ಭೀಮಾ ಏತ ನೀರಾವರಿ ಕಾಮಗಾರಿ ವಿಳಂಬಕ್ಕೆ ಆಕ್ರೋಶ


Team Udayavani, Sep 29, 2019, 2:44 PM IST

mandya-tdy-1

ಮಳವಳ್ಳಿ: ಭೀಮಾ ಜಲಾಶಯದಿಂದ ನಂದಿಪುರ ಕೆರೆ ಹಾಗೂ ಇತರೆ 24 ಕೆರೆ ಕಟ್ಟೆಗೆ ನೀರು ತುಂಬಿಸುವ ಏತ ನೀರಾವರಿ ಯೋಜನೆ ಕಾಮಗಾರಿ ನಡೆಯುತ್ತಿರುವ ಪ್ರದೇಶಕ್ಕೆ ರೈತಸಂಘ ಸೇರಿ ಹಲವು ರೈತರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಯೋಜನೆ ವಿಳಂಬ: ಭೀಮಾ ಜಲಾಶಯದ ಏತ ನೀರಾವರಿ ಕಾಮಗಾರಿ ಸ್ಥಿತಿ-ಗತಿ, ಕೆರೆ-ಕಟ್ಟೆಗಳ ವಾಸ್ತವ ಪರಿಸ್ಥಿತಿ ವೀಕ್ಷಣೆ ನಡೆಸಿ ರೈತರ ಅಭಿಪ್ರಾಯ ಪಡೆದ ಪ್ರಾಂತ ರೈತಸಂಘದ ತಾಲೂಕು ಅಧ್ಯಕ್ಷ ಎನ್‌.ಎಲ್‌.ಭರತ್‌ರಾಜ್‌, ಈ ಯೋಜನೆ 2013ರಲ್ಲಿ ಕಾರ್ಯಾರಂಭವಾದರೂ ಅಧಿಕಾರಿಗಳು, ಶಾಸಕರ ಬೇಜವಾಬ್ದಾರಿತನದಿಂದ ವಿಳಂಬವಾಗಿದೆ. ಯೋಜನೆಯನ್ನು ಚುನಾವಣೆ ಸಂದರ್ಭದಲ್ಲಿ ಉಭಯ ಪಕ್ಷಗಳು ರಾಜಕೀಯ ಲಾಭಕ್ಕಾಗಿ ಬಳಸಿಕೊಂಡು ರೈತರನ್ನು ವಂಚಿಸಿವೆ. ಒಂದೆರಡು ರೈತರು ಕಾಮಗಾರಿಗೆ ಅಡ್ಡಿ ಪಡಿಸಿದರೆಂಬ ನೆಪ ಮುಂದಿಟ್ಟುಕೊಂಡು ರಾಜಕೀಯ ಮೇಲಾಟ ನಡೆಸಿವೆ ಎಂದು ಆರೋಪಿಸಿದರು.

ರೈತರ ಭೂಮಿಗೆ ನ್ಯಾಯಯುತ ಪರಿಹಾರ ನೀಡಲು ಕ್ರಮ ವಹಿಸಬೇಕಿತ್ತು. ಅಧಿಕಾರಿಗಳು, ಶಾಸಕರು, ಗುತ್ತಿಗೆದಾರರು ನಿರ್ಲಕ್ಷಸಿದ್ದಾರೆ. ಇನ್ನೂ ಹಣವೂ ಇಲ್ಲ , ನೀರೂ ಇಲ್ಲ. ಕೊನೆಗೆ ಭೂಮಿಯೂ ನಮಗಿಲ್ಲ ಎಂದು ರೈತರು ಅಳಲು ತೋಡಿಕೊಂಡರು.

