ಉಪನ್ಯಾಸಕರ ನೇಮಕ ಅಧಿಸೂಚನೆಗೆ ಆಗ್ರಹ
Team Udayavani, Sep 30, 2019, 3:03 AM IST
ಬೆಂಗಳೂರು: ಪಿಯು ಉಪನ್ಯಾಸಕರ ನೇಮಕಾತಿ ಸಂಬಂಧ ಸಲ್ಲಿಸಿರುವ ತಾತ್ಕಾಲಿಕ ಪಟ್ಟಿಗೆ ಹೆಚ್ಚುವರಿ ಹುದ್ದೆಯನ್ನು ಸೇರಿಸಬಾರದು ಎಂದು ಹುದ್ದೆಯ ಆಕಾಂಕ್ಷಿ ಅಭ್ಯರ್ಥಿಗಳು ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ತಾತ್ಕಾಲಿಕವಾಗಿ ಬಿಟ್ಟಿರುವ ಪಟ್ಟಿಯನ್ನು ಅಂತಿಮಗೊಳಿಸಿ, ಉಳಿದ ಹುದ್ದೆಗೆ ಹೊಸದಾಗಿ ನೇಮಕಾತಿ ನಡೆಸಲು ಅಧಿಸೂಚನೆ ಹೊರಡಿಸಬೇಕು.
ಇದರಿಂದ ಹೊಸದಾಗಿ ಸ್ನಾತಕೋತ್ತರ ಪದವಿ, ಬಿ.ಇಡಿ ಉತ್ತೀರ್ಣರಾದ ಅಭ್ಯರ್ಥಿಗಳಿಗೆ ಅವಕಾಶ ಸಿಗಲಿದೆ. ಯಾವುದೇ ರೀತಿಯ ಒತ್ತಡಕ್ಕೆ ಮಣಿದು ಹೆಚ್ಚುವರಿ ಹುದ್ದೆಯನ್ನು ತಾತ್ಕಾಲಿಕ ಪಟ್ಟಿಯಲ್ಲಿ ಸೇರಿಸುವ ಪ್ರಯತ್ನ ನಡೆಸಬಾರದು ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರಿಗೆ ಕೆಲವು ಅಭ್ಯರ್ಥಿಗಳು ಪತ್ರದ ಮೂಲಕ ಮನವಿ ಮಾಡಿಕೊಂಡಿದ್ದಾರೆ. ಹೆಚ್ಚುವರಿ ಪಟ್ಟಿಯಲ್ಲಿ ಭ್ರಷ್ಟಾಚಾರ ನಡೆಯುವ ಸಾಧ್ಯತೆ ಇದೆ.
ಹೊಸದಾಗಿ ಅಧಿಸೂಚನೆ ಹೊರಡಿಸಿ, ಅರ್ಹತೆಯ ಆಧಾರದಲ್ಲಿ ನೇಮಕಾತಿ ನಡೆಯಬೇಕು. ಹೆಚ್ಚುವರಿ ಹುದ್ದೆಯನ್ನು ತಾತ್ಕಾಲಿಕ ಪಟ್ಟಿಗೆ ಸೇರಿಸಿದರೆ ಭ್ರಷ್ಟಾಚಾರಕ್ಕೆ ಅವಕಾಶ ಮಾಡಿಕೊಡುವುದರ ಜತೆಗೆ ಅನರ್ಹರ ನೇಮಕಾತಿ ನಡೆಯುವ ಸಾಧ್ಯತೆಯೂ ಇದೆ. ಹೆಚ್ಚುವರಿ ಪಟ್ಟಿ ಪ್ರಕಟಿಸಿದರೆ ರಾಜ್ಯವ್ಯಾಪಿ ಹೋರಾಟ ಮಾಡುವುದರ ಜತೆಗೆ ಕಾನೂನು ಹೋರಾಟವನ್ನು ನಡೆಸಲಿದ್ದೇವೆ ಎಂದು ನೋಂದ ಅಭ್ಯರ್ಥಿಗಳು ಎಚ್ಚರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
MUST WATCH
ಹೊಸ ಸೇರ್ಪಡೆ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