ಮಳೆಯಿಂದಾದ ನಷ್ಟಕ್ಕೆ ಶೀಘ್ರ ಪರಿಹಾರ ಕೊಡಿ

ಅಪರ ಜಿಲ್ಲಾಧಿಕಾರಿಗೆ ತುಂಗಭದ್ರಾ ರೈತ ಸಂಘದ ಪದಾಧಿಕಾರಿಗಳ ಮನವಿ

Team Udayavani, Sep 28, 2019, 12:32 PM IST

28-Sepctember-9

ಬಳ್ಳಾರಿ: ಜಿಲ್ಲೆಯಾದ್ಯಂತ ಕಳೆದ ಐದಾರು ದಿನಗಳಿಂದ ಸುರಿದ ಬಾರಿ ಮಳೆಗೆ ಕೊಟ್ಯಾಂತರ ರೂ. ಹಾನಿ ಸಂಭವಿಸಿದ್ದು, ಕೂಡಲೇ ಸ್ಥಳಕ್ಕೆ ಭೇಟಿ ನೀಡಿ ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿ ತುಂಗಭದ್ರಾ ರೈತ ಸಂಘದ ಪದಾಧಿಕಾರಿಗಳು ಅಪರ ಜಿಲ್ಲಾಧಿಕಾರಿ ಸತೀಶ್‌ ಕುಮಾರ್‌ ಅವರಿಗೆ ಶುಕ್ರವಾರ ಮನವಿ ಸಲ್ಲಿಸಿದರು.

ಕಳೆದ ಐದಾರು ದಿನಗಳಿಂದ ಜಿಲ್ಲೆಯಾದ್ಯಂತ ಸುರಿದ ಭಾರಿ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿದ್ದು, ರೈತರು ಬೆಳೆದ ನಾನಾ ಬೆಳೆಗಳು ಸಂಪೂರ್ಣ ಜಲಾವೃತವಾಗಿವೆ. ಇದರ ಜೊತೆಗೆ ನಗರ ಸೇರಿದಂತೆ ಗ್ರಾಮೀಣ ಭಾಗಗಳಲ್ಲಿ ಸಾಕಷ್ಟು ಮನೆಗಳು ಕುಸಿದಿದ್ದು, ವಾಸಿಸಲು ನೆಲೆ ಇಲ್ಲದಂತಾಗಿದೆ. ಅದರಲ್ಲೂ ಜಿಲ್ಲೆಯ ಸಿರುಗುಪ್ಪ ತಾಲೂಕಿನಲ್ಲಿ ಹೆಚ್ಚು ನಷ್ಟ ಸಂಭವಿಸಿದ್ದು, ಕೂಡಲೇ ಪರಿಹಾರ ಕ್ರಮಗಳನ್ನು ಅಧಿಕಾರಿಗಳು ಕೈಗೊಳ್ಳಬೇಕು. ನೆಲೆ ಕಳೆದುಕೊಂಡವರಿಗೆ, ಸೂರು ಕಲ್ಪಿಸಬೇಕು. ಲಕ್ಷಾಂತರ ರೂ. ಖರ್ಚು ಮಾಡಿ ನಾನಾ ಕಡೆ ರೈತರು ಬೆಳೆದ ಬೆಳೆಗಳು ಸಂಪೂರ್ಣ ಹಾನಿಯಾಗಿದ್ದು, ಕೂಡಲೇ ರೈತರಿಗೆ ಸೂಕ್ತ ಪರಿಹಾರ ಒದಗಿಸಬೇಕು ಎಂದು ಸಂಘದ ಅಧ್ಯಕ್ಷ ದರೂರು ಪುರುಷೋತ್ತಮಗೌಡ ಮನವಿಯಲ್ಲಿ ಒತ್ತಾಯಿಸಿದ್ದಾರೆ.