ಅನುಕೂಲವಾಗಿಲ್ಲ: ಈ ಯೋಜನೆಯಲ್ಲಿ ಹೊನಗಳ್ಳಿ ಕೆರೆ 583 ಹೆಕ್ಟೇರ್‌, ನಂದಿಪುರ ಕೆರೆ 48.33 ಹೆಕ್ಟೇರ್‌ ಅಚ್ಚುಕಟ್ಟು ಹೊಂದಿದೆ. ಜೊತೆಗೆ 24 ಕೆರೆ-ಕಟ್ಟೆಗಳನ್ನು ತುಂಬಿಸಿ ಅಂತರ್ಜಲ ಹೆಚ್ಚಿಸಲು ಶಿಂಷಾ ನದಿಯಿಂದಲೂ 11.47 ಕ್ಯೂಸೆಕ್‌ನೀರು ಹರಿಸಲು ಯೋಜಿಸಲಾಗಿದೆ. ಇದಕ್ಕಾಗಿ 225 ಕೆ.ವಿ.ಸಾಮರ್ಥ್ಯದ 3 ಪಂಪ್‌ ಅಳವಡಿಸಲಾಗಿದೆ. ಏರು ಕೊಳವೆ ಮೇಲ್ಮಟ್ಟದ ತೊಟ್ಟಿಯಿಂದ ಮತ್ತು ತೆರೆದ ಕಾಲುವೆಗಳಿಂದ 11ಕಿ.ಮೀ ದೂರದ ವ್ಯಾಪ್ತಿಯ ಜಮೀನುಗಳಿಗೆ ಮುಂಗಾರಿನಲ್ಲಿ 123 ದಿನ ನೀರು ಹರಿಸುವ ಉದ್ದೇಶಕ್ಕಾಗಿ 2013ರಲ್ಲಿ ತಾಂತ್ರಿಕ ಮಂಜೂರಾತಿ ನೀಡಲಾಗಿದೆ. ಇದಕ್ಕಾಗಿ 10.15 ಕೋಟಿ ರೂ. ಹಣ ನೀಡಿದ್ದರೂ ರೈತರಿಗೆ ಅನುಕೂಲವಾಗಿಲ್ಲ ಎಂದು ತಿಳಿಸಿದರು.

ತಮಿಳುನಾಡಿಗೆ ನೀರು: ಶಿಂಷಾ, ಕಾವೇರಿ ನದಿ ತುಂಬಿ ಅಪಾಯದ ಮಟ್ಟ ಮೀರಿ ತಮಿಳುನಾಡಿಗೆ ಹರಿಯುತ್ತಿದ್ದರೂ ಹಲಗೂರು ಹೋಬಳಿ ಹೊನಗಳ್ಳಿ ಕೆರೆ, ನಿಟ್ಟೂರು, ಹಲಗೂರು. ಬ್ಯಾಡರಹಳ್ಳಿ ಮುಂತಾದ ಕೆರೆ-ಕಟ್ಟೆ ನೀರಿಲ್ಲದೆ ಒಣ ಗುತ್ತಿವೆ. ಹಲಗೂರು ಹೋಬಳಿ ಭೀಮಾ ಜಲಾಶಯ ಗಾಣಾಳು, ನಂಜಾಪುರ, ನಿಟ್ಟೂರು ಏತ ನೀರಾವರಿಗಳನ್ನು ಶೀಘ್ರ ಹಾಗೂ ಸಮರ್ಪಕ ಜಾರಿಗೊಳಿಸದಿದ್ದರೆ ಹೋರಾಟ ರೂಪಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ನಿಯೋಗದಲ್ಲಿ ಮುಖಂಡರಾದ ಮಹದೇವು, ನಾಗೇಶ್‌, ಗೋಪಾಲ್‌, ಮಹೇಶ್‌, ಬಸವೇಗೌಡ, ಜಯಶಂಕರ್‌, ರಾಜು, ರವಿ, ಮೋಹನ್‌, ಬಸವರಾಜ್‌, ಮರಿದೇವರು ಇದ್ದರು.

ಟಾಪ್ ನ್ಯೂಸ್

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.