ರೇಷ್ಮೆ ಬೆಳೆಯಲು ಜಪಾನ್‌ ತಂತ್ರಜ್ಞಾನ ಅಳವಡಿಕೆ


Team Udayavani, Sep 30, 2019, 3:00 AM IST

reshmwe

ದೇವನಹಳ್ಳಿ: ರೇಷ್ಮೆ ಬೆಳೆ ಬೆಳೆಯಲು ಕಾರ್ಮಿಕರು ಅಗತ್ಯ.ಆದರೆ, ಇತ್ತೀಚಿನ ದಿನಗಳಲ್ಲಿ ಕಾರ್ಮಿಕರ ಕೊರತೆ ಬಹುವಾಗಿ ಕಾಡುತ್ತಿದೆ.ಇದಕ್ಕೆ ಪರಿಹಾರ ಎನ್ನುವಂತೆ ತಾಲೂಕಿನ ರೈತರೊಬ್ಬರು ವಿದೇಶಿ ತಂತ್ರಜ್ಞಾನದ ಮೂಲಕ ಯಶಸ್ಸು ಕಂಡಿದ್ದಾರೆ.

ಕೊಯಿರಾ ಗ್ರಾಮದ ರೈತ ಚಿಕ್ಕೇಗೌಡ ರೇಷ್ಮೆ ಹುಳು ಸಾಕಾಣಿಕೆ ಮಾಡಲು ಬಳಸುವ ಪ್ಲಾಸ್ಟಿಕ್‌ ಚಂದ್ರಿಕೆಗಳಲ್ಲಿ ಪ್ರಸ್ಸಿಂಗ್‌ ಮಾಡುವ ಜಪಾನ್‌ ತಂತ್ರಜ್ಞಾನ ಅಳವಡಿಸಿಕೊಂಡಿದ್ದಾರೆ. ಈ ಹಿಂದೆ ರೇಷ್ಮೆ ಬೆಳೆಗಾರರು ಗೂಡು ಕಟ್ಟಲು ಬಿದರಿನ ಚಂದ್ರಿಕೆ ಬಳಸುತ್ತಿದ್ದರು. ಕಾಲಕ್ರಮೇಣ ಪ್ಲಾಸ್ಟಿಕ್‌ ಬಲೆಯಂತೆ ಹಣೆದಿರುವ ಸಿದ್ಧ ಚಂದ್ರಿಕೆ ಬಳಕೆಗೆ ಬಂತು. ರೇಷ್ಮೆ ಇಲಾಖೆ ರಿಯಾಯಿತಿ ಧರದಲ್ಲಿ ಇವುಗಳನ್ನು ರೈತರಿಗೆ ನೀಡುತ್ತಿದೆ.

ಒಂದು ಬಾರಿ ಬಳಕೆಯಾದ ಹೊಸ ತಂತ್ರಜ್ಞಾನದ ಮೂಲಕ ಪ್ರಸ್ಸಿಂಗ್‌ ಮಾಡಲಾದ ಚಂದ್ರಿಕೆಯನ್ನು ಕ್ರಿಮಿನಾಶಕ ಸಿಂಪಡಿಸಿ ತೊಳೆದು, ಮತ್ತೆ ಪ್ರಸಿಂಗ್‌ ಮಾಡಿ ಬಂಡಲ್‌ ಕಟ್ಟಿ ಇಡಬೇಕಾಗುತ್ತದೆ. ಈ ಹಿಂದೆ 2 ಗಂಟೆ ಸಮಯದಲ್ಲಿ 4 ಜನ ಮಾಡಬೇಕಿದ್ದ ಕೆಲಸವನ್ನು ಪ್ರಸಿಂಗ್‌ ಯಂತ್ರದ ಸಹಾಯದಿಂದ ಇಬ್ಬರು ಕಾರ್ಮಿಕರು ಮಾಡಬಹುದಾಗಿದೆ.

ಬುಕ್‌ನಲ್ಲಿ ಜಪಾನ್‌ ತಂತ್ರಜ್ಞಾನ ಚಂದ್ರಿಕೆ ನೋಡಿ ಅದೇ ಮಾದರಿಯಲ್ಲಿ ಯಂತ್ರ ರೂಪಿಸಲಾಗಿದೆ. ಇದಕ್ಕೆ 15 ಸಾವಿರ ರೂ. ವೆಚ್ಚ ತಗುಲುತ್ತದೆ. ಸುಮಾರು 6-7ವರ್ಷಗಳವರೆಗೆ ಈ ಯಂತ್ರವನ್ನು ಉಪಯೋಗಿಸಬಹುದಾಗಿದೆ. ಈಗ ಬೆ„ವೋಲ್ಟನ್‌ ತಳಿ ರೇಷ್ಮೇ ಗೂಡಿಗೆ ಪ್ರಸ್ಸಿಂಗ್‌ ಪದ್ಧತಿ ಅನಿವಾರ್ಯವಾಗಿದೆ ಎಂದು ರೈತ ಚಿಕ್ಕೇಗೌಡ ತಿಳಿಸುತ್ತಾರೆ.

