ಯಕ್ಷಗಾನದ ವ್ಯಾಪ್ತಿ ವಿಶೇಷವಾದದ್ದು: ಸುಬ್ರಹ್ಮಣ್ಯಧಾರೇಶ್ವರ

ಸಂಗತಿಗಳನ್ನು ಪೂರಕವಾಗಿ ಬಳಸಿಕೊಳ್ಳುವುದೇ ಯಕ್ಷಗಾನದ ವಿಶೇಷ

Team Udayavani, Sep 29, 2019, 7:23 PM IST

29-Sepctember-29

ಸಾಗರ: ಹೊರಗಿನ ಅನೇಕ ಸಂಗತಿಗಳನ್ನು ಸ್ವೀಕರಿಸಿ, ತನ್ನ ಒಟ್ಟಂದಕ್ಕೆ ಪೂರಕವಾಗಿ ಬಳಸಿಕೊಳ್ಳುವುದು ಯಕ್ಷಗಾನದ ವಿಶೇಷ ಎಂದು ಬಡಗು ತಿಟ್ಟಿನ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಅಭಿಪ್ರಾಯ ವ್ಯಕ್ತಪಡಿಸಿದರು.

ನಗರದ ವಿಜಯ ಸೇವಾ ಟ್ರಸ್ಟ್‌ನ ಅಂಗಸಂಸ್ಥೆ ಯಕ್ಷಶ್ರೀ ಸಂಸ್ಥೆಯ ವತಿಯಿಂದ ಶನಿವಾರ ರೈಲ್ವೆ ಸ್ಟೇಷನ್‌ ರಸ್ತೆಯ ಶಾರದಾಂಬಾ ದೇವಸ್ಥಾನ ಸಭಾಗೃಹದಲ್ಲಿ 39ನೇ ಪ್ರಯೋಗವಾಗಿ ಯಕ್ಷ ನಾದ ಲಾಸ್ಯ ಯಕ್ಷಗಾನ ಮತ್ತು ಸುಗಮ ಸಂಗೀತ ಗಾಯನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಯಕ್ಷಗಾನದ ಸಮೃದ್ಧಿ, ವ್ಯಾಪ್ತಿ ವಿಶೇಷವಾದುದು. ನರಕಾಸುರ ವಧೆ ಎಂಬ ಪ್ರಸಂಗವನ್ನು ಹೊಸ್ತೋಟ ಮಂಜುನಾಥ ಭಾಗವತರಿಂದ ಹಿಡಿದು ನಾಲ್ಕೈದು ಕವಿಗಳು ರಚಿಸಿದ್ದಾರೆ. ಪಾರಿಜಾತ, ನರಕಾಸುರ ವಧೆ, ಶ್ರೀಕೃಷ್ಣ ಪಾರಿಜಾತ ಎಂಬೆಲ್ಲಾ ಹೆಸರುಗಳಿವೆ.

ಇಡೀ ರಾತ್ರಿ ಸಮಯದಲ್ಲಿ ಆಡುವ ಕ್ರಮ ಸಹ ಇದೆ. ಬೆಳಗಿನ ಜಾವದಲ್ಲಿ 1ರಿಂದ 2 ತಾಸುಗಳಲ್ಲಿ ಪ್ರದರ್ಶಿಸುವ ಕ್ರಮ ಸಹ ಇದೆ. ವಿಸ್ತರಿಸಿ ಹಿಗ್ಗಿಸುವ, ಕುಗ್ಗಿಸುವ ಕಾರ್ಯಕ್ಕೆ ಪ್ರಸಂಗಗಳು ಒದಗುವುದು ವಿಶೇಷ ಎಂದರು. ಸಂಯೋಜಕ ಡಾ| ಎಚ್‌. ಎಸ್‌. ಮೋಹನ್‌ ಮಾತನಾಡಿ, ಯಕ್ಷಗಾನ ಮತ್ತು ಸುಗಮ ಸಂಗೀತವನ್ನು ಯಕ್ಷಶ್ರೀ ಸಂಸ್ಥೆಯಿಂದ 6ನೇ ಬಾರಿಗೆ ಒಂದೇ ವೇದಿಕೆಯಲ್ಲಿ ಪ್ರಸ್ತುತ ಪಡಿಸಲಾಗುತ್ತಿದೆ. ಪ್ರದರ್ಶನಗಳಲ್ಲಿ ಕಾಣಸಿಗದ ವೈವಿಧ್ಯತೆ, ಶೈಕ್ಷಣಿಕ ಸಂಗತಿ ಇಂಥ ಕಾರ್ಯಕ್ರಮಗಳಲ್ಲಿ ದೊರಕುತ್ತದೆ ಎಂದರು.

ನೆಬ್ಬೂರು ನಾರಾಯಣ ಭಾಗವತರ ಶಿಷ್ಯ ಶ್ರೀಧರ ಭಾಗವತ ಹಣಗಾರ ಹಾಗೂ ಸುಬ್ರಹ್ಮಣ್ಯ ಧಾರೇಶ್ವರ ಯಕ್ಷಗಾನ ಪದ್ಯ ಹಾಡಿದರು. ಮದ್ದಳೆಯಲ್ಲಿ ಎನ್‌.ಜಿ. ಹೆಗಡೆ, ರಾಘವೇಂದ್ರ ಹೆಗಡೆ, ಚೆಂಡೆಯಲ್ಲಿ ಕೃಷ್ಣ ಯಾಜಿ ಇಡಗುಂಜಿ ಸಾಥ್‌ ನೀಡಿದರು. ಶಿವಮೊಗ್ಗದ ಸುರೇಖಾ ಹೆಗಡೆ ಅವರು ಎಂ.ಎನ್‌. ವ್ಯಾಸ, ಜಿ.ಎಸ್‌. ಶಿವರುದ್ರಪ್ಪ, ಶಿಶುನಾಳ ಶರೀಫ್‌ರ ರಚನೆಯನ್ನು ಪ್ರಸ್ತುತಪಡಿಸಿದರು. ಕೀಪ್ಯಾಡ್‌ ನಲ್ಲಿ ಮೈಸೂರಿನ ಗಣೇಶ್‌ ಭಟ್‌, ತಬಲಾದಲ್ಲಿ ತುಕರಾಂ ರಂಗಧೋಳ್‌, ರಿದಂಪ್ಯಾಡ್‌ನ‌ಲ್ಲಿ ವಿಠ್ಠಲ್ ರಂಗಧೋಳ್‌ ಸಾಥ್‌ ನೀಡಿದರು. ಮನು ವಂದಿಸಿದರು.

ಟಾಪ್ ನ್ಯೂಸ್

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

ec-aa

AAP ಚುನಾವಣ ಪ್ರಚಾರ ಹಾಡಿಗೆ ಆಯೋಗದ ನಿರ್ಬಂಧ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

ec-aa

AAP ಚುನಾವಣ ಪ್ರಚಾರ ಹಾಡಿಗೆ ಆಯೋಗದ ನಿರ್ಬಂಧ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.