ವಿಕಲಚೇತನರಲ್ಲಿದೆ ಅಸಾಮಾನ್ಯ ಪ್ರತಿಭೆ
Team Udayavani, Sep 29, 2019, 12:00 PM IST
ರಾಣಿಬೆನ್ನೂರ: ವಿಕಲಚೇತನರನ್ನು ಕೀಳರಿಮೆಯಿಂದ ಕಾಣಬಾರದು. ಸಾಮಾನ್ಯ ಮನುಷ್ಯರಿಗಿಂತ ಅಸಾಮಾನ್ಯ ಪ್ರತಿಭೆ ಹೊಂದಿರುವ ಅವರು ಅವಕಾಶದ ಜತೆಗೆ ಸ್ಪೂರ್ತಿ, ಸಹಕಾರ ನೀಡಿ ಅವರೂ ಸಮಾಜದಲ್ಲಿ ಮುಂದೆ ಬರಲು ಸಹಕಾರಿಯಾಗುತ್ತದೆ ಎಂದು ಹಿರಿಯ ನ್ಯಾಯಾಧೀಶ ಬಿ.ಬಿ. ಪ್ರಮೋದ ಹೇಳಿದರು.
ಶನಿವಾರ ಸ್ಥಳೀಯ ಮಾರುತಿ ನಗರದಲ್ಲಿ ಸೇವಾ ಅಂಧರ ಸಂಸ್ಥೆ ಹಾಗೂ ಶ್ರೀ ರೇಣುಕಾ ಎಲ್ಲಮ್ಮ ಕಿವುಡ ಮತ್ತು ಮೂಕ ಮಕ್ಕಳ ವಸತಿ ಶಾಲೆ ಹಾಗೂ ತಾಲೂಕು ಕಾನೂನು ಸೇವಾ ಸಮಿತಿ ಆಶ್ರಯದಲ್ಲಿ ಏರ್ಪಡಿಸಿದ್ದ ವಿಶ್ವ ಕಿವುಡ ಮಕ್ಕಳ ದಿನಾಚರಣೆ, ಉಜ್ವಲ ಮಹಿಳೆ ಮತ್ತು ಮಕ್ಕಳ ಸಾಗಾಣಿಕೆ ತಡೆಗಟ್ಟುವ ಕಾರ್ಯಕ್ರಮ ಹಾಗೂ ಕಾನೂನು ಅರಿವು ನೆರವು ಹಾಗೂ ಜಾಗೃತಿ ಶಿಬಿರ ಉದ್ಘಾಟಿಸಿ ಮಾತನಾಡಿದರು.
ಕಾನೂನಿನ ಮುಂದೆ ಎಲ್ಲರೂ ಸಮಾನರು. ಕಾನೂನಿನ ಬಗ್ಗೆ ಗೌರವಯುತವಾಗಿ ನಡೆದುಕೊಳ್ಳಬೇಕು. ಕಾನೂನು ಉಲ್ಲಂಘನೆಯಾಗದಂತೆ ನಡೆದುಕೊಂಡು ದೈನಂದಿನ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು. ನ್ಯಾಯಾ ಧೀಶ ಪಿ. ಶಿವರಾಜ ಕಾನೂನಿನ ಬಗ್ಗೆ ಮತ್ತು ಮಕ್ಕಳ ಸಾಗಾಣಿಕೆ ತಡೆಗಟ್ಟುವಿಕೆ ಕುರಿತು ಮಾಹಿತಿ ನೀಡಿದರು. ನಂದಿಗುಡಿಯ ಸಿದ್ದರಾಮೇಶ್ವರ ಶಿವಾಚಾರ್ಯ ಸ್ವಾಮಿಗಳು ಕಾರ್ಯಕ್ರಮದ ಸಾನ್ನಿಧ್ಯವಹಿಸಿದ್ದರು. ಸೇವಾ ಸಂಸ್ಥೆಯ ಕಾರ್ಯದರ್ಶಿ ರೇಣುಕಾ ಶಿವಕುಮಾರ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ವಕೀಲರ ಸಂಘದ ಅಧ್ಯಕ್ಷ ಎಂ.ಬಿ.ಗೌಡಪ್ಪಗೌಡ್ರ, ಎಸ್.