ಪುಣೆ ಮಾದರಿ ಕೈಗಾರಿಕಾ ಅಭಿವೃದ್ಧಿ ಕಾರ್ಯಪಡೆ


Team Udayavani, Sep 29, 2019, 9:59 AM IST

huballi-tdy-2

ಹುಬ್ಬಳ್ಳಿ: ಉತ್ತರ ಕರ್ನಾಟಕದಲ್ಲಿ ಫುಡ್‌ ಪಾರ್ಕ್‌ ಮಾಡಲು ಸರಕಾರ ಸಿದ್ಧವಿದ್ದು, ಇದಕ್ಕೆ ಅಗತ್ಯ ಜಮೀನು ನೀಡಲಾಗುವುದು ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ ಶೆಟ್ಟರ ಹೇಳಿದರು.

ನಗರದ ಡೆನಿಸನ್ಸ್‌ ಹೋಟೆಲ್‌ನಲ್ಲಿ ದಿ ಇಂಡಸ್‌ ಎಂಟರ್‌ಪ್ರಿನರ್ (ಟೈ) ಹುಬ್ಬಳ್ಳಿ ಶನಿವಾರ ಆಯೋಜಿಸಿದ್ದ “ಹುಬ್ಬಳ್ಳಿ-ಧಾರವಾಡ ಪ್ರಗತಿಗೆ ರೂಪುರೇಷೆ’ ಕುರಿತ ಸಂವಾದದಲ್ಲಿ ಅವರು ಮಾತನಾಡಿದರು.

ಉತ್ತರ ಕರ್ನಾಟಕದ ಸೂಕ್ತ ಜಾಗದಲ್ಲಿ ಫುಡ್‌ಪಾರ್ಕ್‌ ಕ್ಷೇತ್ರದಲ್ಲಿ ಹೂಡಿಕೆ ಮಾಡಲು ಆಸಕ್ತಿಯಿರುವ ಕಂಪನಿಗಳು ಮುಂದೆ ಬಂದರೆ ಅಗತ್ಯ ಸೌಲಭ್ಯ ಕಲ್ಪಿಸಲಾಗುವುದು. 300 ಎಕರೆವರೆಗೂ ಜಮೀನು ನೀಡಲಾಗುವುದು ಎಂದರು. ಪತಂಜಲಿ ಸಂಸ್ಥೆ ಫುಡ್‌ಪಾರ್ಕ್‌ ಉದ್ಯಮಕ್ಕೆ ಆಸಕ್ತಿ ತೋರಿದೆ. ದಕ್ಷಿಣ ಭಾರತದಲ್ಲಿ ಹೂಡಿಕೆ ಮಾಡಲು ಸಂಸ್ಥೆ ತೀರ್ಮಾನಿಸಿದ್ದು, ಉತ್ತರ ಕರ್ನಾಟಕದಲ್ಲಿ ಅವರು ಹೂಡಿಕೆ ಮಾಡಿದರೆ ಈ ಭಾಗದಲ್ಲಿ ನೂರಾರು ಜನರಿಗೆ ಉದ್ಯೋಗ ಸಿಗುತ್ತದೆ. ಆಯುರ್ವೇದ ಗಿಡಮೂಲಿಕೆ ಬೆಳೆಯುವ ರೈತರಿಗೆ ಒಳಿತಾಗಲಿದೆ ಎಂದು ಹೇಳಿದರು.

ಉತ್ತರ ಕರ್ನಾಟಕ ಕೈಗಾರಿಕಾ ಅಭಿವೃದ್ಧಿ ಪ್ರಾಧಿಕಾರ ನಿರ್ಮಿಸುವ ಬಗ್ಗೆ ಈಗಾಗಲೇ ಚರ್ಚಿಸಲಾಗಿದೆ. ಶೀಘ್ರದಲ್ಲೇ ಈ ನಿಟ್ಟಿನಲ್ಲಿ ನಿರ್ಧಾರ ಮಾಡಲಾಗುವುದು. ಉತ್ತರ ಕರ್ನಾಟಕ ಸೇರಿದಂತೆ ಕೈಗಾರಿಕೆಯಲ್ಲಿ ಹಿಂದುಳಿದ ಪ್ರದೇಶಗಳಲ್ಲಿ ಉದ್ಯಮ ಕ್ಷೇತ್ರ ಅಭಿವೃದ್ಧಿಪಡಿಸಲಾಗುವುದು ಎಂದು ತಿಳಿಸಿದರು.

ಮುಂಬೈ ಹಾಗೂ ದೆಹಲಿಯಲ್ಲಿ ಸ್ಲಾಟ್‌ ಸಿಗದ ಕಾರಣ ಹುಬ್ಬಳ್ಳಿಯಿಂದ ನೇರ ವಿಮಾನ ಸೇವೆ ಕಲ್ಪಿಸಲು ಸಾಧ್ಯವಾಗುತ್ತಿಲ್ಲ. ಆದರೆ ಶೀಘ್ರದಲ್ಲಿಯೇ ದೆಹಲಿಗೆ ನೇರ ವಿಮಾನ ಕಲ್ಪಿಸಲಾಗುವುದು. ಅಲ್ಲದೇ ಮುಂಬೈಗೆ ಮತ್ತೂಂದು ವಿಮಾನ ಸೇವೆ ಆರಂಭಿಸಲಾಗುವುದು ಎಂದು ನುಡಿದರು.