ಜಿಲ್ಲೆಯ ನಾನಾ ಕಡೆ ರೈತರ ಜಮೀನುಗಳಿಗೆ ನೀರು ನುಗ್ಗಿದ್ದು, ರೈತರು ಕಂಗಾಲಾಗಿದ್ದಾರೆ. ದರೂರು, ಮುಷ್ಟಗಟ್ಟೆ, ಕುರಗೋಡು ಸೇರಿದಂತೆ ನಾನಾ ಕಡೆ ಶಾಲಾ ಆವರಣದಲ್ಲಿ ನೀರು ನಿಂತಿದ್ದು, ಮಕ್ಕಳಿಗೆ ತೊಂದರೆಯಾಗಿದೆ. ಕೆಲ ಶಾಲೆಗಳಲ್ಲಿ ನೀರು ನುಗ್ಗಿ ಕೊಠಡಿಗಳು ಶಿಥಿಲಾವಸ್ಥೆಗೆ ತಲುಪಿವೆ. ಜಿಲ್ಲೆಯ ಬಹುತೇಕ ಕಡೆಗಳಲ್ಲಿ ಮಣ್ಣಿನ ಮನೆಗಳು ಕುಸಿದು ಬಿದ್ದಿವೆ. ಬಡ ಜನರು ನೆಲೆ ಕಳೆದುಕೊಂಡಿದ್ದಾರೆ. ಜಿಲ್ಲೆಯ ಅಸುಂಡಿ ಹಾಗೂ ಆಗಲೂರು ಗ್ರಾಮದಲ್ಲಿ ಹಳ್ಳಗಳು ತುಂಬಿ ಹರಿಯುತ್ತಿರುವ ಹಿನ್ನೆಲೆಯಲ್ಲಿ ಜನರು ಪರದಾಡುವಂತಾಗಿದೆ. ಎರಡೂ ಗ್ರಾಮಗಳಲ್ಲಿ ಮೃತಪಟ್ಟವರ ಅಂತ್ಯಕ್ರಿಯೆಗೆ ತುಂಬಿದ ಹಳ್ಳಗಳು ಅಡ್ಡಿಯಾದ ಘಟನೆಯೂ ನಡೆದಿದೆ. ಸಿರುಗುಪ್ಪ, ಬಳ್ಳಾರಿ ಸೇರಿದಂತೆ ನಾನಾ ಗ್ರಾಮಗಳಲ್ಲಿ ವಿದ್ಯುತ್‌ ಸಂಪರ್ಕ ಕಡಿತಗೊಂಡಿದ್ದು, ಕತ್ತಲಲ್ಲೇ ಕಾಲಕಳೆಯುವಂತಾಗಿದೆ.

ಜನ, ಜಾನುವಾರುಗಳ ಸ್ಥಿತಿ ಅಧೋಗತಿಯಾಗಿದ್ದು, ಕೂಡಲೇ ಜಿಲ್ಲಾಡಳಿತ ಸೂಕ್ತ ಪರಿಹಾರ ಕ್ರಮಗಳನ್ನು ಕೈಗೆತ್ತಿಕೊಳ್ಳಬೇಕು. ಕಂದಾಯ ಇಲಾಖೆ, ತೋಟಗಾರಿಕೆ, ಕೃಷಿ, ಜೆಸ್ಕಾಂ, ಲೋಕೋಪಯೋಗಿ ಇಲಾಖೆ, ಜಿಲ್ಲಾ ಪಂಚಾಯತ್‌, ಗ್ರಾಮ ಲೆಕ್ಕಾ ಧಿಕಾರಿಗಳು ಕೂಡಲೇ ಕಾರ್ಯಪ್ರವೃತ್ತರಾಗಿ ಜನರಿಗೆ ಅಗತ್ಯ ಸೌಲಭ್ಯ ಕಲ್ಪಿಸಲು ಜಿಲ್ಲಾ ಧಿಕಾರಿಗಳು ಸೂಚನೆ ನೀಡಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಈ ಸಂದರ್ಭದಲ್ಲಿ ತುಂಗಭದ್ರ ರೈತ ಸಂಘದ ಟಿ.ರಂಜಾನ್‌ ಸಾಬ್‌, ಗಂಗಾವತಿ ವಿರೇಶ್‌, ಸಣ್ಣಮಲ್ಲಪ್ಪ, ಜಾಲಿಹಾಳ್‌ ಶ್ರೀಧರಗೌಡ, ಶಾನವಾಸಪುರ ಶರಣಗೌಡ, ಶ್ರೀಧರಗಡ್ಡೆ ವೀರನಗೌಡ, ದರೂರು ಕ್ಯಾಂಪ್‌ ವೀರಭದ್ರರಾವ್‌, ಮುಷ್ಟಗಟ್ಟೆ ಭೀಮನಗೌಡ, ಕುರುಬರ ಸಿದ್ದಪ್ಪ, ಶೆಕ್ಷಾವಲಿ, ದೊಡ್ಡದಾಸಪ್ಪ, ಚಂದ್ರಶೇಖರ ಸೇರಿದಂತೆ ಇತರರಿದ್ದರು.

ಟಾಪ್ ನ್ಯೂಸ್

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.