ಜಿಲ್ಲೆಯಲ್ಲಿ 256 ರೈತರು ಮಾತ್ರ ಬೆ„ವೋಲ್ಟನ್‌ ತಳಿ ರೇಷ್ಮೆ ಬೆಳೆಯುತ್ತಾರೆ. ರೇಷ್ಮೆ ಚಾಕಿ ಪ್ರಾರಂಭದಲ್ಲಿ ಕಾರ್ಮಿಕರ ಅವ್ಯಕತೆ ಅಷ್ಟಾಗಿ ಇರುವುದಿಲ್ಲ. ಆದರೆ ಹುಳು ಸಾಕಾಣಿಕೆಯ ದಿನ ಕಳೆದಂತೆ ಕಾರ್ಮಿಕರು ಅವಶ್ಯಕತೆ ಹೆಚ್ಚುತ್ತೆ. ನಾಲ್ಕನೇ ಜ್ವರ ಕಾಲಿಟ್ಟ ನಂತರ ಹುಳು ಅತಿಯಾಗಿ ಹಿಪ್ಪು ನೇರಳೆ ಸೊಪ್ಪು ತಿನ್ನುವುದರಿಂದ ಮೊಟ್ಟೆಗಳ ಅಗತ್ಯಕ್ಕೆ ತಕ್ಕಂತೆ ಕನಿಷ್ಟ 30-40 ಕಾರ್ಮಿಕರು ಬೇಕಾಗುತ್ತಾರೆ.

ರೈತರು ಹೊಸ ಹೊಸ ತಂತ್ರಜ್ಞಾನವನ್ನು ಅಳವಡಿಸಿಕೊಂಡರೆ ರೇಷ್ಮೆಯಲ್ಲಿ ಹೆಚ್ಚಿನ ಬೆಳೆ ಮಾಡಲು ಅನುಕೂಲವಾಗುತ್ತದೆ. ನೂತನ ತಂತ್ರಜ್ಞಾನಗಳ ಬಗ್ಗೆ ಮಾಹಿತಿ ತಿಳಿದುಕೊಂಡು ಅಳವಡಿಸಿಕೊಂಡರೆ ರೈತರಿಗೆ ಸಾಕಷ್ಟು ಅನುಕೂಲವಾಗುತ್ತದೆ. ಗೂಡು ಕಟ್ಟಿ ಬಿಡಿಸುವ ಸಂದರ್ಭದಲ್ಲಿ ಅಷ್ಟಾಗಿ ಕಾರ್ಮಿಕರ ಅವಶ್ಯ ಇರುವುದಿಲ್ಲ. ಕುಟುಂಬದ ಸದಸ್ಯರೇ ನಿರ್ವಹಣೆ ಮಾಡಬಹುದು.
-ಚಿಕ್ಕೇಗೌಡ, ರೈತ ಕೊಯಿರಾ

ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ರೈತರು ಹೊಸತನ ಅಳವಡಿಸಕೊಂಡಿದ್ದಾರೆ. ಈ ಹಿಂದೆ ಬೆ„ವೋಲ್ಟನ್‌ ರೇಷ್ಮೆ ತಳಿಗೆ ರೈತರು ಭಯ ಪಡುತ್ತಿದ್ದರು. ಈಗ ಹೊಸ ತಂತ್ರಜ್ಞಾನ ರೈತರಲ್ಲಿ ಉತ್ಸಾಹ ಮೂಡಿಸಿದರೆ. ಒಂದು ಚಂದ್ರಿಕೆ ಬೆಲೆ ರೂ.83ರಂತೆ ರಿಯಾಯಿತಿ ದರದಲ್ಲಿ ರೈತರಿಗೆ 33ರೂ.ಗಳಿಗೆ ಲಭಿಸಲಿದೆ. ರೈತರ ಉತ್ಸಾಹ ಮೂಡಿಸಿದೆ.
-ಗಾಯಿತ್ರಿ ರೇಷ್ಮೇ ಸಹಾಯಕ ನಿರ್ದೇಶಕಿ