3 ಸಾವಿರ ಬದಲು ನೂರಷ್ಟೆ: 3000ಕ್ಕೂ ಅಧಿಕ ಜನರಿಗೆ ಉದ್ಯೋಗ ನೀಡುವ ಭರವಸೆ ನೀಡಿದ್ದ ಇನ್ಫೋಸಿಸ್‌ನಲ್ಲಿ ಸದ್ಯ ಕೇವಲ 100 ಜನರಿಗೆ ಮಾತ್ರ ಕೆಲಸ ಮಾಡುತ್ತಿದ್ದಾರೆ. ಈ ಕುರಿತು ನಂದನ ನಿಲೇಕಣಿ ಅವರೊಂದಿಗೆ ಮಾತನಾಡಿದ್ದು, ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಕೈಗಾರಿಕಾ ವಸಾಹತುಗಳಲ್ಲಿ ಮಹಿಳಾ ಉದ್ಯಮಿಗಳಿಗೆ ಮೀಸಲಾತಿ ನೀಡುವ ಕುರಿತು ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

2 ವರ್ಷಗಳ ನಿರಂತರ ಪ್ರಯತ್ನದ ನಂತರ ಕಾಂಪ್ರಹೆನ್ಸಿವ್‌ ಡೆವಲಪ್‌ಮೆಂಟ್‌ ಪ್ಲಾನ್‌ಗೆ (ಸಿಡಿಪಿ) ಅನುಮೋದನೆ ದೊರೆತಿದೆ. ಇದು ಅವಳಿ ನಗರದ ಅಭಿವೃದ್ಧಿಗೆ ಪೂರಕವಾಗುವುದು. 25 ವರ್ಷಗಳ ನಂತರ ದೇಶದಲ್ಲಿ ಹಾಗೂ ರಾಜ್ಯದಲ್ಲಿ ಒಂದೇ ಪಕ್ಷ ಅಧಿಕಾರಕ್ಕೆ ಬಂದಿದ್ದು, ಅಭಿವೃದ್ಧಿಗೆ ಒತ್ತು ನೀಡಲಾಗುವುದು ಎಂದು ತಿಳಿಸಿದರು. ಹೆಲ್ತ್‌ ಪಾರ್ಕ್‌ ನಿರ್ಮಾಣಕ್ಕೆ ಅಗತ್ಯ ಸೌಲಭ್ಯ ಕಲ್ಪಿಸಲಾಗುವುದು ಎಂದರು. ಉದ್ಯಮ ಕ್ಷೇತ್ರದಲ್ಲಿ ಸಾಧನೆ ಮಾಡಿದ ಮಾಲತೇಶ ನಿರಂಜನ, ರವೀಂದ್ರ ಸಂಕೇಶ್ವರ, ವಿಜಯ ಸೆಹಗಲ್‌, ವಿವೇಕ ನಾಯಕ, ಗುರು ಸಾಲಿಮಠ, ವಿವೇಕ ಪವಾರ ಅವರನ್ನು ಸನ್ಮಾನಿಸಲಾಯಿತು. ಶಾಸಕ ಅರವಿಂದ ಬೆಲ್ಲದ, ಶಶಿಧರ ಶೆಟ್ಟರ, ಸಂದೀಪ ಬಿಡಸಾರಿಯಾ, ವಿವೇಕ ಪವಾರ ಮೊದಲಾದವರಿದ್ದರು.

ಪುಣೆಮಾದರಿಯಂತೆ ಕೈಗಾರಿಕಾ ಅಭಿವೃದ್ಧಿಗೆ ಟಾಸ್ಕ್ಫೋರ್ಸ್‌ ಮಾಡುವ ಕುರಿತು ಚಿಂತನೆ ನಡೆಸಲಾಗುವುದು. ಮಹಾರಾಷ್ಟ್ರದಲ್ಲಿ ಪುಣೆ ದ್ವಿತೀಯ ದೊಡ್ಡ ನಗರವಾಗಿದ್ದು, ಅಲ್ಲಿ ಉದ್ಯಮ ಕ್ಷೇತ್ರ ಅಗಾಧವಾಗಿ ಬೆಳೆದಿದೆ. ಹುಬ್ಬಳ್ಳಿ-ಧಾರವಾಡದಲ್ಲಿ ಕೂಡ ಉದ್ಯಮ ಕ್ಷೇತ್ರ ಬೆಳವಣಿಗೆಗೆ ಕ್ರಮ ಕೈಗೊಳ್ಳಲಾಗುವುದು. ದೊಡ್ಡ ಉದ್ಯಮಗಳು ಬಂದರೆ ಮಾತ್ರ ಸಣ್ಣ-ಪುಟ್ಟ ಉದ್ಯಮಗಳು ಉಳಿಯುತ್ತವೆ.-ಜಗದೀಶ ಶೆಟ್ಟರ, ಬೃಹತ್‌ಮಧ್ಯಮ ಕೈಗಾರಿಕಾ ಸಚಿವ

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.