ಗೌರಿ, ಗಣೇಶ ಮೂರ್ತಿ ವಿಸರ್ಜನೆ
Team Udayavani, Sep 29, 2019, 3:00 AM IST
ಪಿರಿಯಾಪಟ್ಟಣ: ತಾಲೂಕಿನ ರಾವಂದೂರು ಬಳಿಯ ಹರಳಹಳ್ಳಿ ಗೌರಮ್ಮ ತಾಯಿ ದೇವಾಲಯದಲ್ಲಿ ಪ್ರತಿಷ್ಠಾಪಿಸಿದ್ದ ಗಣೇಶ ಮೂರ್ತಿ ಹಾಗೂ ಗೌರಿ ವಿಗ್ರಹಗಳ ವಿಸರ್ಜನಾ ಕಾರ್ಯಕ್ರಮ ಅದ್ಧೂರಿಯಾಗಿ ಜರುಗಿತು.
ದೇವಾಲಯದಿಂದ ಮೂರ್ತಿಗಳನ್ನು ಹೊರತಂದು ಬಗೆಬಗೆಯ ಹೂ ಹಾಗೂ ವಿದ್ಯುತ್ ದೀಪಾಲಂಕಾರ ಮಾಡಿ ಅಲಂಕೃತ ಎತ್ತಿನ ಗಾಡಿಯಲ್ಲಿ ಪ್ರತಿಷ್ಠಾಪಿಸಿ, ಗ್ರಾಮದ ಬೀದಿಗಳಲ್ಲಿ ಮೆರವಣಿಗೆ ನಡೆಸಲಾಯಿತು. ಈ ವೇಳೆ ಪ್ರತಿ ಮನೆಗಳ ಬಳಿ ಪೂಜೆ ಸಲ್ಲಿಸಿದ್ದು ವಿಶೇಷವಾಗಿತ್ತು.
ಬಳಿಕ ಗ್ರಾಮದ ಕೆರೆಯ ಬಳಿ ಕಳಶ ಪೂಜೆ ನಡೆಸಿ ಗೌರಿ ಗಣೇಶ ಮೂರ್ತಿಗಳನ್ನು ವಿಸರ್ಜಿಸಲಾಯಿತು. ದೇವಾಲಯ ಸಮಿತಿ ವತಿಯಿಂದ ಅನ್ನಸಂತರ್ಪಣೆ ನಡೆಯಿತು. ಗೌರಿ ಗಣೇಶ ಹಬ್ಬದ ದಿನದಿಂದ ದೇವಾಲಯದಲ್ಲಿ ಮೂರ್ತಿಗಳನ್ನು ಪ್ರತಿಷ್ಠಾಪಿಸಿ ಪ್ರತಿದಿನ ವಿಶೇಷ ಪೂಜೆ ನೆರವೇರಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಇನ್ಸ್ಟಾ ಪ್ರೊಫೈಲ್ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..
NewsClick ಸ್ಥಾಪಕ ಪ್ರಬೀರ್ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!
T20 ವಿಶ್ವಕಪ್ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್
Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ
ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್: ಪೋಷಕರಿಗೆ ಆತಂಕ