ಪಾಣೆಮಂಗಳೂರು: ನದಿಗೆ ಹಾರಿದ ಮೂವರು; ಮಹಿಳೆ ಸಾವು
Team Udayavani, Sep 29, 2019, 12:26 AM IST
ಬಂಟ್ವಾಳ: ಮಂಗಳೂರು – ಬೆಂಗಳೂರು ಹೆದ್ದಾರಿಯ ಪಾಣೆಮಂಗಳೂರು ಸೇತುವೆಯಲ್ಲಿ ಶನಿವಾರ ರಾತ್ರಿ ಮೂವರು ನೇತ್ರಾವತಿ ನದಿಗೆ ಹಾರಿದ್ದಾರೆ ಎನ್ನಲಾಗಿದ್ದು, ಈ ಪೈಕಿ ಮಹಿಳೆ ಸಾವನ್ನಪ್ಪಿದ್ದಾರೆ.
ಮೈಸೂರು ಪಶ್ಚಿಮದ ನೋಂದಣಿ ಸಂಖ್ಯೆ ಹೊಂದಿರುವ ಇಕೋ ಕಾರಿನಲ್ಲಿ ಆಗಮಿಸಿದ್ದ ಇವರು ಮೊದಲು ತಮ್ಮ ನಾಯಿಯನ್ನು ನದಿಗೆ ದೂಡಿ, ಬಳಿಕ ನೀರಿಗೆ ಹಾರಿದ್ದಾರೆ ಎಂದು ಹೇಳಲಾಗುತ್ತಿದೆ.
ಹೆದ್ದಾರಿಯ ಹೊಸ ಸೇತುವೆಯಲ್ಲಿ ಇವರು ನದಿಗೆ ಹಾರಿದ್ದು, ಮಹಿಳೆಯನ್ನು ಹಳೆಸೇತುವೆ ಬಳಿ ಗೂಡಿನ ಬಳಿಯ ಯುವಕರು ಮೇಲೆತ್ತಿದ್ದಾರೆ. ಅವರ ನ್ನು ಆಸ್ಪತ್ರೆಗೆ ಸಾಗಿಸಲಾಗಿದ್ದು, ಅಲ್ಲಿ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಇವರ ಗುರುತು ಪತ್ತೆಯಾಗಿಲ್ಲ.
ಮತ್ತಿಬ್ಬರಲ್ಲಿ ಒಬ್ಬ ಗಂಡಸು ಹಾಗೂ ಮಗು ಎಂದು ಕೆಲವರು ಹೇಳುತ್ತಿದ್ದು, ಮತ್ತೆ ಕೆಲವರು ಮಹಿಳೆ ಮತ್ತು ಗಂಡಸು ಮಾತ್ರ ಇದ್ದರು ಎನ್ನುತ್ತಿದ್ದಾರೆ.
ಅವರು ಬಂದಿದ್ದ ಕಾರು ಸೇತುವೆಯ ಬಳಿ ಪತ್ತೆಯಾಗಿದೆ. ಬಂಟ್ವಾಳ ನಗರ ಪೊಲೀಸರು ಸ್ಥಳಕ್ಕೆ ತೆರಳಿ ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