ರಾಜ್ಯದ 3ನೇ ಕರಡಿಧಾಮವಾಗಿ ಹಿರೇಕಲ್ಲು ಗುಡ್ಡ

10,088 ಹೆಕ್ಟೇರ್‌ ಹೊಂದಿದ್ದು 45ಕ್ಕೂ ಹೆಚ್ಚು ಕರಡಿಗಳಿವೆ „ರಾಜ್ಯ ವನ್ಯಜೀವಿ ಮಂಡಳಿಯಿಂದ ಕರಡಿಧಾಮ ಘೋಷಣೆ

Team Udayavani, Sep 28, 2019, 5:09 PM IST

28-Sepctember-26

ಎನ್‌. ನಂಜುಂಡೇಗೌಡ
ಹಾಸನ:
ಅರಸೀಕೆರೆ ತಾಲೂಕಿನ ಹಿರೇಕಲ್ಲುಗುಡ್ಡ ಮೀಸಲು ಅರಣ್ಯ (ನಾಗಪುರಿ ಅರಣ್ಯ) ರಾಜ್ಯದ 3ನೇ ಕರಡಿಧಾಮ ಎಂಬ ಖ್ಯಾತಿಗೆ ಪಾತ್ರವಾಗಿದೆ. ಬಳ್ಳಾರಿ ಜಿಲ್ಲೆಯ ದರೋಜಿ ಮತ್ತು ಗುಡೆಕೋಟೆ ಕರಡಿಧಾಮಗಳ ನಂತರ ಹಿರೇಕಲ್ಲುಗುಡ್ಡ ಕರಡಿಧಾಮ ರಾಜ್ಯದ 3ನೇ ಕರಡಿಧಾಮ ಎಂದು ಘೋಷಣೆಯಾಗಿದೆ.

ಹಿರೇಕಲ್ಲುಗುಡ್ಡ ಅರಣ್ಯವನ್ನು ಕರಡಿಧಾಮವಾಗಿ ಘೋಷಿಸಬೇಕೆಂಬ ಬಹಳ ಕಾಲದ ಬೇಡಿಕೆಯನ್ನು ರಾಜ್ಯ ಸರ್ಕಾರ ಕೊನೆಗೂ ಈಡೇರಿಸಿದೆ. ಗುರುವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ವನ್ಯಜೀವಿ ಮಂಡಳಿ ಸಭೆಯು ಹಿರೇಕಲ್ಲುಗುಡ್ಡ
ಮೀಸಲು ಅರಣ್ಯವನ್ನು ಕರಡಿಧಾಮವಾಗಿ ಘೋಷಿಸಲು ಅನುಮೋದನೆ ನೀಡಿದೆ.

ಅಧಿಸೂಚನೆ ಬಳಿಕ ಕ್ರಿಯಾಯೋಜನೆ: ಅರಸೀಕೆರೆ ತಾಲೂಕಿನ ಹಿರೇಗುಡ್ಡ (ನಾಗಪುರಿ), ರಾಮೇನಹಳ್ಳಿ, ಚಾಕನಕಟ್ಟೆ, ಗರುಡನಗಿರಿ ಮೀಸಲು ಅರಣ್ಯವನ್ನೊಳಗೊಂಡ 10,088ಹೆಕ್ಟೇರ್‌ ಪ್ರದೇಶವನ್ನು ಕರಡಿಧಾಮವನ್ನಾಗಿ ಘೋಷಿಸಲು ರಾಜ್ಯ ವನ್ಯಜೀವಿ ಮಂಡಳಿ ಸಭೆ ಅನುಮೋದನೆ ನೀಡಿದ್ದು, ರಾಜ್ಯಪತ್ರದಲ್ಲಿ ಅಧಿಸೂಚನೆ ಪ್ರಕಟವಾದ ನಂತರ ಅರಣ್ಯ ಇಲಾಖೆ ಕರಡಿಧಾಮದ ಅಭಿವೃದ್ಧಿಗೆ ಕ್ರಿಯಾ ಯೋಜನೆ ರೂಪಿಸಲಿದೆ.

ಪ್ರಸ್ತಾವನೆ ಸಲ್ಲಿಸಲಾಗಿತ್ತು: 2016 -17ನೇ ಸಾಲಿನಲ್ಲಿ ಬೆಂಗಳೂರಿನ ಬನ್ನೇರುಘಟ್ಟ ಅರಣ್ಯ ವಲಯದ ನೇತೃತ್ವದಲ್ಲಿ ಸಂಸ್ಥೆಯೊಂದು ಅರಸೀಕೆರೆ ತಾಲೂಕಿನ ಹಿರೆಕಲ್ಲುಗುಡ್ಡ ಅರಣ್ಯದಲ್ಲಿ ಗಣತಿ ನಡೆಸಿದಾಗ ಅಲ್ಲಿ 30ಕ್ಕೂ ಹೆಚ್ಚು ಕರಡಿ, 100 ಕ್ಕೂ ಹೆಚ್ಚು ಚಿರತೆಗಳಿವೆ ಎಂಬುದನ್ನು ದೃಢಪಡಿಸಿತ್ತು. ಆನಂತರ ಆ ಪ್ರದೇಶವನ್ನು ಕರಡಿಧಾಮವೆಂದು ಘೋಷಿಸಿ ಅಭಿವೃದ್ಧಿಪಡಿಸ
ಬೇಕೆಂದು ಅರಣ್ಯ ಇಲಾಖೆ ಹಾಸನ ವಿಭಾಗ ಪ್ರಸ್ತಾವನೆ ಸಲ್ಲಿಸಿತ್ತು. ಆ ಪ್ರಸ್ತಾವನೆಗೆ ಈಗ ಸರ್ಕಾರ ಅನುಮೋದನೆ ನೀಡಿದೆ.

45ಕ್ಕೂ ಹೆಚ್ಚು ಕರಡಿಗಳಿವೆ: 2016 -17ನೇ ಸಾಲಿನಲ್ಲಿ ಸುಮಾರು 30 ಕರಡಿಗಳಿವೆ ಎಂಬುದು ಗಣತಿಯಿಂದ ದೃಢಪಟ್ಟಿತ್ತು. ಕಳೆದ 3 ವರ್ಷಗಳಲ್ಲಿ ಕರಡಿಗಳ ಸಂಖ್ಯೆ ವೃದ್ಧಿಸಿದೆ. ಈಗ 45 ಕ್ಕೂ ಹೆಚ್ಚು ಕರಡಿಗಳಿವೆ ಎಂದು ಅರಣ್ಯ ಇಲಾಖೆ ಅಂದಾಜು ಮಾಡಿದೆ. ಕರಡಿಗಳ ಜೊತೆಗೆ ಅಲ್ಲಿ ಕಡವೆ, ಕೃಷ್ಣಮೃಗ, ಕಾಡುಬೆಕ್ಕು, ತೋಳಗಳೂ ಬಹಳಷ್ಟು ಇವೆ ಎಂಬುದನ್ನು ಅರಣ್ಯ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.