ಈರುಳ್ಳಿ ಬೆಲೆ ಏರಿಕೆ ನಿಯಂತ್ರಣಕ್ಕೆ ಮುಂದಾದ ಕೇಂದ್ರ ಸರಕಾರ
ಈರುಳ್ಳಿ ರಫ್ತು ಈಗಿಂದೀಗಲೇ ನಿಷೇಧ
Team Udayavani, Sep 29, 2019, 5:40 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಹೊಸದಿಲ್ಲಿ: ಈರುಳ್ಳಿ ಬೆಳೆಯುವ ಪ್ರದೇಶಗಳಲ್ಲಿ ಮಳೆ ಅನಾಹುತ, ಬೆಳೆ ಕಡಿಮೆ ಕಾರಣಗಳಿಂದಾಗಿ ದೇಶೀಯ ಮಾರುಕಟ್ಟೆಯಲ್ಲಿ ಈರುಳ್ಳಿ ಬೆಲೆ ತೀವ್ರವಾಗಿ ಏರುತ್ತಿದ್ದು ಇದನ್ನು ತಡೆಯಲು ಕೇಂದ್ರ ಸರಕಾರ ಇದೀಗ ಮುಂದಾಗಿದೆ.
ಮೊದಲ ಕ್ರಮವಾಗಿ ಕೇಂದ್ರ ಸರಕಾರ ಈರುಳ್ಳಿ ರಫ್ತಿಗೆ ನಿಷೇಧ ಹೇರಿದೆ. ಅಲ್ಲದೇ ಮಾರಾಟಗಾರರು ಕಡಿಮೆ ದಾಸ್ತಾನು ಇಡುವಂತೆ ಹೇಳಿದ್ದು, ಹೆಚ್ಚುವರಿ ದಾಸ್ತಾನು ಮಾರುಕಟ್ಟೆಯಲ್ಲಿ ಲಭ್ಯವಾಗುವಂತೆ ಸೂಚಿಸಲಾಗಿದೆ. ಸಗಟು ಮಾರಾಟಗಾರರಿಗೆ 100 ಕ್ವಿಂಟಾಲ್ ಮತ್ತು ಹೋಲ್ಸೇಲ್ ಮಾರಾಟಗಾರರಿಗೆ 500 ಕ್ವಿಂಟಾಲ್ ದಾಸ್ತಾನು ಇಡಲಷ್ಟೇ ಅನುಮತಿ ನೀಡಲಾಗಿದೆ.
ದಿಲ್ಲಿ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಈರುಳ್ಳಿ ಬೆಲೆ ದುಪ್ಪಟ್ಟಾಗಿದೆ. ಆದ್ದರಿಂದ ಕೂಡಲೇ ರಫ್ತು ನಿಷೇಧಿಸಲಾಗಿದ ಎಎಂದು ಸಾಮಾನ್ಯ ವಿದೇಶಿ ಮಾರಾಟ ನಿರ್ದೇಶನಾಲಯ ಅಧಿಕಾರಿಗಳು ಹೇಳಿದ್ದಾರೆ.
ಸದ್ಯ ಅತಿ ಹೆಚ್ಚು ದರದಲ್ಲಿ ಬಾಂಗ್ಲಾದೇಶ ಮತ್ತು ಶ್ರೀಲಂಕಾಕ್ಕೆ ಭಾರತದಿಂದ ಈರುಳ್ಳಿ ಮಾರಾಟವಾಗುತ್ತಿದೆ. ಇದನ್ನು ತಡೆಯಲಾಗಿದೆ. ನಿಯಮ ಉಲ್ಲಂಘಿಸುವವರ ವಿರುದ್ಧ ಕಠಿನ ಕ್ರಮದ ಎಚ್ಚರಿಕೆಯನ್ನೂ ಸರಕಾರ ನೀಡಿದೆ.
ಹರಿಯಾಣಾ, ಆಂಧ್ರಪ್ರದೇಶ, ದಿಲ್ಲಿ, ತ್ರಿಪುರಾ, ಒಡಿಶಾದಲ್ಲಿ ಕೇಂದ್ರ ಗೋದಾಮಿನಿಂದ ಈರುಳ್ಳಿ ಪೂರೈಸಲು ಬೇಡಿಕೆ ಇಡಲಾಗಿದೆ. ಕರ್ನಾಟಕ ಮತ್ತು ಮಹಾರಾಷ್ಟ್ರದಲ್ಲಿ ಅತಿ ಹೆಚ್ಚು ಈರುಳ್ಳಿ ಬೆಳೆಯಲಾಗುತ್ತಿದೆ. ಮಳೆಯಿಂದಾಗಿ ಇಲ್ಲಿನ ಬೆಳೆಗಳಿಗೆ ಹಾನಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
MUST WATCH
ಹೊಸ ಸೇರ್ಪಡೆ
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
IPL; ಮೆಕ್ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