ಎನ್ ಕೊಪ್ಪದ, ದೈಹಿಕ ಕ್ಷೇತ್ರ ಶಿಕ್ಷಣಾ ಧಿಕಾರಿ ಎ.ಬಿ. ಚಂದ್ರಶೇಖರ, ಶಿವಾನಂದ ಕಾಬಾಡೆ ಜೆ.ಜೆ.ಗವ್ವನವರ, ನಿತ್ಯಾನಂದ ಕುಂದಾಪುರ, ಸಂಸ್ಥೆಯ ಕಾರ್ಯದರ್ಶಿ ಎಚ್. ಆರ್. ಶಿವಕುಮಾರ, ಅಯ್ಯಂಗಾರ, ಕುಮಾರ ಮಡಿವಾಳರ, ಕೋಟ್ರೇಶ ಸಂಗಮೇಶ್ವರದ, ಶಿವರಾಜ ಗಂಗಣ್ಣನವರ, ಸೌಮ್ಯ ಎಸ್.ಆರ್. ನೇತ್ರಾವತಿ, ದೀಪಾ ಮತ್ತಿತರರು ಇದ್ದರು.
ಇದೇ ಸಂದರ್ಭದಲ್ಲಿ ನೇತ್ರಾವತಿ ಜಿ.ಎಂ. ಮತ್ತು ಶೈಲಾ ಕೆರೂಡಿ, ನಾರಾಯಣ ಹೆದ್ದೇರಿ ಮತ್ತಿತರರನ್ನು ಸನ್ಮಾನಿಸಿ ಗೌರವಿಸಲಾಯಿತು. ಇದೇ ಸಂದರ್ಭದಲ್ಲಿ ಮಕ್ಕಳಿಗೆ ಶಾಲಾ ಸಮವಸ್ತ್ರಗಳನ್ನು ವಿತರಿಸಲಾಯಿತು. ಆನಂತರ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ಇದಕ್ಕೂ ಮುನ್ನ ಕೆಇಬಿ ಗಣಪತಿ ದೇವಸ್ಥಾನದಿಂದ ಮಕ್ಕಳ ಜಾಗೃತಿ ಜಾಥಾ ಮೆರವಣಿಗೆಗೆ ಶಹರ ಸಿಪಿಐ ಲಿಂಗನಗೌಡ ನೆಗಳೂರು ಚಾಲನೆ ನೀಡಿದರು. ನಗರದ ಪ್ರಮುಖ ಬೀದಿಗಳಲ್ಲಿ ಜಾಥಾವು ಸಂಚರಿಸಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
2A Reservation; ವಕೀಲರ ಮೂಲಕ ಸರ್ಕಾರ ಹಕ್ಕೊತ್ತಾಯ ಮಾಡುತ್ತೇವೆ: ಪಂಚಮಸಾಲಿ ಶ್ರೀ
Haveri; ಖಾಸಗಿ ಬಸ್ ಪಲ್ಟಿ: 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ
ಮಕ್ಕಳಿಗೆ ಉತ್ತಮ ಶಿಕ್ಷಣ-ಸಂಸ್ಕಾರ ಕಲಿಸಿ: ಚೌಡಯ್ಯ ಸ್ವಾಮೀಜಿ
ಮಕ್ಕಳನ್ನು ಮೊಬೈಲ್ನಿಂದ ದೂರವಿಡಬಲ್ಲ ದು ಕ್ರೀಡೆ-ಮಮತಾ ಆರೆಗೊಪ್ಪ
Haveri; ಮುಸ್ಲಿಮರನ್ನು ಬಹಿಷ್ಕರಿಸಿ, ಅವರ ಜತೆ ಯಾವುದೇ ವ್ಯವಹಾರ ಮಾಡಬೇಡಿ: ಮುತಾಲಿಕ್ ಕಿಡಿ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.