಖನಿ ಹಾಗೂ ಸಂಗೀತದಿಂದ ದೇಶಾದ್ಯಂತ ಪ್ರಸಿದ್ಧಿ ಪಡೆದಿದ್ದಾರೆ. ಅವರ ವ್ಯಕ್ತಿತ್ವ ನೆನಪಿಸುವ ಸಲುವಾಗಿ ನವೆಂಬರ್ನೊಳಗೆ ಆರು ಜಿಲ್ಲಾ ಕೇಂದ್ರಗಳು, ತಾಲೂಕು ಕೇಂದ್ರಗಳು ಸೇರಿದಂತೆ ಒಟ್ಟು 100 ಕಾರ್ಯಕ್ರಮಗಳನ್ನು ಆಯೋಜಿಸಲು ತೀರ್ಮಾನಿಸಿದ್ದೇವೆ.
ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ಸಿದ್ದಯ್ಯ ಪುರಾಣಿಕರ ಆತ್ಮಚರಿತ್ರೆ ಹಾಗೂ ಪಂ.ಸಿದ್ದರಾಮ ಜಂಬಲದಿನ್ನಿಯವರ ವಚನೋದ್ಯಾನ ಕೃತಿಗಳನ್ನು ಮಾರಾಟಕ್ಕೆ ಇಡಲಾಗುವುದು ಎಂದರು.
ಸೆ.28ರಂದು ಬೆಳಗ್ಗೆ 10:30ಕ್ಕೆ ಸಿದ್ದಯ್ಯ ಪುರಾಣಿಕರ ಜನ್ಮ ಶತಮಾನೋತ್ಸವ ಆರಂಭಗೊಳ್ಳಲಿದೆ. ಶಿಕ್ಷಣ ಸಚಿವ ಎಸ್. ಸುರೇಶಕುಮಾರ ಉದ್ಘಾಟಿಸುವರು. ಗುಲಬರ್ಗಾ ವಿಶ್ವವಿದ್ಯಾಲಯ ಪ್ರಭಾರಿ ಕುಲಪತಿ ಡಾ| ಪರಿಮಳಾ ಅಂಬೇಕರ್ ಭಾಗವಹಿಸುವರು. ಮಧ್ಯಾಹ್ನ 12:30ಕ್ಕೆ ಡಾ| ಸಿದ್ದಯ್ಯ ಪುರಾಣಿಕರ ಸಾಹಿತ್ಯ ದರ್ಶನ ಕುರಿತು ಡಾ| ವೆಂಕಟಗಿರಿ ದಳವಾಯಿ ಉಪನ್ಯಾಸ ನೀಡುವರು. ಮಧ್ಯಾಹ್ನ ಪುರಾಣಿಕರ ಶಿಶು ಗೀತೆಗಳ ಗಾಯನ ನಡೆಯಲಿದೆ.
“ಶಿಶು ಸಾಹಿತ್ಯ’, “ಹೀಗಿದ್ದರು ನನ್ನ ತಂದೆ’ ಎನ್ನುವ ವಿಶೇಷ ಉಪನ್ಯಾಸವನ್ನು ಪುರಾಣಿಕರ ಪುತ್ರ ಪಿ.ಕೆ. ಪುರಾಣಿಕ ನೀಡುವರು ಎಂದರು.
ಸೆ.29ರಂದು ಬೆಳಗ್ಗೆ ಪಂ. ಸಿದ್ದರಾಮ ಜಂಬಲದಿನ್ನಿ ಜನ್ಮ ಶತಮಾನೋತ್ಸವ ಕಾರ್ಯಕ್ರಮ ನಡೆಯುವುದು. ಅಂತಾರಾಷ್ಟ್ರೀಯ ಕ್ಲಾರಿಯೊನೆಟ್ ವಾದಕ ಡಾ| ನರಸಿಂಹಲು ವಡವಾಟಿ ಕಾರ್ಯಕ್ರಮಕ್ಕೆ ಚಾಲನೆ ನೀಡುವರು. ಜಂಬಲದಿನ್ನಿ ಅವರ ಪುತ್ರ ಡಾ| ಎಸ್. ಎಸ್. ಜಂಬಲದಿನ್ನಿ ತಮ್ಮ ತಂದೆ ವ್ಯಕ್ತಿತ್ವ ಕುರಿತು ಉಪನ್ಯಾಸ ನೀಡುವರು ಎಂದು ವಿವರಿಸಿದರು.
ಬಳಿಕ ವಚನ ಗಾಯನ ನಡೆಯಲಿದೆ. ಮಧ್ಯಾಹ್ನ ವಡವಾಟಿ ಅವರೊಂದಿಗೆ ಸಂಗೀತ ಸಂವಾದ ನಡೆಯಲಿದೆ. ಸಂಜೆ 4ಕ್ಕೆ ಸಮಾರೋಪ ಸಮಾರಂಭ ನಡೆಯಲಿದೆ. ಕೇಂದ್ರೀಯ ವಿಶ್ವವಿದ್ಯಾಲಯ ಕುಲಪತಿ ಪ್ರೊ| ಎಚ್.ಎಂ. ಮಹೇಶ್ವರಯ್ಯ ಭಾಗವಹಿಸುವರು ಎಂದರು.
ವಿಕಾಸ ಅಕಾಡೆಮಿ ಟ್ರಸ್ಟಿ ವಿ. ಶಾಂತರೆಡ್ಡಿ, ಜನ್ಮ ಶತಮಾನೋತ್ಸವ ಸ್ಮೃತಿ ಸಲಹೆಗಾರ ಡಾ| ಸ್ವಾಮಿರಾವ ಕುಲಕರ್ಣಿ, ಸ್ಮೃತಿ ಸಂಚಾಲಕ ಡಾ| ಶ್ರೀನಿವಾಸ ಸಿರನೂರಕರ, ಶ್ರೀನಗರೇಶ್ವರ ವೆಲ್ಫೇರ್ ಸೊಸೈಟಿ ಕಾರ್ಯದರ್ಶಿ ರವೀಂದ್ರ ಮುಕ್ಕಾ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ
Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು
Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ
Tourist spot: ಪ್ರವಾಸಿಗರ ಡೆತ್ಸ್ಪಾಟ್ ಆಗಿರುವ ಸಂಗಮ
Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು
MUST WATCH
ಹೊಸ ಸೇರ್ಪಡೆ
Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ
60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ
Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ
JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಅಮಾನತು