ಒಂದೇ ವಿಮಾನದಲ್ಲಿ ಸವದಿ, ರಮೇಶ, ಅಂಬಿರಾವ ಪ್ರಯಾಣ!
Team Udayavani, Sep 30, 2019, 3:06 AM IST
ಬೆಳಗಾವಿ: ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹಾಗೂ ಗೋಕಾಕನ ಅನರ್ಹ ಶಾಸಕ ರಮೇಶ ಜಾರಕಿಹೊಳಿ, ಅಳಿಯ ಅಂಬಿರಾವ ಪಾಟೀಲ ಅವರು ಒಂದೇ ವಿಮಾನದಲ್ಲಿ ಭಾನುವಾರ ಬೆಂಗಳೂರಿಗೆ ಪ್ರಯಾಣ ಬೆಳೆಸಿದ್ದು, ಕುತೂಹಲಕ್ಕೆ ಕಾರಣವಾಗಿದೆ.
ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಿಂದ ಉಭಯ ನಾಯಕರು ಪ್ರಯಾಣ ಬೆಳೆಸಿದರು. ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಹೇಳಿದ ರಮೇಶ ಜಾರಕಿಹೊಳಿ, ವಿಮಾನ ಏರಿದರು. ಇದೇ ಮೊದಲ ಬಾರಿ ಅಳಿಯ ಅಂಬಿರಾವ ಪಾಟೀಲ ಅವರನ್ನು ಕರೆದುಕೊಂಡು ಬೆಂಗಳೂರಿಗೆ ಹೊರಟಿ ರುವ ಅನರ್ಹ ಶಾಸಕ ರಮೇಶ ಜಾರಕಿಹೊಳಿ ನಡೆ ಈಗ ಚರ್ಚೆಗೆ ಗ್ರಾಸವಾಗಿದೆ.
ಅಲ್ಲದೆ, ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರೊಂದಿಗೆ ತೆರಳಿರುವುದು ಮತ್ತಷ್ಟು ಕುತೂಹಲಕ್ಕೆ ಕಾರಣವಾಗಿದೆ. ಸುಪ್ರೀಂಕೋರ್ಟ್ ತೀರ್ಪು ಬಂದ ಬಳಿಕ ಯಾವ ಪಕ್ಷಕ್ಕೆ ಹೋಗುವುದು ಎಂಬುದರ ಬಗ್ಗೆ ಮುಂದಿನ ದಿನಗಳಲ್ಲಿ ನಿರ್ಧಾರ ತೆಗೆದುಕೊಳ್ಳುವುದಾಗಿ ರಮೇಶ ಹೇಳುತ್ತಿದ್ದು, ಹೆಚ್ಚಾಗಿ ಬಿಜೆಪಿ ವಲಯದಲ್ಲಿ ಗುರುತಿಸಿಕೊಳ್ಳುತ್ತಿದ್ದಾರೆ. ಶನಿವಾರವಷ್ಟೇ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಅವರೊಂದಿಗೂ ಗೌಪ್ಯ ಚರ್ಚೆ ನಡೆಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಂಸದ ಶ್ರೀನಿವಾಸ್ ಪ್ರಸಾದ್ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
MUST WATCH
ಹೊಸ ಸೇರ್ಪಡೆ
Kerala ವಯನಾಡಲ್ಲಿ ರಾಹುಲ್ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ
ಸಂಸದ ಶ್ರೀನಿವಾಸ್ ಪ್ರಸಾದ್ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