ತುಂಬಿದ ಕಳಸಕೊಪ್ಪ ಕೆರೆ: ಕೋಡಿ ಮೂಲಕ ನೀರು ಹೊರಗೆ
Team Udayavani, Sep 28, 2019, 7:50 PM IST
ಚಂದ್ರಶೇಖರ ಆರ್.ಎಚ್
ಕಲಾದಗಿ: ಜಿಲ್ಲೆಯ ದೊಡ್ಡ ಕೆರೆಗಳಲ್ಲಿ ಒಂದಾದ ಕಳಸಕೊಪ್ಪ ಕೆರೆ ಭರ್ತಿಯಾಗಿದೆ. ಬಾಗಲಕೋಟೆ ತಾಲೂಕಿನ ಐದು ಗ್ರಾಮಗಳ 1142 ಹೆಕ್ಟೇರ್ ಪ್ರದೇಶ ನೀರಾವರಿಗೆ ಒಳಪಡಿಸುವ ಕಳಸಕೊಪ್ಪ ಕೆರೆ ಬುಧವಾರ ರಾತ್ರಿ ಸಂಪೂರ್ಣವಾಗಿ ತುಂಬಿ ಕೋಡಿಯ ಮೂಲಕ ನೀರು ಹೊರ ಬೀಳುತ್ತಿದೆ.
ಅಭಾವ ಕಡಿಮೆ: ಕೆರೆ ತುಂಬಿಕೊಳ್ಳುವುದರಿಂದ ಈ ಭಾಗದ ಹತ್ತಾರು ಗ್ರಾಮಗಳ ರೈತರ ಕೊಳವೆ ಬಾವಿಗಳು ಪುನಶ್ಚೇತನಗೊಳ್ಳುತ್ತಿದ್ದು ರೈತರಿಗೆ ಆಸರೆಯಾಗಿದೆ.
ಕೊಡಿ ಮೂಲಕ ಹೊರ: ಕೆರೆಗೆ ಹೇರಕಲ್ ದಕ್ಷಿಣ ಏತ ನೀರಾವರಿ ಯೋಜನೆ ಮೂಲಕ ಕೆರೆಗೆ ನೀರು ತುಂಬಿಸುತ್ತಿರುವುದು ಈ ಭಾಗದ ರೈತರ ಮೊಗದಲ್ಲಿ ಸಂತಸ ಉಂಟಾಗಿದೆ. 2016ರಲ್ಲಿ ಈ ಕೆರೆಗೆ ಮೊದಲ ಬಾರಿಗೆ ದಕ್ಷಿಣ ಹೇರಕಲ್ ಏತ ನೀರಾವರಿ ಯೋಜನೆ ಮೂಲಕ ನೀರು ತುಂಬಲು ಚಾಲನೆ ನೀಡಲಾಗಿತ್ತು, ಆ ವರ್ಷ ಪೂರ್ಣ ಪ್ರಮಾಣದಲ್ಲಿ ತುಂಬಿರಲಿಲ್ಲ, 2017, 2108ರಲ್ಲಿ ಕೆರೆಯು ತುಂಬಿ ಕೊಡಿಯ ಮೂಲಕ ನೀರು ಹೊರ ಚೆಲ್ಲಿದೆ. ಈ ವರ್ಷವೂ ತುಂಬಿ ಕೊಡಿಯ ಮೂಲಕ ಹೊರ ಚೆಲ್ಲುತ್ತಿದೆ. ರೈತರು ಹರ್ಷ ವ್ಯಕ್ತ ಪಡಿಸುತ್ತಿದ್ದಾರೆ. ಮಳೆಯಿಂದ ಶೀಘ್ರ ಭರ್ತಿ: ಪ್ರಸಕ್ತ ವರ್ಷ ಜು 14ರಂದು ಕೆರೆಗೆ ನೀರು ತುಂಬಲು ಚಾಲನೆ ನೀಡಲಾಗಿತ್ತು. ಈ ವರ್ಷ
ಕೆರೆಯು ಬಹು ಬೇಗ ತುಂಬಿಕೊಂಡಿದೆ. ನಿರಂತರ ಯಾವುದೇ ಅಡೆ ತಡೆ ಇಲ್ಲದೆ ಜಾಕ್ವೆಲ್ ಪಂಪ್ಹೌಸ್ ಮೂಲಕ ನೀರು ತುಂಬಿಸುತ್ತಿರುವುದು ಮತ್ತು ಕಳೆದ ಮೂರು ದಿನದಿಂದ ಈ ಭಾಗದಲ್ಲಿ ಉತ್ತಮ ಮಳೆಯಾಗುತ್ತಿದ್ದು, ಹಳ್ಳ ಕೊಳ್ಳಗಳು
ತುಂಬಿ ಬೋರ್ಗರೆಯುತ್ತಿವೆ.
