ಮೆಟ್ರೋ ಎರಡನೇ ಹಂತ: ಗಡುವು ವಿಸ್ತರಣೆ


Team Udayavani, Sep 29, 2019, 3:09 AM IST

metro

ಬೆಂಗಳೂರು: “ನಮ್ಮ ಮೆಟ್ರೋ’ ಎರಡನೇ ಹಂತದ ಕಾಮಗಾರಿ ಪೂರ್ಣಗೊಳಿಸಲು ಈ ಹಿಂದೆ ನಿಗದಿಪಡಿಸಿದ್ದ ಗಡುವು ಮತ್ತೆ ವಿಸ್ತರಣೆಯಾಗಿದ್ದು, 2024ಕ್ಕೆ ಬಹುನಿರೀಕ್ಷಿತ ಯೋಜನೆಯು ಸೇವೆಗೆ ಮುಕ್ತವಾಗಲಿದೆ. ಈ ಮೂಲಕ ದಶಕದ ಯೋಜನೆ ಇದಾಗಲಿದೆ.  72 ಕಿ.ಮೀ. ಉದ್ದದ 26,405 ಕೋಟಿ ಅಂದಾಜು ವೆಚ್ಚದ ಈ ಯೋಜನೆಗೆ 2012ರಲ್ಲಿ ರಾಜ್ಯ ಸರ್ಕಾರ 2014ರಲ್ಲಿ ಕೇಂದ್ರ ಸರ್ಕಾರದಿಂದ ಅನುಮೋದನೆ ದೊರಕಿತ್ತು.

2020ರಲ್ಲಿ ಇದನ್ನು ಪೂರ್ಣಗೊಳಿಸುವ ಗುರಿ ಹೊಂದಲಾಗಿತ್ತು. ಆದರೆ, ಹಲವು ಕಾರಣಗಳಿಂದ ಅನೇಕ ಬಾರಿ ಗಡುವು ವಿಸ್ತರಣೆಯಾಗಿತ್ತು. ಇತ್ತೀಚೆಗೆ 2023ರ ಗುಡುವು ನೀಡಲಾಗಿತ್ತು. ಈಗ ಮತ್ತೆ ಒಂದೂವರೆ ವರ್ಷ ಮುಂದೂಡಲ್ಪಟ್ಟಿದೆ. ಎರಡನೇ ಹಂತದ ಜತೆಗೆ ನಾಗವಾರ-ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಮಾರ್ಗ, ಕೆ.ಆರ್‌. ಪುರ- ಸಿಲ್ಕ್ ಬೋರ್ಡ್‌ ಮಾರ್ಗದ ಯೋಜನೆಗಳನ್ನೂ ಇದೇ ಅವಧಿಯಲ್ಲಿ ಮಾಡಿಮುಗಿಸುವುದಾಗಿ ಸ್ವತಃ ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿಎಲ್) ತನ್ನ ವೆಬ್‌ಸೈಟ್‌ನಲ್ಲಿ ಹೇಳಿಕೊಂಡಿದೆ.

ಈ ಯೋಜನೆಯಲ್ಲಿ ಮೊದಲಿಗೆ ನಾಯಂಡಹಳ್ಳಿಯ ಮೈಸೂರು ರಸ್ತೆ-ಕೆಂಗೇರಿ ಹಾಗೂ ಯಲಚೇನಹಳ್ಳಿ-ಅಂಜನಾಪುರ ಮಾರ್ಗಗಳು ಸೇವೆಗೆ ಮುಕ್ತಗೊಳ್ಳಲಿವೆ. ಇಲ್ಲಿನ ಕಾಮಗಾರಿಯು 2020ರ ಅಂತ್ಯಕ್ಕೆ ಅಥವಾ 2021ರ ಆರಂಭದಲ್ಲಿ ಪೂರ್ಣಗೊಳ್ಳಲಿದೆ. ತದನಂತರದಲ್ಲಿ ಉಳಿದೆರಡು ವಿಸ್ತರಿಸಿದ ಮಾರ್ಗಗಳನ್ನು ಲೋಕಾರ್ಪಣೆಗೊಳಿಸಲಾಗುವುದು. ಕೊನೆಯಲ್ಲಿ ಅಂದರೆ 2024ಕ್ಕೆ ಗೊಟ್ಟಿಗೆರೆ- ನಾಗವಾರ, ಹೊರವರ್ತುಲ ರಸ್ತೆಯಲ್ಲಿ ಬರುವ ಕೆ.ಆರ್‌. ಪುರ- ಸಿಲ್ಕ್ಬೋರ್ಡ್‌ ಹಾಗೂ ನಾಗವಾರ-ಹೆಬ್ಟಾಳ-ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಪೂರ್ಣಗೊಳಿಸಲಾಗುವುದು ಎಂದು ವಿವರಿಸಿದೆ.