ಟಾಪ್ ನ್ಯೂಸ್

Randeep Surjewala ಚಿತ್ರಕಥೆ, ಡಿಕೆಶಿ ನಿರ್ಮಾಪಕ: ಅಶೋಕ್‌

Randeep Surjewala ಚಿತ್ರಕಥೆ, ಡಿಕೆಶಿ ನಿರ್ಮಾಪಕ: ಆರ್‌. ಅಶೋಕ್‌

Prajwal ಪತ್ತೆಗೆ ಎಸ್‌ಐಟಿ ತಂಡ ವಿದೇಶಕ್ಕೆ ಯಾನ?8 ಅಧಿಕಾರಿಗಳ ತಂಡ ಪ್ರಯಾಣ ಸಾಧ್ಯತೆ

Prajwal ಪತ್ತೆಗೆ ಎಸ್‌ಐಟಿ ತಂಡ ವಿದೇಶಕ್ಕೆ ಯಾನ?8 ಅಧಿಕಾರಿಗಳ ತಂಡ ಪ್ರಯಾಣ ಸಾಧ್ಯತೆ

HD ರೇವಣ್ಣಗೆ ಹೊಟ್ಟೆನೋವು, ಎದೆಯುರಿ: ಆಸ್ಪತ್ರೆಗೆ ದಾಖಲು

HD ರೇವಣ್ಣಗೆ ಹೊಟ್ಟೆನೋವು, ಎದೆಯುರಿ: ಆಸ್ಪತ್ರೆಯಲ್ಲಿ ಚಿಕಿತ್ಸೆ

Loksabha; 3ನೇ ಹಂತದಲ್ಲಿ ಶೇ.61.66ರಷ್ಟು ಮತದಾನ; ಶಾ ಕ್ಷೇತ್ರದಲ್ಲಿ ಮೋದಿ ವೋಟಿಂಗ್‌

Loksabha; 3ನೇ ಹಂತದಲ್ಲಿ ಶೇ.61.66ರಷ್ಟು ಮತದಾನ; ಶಾ ಕ್ಷೇತ್ರದಲ್ಲಿ ಮೋದಿ ವೋಟಿಂಗ್‌

Puttur ಜಾನಪದ ವಿದ್ವಾಂಸ ಡಾ| ಪಾಲ್ತಾಡಿ ಇನ್ನಿಲ್ಲ

Puttur ಜಾನಪದ ವಿದ್ವಾಂಸ ಡಾ| ಪಾಲ್ತಾಡಿ ಇನ್ನಿಲ್ಲ

ಆಯೋಗದ ಮತದಾನ ಮಾಹಿತಿಯಲ್ಲಿ ಲೋಪವಿದೆ, ಧ್ವನಿಯೆತ್ತಿ: ಖರ್ಗೆ ಪತ್ರ

Loksabha election; ಆಯೋಗದ ಮತದಾನ ಮಾಹಿತಿಯಲ್ಲಿ ಲೋಪವಿದೆ, ಧ್ವನಿಯೆತ್ತಿ: ಖರ್ಗೆ ಪತ್ರ

ಮುಷ್ಕರ ಕೈಬಿಟ್ಟ 108 ಆ್ಯಂಬುಲೆನ್ಸ್‌ ಸಿಬಂದಿ

Karnataka ಮುಷ್ಕರ ಕೈಬಿಟ್ಟ 108 ಆ್ಯಂಬುಲೆನ್ಸ್‌ ಸಿಬಂದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Randeep Surjewala ಚಿತ್ರಕಥೆ, ಡಿಕೆಶಿ ನಿರ್ಮಾಪಕ: ಅಶೋಕ್‌

Randeep Surjewala ಚಿತ್ರಕಥೆ, ಡಿಕೆಶಿ ನಿರ್ಮಾಪಕ: ಆರ್‌. ಅಶೋಕ್‌

Prajwal ಪತ್ತೆಗೆ ಎಸ್‌ಐಟಿ ತಂಡ ವಿದೇಶಕ್ಕೆ ಯಾನ?8 ಅಧಿಕಾರಿಗಳ ತಂಡ ಪ್ರಯಾಣ ಸಾಧ್ಯತೆ

Prajwal ಪತ್ತೆಗೆ ಎಸ್‌ಐಟಿ ತಂಡ ವಿದೇಶಕ್ಕೆ ಯಾನ?8 ಅಧಿಕಾರಿಗಳ ತಂಡ ಪ್ರಯಾಣ ಸಾಧ್ಯತೆ

HD ರೇವಣ್ಣಗೆ ಹೊಟ್ಟೆನೋವು, ಎದೆಯುರಿ: ಆಸ್ಪತ್ರೆಗೆ ದಾಖಲು

HD ರೇವಣ್ಣಗೆ ಹೊಟ್ಟೆನೋವು, ಎದೆಯುರಿ: ಆಸ್ಪತ್ರೆಯಲ್ಲಿ ಚಿಕಿತ್ಸೆ

Jharkhand 32 crore discovery case: Two arrested

Jharkhand 32 ಕೋಟಿ ಪತ್ತೆ ಪ್ರಕರಣ: ಇಬ್ಬರ ಸೆರೆ

Loksabha; 3ನೇ ಹಂತದಲ್ಲಿ ಶೇ.61.66ರಷ್ಟು ಮತದಾನ; ಶಾ ಕ್ಷೇತ್ರದಲ್ಲಿ ಮೋದಿ ವೋಟಿಂಗ್‌

Loksabha; 3ನೇ ಹಂತದಲ್ಲಿ ಶೇ.61.66ರಷ್ಟು ಮತದಾನ; ಶಾ ಕ್ಷೇತ್ರದಲ್ಲಿ ಮೋದಿ ವೋಟಿಂಗ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.