ಸಣ್ಣ ಜರಿಯಂತಾದ ಕೋಡಿ: ಕಳಸಕೊಪ್ಪ ಕೆರೆ 200 ಹೆಕ್ಟೇರ್ ಪ್ರದೇಶವನ್ನು ಮುಳುಗಡೆಯಾಗಿಸಿ ನೀರು ತುಂಬಿ ಹೊರಚೆಲ್ಲುವ ಓಗಿ ಮಾದರಿಯ ಕೋಡಿ 909 ಅಡಿ ಉದ್ದವಿದೆ.
0.24 ಟಿಎಂ.ಸಿ ನೀರು: ಕೆರೆ ನೀರು ನಿಲ್ಲುವ ಎತ್ತರ 5.4
ಮೀಟರನಷ್ಟಿದ್ದು, 17.8 ಅಡಿ ನೀರು ಸಂಗ್ರಹಣಾ ಸಾಮರ್ಥ ಇದ್ದು ನೀರಿನ ಮಟ್ಟ 5.4 ಮೀಟರ್ನಷ್ಟು ತುಂಬಿಕೊಂಡು 17.8 ಅಡಿ ತುಂಬಿಕೊಂಡಿದೆ. ಒಟ್ಟು 0.24 ಟಿಎಂ.ಸಿ ನೀರು ಸಂಗ್ರಹಗೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rabkavi Banhatti: ಶತಮಾನದ ಸೋಮವಾರಪೇಟೆ ಸಮಸ್ತ ದೈವ ಮಂಡಳಿಯ ಗರಡಿ ಮನೆ
Mahalingpur: ತೆರಬಂಡಿ ಸ್ಪರ್ಧೆಯ ಹೋರಿ ದಾಖಲೆಯ 10.10 ಲಕ್ಷಕ್ಕೆ ಖರೀದಿಸಿದ ರೈತ
Rabkavi Banhatti: ಪ್ರಾಚೀನ ದೇವಸ್ಥಾನಕ್ಕೆ ಬೇಕಿದೆ ರಕ್ಷಣೆ
ಆನ್ಲೈನ್ ವಂಚನೆ: 6 ವರ್ಷದಲ್ಲಿ 4 ಕೋಟಿ ರೂ. ಕಳೆದುಕೊಂಡ ವಿದ್ಯಾವಂತರು!
Online ವಂಚಕರಿದ್ದಾರೆ ಹುಷಾರ್..!”ಉದಯವಾಣಿ’ ಇಂದಿನಿಂದ ಸರಣಿ ವರದಿ ಆರಂಭಿಸಿದೆ
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
Haveri; ಇಸ್ಪೀಟ್ ಆಟಕ್ಕೆ ಲಂಚ:ಪಿಎಸ್ಐ, ಕಾನ್ ಸ್ಟೆಬಲ್ ಲೋಕಾಯುಕ್ತ ಬಲೆಗೆ
Kunigal: ಗ್ಯಾಸ್ ಸಿಲಿಂಡರ್ ಸ್ಟವ್ ಸ್ಪೋಟ :6 ಮಂದಿಗೆ ತೀವ್ರ ಗಾಯ
Belagavi ರೈಲಿನಲ್ಲಿ ಹತ್ಯೆಗೈದು ಪರಾರಿಯಾದ ಆರೋಪಿ ಪತ್ತೆಗೆ ನಾಲ್ಕು ತಂಡ ರಚನೆ
Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ
ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್