ವಿಸ್ತರಣೆಗೆ ಕಾರಣ: ಭೂಸ್ವಾಧೀನ ಪ್ರಕ್ರಿಯೆಯಲ್ಲಿನ ವಿಳಂಬ, ಗುತ್ತಿಗೆದಾರರ ಬದಲಾವಣೆ, ಚುನಾವಣಾ ನೀತಿ ಸಂಹಿತೆಯಂತಹ ಹಲವು ಅನಿವಾರ್ಯ ಕಾರಣಗಳಿಂದ ಕಾಮಗಾರಿ ವಿಳಂಬವಾಗಿದೆ ಎಂದೂ ನಿಗಮವು ಸಮಜಾಯಿಷಿ ನೀಡಿದೆ. ಅನಿಲ ಕೊಳವೆ ಮಾರ್ಗ ಹಾದುಹೋಗಿದ್ದರಿಂದ ವಿಮಾನ ನಿಲ್ದಾಣದ ಮಾರ್ಗದ ವಿನ್ಯಾಸ ಬದಲಾವಣೆ ಮಾಡಲಾಗಿದೆ.

ಇನ್ನು ಗೊಟ್ಟಿಗೆರೆ-ನಾಗವಾರ ಮಾರ್ಗದ ಸುರಂಗ ಕಾಮಗಾರಿಗೆ ಟೆಂಡರ್‌ ಕರೆದಿದ್ದರೂ ಅಂದಾಜು ಮೊತ್ತಕ್ಕಿಂತ ಹೆಚ್ಚು ಮೊತ್ತವನ್ನು ಉಲ್ಲೇಖೀಸಿದ್ದರಿಂದ ಮರುಟೆಂಡರ್‌ ಕರೆಯಬೇಕಾಯಿತು. ಕೆ.ಆರ್‌. ಪುರ- ಸಿಲ್ಕ್ ಬೋರ್ಡ್‌ ಮಾರ್ಗದ ಮೊದಲ ಟೆಂಡರ್‌ ರದ್ದಾಗಿದೆ. ಇದೇ ಯೋಜನೆಯಲ್ಲಿ ಕೆ.ಆರ್‌. ಪುರದಲ್ಲಿ ಸಿಗ್ನಲ್‌ರಹಿತ ಕಾರಿಡಾರ್‌ ನಿರ್ಮಿಸುವ ಪ್ರಯತ್ನ ಆರಂಭವಾಗಿದೆ. ಇದಕ್ಕಾಗಿ ಮತ್ತಷ್ಟು ಸಮಯ ಬೇಕಿದೆ ಎಂದು ಹೇಳಿದೆ.

ಇಡೀ ಆಗಸ್ಟ್‌ ತಿಂಗಳಲ್ಲಿ ಮೆಟ್ರೋ ರೈಲಿನಲ್ಲಿ 1.26 ಕೋಟಿ ಪ್ರಯಾಣಿಕರು ಸಂಚರಿಸಿದ್ದು, ಇದರಿಂದ 33.44 ಕೋಟಿ ರೂ. ಆದಾಯ ಬಂದಿದೆ. ಈ ಪೈಕಿ ಶೇ. 68.31ರಷ್ಟು ಜನ ಸ್ಮಾರ್ಟ್‌ ಕಾರ್ಡ್‌ ಬಳಸಿದ್ದು, ಶೇ. 37.76ರಷ್ಟು ಜನ ಟೋಕನ್‌ ತೆಗೆದುಕೊಂಡು ಪ್ರಯಾಣಿಸಿದ್ದಾರೆ.

ವಿವಿಧ ಮಾರ್ಗಗಳ ಪೂರ್ಣಗೊಳಿಸಲು ಹಾಕಿಕೊಂಡ ಗಡುವು ವಿವರ
ಮಾರ್ಗ ಉದ್ದ (ಕಿ.ಮೀ.ಗಳಲ್ಲಿ) ಗಡುವು
ಬೈಯ್ಯಪ್ಪನಹಳ್ಳಿ- ವೈಟ್‌ಫೀಲ್ಡ್ 15.50 2021
ಮೈಸೂರು ರಸ್ತೆ- ಕೆಂಗೇರಿ 6.46 2021
ಯಲಚೇನಹಳ್ಳಿ- ಅಂಜನಾಪುರ 6.29 2021
ನಾಗಸಂದ್ರ- ಬಿಐಇಎಲ್‌ 3.77 2021
ಆರ್‌.ವಿ. ರಸ್ತೆ- ಬೊಮ್ಮಸಂದ್ರ 18.82 2021
ನಾಗವಾರ- ವಿಮಾನ ನಿಲ್ದಾಣ 29 2023
ಕೆ.ಆರ್‌. ಪುರ- ಸಿಲ್ಕ್ ಬೋರ್ಡ್‌ 17 2024
ಗೊಟ್ಟಿಗೆರೆ- ನಾಗವಾರ 21.25 2024

ಟಾಪ್ ನ್ಯೂಸ್

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.